Homeಅಂತರಾಷ್ಟ್ರೀಯಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಆರೋಪಿಸಿದ್ದಾರೆ.

- Advertisement -
- Advertisement -

ಇದುವರೆಗೂ ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಹುಟ್ಟಿದೆ ಎಂಬ ಪ್ರಚಾರಗಳ ಮಧ್ಯೆ ಚೀನಾ ಬೇರೆಯೆ ವಿಚಾರವನ್ನು ವಿಶ್ವದ ಮುಂದಿಟ್ಟಿದೆ. ಪ್ರಪಂಚದೆಲ್ಲೆಡೆ ಏಕಾಏಕಿ ಎರಗಿದ ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಿಂದ ಸೋರಿಕೆಯಾಗಿದೆ ಎಂಬ ಹೊಸ ಸಿದ್ಧಾಂತವನ್ನು ತೇಲಿ ಬಿಟ್ಟಿದೆ.

ಚೀನಾದ ಕಮ್ಯುನಿಸ್ಟ್ ಪಾರ್ಟಿ ನಿಯತಕಾಲಿಕೆ ಕ್ವಿಶಿಯಲ್ಲಿ ಪ್ರಕಟವಾದ ಲೇಖನದಲ್ಲಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು “ಹೊಸ ಕರೋನ ವೈರಸ್‌ನ ಮೂಲ ಮತ್ತು ಪ್ರಸರಣ ಮಾರ್ಗವನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ” ಎಂದು ಚೀನಾ ಸರ್ಕಾರ ಹೇಳಿದೆ.


ಓದಿ: ಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ


ಲೇಖನವು ಭಾಗಶಃ ಮಾಹಿತಿಯನ್ನು ಉಲ್ಲೇಖಿಸಿ, ವುಹಾನ್ ನಗರದಲ್ಲಿ ಕರೋನವೈರಸ್ ಹುಟ್ಟಿಕೊಂಡಿಲ್ಲ ಎಂದು ಹೇಳಿದೆ. ಲೇಖನದಲ್ಲಿ ಅಮೇರಿಕದಲ್ಲಿನ ಪರಿಸ್ಥಿತಿಯನ್ನು ನಿರ್ದಿಷ್ಟವಾಗಿ ಎತ್ತಿ ತೋರಿಸಿದ್ದು, ಅಲ್ಲಿ ಸುಮಾರು 90,000 ಜನರು ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದು ಏಕೆ ಎಂದು ಪ್ರಶ್ನಿಸಿದೆ.

ಫೋರ್ಟ್ ಡೆಟ್ರಿಕ್ ಜೈವಿಕ ಪ್ರಯೋಗಾಲಯವನ್ನು ಯಾಕೆ ಮುಚ್ಚಲಾಗಿದೆ ಮತ್ತು ಇದು ಕೊರೊನಾ ವೈರಸ್‌ ಬಗ್ಗೆ ಸಂಶೋಧನೆ ನಡೆಸಿದೆಯೇ ಹಾಗೂ ವೈರಸ್ ಪ್ರಯೋಗಾಲಯದಿಂದ ಸೋರಿಕೆಯಾಗಿದೆಯೇ ಎಂದು ಅನೇಕ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಲೇಖನವು ಗಮನಸೆಳೆದೆ.

ಮೇರಿಲ್ಯಾಂಡ್‌‌ನಲ್ಲಿರುವ ಫೋರ್ಟ್ ಡೆಟ್ರಿಕ್, ಅಮೆರಿಕಾದ ಮಿಲಿಟರಿ ಸಾಂಕ್ರಾಮಿಕ ರೋಗಗಳ ಸಂಶೋಧನಾ ಸಂಸ್ಥೆಯಾಗಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳಾದ ಇಲ್ಲಿ ಜೈವಿಕ ಸುರಕ್ಷತೆಯ ಕೊರತೆಯನ್ನು ಕಂಡುಕೊಂಡ ನಂತರ ಅದನ್ನು ಕಳೆದ ಆಗಸ್ಟ್‌ನಲ್ಲಿ ಮುಚ್ಚಲಾಗಿತ್ತು.

ಇದರ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಲ್ಯಾಬ್ “ತ್ಯಾಜ್ಯ ನೀರನ್ನು ಶುದ್ದೀಕರಿಸುವ ಸಾಕಷ್ಟು ವ್ಯವಸ್ಥೆಗಳನ್ನು ಹೊಂದಿಲ್ಲ” ಎಂದು ಪ್ರಯೋಗಾಲಯವನ್ನು ಸ್ಥಗಿತಗೊಳಿಸುವ ಆದೇಶ ಬಂದಿದೆ ಎಂದು ವರದಿಯಾಗಿತ್ತು. ಆದರೆ ರೋಗ-ಉಂಟುಮಾಡುವ ವಸ್ತುಗಳು ಪ್ರಯೋಗಾಲಯಗಳಿಂದ ಸೋರಿಕೆಯಾದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ.

