Homeಚಳವಳಿಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸುಪ್ರೀಂ ಕೋರ್ಟ್‌‌ನಲ್ಲಿ ಪಿಐಎಲ್‌ ಸಲ್ಲಿಕೆ

ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸುಪ್ರೀಂ ಕೋರ್ಟ್‌‌ನಲ್ಲಿ ಪಿಐಎಲ್‌ ಸಲ್ಲಿಕೆ

ಅರ್ಜಿಯು ಕೇಂದ್ರದ ಹೊರತಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳನ್ನು ಪ್ರತಿವಾದಿ ಪಕ್ಷಗಳನ್ನಾಗಿ ಮಾಡಿದೆ.

- Advertisement -
- Advertisement -

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯು ಕಾರ್ಮಿಕರು ಶಾಂತಿಯುತವಾಗಿ ಪ್ರತಿಭಟಿಸುವ, ಒಕ್ಕೂಟಗಳನ್ನು ಅಥವಾ ಸಂಘಗಳನ್ನು ರಚಿಸುವ ಹಕ್ಕನ್ನು ನಿರಾಕರಿಸುತ್ತದೆ ಎಂದು ವಾದಿಸಿ ಕೇರಳ ಮೂಲದ ಕಾನೂನು ವಿದ್ಯಾರ್ಥಿಯೊಬ್ಬರು ಸುಪ್ರೀಂ ಕೋರ್ಟ್‌‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

COVID-19 ಸಾಂಕ್ರಾಮಿಕದ ಮಧ್ಯೆ ಕಾರ್ಮಿಕ ಕಾನೂನುಗಳಲ್ಲಿ ಮಾಡಿದ ಬದಲಾವಣೆಗಳು, ಆರ್ಥಿಕ ಚಟುವಟಿಕೆ ಮತ್ತು ಮಾರುಕಟ್ಟೆ ಸುಧಾರಣೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದು ವಾಸ್ತವದಲ್ಲಿ ಕಾರ್ಮಿಕರನ್ನು ಬಲವಂತದ ದುಡಿಮೆಗೆ ತಳ್ಳುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಕೆಲವು ರಾಜ್ಯ ಸರ್ಕಾರಗಳು ಹೊರಡಿಸಿದ ಸುಗ್ರೀವಾಜ್ಞೆಗಳು ಮತ್ತು ಅಧಿಸೂಚನೆಗಳು “ದೇಶದ ಕಾರ್ಮಿಕ ಕಾನೂನು ಚೌಕಟ್ಟಿನಲ್ಲಿ ಮೂಲಭೂತ ಬದಲಾವಣೆಗಳನ್ನು ಮಾಡಿವೆ” ಎಂದು ವಕೀಲರಾದ ಕಲೀಶ್ವರಂ ರಾಜ್  ಮತ್ತು ವಕೀಲ ನಿಶೆ ರಾಜೇನ್ ಶೋಂಕರ್ ಮೂಲಕ ಅರ್ಜಿ ಸಲ್ಲಿಸಿರುವ ನಂದಿನಿ ಪ್ರವೀಣ್ ಅವರು ದೂರಿದ್ದಾರೆ.

ಅರ್ಜಿಯು ಕೇಂದ್ರದ ಹೊರತಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳನ್ನು ಪ್ರತಿವಾದಿ ಪಕ್ಷಗಳನ್ನಾಗಿ ಮಾಡಿದೆ.

ಹರಿಯಾಣ, ಅಸ್ಸಾಂ, ಪಂಜಾಬ್ ಮತ್ತು ಗೋವಾ ರಾಜ್ಯಗಳು ಕೆಲಸದ ಅವಧಿಯನ್ನು ವಿಸ್ತರಿಸುವ ಅಧಿಸೂಚನೆಗಳನ್ನು ನೀಡಿವೆ ಎಂದು ಅದು ಹೇಳಿದೆ.

ಉತ್ತರ ಪ್ರದೇಶದ ಸುಗ್ರೀವಾಜ್ಞೆಯು “ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ಕಾರ್ಖಾನೆಗಳು ಮತ್ತು ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಮಿಕ ಕಾನೂನುಗಳ ಕಾರ್ಯಾಚರಣೆಯನ್ನು ಕೆಲವು ಷರತ್ತುಗಳಿಗೆ ಒಳಪಟ್ಟಿ ಮೂರು ವರ್ಷಗಳ ಅವಧಿಗೆ ವಿನಾಯಿತಿ ನೀಡಲಾಗುವುದು” ಎಂದು ಹೇಳಿದೆ.

