Homeಅಂತರಾಷ್ಟ್ರೀಯವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ: ಟ್ರಂಪ್ ಎಚ್ಚರಿಕೆ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ: ಟ್ರಂಪ್ ಎಚ್ಚರಿಕೆ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆ (WHO)ಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಚೀನಾದ ಆಜ್ಞೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಆರಂಭಿಕ ಹಂತಗಳಲ್ಲಿ ಕೊರೊನಾ ಸಾಂಕ್ರಾಮಿಕ ರೋಗವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಗುಳಿಯುವುದಾಗಿ ಪತ್ರ ಬರೆದಿದ್ದಾರೆ.

“ಸಾಂಕ್ರಾಮಿಕ ರೋಗಕ್ಕೆ ಸ್ಪಂದಿಸುವಲ್ಲಿ ನೀವು ಮತ್ತು ನಿಮ್ಮ ಸಂಸ್ಥೆ ಪುನರಾವರ್ತಿತವಾಗಿ ಮಾಡಿದ ತಪ್ಪುಗಳು ಜಗತ್ತಿಗೆ ಅತ್ಯಂತ ದುಬಾರಿಯಾಗಿದೆ ಎಂಬುದು ಸ್ಪಷ್ಟವಾಗಿದೆ. WHOಗೆ  ಮುಂದುವರೆಯಲು ಇರುವ ಏಕೈಕ ಮಾರ್ಗವೆಂದರೆ ಚೀನಾದಿಂದ ಸ್ವಾತಂತ್ರ್ಯವನ್ನು ಪ್ರದರ್ಶಿಸಿಸುವುದು”ಎಂದು ಟೆಡ್ರೊಸ್ ಅಧಾನೊಮ್‌ಗೆ ಬರೆದ ಪತ್ರದಲ್ಲಿ ಟ್ರಂಪ್ ಹೇಳಿದ್ದಾರೆ.

ಟ್ರಂಪ್ ತಮ್ಮ ನಾಲ್ಕು ಪುಟಗಳ ಪತ್ರದಲ್ಲಿ ಕಳೆದ ಡಿಸೆಂಬರ್‌ನಿಂದ ಪ್ರತಿ ಸಂದರ್ಭವನ್ನು ವಿವರಿಸಿದ್ದು, WHO ಜಗತ್ತಿಗೆ ಕೆಟ್ಟ ಸಲಹೆಯನ್ನು ನೀಡಿತು ಎಂದಿದ್ದಾರೆ.

ಪ್ರಮುಖ ಸುಧಾರಣೆಗಳಿಗೆ ಬದ್ಧರಾಗಲು ಟ್ರಂಪ್ ಟೆಡ್ರೊಸ್ ಅಧಾನೊಮ್‌ಗೆ 30 ದಿನಗಳ ಕಾಲಾವಕಾಶ ನೀಡಿದ್ದು, ಹಾಗೂ WHO ಇದನ್ನು ಅನುಸರಿಸದಿದ್ದರೆ, “ನಾನು WHOಗೆ ಅಮೆರಿಕಾದ ಹಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತೇನೆ ಮತ್ತು ನಮ್ಮ ಸದಸ್ಯತ್ವವನ್ನು ಮರುಪರಿಶೀಲಿಸುತ್ತೇನೆ” ಎಂದು ಎಚ್ಚರಿಸಿದ್ದಾರೆ.

WHOದ ನೀತಿ ನಿರೂಪಣಾ ಸಂಸ್ಥೆ ಸೋಮವಾರ ಸಭೆ ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ಟ್ರಂಪ್‌ರ ಪತ್ರವನ್ನು ಕಳುಹಿಸಲಾಗಿದೆ. ಈ ಸಭೆಯಲ್ಲಿ ಕೊರೊನಾ ವೈರಸ್‌ನ ಮೂಲದ ತನಿಖೆಯನ್ನು ವಿರೋಧಿಸಿದ್ದ ಚೀನಾ ಹಿಂದೆ ಸರಿಯಬೇಕಾಯಿತು. ಔಪಚಾರಿಕ ನಿರ್ಣಯವನ್ನು ಇಂದು ಅಂಗೀಕರಿಸುವ ನಿರೀಕ್ಷೆಯಿದೆ.

ಟ್ರಂಪ್ ಪತ್ರದಲ್ಲಿ “ಸಂಘಟನೆಯನ್ನು ಹೇಗೆ ಸುಧಾರಿಸುವುದು ಎಂಬುದರ ಕುರಿತು ನನ್ನ ಆಡಳಿತವು ಈಗಾಗಲೇ ನಿಮ್ಮೊಂದಿಗೆ ಚರ್ಚೆಯನ್ನು ಪ್ರಾರಂಭಿಸಿದೆ” ಎಂದು ಬರೆದಿದ್ದಾರೆ.

WHO ಯಾವುದೇ ವಿಪರೀತ ಸುಧಾರಣೆಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಾದಿಸಲಾಗಿದೆ. 194 ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ಹೊಂದಿರುವ ವಿಶ್ವ ಆರೋಗ್ಯ ಸಭೆ, ಮೊಟಕುಗೊಂಡ ಅಧಿವೇಶನಕ್ಕಾಗಿ ವೀಡಿಯೊ ಸಮ್ಮೇಳನದಲ್ಲಿ ಸಭೆ ನಡೆಸುತ್ತಿದೆ, ಅದು ಕೆಲವೇ ಗಂಟೆಗಳಲ್ಲಿ ಕೊನೆಗೊಳ್ಳಲಿದೆ.

“ಅಮೇರಿಕಾ ಅಧ್ಯಕ್ಷರು ಹೇಳುತ್ತಿರುವ ಯಾವುದೇ ಪ್ರಮುಖ ಸುಧಾರಣೆಯನ್ನು ಸಾಮಾನ್ಯ ಸಂಸ್ಥೆ, ವಿಶ್ವ ಆರೋಗ್ಯ ಸಭೆ ಅನುಮೋದನೆಯೊಂದಿಗೆ ಮಾತ್ರ ಮಾಡಬಹುದಾಗಿದೆ” ಎಂದು ರಾಜತಾಂತ್ರಿಕರು ಹೇಳಿದ್ದಾರೆ.

ಖಚಿತವಾಗಿ ಹೇಳುವುದಾದರೆ, ವಿಶ್ವ ಸಂಸ್ಥೆಯ ಅಂಗ ಸಂಸ್ಥೆಯಾದ ಆರೋಗ್ಯ ಸಂಸ್ಥೆಯಿಂದ ಹೊರನಡೆಯುವ ಬಗ್ಗೆ ಟ್ರಂಪ್ ಆಡಳಿತವು ಮಾತನಾಡುತ್ತಿರುವುದು ಇದೇ ಮೊದಲಲ್ಲ. ಆದರೆ WHO ದ ಮುಖ್ಯಸ್ಥರಿಗೆ ಬರೆದ ಪತ್ರವು ಬೆದರಿಕೆಯನ್ನು ಔಪಚಾರಿಕಗೊಳಿಸುತ್ತದೆ.


ಓದಿ: ಕೊರೊನಾ ವೈರಸ್ ಹುಟ್ಟಿದ್ದು ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ: ಚೀನಾ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...