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಈ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಆಡಳಿತವು ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ವೈರಸ್‌ ಸೋರಿಕೆಯಾಗಿದೆ ಎಂದು ಹೇಳುತ್ತಲೇ ಬಂದಿದ್ದಾರೆ, ಆದರೆ ಇದನ್ನು ಹೆಚ್ಚಿನ ವಿಜ್ಞಾನಿಗಳು ನಿರಾಕರಿಸಿದ್ದಾರೆ.


ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ಆದಾಗ್ಯೂ, ಕಳೆದವಾರ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರು ಕರೋನ ವೈರಸ್ ವುಹಾನ್ ಲ್ಯಾಬ್‌ನಲ್ಲಿ ಹುಟ್ಟಿಕೊಂಡಿದೆ ಎಂಬ ಈ ಹಿಂದಿನ ಕೆಲವು ಹೇಳಿಕೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದು “ಇದು ವುಹಾನ್‌ನಲ್ಲಿ ಪ್ರಾರಂಭವಾಯಿತು ಎಂದು ನಮಗೆ ತಿಳಿದಿದೆ, ಆದರೆ ಎಲ್ಲಿಂದ ಅಥವಾ ಯಾರಿಂದ ಎಂಬುದು ನಮಗೆ ಗೊತ್ತಿಲ್ಲ, ಇದು ಮುಖ್ಯ ವಿಷಯವಾಗಿದೆ” ಎಂದು ಹೇಳಿದ್ದಾರೆ.

ವೈರಸ್ ಮೂಲ ಚೀನಾವಲ್ಲ ಎಂದು ಡಿಸೆಂಬರ್ 27 ರಂದು ಫ್ರಾನ್ಸ್‌ನಲ್ಲಿ ದೃಡೀಕರಿಸಿದ ಕೊರೊನಾ ವೈರಸ್ ಪ್ರಕರಣವನ್ನು ಸಹ ಪತ್ರಿಕೆ ಕ್ವಿಶಿ ಉಲ್ಲೇಖಿಸಿ, ಸೋಂಕಿಗೆ ಒಳಗಾಗುವ ಮೊದಲು ಮನುಷ್ಯನಿಗೆ ಚೀನಾದೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಹಾಗೂ ಪ್ರಯಾಣ ಮಾಡಿರಲಿಲ್ಲ ಎಂದು ಹೇಳಿದೆ.

ಆದರೆ, ರೋಗಿಯ ಪತ್ನಿ ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ಸಮೀಪವಿರುವ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದಾಗಿ ಇತ್ತೀಚೆಗೆ ಚೀನಾದಿಂದ ಆಗಮಿಸಿದ ಜನರೊಂದಿಗೆ ಸಂಪರ್ಕಕ್ಕೆ ಒಳಗಾಗಿರಬಹುದಾದ ಸಂಭವವಿದೆ ಎಂದು ಹೇಳಲಾಗಿದೆ, ಇದರ ಬಗ್ಗೆ ಕ್ವಿಶಿಯ ಲೇಖನವೂ ಸೂಚಿಸಿಲ್ಲ.

ಒಟ್ಟಿನಲ್ಲಿ ಕೊರೊನಾ ವೈರಸ್‌ ಉಗಮದ ಬಗ್ಗೆ ಅಮೆರಿಕಾ ಮತ್ತು ಚೀನಾ ಪರಸ್ಪರ ದೋಷಾರೋಪಣೆಯಲ್ಲಿ ಮುಳುಗಿದೆ.

ಈ ಎರಡು ರಾಷ್ಟ್ರಗಳ ಕಚ್ಚಾಟ ಹಾಗೂ ಕೊರೊನಾ ವೈರಸ್ ಹೇಗೆ ಹರಡಿತು ಎಂಬುದನ್ನು ಸ್ಥಾಪಿಸಲು ಸಮಗ್ರವಾದ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ  ಆಡಳಿತ ಮಂಡಳಿಯಾದ WHA ಯೂ ಕರಡು ತಯಾರಿಸಿದೆ.

ಈ ಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ, “ನಾವೆಲ್ಲರೂ ಮುಕ್ತತೆ, ಪಾರದರ್ಶಕತೆ ಮತ್ತು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಈಗಾಗಲೇ, ಯುರೋಪಿಯನ್ ಯೂನಿಯನ್ ದೇಶಗಳು, ಆಸ್ಟ್ರೇಲಿಯಾದ ಸೇರಿದಂತೆ 120 ಕ್ಕೂ ಹೆಚ್ಚು ದೇಶಗಳು ಕರಡು ನಿರ್ಣಯವನ್ನು ಬೆಂಬಲಿಸಿ, ಕೊರೊನಾದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. WHA ಯ 194 ಸದಸ್ಯ ರಾಷ್ಟ್ರಗಳಲ್ಲಿ ಮೂರನೇ ಎರಡರಷ್ಟು ಬೆಂಬಲವನ್ನು ಪಡೆಯಲು ಸಾಧ್ಯವಾದರೆ ಈ ನಿರ್ಣಯವನ್ನು ಇಂದು (ಮಂಗಳವಾರ) ಮಂಡಿಸುವ ಸಾಧ್ಯತೆಯಿದೆ.

ಮೂಲ: ದಿ ವೈಸ್‌.ಕಾಂ


ಓದಿ:  ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ?; ಪ್ಯಾಕ್ಟ್ ಚೆಕ್


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...