“ವೇತನ ಸಂಹಿತೆಯನ್ನು ಅಮಾನತುಗೊಳಿಸಲಾಗಿದೆ ಮತ್ತು ವೇತನ ಪಾವತಿ ಕಾಯ್ದೆಯನ್ನು ರದ್ದುಗೊಳಿಸಲಾಗಿರುವುದರಿಂದ, ಕಾರ್ಖಾನೆಗಳು ಮತ್ತು ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಸಮಯೋಚಿತ ವೇತನವನ್ನು ನೀಡಲು ಯಾವುದೇ ಶಾಸನಬದ್ಧ ಬಾಧ್ಯತೆಯಿರುವುಲ್ಲ. ಆದ್ದರಿಂದ, ಸುಗ್ರೀವಾಜ್ಞೆಯು ಮೂಲಭೂತವಾಗಿ ಈ ಸಂಸ್ಥೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ರದ್ದುಗೊಳಿಸಲು ಕಾರಣವಾಗಿದೆ” ಎಂದು ಉತ್ತರ ಪ್ರದೇಶಕ್ಕೆ ಸಂಬಂಧಿಸಿದಂತೆ ಅರ್ಜಿಯಲ್ಲಿ ತಿಳಿಸಲಾಗಿದೆ.

“ಕಾರ್ಮಿಕರ ಕಲ್ಯಾಣ ಮತ್ತು ಆರೋಗ್ಯ ಕ್ರಮಗಳನ್ನು ಸ್ಥಗಿತಗೊಳಿಸುವ ಮೂಲಕ ಮತ್ತು ಕೆಲಸದ ಸಮಯವನ್ನು ಹೆಚ್ಚಿಸುವುದು 1982 ರ ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (ಪಿಯುಡಿಆರ್) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯು ಕಾರ್ಮಿಕರು ಶಾಂತಿಯುತವಾಗಿ ಪ್ರತಿಭಟಿಸುವ, ಒಕ್ಕೂಟಗಳನ್ನು ಅಥವಾ ಸಂಘಗಳನ್ನು ರಚಿಸುವ ಹಕ್ಕನ್ನು ನಿರಾಕರಿಸುತ್ತದೆ. ಕಾರ್ಮಿಕ ಸಂಘಗಳ ಮಾನ್ಯತೆ ಸ್ಥಗಿತಗೊಳ್ಳಲಿದೆ. ಈ ಹೊಸ ಕಾನೂನುಗಳು ಕಾರ್ಮಿಕರ ಆರೋಗ್ಯದ ಹಕ್ಕು, ವಿರಾಮ, ಸುರಕ್ಷಿತ ಕೆಲಸದ ಪರಿಸ್ಥಿತಿಗಳ ಮೇಲೆ ಪರಿಣಾಮ ಬೀರುತ್ತವೆ. ಅದು ಸಂವಿಧಾನದ 21 ನೇ ಪರಿಚ್ಛೇಧದ ಅಡಿಯಲ್ಲಿ ಜೀವಿಸುವ ಹಕ್ಕಿನ ವ್ಯಾಪ್ತಿಯಲ್ಲಿ ಬರುತ್ತದೆ. ಕಾರ್ಮಿಕ ಕಾನೂನುಗಳ ಕುರಿತಾದ ಅಂತರರಾಷ್ಟ್ರೀಯ ಚೌಕಟ್ಟನ್ನು ಈ ತಿದ್ದುಪಡಿಗಳು ಉಲ್ಲಂಘಿಸಿವೆ ಎಂದು ಆರೋಪಿಸಲಾಗಿದೆ.

ಕೈಗಾರಿಕಾ ವಿವಾದ ಕಾಯ್ದೆ

ಅನ್ಯಾಯದ ಕಾರ್ಮಿಕ ಪದ್ಧತಿಗಳನ್ನು ನಿಷೇಧಿಸುವ ನಿರ್ಣಾಯಕ ಕಾನೂನಾದ ಕೈಗಾರಿಕಾ ವಿವಾದ ಕಾಯ್ದೆಯ ವ್ಯಾಪ್ತಿಯಿಂದ ಕೆಲವು ರಾಜ್ಯಗಳು ಕಾರ್ಖಾನೆಗಳಿಗೆ ವಿನಾಯಿತಿ ನೀಡಿವೆ ಎಂದು ಅರ್ಜಿಯಲ್ಲಿ ಸೂಚಿಸಲಾಗಿದೆ.

“ವಿವಾದಗಳ ತನಿಖೆ ಮತ್ತು ಇತ್ಯರ್ಥಕ್ಕೆ ಸಾಕಷ್ಟು ಯಾಂತ್ರಿಕ ವ್ಯವಸ್ಥೆ ಇಲ್ಲದಿದ್ದರೆ ಯಾವುದೇ ರಾಜ್ಯ ಸರ್ಕಾರವು ಕಾಯ್ದೆಯಲ್ಲಿ ವಿನಾಯಿತಿ ನೀಡಲು ಅನುಮತಿಸುವುದಿಲ್ಲ. ಇದು ಪೂರ್ವಾಪೇಕ್ಷಿತವಾಗಿದೆ. ಎರಡನೆಯದಾಗಿ, COVID-19 ಸಾಂಕ್ರಾಮಿಕದಂತಹ ಬಿಕ್ಕಟ್ಟಿನಲ್ಲಿ, ಯಾವುದೇ ಪರ್ಯಾಯವಿಲ್ಲದೆ ಇಡೀ ಕಾಯಿದೆಗೆ ವಿನಾಯಿತಿ ನೀಡಲು ರಾಜ್ಯಗಳಿಗೆ ಅಧಿಕಾರವಿಲ್ಲ ಎಂದು ಅದು ವಾದಿಸಿದೆ.

