Homeಮುಖಪುಟನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ" ಎಂದು ಪೊಲೀಸರು ಹೇಳುತ್ತಾರೆ.

- Advertisement -
- Advertisement -

ಭಾರತದಲ್ಲಿ ಇಸ್ಲಾಮೋಫೋಬಿಯಾ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಬಹಿರಂಗ ಉದಾಹರಣೆಯೊಂದು ಮಧ್ಯಪ್ರದೇಶದ ಬೇತುಲ್‌ನಲ್ಲಿ ವರದಿಯಾಗಿದೆ. ಇದರಲ್ಲಿ ಪೊಲೀಸರೆ ಪ್ರಧಾನ ಪಾತ್ರಧಾರಿಗಲಾಗಿದ್ದು ಅವರ ಅಧಿಕಾರ ದುರುಪಯೋಗ ಮತ್ತು ಮುಸ್ಲಿಂ ದ್ವೇಷ ಹಾಡಹಗಲೇ ಜಗಜ್ಜಾಹೀರಾಗಿದೆ.

ಮಾರ್ಚ್ 23 ರಂದು ವಕೀಲ ದೀಪಕ್ ಬುಂಡೆಲೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳುತ್ತಿದ್ದಾಗ ರಾಜ್ಯ ಪೊಲೀಸರು ಅವರನ್ನು ಕ್ರೂರವಾಗಿ ಥಳಿಸಿದ್ದರು. ಅಲ್ಲದೇ ದೀಪಕ್‌ ಒಂದು ತಿಂಗಳ ನಂತರ, ಅವರು ತಮ್ಮ ದೂರನ್ನು ಹಿಂಪಡೆಯುವಂತೆ ಪೊಲೀಸರಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸ್ ಅಧಿಕಾರಿಗಳು, ಬುಂಡೆಲೆ ಅವರನ್ನು ಮುಸ್ಲಿಂ ವ್ಯಕ್ತಿ ಎಂದು ತಪ್ಪಾಗಿ ಗುರುತಿಸಿದ್ದರಿಂದ ಅವರನ್ನು ಥಳಿಸಲಾಯಿತು ಎಂದು ಹೇಳಿದ್ದಾರೆ!

ನಡೆದಿದ್ದೇನು?

ಮಾರ್ಚ್ 23 ರಂದು ಸಂಜೆ 5.30 ರಿಂದ 6 ರವರೆಗೆ ಅವರು ಆಸ್ಪತ್ರೆಗೆ ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆದಿದ್ದಾರೆ. “ಆಗಿನ್ನು ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೆ ಬಂದಿರಲ್ಲ. ಆದರೆ ಸೆಕ್ಷನ್ 144 ಅನ್ನು ಬೆತುಲ್‌ನಲ್ಲಿ ವಿಧಿಸಲಾಗಿತ್ತು. ನಾನು ಕಳೆದ 15 ವರ್ಷಗಳಿಂದ ತೀವ್ರ ಮಧುಮೇಹ ಮತ್ತು ರಕ್ತದೊತ್ತಡ ರೋಗಿಯಾಗಿದ್ದೇನೆ. ನನಗೆ ಆರೋಗ್ಯವಾಗದ ಕಾರಣ, ನಾನು ಆಸ್ಪತ್ರೆಗೆ ಭೇಟಿ ನೀಡಲು ಮತ್ತು ಕೆಲವು ಔಷಧಿಗಳನ್ನು ಪಡೆಯಲು ಹೊರಟಿದ್ದೆ. ಆದರೆ ನನ್ನನ್ನು ಪೊಲೀಸರು ಮಧ್ಯದಲ್ಲಿ ನಿಲ್ಲಿಸಿದರು. ಆಗ ನಾನು ಔಷಧಿಗಳನ್ನು ಪಡೆದುಕೊಳ್ಳಬೇಕು ಎಂದು ಪೊಲೀಸ್ ಸಿಬ್ಬಂದಿಗೆ ವಿವರಿಸಿದೆ. ಆದರೆ ಅವರಲ್ಲಿ ಒಬ್ಬರು ನಾನು ಹೇಳುತ್ತಿರುವುದನ್ನು ಕೇಳದೆ ಕಪಾಳಕ್ಕೆ ಹೊಡೆದರು” ಎಂದಿದಾರೆ.

