Homeಅಂತರಾಷ್ಟ್ರೀಯಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಆರೋಪಿಸಿದ್ದಾರೆ.

- Advertisement -
- Advertisement -

ಇದುವರೆಗೂ ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಹುಟ್ಟಿದೆ ಎಂಬ ಪ್ರಚಾರಗಳ ಮಧ್ಯೆ ಚೀನಾ ಬೇರೆಯೆ ವಿಚಾರವನ್ನು ವಿಶ್ವದ ಮುಂದಿಟ್ಟಿದೆ. ಪ್ರಪಂಚದೆಲ್ಲೆಡೆ ಏಕಾಏಕಿ ಎರಗಿದ ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಿಂದ ಸೋರಿಕೆಯಾಗಿದೆ ಎಂಬ ಹೊಸ ಸಿದ್ಧಾಂತವನ್ನು ತೇಲಿ ಬಿಟ್ಟಿದೆ.

ಚೀನಾದ ಕಮ್ಯುನಿಸ್ಟ್ ಪಾರ್ಟಿ ನಿಯತಕಾಲಿಕೆ ಕ್ವಿಶಿಯಲ್ಲಿ ಪ್ರಕಟವಾದ ಲೇಖನದಲ್ಲಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು “ಹೊಸ ಕರೋನ ವೈರಸ್‌ನ ಮೂಲ ಮತ್ತು ಪ್ರಸರಣ ಮಾರ್ಗವನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ” ಎಂದು ಚೀನಾ ಸರ್ಕಾರ ಹೇಳಿದೆ.


ಓದಿ: ಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ


ಲೇಖನವು ಭಾಗಶಃ ಮಾಹಿತಿಯನ್ನು ಉಲ್ಲೇಖಿಸಿ, ವುಹಾನ್ ನಗರದಲ್ಲಿ ಕರೋನವೈರಸ್ ಹುಟ್ಟಿಕೊಂಡಿಲ್ಲ ಎಂದು ಹೇಳಿದೆ. ಲೇಖನದಲ್ಲಿ ಅಮೇರಿಕದಲ್ಲಿನ ಪರಿಸ್ಥಿತಿಯನ್ನು ನಿರ್ದಿಷ್ಟವಾಗಿ ಎತ್ತಿ ತೋರಿಸಿದ್ದು, ಅಲ್ಲಿ ಸುಮಾರು 90,000 ಜನರು ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದು ಏಕೆ ಎಂದು ಪ್ರಶ್ನಿಸಿದೆ.

ಫೋರ್ಟ್ ಡೆಟ್ರಿಕ್ ಜೈವಿಕ ಪ್ರಯೋಗಾಲಯವನ್ನು ಯಾಕೆ ಮುಚ್ಚಲಾಗಿದೆ ಮತ್ತು ಇದು ಕೊರೊನಾ ವೈರಸ್‌ ಬಗ್ಗೆ ಸಂಶೋಧನೆ ನಡೆಸಿದೆಯೇ ಹಾಗೂ ವೈರಸ್ ಪ್ರಯೋಗಾಲಯದಿಂದ ಸೋರಿಕೆಯಾಗಿದೆಯೇ ಎಂದು ಅನೇಕ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಲೇಖನವು ಗಮನಸೆಳೆದೆ.

ಮೇರಿಲ್ಯಾಂಡ್‌‌ನಲ್ಲಿರುವ ಫೋರ್ಟ್ ಡೆಟ್ರಿಕ್, ಅಮೆರಿಕಾದ ಮಿಲಿಟರಿ ಸಾಂಕ್ರಾಮಿಕ ರೋಗಗಳ ಸಂಶೋಧನಾ ಸಂಸ್ಥೆಯಾಗಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳಾದ ಇಲ್ಲಿ ಜೈವಿಕ ಸುರಕ್ಷತೆಯ ಕೊರತೆಯನ್ನು ಕಂಡುಕೊಂಡ ನಂತರ ಅದನ್ನು ಕಳೆದ ಆಗಸ್ಟ್‌ನಲ್ಲಿ ಮುಚ್ಚಲಾಗಿತ್ತು.

ಇದರ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಲ್ಯಾಬ್ “ತ್ಯಾಜ್ಯ ನೀರನ್ನು ಶುದ್ದೀಕರಿಸುವ ಸಾಕಷ್ಟು ವ್ಯವಸ್ಥೆಗಳನ್ನು ಹೊಂದಿಲ್ಲ” ಎಂದು ಪ್ರಯೋಗಾಲಯವನ್ನು ಸ್ಥಗಿತಗೊಳಿಸುವ ಆದೇಶ ಬಂದಿದೆ ಎಂದು ವರದಿಯಾಗಿತ್ತು. ಆದರೆ ರೋಗ-ಉಂಟುಮಾಡುವ ವಸ್ತುಗಳು ಪ್ರಯೋಗಾಲಯಗಳಿಂದ ಸೋರಿಕೆಯಾದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ.

