Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ?

ಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ?

- Advertisement -
- Advertisement -

ಟೊಮೊಟೊದಿಂದ ಟೆನ್ಷನ್, ರೆಡ್ ಡೆಡ್ಲಿ ವೈರಸ್ ಇನ್ಫೆಕ್ಷನ್. ತಿರಂಗ ವೈರಸ್ ಬಂದಿದೆ. ತರಕಾರಿಗಳಿಂದ ಮಾನವನ ದೇಹ ಹೊಕ್ಕಿ ಕೊಲ್ಲಲು ಸಜ್ಜಾಗಿದೆ. ಇದು ಕೊರೊನಾ ವೈರಸ್‌ನ ಹೊಸ ರೂಪ. ಆದರೆ ಕೊರೊನಾಗಿಂತಲೂ ಡೇಂಜರ್ ವೈರಸ್. ಅದರಿಂದಾಗಿ ಮಹಾರಾಷ್ಟ್ರದಲ್ಲಿ ಒಂದು ವರ್ಷ ಜನರು ಟೊಮೊಟೊ ತಿನ್ನುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಈ ಮೇಲಿನ ಅಣಿಮುತ್ತುಗಳು ಟಿವಿ9 ಭಾರತ್‌ವರ್ಷ್ ಹಿಂದಿವಾಹಿನಿಯಲ್ಲಿ ಮೇ13 ರಂದು ಪ್ರಸಾರವಾದಂತವುಗಳು. ಜೊತೆಗೆ ಅಷ್ಟೇ ಬೇಗ ಅದನ್ನು ಡಿಲಿಟ್ ಮಾಡಲಾಯಿತು ಕೂಡ. ಅಷ್ಟರಲ್ಲಿ ಅದನ್ನು ನೋಡಿದ ಎಷ್ಟು ಜನರು ಇದನ್ನು ನಂಬಿದರೋ ಗೊತ್ತಿಲ್ಲ. ಆದರೆ ಬಹಳಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ತಾವೇ ಕಂಡುಹಿಡಿದವರಂತೆ ಹಾಕಿಕೊಂಡಿದ್ದರು.

ಫ್ಯಾಕ್ಟ್‌ಚೆಕ್‌

ಈ ವರ್ಷ ಮಹಾರಾಷ್ಟ್ರದ ಹಲವು ಕಡೆ ಕೂಯ್ಲಿಗೆ ಬಂದ ಟೊಮೊಟೊಗಳು ಮಾಗಿಹೋಗಿವೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟವಾಗಿದೆ. ನಾಸಿಕ್‌, ಪುಣೆ ಮತ್ತು ಅಹ್ಮದ್‌ ನಗರ ಜಿಲ್ಲೆಗಳಲ್ಲಿ ಕಳೆದ ಹತ್ತು ದಿನಗಳಿಂದ ಶೇ.60% ಟೊಮೊಟೊ ನಾಶವಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ಮಹಾತ್ಮಾ ಫುಲೆ ಕೃಷಿ ವಿದ್ಯಾಪೀಠದ ಡಾ.ನವಲೆ ಎಂಬುವವರು ಟೊಮೊಟೊಗಳು ಹಾಳಾಗಲು ಕಾರಣವೇನೆಂದು ಅಧ್ಯಯನ ಮಾಡುತ್ತಿದ್ದಾರೆ. ಅವರು ಸ್ಯಾಂಪಲ್‌ಗಳನ್ನು ಬೆಂಗಳೂರಿನ ಇನ್ಸ್ಟಿಟ್ಯೂಟ್‌ ಆಫ್‌ ಹಾರ್ಟಿಕಲ್ಚರ್‌ ರಿಸರ್ಚ್‌ ಫಾರ್‌ ಐಡೆಂಟಿಫಿಕೇಶನ್‌ ಕಳಿಸಿದ್ದಾರೆ. ಅವರು ಬರೆದ ಲೇಖನದಲ್ಲಿ ಯಾವುದೋ  ರೋಗದಿಂದ ಟೊಮೊಟೊ ಎಲೆಗಳು ಮೊದಲು ಹಾಳಾಗಿ ನಂತರ ಹಣ್ಣು ಸಹ ಹಾಳಾಗುತ್ತಿದೆ ಎಂದಿದ್ದಾರೆ. ಅಲ್ಲದೇ ರೋಗದಿಂದ ಕೂಡಿದ ಟೊಮೊಟೊ ಬೀಜಗಳನ್ನು ವಿತರಿಸಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಹಲವು ರೈತರು ಪ್ರತಿಭಟನೆ ನಡೆಸಿರುವುದನ್ನು ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಬಹಳಷ್ಟು ಕೀಟತಜ್ಞರು ಇದು ಕೊರೊನಾ ವೈರಸ್‌ ರೀತಿಯದು ಎಂಬ ಸುದ್ದಿಯನ್ನು ಅಲ್ಲಗೆಳೆದಿದ್ದಾರೆ. ಟೊಮೊಟೊಗೆ ಹಲವು ರೋಗಗಳು ಬರುವುದು ಸಹಜ. ಅದರಿಂದ ಕೆಂಪು ಟೊಮೊಟೊಗಳು ಮಾಗಿವೆ. ಆದರೆ ಇದಕ್ಕೂ ಕೊರೊನಾ ವೈರಸ್ ಯಾವ ಸಂಬಂಧವಿಲ್ಲ, ತರಕಾರಿಗಳಿಂದ ವೈರಸ್ ಮನುಷ್ಯನ ದೇಹ ಸೇರುತ್ತವೆ ಎಂಬುದು ಸಂಪೂರ್ಣ ಸುಳ್ಳು ಎಂದಿದ್ದಾರೆ.

ನಂತರ ಈ ಸ್ಟೋರಿಗಳನ್ನು ಡಿಲಿಟ್ ಮಾಡಿರುವ ಟಿವಿ9 ಭಾರತ್‌ವರ್ಷ್ ಮೇ15 ರಂದು ಮತ್ತೊಂದು ಶೋ ನಡೆಸಿ ನಾವು ಪ್ರಶ್ನಾರ್ಥಕ ಚಿನ್ನೆಗಳನ್ನಿಟ್ಟು ಶೋ ನಡೆಸಿದ್ದವು. ಆದರೆ ಸಾಮಾಜಿಕ ಜಾಲತಾಣಿಗರು ತಪ್ಪು ಸಂದೇಶ ಹರಡಿದ್ದಾರೆ ಎಂದು ಸಮರ್ಥಿಸಿಕೊಂಡಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಆಹಾರ, ಹಣಕ್ಕಾಗಿ ವಲಸೆ ಕಾರ್ಮಿಕರಿಂದ ದರೋಡೆ ಮತ್ತು ಕೊಲೆ?: ಇದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...