“ಪೊಲೀಸರು ಸಾಂವಿಧಾನಿಕ ಮಿತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಾನು ಅವರಿಗೆ ಹೇಳಿದೆ, ಮತ್ತು ನಾನು ತಪ್ಪು ಮಾಡಿದ್ದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಬಂಧನಕ್ಕೊಳಗಾಗಲು ಸಿದ್ಧನಿದ್ದೇನೆ ಎಂದು ಹೇಳಿದೆ. ಇದನ್ನು ಕೇಳಿದ ಪೊಲೀಸ್ ಸಿಬ್ಬಂದಿ ಕೋಪದಿಂದ ನನ್ನನ್ನು ಮತ್ತು ಭಾರತೀಯ ಸಂವಿಧಾನವನ್ನು ನಿಂದಿಸಲು ಪ್ರಾರಂಭಿಸಿದರು. ಆಗ ಅನೇಕ ಪೊಲೀಸ್ ಅಧಿಕಾರಿಗಳು ಬಂದು ನನ್ನನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು” ಎಂದು ಬುಂಡೆಲೆ ಹೇಳಿದ್ದಾರೆ.

ನಾನು ವಕೀಲನಾಗಿದ್ದೇನೆ ಮತ್ತು ಕೇಸು ದಾಖಲಿಸುತ್ತೇನೆ ಎಂದು ಹೇಳಿದ ನಂತರವೇ ಅವರು ನನ್ನನ್ನು ಹೊಡೆಯುವುದನ್ನು ನಿಲ್ಲಿಸಿದರು “ಆದರೆ ಆ ಹೊತ್ತಿಗೆ ನನ್ನ ಕಿವಿಯಲ್ಲಿ ತೀವ್ರವಾಗಿ ರಕ್ತಸ್ರಾವವಾಗಲು ಪ್ರಾರಂಭಿಸಿತು” ಎಂದು ಬುಂಡೆಲೆ ಆರೋಪಿಸಿದ್ದಾರೆ. ನಂತರ ಆಸ್ಪತ್ರೆಗೆ ಹೋಗಲು ನಾನು ನನ್ನ ಸ್ನೇಹಿತ ಮತ್ತು ಸಹೋದರನನ್ನು ಕರೆದು ಎಂಎಲ್ಸಿ ವರದಿ ಪಡೆದೆ. ಮಾರ್ಚ್ 24 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಸ್.ಭಡೋರಿಯಾ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೊಹ್ರಿ ಅವರಿಗೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ನಂತರ ಮುಖ್ಯಮಂತ್ರಿ, ರಾಜ್ಯದ ಮಾನವ ಹಕ್ಕುಗಳ ಆಯೋಗ, ಮಧ್ಯಪ್ರದೇಶದ ಮುಖ್ಯ ನ್ಯಾಯಮೂರ್ತಿ ಮತ್ತು ಉನ್ನತ ಸರ್ಕಾರಿ ಅಧಿಕಾರಿಗಳಿಗೆ ಪತ್ರ ಬರೆದೆ. ಮಾರ್ಚ್ 23ರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳಿಗಾಗಿ ಆರ್‌ಟಿಐ ಅರ್ಜಿಯನ್ನು ಸಲ್ಲಿಸಿದ್ದೇನೆ, ಆದರೆ ಮಾಹಿತಿಯನ್ನು ನಿರಾಕರಿಸಲಾಗಿದೆ ಎಂದು ಬುಂಡೆಲೆ ಹೇಳಿದ್ದಾರೆ. “ನನ್ನ ಆರ್‌ಟಿಐ ಅರ್ಜಿಗೆ ಮಾಹಿತಿ ನೀಡದಿದ್ದುದ್ದಕ್ಕೆ ಪೊಲೀಸರು ಕಾರಣವನ್ನು ಸ್ಪಷ್ಟವಾಗಿ ತಿಳಿಸಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಸರ್ಕಾರಿ ಫೈಲ್‌ಗಳಿಂದ ಅಳಿಸಿರಬಹುದು ಎಂದು ನನಗೆ ಅನಧಿಕೃತವಾಗಿ ತಿಳಿಸಲಾಗಿದೆ” ಎಂದು ಅವರು ದೂರಿದ್ದಾರೆ.

