Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ನಮ್ಮ ದೇಶ ಮಾತ್ರವಲ್ಲದೇ ಇಡೀ ವಿಶ್ವವೇ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಅದರ ವಿರುದ್ಧ ಹೋರಾಡಲು ಹೆಣಗಾಡುತ್ತಿದ್ದರೆ ಕೆಲ ಮತಾಂಧರಿಗೆ ಈಗಲೂ ಪಾಕಿಸ್ತಾನದ್ದೆ ಚಿಂತೆಯಾಗಿದೆ. ದಿನಕ್ಕೊಮ್ಮೆಯಾದರೂ ಪಾಕಿಸ್ತಾನ, ದೇಶಪ್ರೇಮ ಪದಗಳನ್ನು ಬಳಸದಿದ್ದರೆ ಅವರಿಗೆ ತಿಂದದ್ದು ಜೀರ್ಣವಾಗುವುದಿಲ್ಲ ಎನಿಸುತ್ತದೆ. ಆದ್ದರಿಂದ ಯಾರಿಗಾದರೂ ಜಿಂದಾಬಾದ್ ಎನ್ನುವ ಘೋಷಣೆ ಕೂಗಿದಾಕ್ಷಣ ಈ ಮತಾಂಧರಿಗೆ ಪಾಕಿಸ್ತಾನಕ್ಕೆ ಜಿಂದಾಬಾದ್ ಅಂದ ಹಾಗೆ ಕೇಳಿಸುತ್ತದೆ. ಅಷ್ಟರಮಟ್ಟಿಗೆ ಅವರ ಕಿವಿಗಳು ಹಾಳಾಗಿಹೋಗಿವೆ.

ಮುಂಬೈನಲ್ಲಿ ಆಗಿದ್ದು ಇದೇ ಆಗಿದೆ. ಲಾಕ್‌ಡೌನ್ ಕಾರಣಕ್ಕೆ ಸಿಕ್ಕಿಕೊಂಡು ಅನ್ನ ಆಹಾರವಿಲ್ಲದೇ ನರಳುತ್ತಿದ್ದ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ಹೋಗಬಹುದೆಂದು ಕೊನೆಗೂ 50 ದಿನದ ನಂತರ ತೀರ್ಮಾನಿಸಲಾಗಿತು. ಅಂತೆಯೇ ಮುಂಬೈನ ಛತ್ರಪತ್ರಿ ಶಿವಾಜಿ ರೈಲು ನಿಲ್ದಾಣಗಳಿಂದ ಶ್ರಮಿಕ್ ರೈಲುಗಳು ಹೊರಟಿದ್ದವು. ಮೇ 14 ರಂದು ಉತ್ತರಪ್ರದೇಶಕ್ಕೆ ಹೊರಟಿದ್ದ ಶ್ರಮಿಕ್ ರೈಲಿಗೆ ಹಸಿರು ನಿಶಾನೆ ತೋರಿಸಿ ಉದ್ಘಾಟಿಸಲು ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿರುವ ಅಬು ಅಜ್ಮಿ ಆಗಮಿಸಿದ್ದರು. ಅವರ ಜೊತೆಗೆ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಸಾಜಿದ್ ಸಿದ್ದಿಕಿ ಮತ್ತು ಮುಂಬೈ ಪೊಲೀಸರು ಸ್ಥಳದಲ್ಲಿದ್ದರು. ಆಗ ಸಮಾಜವಾದಿ ಪಕ್ಷದ ಕಾರ್ಯಕರ್ತರು ಸಾಜಿದ್ ಬಾಯ್ ಜಿಂದಾಬಾದ್, ಮುಂಬೈ ಪೊಲೀಸ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನೇ ಕಾಯುತ್ತಿದ್ದ ಕೆಲ ಮತಾಂಧರು ಸಚಿವರ ಎದುರೆ ಪಾಕಿಸ್ತಾನ್ ಜಿಂದಾಬಾದ್ ಕೂಗುತ್ತಿದ್ದರೂ, ಅವರು ತಡೆಯುತ್ತಿಲ್ಲ ಎಂಬ ಶೀರ್ಷಿಕೆಯಲ್ಲಿ ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ.

ಆದರೆ ಸಮಾಜವಾದಿ ಪಕ್ಷದ ಕಾರ್ಯಕರ್ತರು ಒರಿಜಿನಲ್ ವಿಡಿಯೋಗಳನ್ನು ಟಿಕ್‌ಟಾಕ್ ಸೇರಿದಂತೆ ಇತರ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದರಿಂದ ಸಾಜಿದ್ ಬಾಯ್ ಜಿಂದಾಬಾದ್ ಎಂದು ಕೂಗಿರುವುದು ಅದರಲ್ಲಿ ಸ್ಪಷ್ಟವಾಗಿದೆ. ಅದನ್ನೇ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ ಎಂದು ಸುದ್ದಿ ಹರಡಿದ್ದಾರೆ ಅಷ್ಟೇ. ಒರಿಜಿನಲ್‌ ವಿಡಿಯೋ ಕೆಳಗಿದೆ ನೊಡಿ.

ಅಲ್ಲದೇ ಸಾಜಿದ್ ಸಿದ್ದಿಕಿ ಮತ್ತು ಅಬು ಅಜ್ಮಿಯವರು ಈ ಕುರಿತು ಪ್ರತಿಕ್ರಿಯಿಸಿದ್ದು ಇದೆಲ್ಲಾ ದೊಡ್ಡ ಸುಳ್ಳು. ಇಂತಹ ಆಧಾರ ರಹಿತ ಸುಳ್ಳುಗಳನ್ನು ಹರಡಬೇಡಿ ಎಂದಿದ್ದಾರೆ. ಒಂದು ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರೆ ಅಂತವರನ್ನು ಜೊತೆಗೇ ಇದ್ದ ಮುಂಬೈ ಪೊಲೀಸರು ಬಂಧಿಸುತ್ತಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಯಾವುದೇ ಘೋಷಣೆ ಕಂಡೂ ಸದಾ ಪಾಕಿಸ್ತಾನವನ್ನು ನೆನಸುವವರಿಗೆ ಪಾಕಿಸ್ತಾನ ಜಿಂದಾಬಾದ್‌ ಎಂದೇ ಕೇಳಿಸುವುದು ವಿಪರ್ಯಾಸವಾಗಿದೆ.


ಇದನ್ನೂ ಓದಿ ; ಫ್ಯಾಕ್ಟ್‌ಚೆಕ್‌- ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...