Homeಮುಖಪುಟಲಾಕ್‌ಡೌನ್‌ ನಡುವೆಯೇ ಧರ್ಮಗುರುವಿನ ಅಂತ್ಯಕ್ರಿಯೆಯಲ್ಲಿ ರಾಜಕಾರಣಿಗಳ ಸಹಿತ ಸಾವಿರಾರು ಜನರು ಭಾಗಿ!

ಲಾಕ್‌ಡೌನ್‌ ನಡುವೆಯೇ ಧರ್ಮಗುರುವಿನ ಅಂತ್ಯಕ್ರಿಯೆಯಲ್ಲಿ ರಾಜಕಾರಣಿಗಳ ಸಹಿತ ಸಾವಿರಾರು ಜನರು ಭಾಗಿ!

- Advertisement -
- Advertisement -

ಲಾಕ್‌ಡೌನ್ ಮಧ್ಯೆ ಮಧ್ಯಪ್ರದೇಶದ ಕಾಟ್ನಿಯಲ್ಲಿ ಖ್ಯಾತ ಧರ್ಮಗುರುವಿನ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಭಾಗಿಯಾದ ಘಟನೆ ನಡೆದಿದೆ. ಕಾಂಗ್ರೆಸ್, ಬಿಜೆಪಿಯ ರಾಜಕಾರಣಿಗಳು ಮತ್ತು ನಟ ಅಶುತೋಷ್ ರಾಣಾ ಅವರಂತಹ ಗಣ್ಯರು ಸಹ ಘಟನೆಯಲ್ಲಿ ಭಾಗಿಯಾಗಿದ್ದಾರೆ.

‘ದಡ್ಡಾಜಿ’ ಎಂದೇ ಖ್ಯಾತರಾಗಿದ್ದ ದೇವ್ ಪ್ರಭಾಕರ್ ಶಾಸ್ತ್ರಿ (82) ಶ್ವಾಸಕೋಶ ಮತ್ತು ಮೂತ್ರಪಿಂಡದ ಕಾಯಿಲೆಗಳಿಂದ ಭಾನುವಾರ ನಿಧನರಾದರು. ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು, ಪರಿಸ್ಥಿತಿ ಹದಗೆಟ್ಟ ನಂತರ ರಾಣಾ ಮತ್ತು ಮಾಜಿ ರಾಜ್ಯ ಸಚಿವ ಸಂಜಯ್ ಪಾಠಕ್ ಅವರು ಮಧ್ಯಪ್ರದೇಶಕ್ಕೆ ಕರೆತಂದಿದ್ದರು.

ಆದರೆ ಜಿಲ್ಲಾಡಳಿತ ಮಾತ್ರ ಲಾಕ್‌ಡೌನ್‌ ಪ್ರೋಟೋಕಾಲ್‌ನ ಯಾವುದೇ ಉಲ್ಲಂಘನೆ ಆಗಿಲ್ಲ ಎಂದು  ಹೇಳಿದೆ.

ಕಟ್ನಿ ಜಿಲ್ಲಾಧಿಕಾರಿ ಶಶಿ ಭೂಷನ್ ಸಿಂಗ್, “ಯಾವುದೇ ಉಲ್ಲಂಘನೆ ನಡೆದಿಲ್ಲ. ಎಲ್ಲವನ್ನೂ ನಿಯಂತ್ರಿಸಲಾಗಿದೆ, ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲಾಗಿದೆ” ಎಂದು ಹೇಳಿದ್ದರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಅಂತ್ಯಕ್ರಿಯೆಯ ಮೆರವಣಿಗೆಗೆ ಜನರು ಗುಂಪು ಗುಂಪಾಗಿ ನಡೆಯುತ್ತಿರುವುದು ಕಾಣಬಹುದಾಗಿದೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ, ಸಂಸದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಮತ್ತು ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಮುಂತಾದವರು ಗೌರವ ಸಲ್ಲಿಸಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರವು ಮಾರ್ಚ್‌ನಿಂದಲೇ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿ ದೇಶಾದ್ಯಂತ ಸಭೆ ಸೇರುವುದನ್ನು ನಿಷೇಧಿಸಿದೆ.

ಅಲ್ಲದೆ ಭಾನುವಾರ ಮತ್ತೇ ಲಾಕ್‌ಡೌನ್ ಅನ್ನು ಮೇ 31 ರವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ. ರಾಜ್ಯಗಳಿಗೆ ನೀಡಿದ ಮಾರ್ಗಸೂಚಿಗಳಲ್ಲಿ, 20 ಕ್ಕಿಂತ ಹೆಚ್ಚು ಜನರು ಅಂತ್ಯಕ್ರಿಯೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಅದು ಉಲ್ಲೇಖಿಸಿದೆ.

ಕೇಂದ್ರ ಸರ್ಕಾರವೂ ರಾಜ್ಯ ಸರ್ಕಾರಕ್ಕೆ ಕಳುಹಿಸಿದ ಸುತ್ತೋಲೆಯಲ್ಲಿ, ರಾಜ್ಯಗಳು ಬಯಸಿದಲ್ಲಿ ಲಾಕ್‌ಡೌನ್ ಅನ್ನು ಹೆಚ್ಚು ಕಠಿಣಗೊಳಿಸಬಹುದು ಎಂದು ಕೇಂದ್ರ ಸ್ಪಷ್ಟಪಡಿಸಿದೆ, ಆದರೆ ಅದನ್ನು ದುರ್ಬಲಗೊಳಿಸುವಂತಿಲ್ಲ ಎಂದು ಹೇಳಿದೆ.


ದಿ: ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ನು ರಾಜ್ಯಗಳು ದುರ್ಬಲಗೊಳಿಸುವಂತಿಲ್ಲ: ಕೇಂದ್ರ ಸರ್ಕಾರ


ವಿಡಿಯೋ ನೋಡಿ: 20 ಲಕ್ಷ ಕೋಟಿಯ ಈ ಪ್ಯಾಕೇಜ್‌ ನಿಜವೇ? ಇದರಿಂದ ಬಡಜನರಿಗೆ ಏನಾದರೂ ಸಹಾಯವಾಗುವುದೇ? 



 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...