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಈ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಆಡಳಿತವು ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ವೈರಸ್‌ ಸೋರಿಕೆಯಾಗಿದೆ ಎಂದು ಹೇಳುತ್ತಲೇ ಬಂದಿದ್ದಾರೆ, ಆದರೆ ಇದನ್ನು ಹೆಚ್ಚಿನ ವಿಜ್ಞಾನಿಗಳು ನಿರಾಕರಿಸಿದ್ದಾರೆ.


ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ಆದಾಗ್ಯೂ, ಕಳೆದವಾರ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರು ಕರೋನ ವೈರಸ್ ವುಹಾನ್ ಲ್ಯಾಬ್‌ನಲ್ಲಿ ಹುಟ್ಟಿಕೊಂಡಿದೆ ಎಂಬ ಈ ಹಿಂದಿನ ಕೆಲವು ಹೇಳಿಕೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದು “ಇದು ವುಹಾನ್‌ನಲ್ಲಿ ಪ್ರಾರಂಭವಾಯಿತು ಎಂದು ನಮಗೆ ತಿಳಿದಿದೆ, ಆದರೆ ಎಲ್ಲಿಂದ ಅಥವಾ ಯಾರಿಂದ ಎಂಬುದು ನಮಗೆ ಗೊತ್ತಿಲ್ಲ, ಇದು ಮುಖ್ಯ ವಿಷಯವಾಗಿದೆ” ಎಂದು ಹೇಳಿದ್ದಾರೆ.

ವೈರಸ್ ಮೂಲ ಚೀನಾವಲ್ಲ ಎಂದು ಡಿಸೆಂಬರ್ 27 ರಂದು ಫ್ರಾನ್ಸ್‌ನಲ್ಲಿ ದೃಡೀಕರಿಸಿದ ಕೊರೊನಾ ವೈರಸ್ ಪ್ರಕರಣವನ್ನು ಸಹ ಪತ್ರಿಕೆ ಕ್ವಿಶಿ ಉಲ್ಲೇಖಿಸಿ, ಸೋಂಕಿಗೆ ಒಳಗಾಗುವ ಮೊದಲು ಮನುಷ್ಯನಿಗೆ ಚೀನಾದೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಹಾಗೂ ಪ್ರಯಾಣ ಮಾಡಿರಲಿಲ್ಲ ಎಂದು ಹೇಳಿದೆ.

ಆದರೆ, ರೋಗಿಯ ಪತ್ನಿ ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ಸಮೀಪವಿರುವ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದಾಗಿ ಇತ್ತೀಚೆಗೆ ಚೀನಾದಿಂದ ಆಗಮಿಸಿದ ಜನರೊಂದಿಗೆ ಸಂಪರ್ಕಕ್ಕೆ ಒಳಗಾಗಿರಬಹುದಾದ ಸಂಭವವಿದೆ ಎಂದು ಹೇಳಲಾಗಿದೆ, ಇದರ ಬಗ್ಗೆ ಕ್ವಿಶಿಯ ಲೇಖನವೂ ಸೂಚಿಸಿಲ್ಲ.

ಒಟ್ಟಿನಲ್ಲಿ ಕೊರೊನಾ ವೈರಸ್‌ ಉಗಮದ ಬಗ್ಗೆ ಅಮೆರಿಕಾ ಮತ್ತು ಚೀನಾ ಪರಸ್ಪರ ದೋಷಾರೋಪಣೆಯಲ್ಲಿ ಮುಳುಗಿದೆ.

ಈ ಎರಡು ರಾಷ್ಟ್ರಗಳ ಕಚ್ಚಾಟ ಹಾಗೂ ಕೊರೊನಾ ವೈರಸ್ ಹೇಗೆ ಹರಡಿತು ಎಂಬುದನ್ನು ಸ್ಥಾಪಿಸಲು ಸಮಗ್ರವಾದ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ  ಆಡಳಿತ ಮಂಡಳಿಯಾದ WHA ಯೂ ಕರಡು ತಯಾರಿಸಿದೆ.

ಈ ಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ, “ನಾವೆಲ್ಲರೂ ಮುಕ್ತತೆ, ಪಾರದರ್ಶಕತೆ ಮತ್ತು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಈಗಾಗಲೇ, ಯುರೋಪಿಯನ್ ಯೂನಿಯನ್ ದೇಶಗಳು, ಆಸ್ಟ್ರೇಲಿಯಾದ ಸೇರಿದಂತೆ 120 ಕ್ಕೂ ಹೆಚ್ಚು ದೇಶಗಳು ಕರಡು ನಿರ್ಣಯವನ್ನು ಬೆಂಬಲಿಸಿ, ಕೊರೊನಾದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. WHA ಯ 194 ಸದಸ್ಯ ರಾಷ್ಟ್ರಗಳಲ್ಲಿ ಮೂರನೇ ಎರಡರಷ್ಟು ಬೆಂಬಲವನ್ನು ಪಡೆಯಲು ಸಾಧ್ಯವಾದರೆ ಈ ನಿರ್ಣಯವನ್ನು ಇಂದು (ಮಂಗಳವಾರ) ಮಂಡಿಸುವ ಸಾಧ್ಯತೆಯಿದೆ.

ಮೂಲ: ದಿ ವೈಸ್‌.ಕಾಂ


ಓದಿ:  ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ?; ಪ್ಯಾಕ್ಟ್ ಚೆಕ್


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...