ಈ ಕುರಿತು ಅರ್ಜಿದಾರರ ಪರ ವಕೀಲರಲ್ಲಿ ಒಬ್ಬರಾದ ಮೈತ್ರೇಯಿ ಎಸ್‌ ಹೆಗಡೆಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ದೇಶ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಮತ್ತುಷ್ಟು ಮಗದಷ್ಟು ದುಡಿಯಿರಿ ಎಂದು ಅದರ ಭಾರವನ್ನು ಕಾರ್ಮಿಕರ ಮೇಲೆ ಹಾಕುವುದು ಕಾನೂನಿಗೆ ವಿರುದ್ಧ ಎನ್ನುವುದಕ್ಕಿಂತ ಅಮಾನವೀಯ ಎನ್ನುವುದೇ ಸೂಕ್ತ. ಕೋವಿಡ್‌ನಿಂದಾಗಿ ಅತ್ಯಂತ ಕಷ್ಟಪಡುವ, ನಷ್ಟ ಅನುಭವಿಸುವ ವರ್ಗವೆಂದರೆ ಅದು ಕಾರ್ಮಿಕರಾಗಿದ್ದಾರೆ. ಅವರ ಮೇಲಿನ ಈ ದೌರ್ಜನ್ಯವನ್ನು ತಡೆಯಲು ನಾವು ಪಿಐಎಲ್‌ ಸಲ್ಲಿಸಿದ್ದೇವೆ ಎಂದರು.

ಉತ್ತರ ಪ್ರದೇಶ ಸರ್ಕಾರವು ಜನರ ಒತ್ತಡಕ್ಕೆ ಮಣಿದು ಕೆಲಸದ ಅವಧಿಯ ಹೆಚ್ಚಳವನ್ನು ಮಾತ್ರ ವಾಪಸ್‌ ಪಡೆದಿದ್ದಾರೆ. ಉಳಿದಂತೆ ವೇತನ ಕಾಯ್ದೆ, ಫ್ಯಾಕ್ಟರಿ ಕಾಯ್ದೆ ಮತ್ತು ಕೈಗಾರಿಕಾ ವಿವಾದ ಕಾಯ್ದೆಯ ಮೂಲಕ ಕಾರ್ಮಿಕರಿಗಿದ್ದ ಹಲವಾರು ಸೌಲಭ್ಯಗಳನ್ನು ಅಮಾನತ್ತು ಮಾಡಲಾಗಿದೆ. ಮಾಲೀಕರು ಕಾರ್ಮಿಕರಿಗೆ ಬೆದರಿಕೆ ಹಾಕುವ, ಕೆಲಸದಿಂದ ಕಿತ್ತೊಸೆಯಲು ಅವಕಾಶ ನೀಡಲಾಗಿದೆ. ಟ್ರಿಬ್ಯುನಲ್‌ಗಳನ್ನು ಕಿತ್ತುಹಾಕಲಾಗುತ್ತಿದೆ ಎಂದರು.

ಕರ್ನಾಟಕದಲ್ಲಿಯೂ ಕಾಯ್ದೆಗಳನ್ನು ಬಲಹೀನಗೊಳಿಸಲು ತಯಾರಿ ನಡೆಯುತ್ತಿದೆ. ಅದರ ಭಾಗವಾಗಿಯೇ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಬದಲಾವಣೆಯಾಗಿದೆ. ಕರ್ನಾಟಕ ಸರ್ಕಾರವು ಉಳಿದ ರಾಜ್ಯಗಳಲ್ಲಿನ ತಿದ್ದುಪಡಿಗೆ ಬರುತ್ತಿರುವ ವಿರೋಧ, ಪ್ರತಿಕ್ರಿಯೆಯ ಫಲಿತಾಂಶದ ಆಧಾರದಲ್ಲಿ ಕಾಯ್ದೆ ತಿದ್ದುಪಡಿ ಮಾಡಲು ಯೋಚಿಸುತ್ತಿದ್ದಾರೆ. ಖಂಡಿತವಾಗಿಯೂ ಅವರು ಅದನ್ನು ಇಲ್ಲಿಯೂ ತರುತ್ತಾರೆ ಎಂದು ವಿಷಾಧ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕಾರ್ಮಿಕ ಕಾಯಿದೆಗಳ ರದ್ದು ಎಷ್ಟು ಸರಿ? – ಡಾ.ಚಂದ್ರಪೂಜಾರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...