Homeಮುಖಪುಟ28‌ ಸಿಬ್ಬಂದಿಗೆ ಕೊರೊನಾ: ಝೀ ನ್ಯೂಸ್ ಕಛೇರಿ ಸೀಲ್‌ಡೌನ್‌ಗೆ ಒತ್ತಾಯ, ಚೌಧರಿ ವಿರುದ್ಧ ಆಕ್ರೋಶ

28‌ ಸಿಬ್ಬಂದಿಗೆ ಕೊರೊನಾ: ಝೀ ನ್ಯೂಸ್ ಕಛೇರಿ ಸೀಲ್‌ಡೌನ್‌ಗೆ ಒತ್ತಾಯ, ಚೌಧರಿ ವಿರುದ್ಧ ಆಕ್ರೋಶ

- Advertisement -
- Advertisement -

ಝೀ ನ್ಯೂಸ್ ಹಿಂದಿ ಸುದ್ದಿವಾಹಿನಿಯ‌ 28‌ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಭಾರೀ ವಿವಾದ ಭುಗಿಲೆದ್ದಿದ್ದು ಕೂಡಲೇ ಝೀ ನ್ಯೂಸ್ ಕಛೇರಿ ಸೀಲ್‌ಡೌನ್ ಮಾಡಿ ಸಂಪಾದಕ ಸುಧೀರ್‌ ಚೌಧರಿ ಸೇರಿದಂತೆ ಪ್ರತಿಯೊಬ್ಬ ಉದ್ಯೋಗಿಗಳನ್ನು ಕ್ವಾರಂಟೈನ್‌ ಮಾಡುವಂತೆ ವ್ಯಾಪಕ ಒತ್ತಾಯ ಕೇಳಿಬಂದಿದೆ.

ನಿನ್ನೆ ಮಧ್ಯಾಹ್ನ ಝೀ ನ್ಯೂಸ್ ಪ್ರಧಾನ ಸಂಪಾದಕ ಸುಧೀರ್‌ ಚೌಧರಿಯವರು ಟ್ವೀಟ್‌ ಮಾಡಿ “ಇವು ಕಷ್ಟದ ಸಮಯಗಳು. ನನ್ನ 28 ಸಹೋದ್ಯೋಗಿಗಳು COVID-19 ಸೋಂಕಿಗೆ ತುತ್ತಾಗಿದ್ದಾರೆ. ನಾನು ಅವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ ಮತ್ತು ಅವರ ಧೈರ್ಯ ಮತ್ತು ವೃತ್ತಿಪರತೆಗೆ ನಮಸ್ಕರಿಸುತ್ತೇನೆ” ಎಂದು ಟ್ವೀಟ್‌ ಮಾಡಿದ್ದರು.

ಅಲ್ಲದೇ ಮುಂದುವರಿದ ಅವರು ಸೋಂಕಿತರಿಗೆ ಮನೆಯಲ್ಲಿಯೇ ಇರುವ ಅವಕಾಶವಿತ್ತು. ಆದರೂ ಅವರು ವೃತ್ತಪರರಾದ್ದರಿಂದ ಕೆಲಸಕ್ಕೆ ಬಂದಿದ್ದಾರೆ. ಅವರನ್ನು ಗೌರವಿಸದಿದ್ದರೂ ಪರವಾಗಿಲ್ಲ ಹಗೆತನ ಸಾಧಿಸಬೇಡಿ ಎರಡನೇ ಟ್ವೀಟ್‌ ಮಾಡಿದರು. ಇದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾವುದೇ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಬಂದರೆ ಅವರ ಸಂಪರ್ಕದಲ್ಲಿದ್ದವರೆಲ್ಲರೂ ಕ್ವಾರಂಟೈನ್‌ಗೆ ಒಳಗಾಗಬೇಕೆಂಬ ನಿಯಮವಿದೆ. ಅದನ್ನು ಉಲ್ಲಂಘಿಸಿ ಅವರು ಕಚೇರಿಗೆ ಬಂದುದ್ದೇಕೆ ಎಂಬ ಪ್ರಶ್ನೆಯನ್ನು ಬಹಳಷ್ಟು ನೆಟ್ಟಿಗರು ಎತ್ತಿದ್ದಾರೆ.