ಅಂದಿನಿಂದ, ಪೊಲೀಸರು ದೂರನ್ನು ಹಿಂಪಡೆಯಲು ಒತ್ತಾಯಿಸುತ್ತಿದ್ದಾರೆ. ಮುಸ್ಲಿಂ ಎಂದು ತಪ್ಪಾಗಿ ತಿಳಿದು ಥಳಿಸಲಾಗಿದೆ. ನೀವು ಕೆಲವು ಉನ್ನತ ಅಧಿಕಾರಿಗಳು ನನ್ನ ದೂರನ್ನು ಹಿಂತೆಗೆದುಕೊಂಡರೆ ಘಟನೆಯನ್ನು ಖಂಡಿಸಿ ಕ್ಷಮೆಯಾಚಿಸುವ ಹೇಳಿಕೆ ನೀಡಬಹುದು ಎಂದು ಹೇಳಿದ್ದಾರೆ. ಆದರೆ ನನ್ನ ಸ್ನೇಹಿತೆರು ಶಾಂತಿಯುತವಾಗಿ ಕಾನೂನು ಸಮರ ಮುಂದುವರೆಸಲು ಸಲಹೆ ನೀಡಿದ್ದಾರೆ ಎಂದು ಬುಂಡೆಲೆ ತಿಳಿಸಿದ್ದಾರೆ.

“ನಾವು ಆ ಅಧಿಕಾರಿಗಳ ಪರವಾಗಿ [ಬುಂಡೆಲೆ ಮೇಲೆ ಹಲ್ಲೆ ಮಾಡಿದ] ಕ್ಷಮೆಯಾಚಿಸುತ್ತೇವೆ. ಘಟನೆಯಿಂದಾಗಿ ನಾವು ನಿಜವಾಗಿಯೂ ಮುಜುಗರಕ್ಕೊಳಗಾಗಿದ್ದೇವೆ. ನಿಮಗೆ ಬೇಕಾದರೆ ನಾನು ಆ ಅಧಿಕಾರಿಗಳನ್ನು ಕರೆತಂದು ನಿಮ್ಮಲ್ಲಿ ಖುದ್ದಾಗಿ ಕ್ಷಮೆಯಾಚಿಸುತ್ತೇನೆ” ಎಂದು ಆಪಾದಿತ ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ.
“ಪೊಲೀಸರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಲಿಲ್ಲ ಅಥವಾ ನನ್ನನ್ನು ಥಳಿಸಲಿಲ್ಲ” ಎಂದು ಬರೆಯಲು ನಾನು ನಿಮಗೆ ಹೃತ್ಪೂರ್ವಕ ವಿನಂತಿಯನ್ನು ಮಾಡುತ್ತಿದ್ದೇನೆ. ದಯವಿಟ್ಟು ನಮ್ಮ ವಿನಂತಿಯನ್ನು ಒಪ್ಪಿಕೊಳ್ಳಿ; ನಾವು ಗಾಂಧಿಯವರ ದೇಶದಲ್ಲಿ ವಾಸಿಸುತ್ತಿದ್ದೇವೆ ಎಂದು ಅರ್ಥಮಾಡಿಕೊಳ್ಳಿ; ನಾವೆಲ್ಲರೂ ಗಾಂಧಿಯ ಮಕ್ಕಳು… ನಿಮ್ಮ ಜಾತಿಯಿಂದ ನನಗೆ ಕನಿಷ್ಠ 50 ಸ್ನೇಹಿತರಿದ್ದಾರೆ ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎಂದು ಬುಂಡೆಲೆ ಆರೋಪಿಸುತ್ತಾರೆ.

