Homeಮುಖಪುಟಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!

ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!

ದೆಹಲಿ ಸರಕಾರವು ಖಾಸಗಿಯಿಂದ ವಿದ್ಯುತ್ತನ್ನು ಖರೀದಿಸುತ್ತಿದ್ದರೂ 200 ಯೂನಿಟ್ ವಿದ್ಯುತ್ತನ್ನು ದೆಹಲಿಯ ಎಲ್ಲಾ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದೆ. ಆದರೆ ಸ್ವತಃ ವಿದ್ಯುತ್‌ ಉತ್ಪಾದಿಸುವ ಕರ್ನಾಟದಲ್ಲಿ 200 ಯೂನಿಟ್‌ಗೆ 1560 ರೂ ನಿಗಧಿ ಮಾಡಿದೆ.

- Advertisement -
- Advertisement -

ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ! ಹಾಗಾಗಿ ರಾಜ್ಯದಲ್ಲಿಯೂ ಸಹ ಕನಿಷ್ಟ ಮೂರು ತಿಂಗಳು 200 ಯೂನಿಟ್‌ವರೆಗೆ ವಿದ್ಯುತ್ ಉಚಿತವಾಗಿ ನೀಡಬೇಕೆಂದು ಆಮ್ ಆದ್ಮಿ ಪಕ್ಷವು ಒತ್ತಾಯಿಸುತ್ತದೆ.

ಈ ರೀತಿಯ ಪೋಸ್ಟರ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದೇ ಸಮಯದಲ್ಲಿ ಕರ್ನಾಟಕ ಆಮ್‌ ಆದ್ಮಿ ಪಕ್ಷವು ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಲಾಕ್‌ಡೌನ್‌ನಿಂದ ಜನರು ಪಡಬಾರದ ಕಷ್ಟ ಪಡುತ್ತಿರುವಾಗ ಸರಕಾರ ಮಾತ್ರ ವಿದ್ಯುತ್ ದರವನ್ನು ಹೆಚ್ಚಿಸಿ ಜನರನ್ನು ಸಮಸ್ಯೆಗಳ ಕೂಪಕ್ಕೆ ತಳ್ಳುತ್ತಿದೆ. ಸರಕಾರಕ್ಕೆ ಜನರ ಕಷ್ಟಕ್ಕೆ ಸ್ಪಂದಿಸುವ ಅಂತಃಕರಣವಿಲ್ಲವೇ? ಜನರಿಗಲ್ಲದ ಸರಕಾರ ಮತ್ತೆ ಯಾರಿಗೆ? ಎಂದು ಪ್ರಶ್ನೆ ಮಾಡಿದೆ.

ದೆಹಲಿ ಸರಕಾರವು ಖಾಸಗಿಯಿಂದ ವಿದ್ಯುತ್ತನ್ನು ಖರೀದಿಸುತ್ತಿದ್ದರೂ 200 ಯೂನಿಟ್ ವಿದ್ಯುತ್ತನ್ನು ದೆಹಲಿಯ ಎಲ್ಲಾ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದೆ. ಆದರೆ ಕರ್ನಾಟದಲ್ಲಿ 200 ಯೂನಿಟ್‌ಗೆ 1560 ರೂ ನಿಗಧಿ ಮಾಡಿದೆ. ಅಂತೆಯೇ ದೆಹಲಿಯಲ್ಲಿ 201 ರಿಂದ 400 ಯೂನಿಟ್ ವಿದ್ಯುತ್ ಬಳಸಿದಲ್ಲಿ 50% ಸಬ್ಸಿಡಿಯನ್ನು ಅಲ್ಲಿನ ಸರಕಾರ ನೀಡಿ 1075ರೂ ನಿಗಧಿಪಡಿಸಿದರೆ ಕರ್ನಾಟಕದಲ್ಲಿ ಮಾತ್ರ 3120 ರೂ ಆಗಿರುತ್ತದೆ. ಇಷ್ಟೊಂದು ಪ್ರಮಾಣದ ವ್ಯತ್ಯಾಸ ಮೋಸವಲ್ಲವೇ ಎಂದು ಆಮ್‌ ಆದ್ಮಿ ಪಕ್ಷ ಪ್ರಶ್ನಿಸಿದೆ.