ಸುಧೀರ್‌ ಚೌಧರಿತವರ ಟ್ವೀಟ್‌ಗೆ ಪ್ರತಿಕ್ರಿಯಿಸಿ ಸೋಂಕಿತ ವ್ಯಕ್ತಿಗಳು ಕೆಲಸಕ್ಕೆ ಬಂದಿದ್ದರೆ ಅದು ವಿಪತ್ತು ನಿರ್ವಹಣಾ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 269 ಮತ್ತು 188 ರ ಅಡಿಯಲ್ಲಿ ನೀಡಲಾದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ಅರವಿಂದ್‌ ಗುಣಶೇಖರ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಇದಲ್ಲದೇ ಪತ್ರಕರ್ತ ಅವೀಕ್‌ ಸೇನ್‌ರವರು ಸಿಬ್ಬಂದಿಗಳನ್ನು ಒತ್ತಾಯಪೂರ್ವಕವಾಗಿ ಕಚೇರಿಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ. ತನ್ನ ಸಿಬ್ಬಂದಗಳಿಗೆ ಭಾವನಾತ್ಮಕ ಭಾಷಣ ಮಾಡಿ, ಸೋಂಕು ಹರಡುತ್ತದೆ, ನಾವು ಅದನ್ನು ಹರಡಬಹುದು. ಹಾಗಂತ ಕಚೇರಿಗೆ ತಪ್ಪಿಸಿಕೊಳ್ಳುವವರ ಮೇಲೆ ಕಣ್ಣಿಡಲಾಗುತ್ತದೆ’ ಎಂದು ಬ್ಲಾಕ್‌ ಮೇಲ್‌ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಂತರ ಸುಧೀರ್‌ ಚೌಧರಿಯವರು ಶುಕ್ರವಾರದಿಂದಲೇ ನಮ್ಮ ಕಚೇರಿ ಸೀಲ್‌ಡೌನ್‌ ಆಗಿದೆ. ಸೋಮವಾರದಿಂದಲೇ ಸೋಂಕಿತರು ನಮ್ಮ ಕಚೇರಿಗೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಮಾಡುವ ಕೆಲಸ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ.

ತದನಂತರ ಶಟ್‌ಡೌನ್‌ಝೀನ್ಯೂಸ್ ಎಂಬ ಹ್ಯಾಸ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಗಿದೆ. ಕೆಲ ಟ್ವೀಟ್‌ ಮತ್ತು ಫೇಸ್‌ಬುಕ್‌ ಅಭಿಪ್ರಾಯಗಳು ಕೆಳಗಿನಂತಿವೆ.

ಸುಧೀರ್ ಚೌಧರಿಯ ಹಿಪಾಕ್ರಸಿಗೆ ಒಂದು ಮಿತಿಯೇ ಇದ್ದಂತಿಲ್ಲ.‌ ತಬ್ಲೀಗಿ ಜಮಾತ್ ನವರಿಗೆ ಕೊರೋನಾ ಸೋಂಕು ಬಂದಾಗ ಅವರನ್ನು ಭಯೋತ್ಪಾದಕರು,…

Posted by Dinesh Kumar Dinoo on Monday, May 18, 2020


ಇದನ್ನೂ ಓದಿ: ರಾಹುಲ್‌ ಗಾಂಧಿ ಗಟ್ಸ್‌ ಪರೀಕ್ಷಿಸಿಲು ಹೋಗಿ ಅಪಹಾಸ್ಯಕ್ಕೊಳಗಾದ TV9 ರಂಗನಾಥ್ ಭಾರದ್ವಾಜ್! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...