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ” ಎಂದು ಪೊಲೀಸರು ಹೇಳುತ್ತಾರೆ.

“ನೀವು ಉದ್ದನೆಯ ಗಡ್ಡವನ್ನು ಹೊಂದಿದ್ದೀರಿ. ಆ ಪೊಲೀಸ್‌ (ನಿಮ್ಮ ಮೇಲೆ ಹಲ್ಲೆ ಮಾಡಿದವನು) ಒಬ್ಬ ಕಟ್ಟರ್ (ಕಟ್ಟಾ) ಹಿಂದೂ… ಹಿಂದೂ-ಮುಸ್ಲಿಂ ಗಲಭೆಗಳಲ್ಲಿ ಮುಸ್ಲಿಂನನ್ನು ಬಂಧಿಸಿದಾಗಲೆಲ್ಲಾ ಅವನು ಅವರನ್ನು ಯಾವಾಗಲೂ ಕ್ರೂರವಾಗಿ ಹೊಡೆಯುತ್ತಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ಬುಂಡೆಲೆ ಮತ್ತಷ್ಟು ಚಿಂತಿತರಾಗಿದ್ದು, ಯಾವುದೇ ಕಾರಣಕ್ಕೂ ದೂರ ಹಿಂಪಡೆಯದಿರಲು ನಿರ್ಧರಿಸಿದ್ದಾರೆ. ಆದರೆ ಈ ಪ್ರಕರಣದ ವಿರುದ್ಧ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂದು ಅವರು ಹೇಳಿದ್ದಾರೆ. “ಪೊಲೀಸ್ ಅಧಿಕಾರಿಗಳು ಕ್ಷಮೆಯಾಚಿಸಿದ ರೀತಿಗೆ ನಾನು ಆಘಾತಕ್ಕೊಳಗಾಗಿದ್ದೆ. ನಾನು ಮುಸ್ಲಿಮನಾಗಿದ್ದರೂ, ಯಾವುದೇ ಕಾರಣವಿಲ್ಲದೆ ನನ್ನ ಮೇಲೆ ಹಲ್ಲೆ ನಡೆಸಲು ಪೊಲೀಸರಿಗೆ ಯಾವುದೇ ಹಕ್ಕಿಲ್ಲ” ಎಂದಿದ್ದಾರೆ.

ಇದಿಷ್ಟು ನಡೆದ ಘಟನೆಯಾಗಿದೆ. ಇಲ್ಲಿ ಮಧ್ಯಪ್ರದೇಶದ ಪೊಲೀಸರು ಪಕ್ಷಪಾತಿಯಂತೆ ವರ್ತಿಸಿದ್ದಾರೆ. ಅಧಿಕಾರ ದುರಪಯೋಗಪಡಿಸಿಕೊಂಡಿದ್ದಾರೆ. ಒಂದು ಧರ್ಮದ ವಿರುದ್ಧ ಕೆಲಸ ಮಾಡಿದ್ದಾರೆ. ಅಂದರೆ ತಪ್ಪುಗಳ ಮೇಲೆ ತಪ್ಪು ಮಾಡಿದ್ದಾರೆ. ಸಂತ್ರಸ್ತ ವ್ಯಕ್ತಿ ವಕೀಲನಾಗಿರದಿದ್ದರೆ ಪೊಲೀಸರು ಎಂದೋ ಈ ಕೇಸನ್ನು ಮುಚ್ಚಿಹಾಕಿರುತ್ತಿದ್ದರು ಎಂಬುದರಲ್ಲಿ ಸಂದೇಹವಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಮೂಲ: ದಿ ವೈರ್


ಇದನ್ನೂ ಓದಿ: ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...