ಸ್ವತಃ ವಿದ್ಯುತ್ ಉತ್ಪತ್ತಿ ಮಾಡುತ್ತಿರುವ ಕರ್ನಾಟಕದಲ್ಲಿ ಮಾತ್ರ ಜನರಿಗೆ ಅಳತೆ ಮೀರಿದ ದರವನ್ನು ವಿಧಿಸಲಾಗುತ್ತಿದೆ. ಸರಕಾರ ತಕ್ಷಣ 200 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಬೇಕು. ಇದರಿಂದ ಸರಕಾರದ ಬೊಕ್ಕಸಕ್ಕೆ ಅಂತಹ ನಷ್ಟವೇನೂ ಇಲ್ಲ. ಇದನ್ನು ಶಾಶ್ವತವಾಗಿ ಮಾಡಲು ಸಾಧ್ಯವಾಗದಿದ್ದರೆ ಕನಿಷ್ಟ ಆರು ತಿಂಗಳ ತನಕ ಇದನ್ನು ಜಾರಿಗೊಳಿಸಬೇಕು ಎಂದು ಆಪ್‌ ಒತ್ತಾಯಿಸಿದೆ.

2015ರ ಚುನಾವಣೆಗೂ ಮುನ್ನವೇ ಅಲ್ಲಿನ ಆಪ್‌ ಪಕ್ಷವು ಬಿಜಿಲಿ ಆಫ್‌, ಪಾನೀ ಮಾಫ್ (ವಿದ್ಯುತ್‌ ದರ ಅರ್ಧ, ನೀರಿನ ದರ ಉಚಿತ)‌ ಎಂಬ ಘೊಷಣೆಯನ್ನು ಪ್ರಣಾಳಿಕೆಯಲ್ಲಿ ನೀಡಿತ್ತು. ಆನಂತರ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದುಬಂದ ನಂತರ ಆ ಆಶ್ವಾಸನೆಯನ್ನು ಸಂಪೂರ್ಣವಾಗಿ ವಿಸ್ತರಿಸಿತ್ತು. ಅದಲ್ಲದೆ ಶಿಕ್ಷಣ, ಆರೋಗ್ಯ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಆಪ್‌ ಸರ್ಕಾರ ಮಾಡಿದ ಸಕಾರಾತ್ಮಕ ಕೆಲಸಗಳು ಅವರು ಮತ್ತೆ 2020ರಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಸಹಕಾರಿಯಾಗಿವೆ.

ರಾಜ್ಯ ನಡೆಸುವುದು ಹವಾನಿಯಂತ್ರಿತ ಕೋಣೆಗಳ ಒಳಗಡೆಯಲ್ಲ, ಬಡ ಜನರ ಸಮಸ್ಯೆಗಳ ಮಧ್ಯೆ ಕೂಡ. ಸರಕಾರಕ್ಕೆ ಅವರ ಕಷ್ಟಗಳನ್ನು ಅರಿಯವ ಅಂತಃಕರಣ ಬೇಕು. ಇದಕ್ಕಾಗಿ ತಕ್ಷಣ 200 ಯೂನಿಟ್ ತನಕ ಉಚಿತ 24 ಗಂಟೆಗಳ ಕಾಲ ವಿದ್ಯುತ್ತನ್ನು ರಾಜ್ಯದಲ್ಲಿ ಪೂರೈಸಬೇಕು ಎಂದು ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದೆ ಎಂದು ರಾಜ್ಯ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ದೆಹಲಿಯ 14 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್‌ ಕೊಟ್ಟ ಕೇಜ್ರಿವಾಲ್‌ ಸರ್ಕಾರ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. You know the current situations going around in the world. People are not able to have there required day meals. So the government have to understand the situations and have to help the needy one with the essentials bills like electricity water and so on. I hope the government will help the needy and come with a good idea so that the people can leave peacefully in this current situations. Thanking you!!!
    Khalid Khan

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...