Homeಚಳವಳಿಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸುಪ್ರೀಂ ಕೋರ್ಟ್‌‌ನಲ್ಲಿ ಪಿಐಎಲ್‌ ಸಲ್ಲಿಕೆ

ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸುಪ್ರೀಂ ಕೋರ್ಟ್‌‌ನಲ್ಲಿ ಪಿಐಎಲ್‌ ಸಲ್ಲಿಕೆ

ಅರ್ಜಿಯು ಕೇಂದ್ರದ ಹೊರತಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳನ್ನು ಪ್ರತಿವಾದಿ ಪಕ್ಷಗಳನ್ನಾಗಿ ಮಾಡಿದೆ.

- Advertisement -
- Advertisement -

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯು ಕಾರ್ಮಿಕರು ಶಾಂತಿಯುತವಾಗಿ ಪ್ರತಿಭಟಿಸುವ, ಒಕ್ಕೂಟಗಳನ್ನು ಅಥವಾ ಸಂಘಗಳನ್ನು ರಚಿಸುವ ಹಕ್ಕನ್ನು ನಿರಾಕರಿಸುತ್ತದೆ ಎಂದು ವಾದಿಸಿ ಕೇರಳ ಮೂಲದ ಕಾನೂನು ವಿದ್ಯಾರ್ಥಿಯೊಬ್ಬರು ಸುಪ್ರೀಂ ಕೋರ್ಟ್‌‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

COVID-19 ಸಾಂಕ್ರಾಮಿಕದ ಮಧ್ಯೆ ಕಾರ್ಮಿಕ ಕಾನೂನುಗಳಲ್ಲಿ ಮಾಡಿದ ಬದಲಾವಣೆಗಳು, ಆರ್ಥಿಕ ಚಟುವಟಿಕೆ ಮತ್ತು ಮಾರುಕಟ್ಟೆ ಸುಧಾರಣೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದು ವಾಸ್ತವದಲ್ಲಿ ಕಾರ್ಮಿಕರನ್ನು ಬಲವಂತದ ದುಡಿಮೆಗೆ ತಳ್ಳುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಕೆಲವು ರಾಜ್ಯ ಸರ್ಕಾರಗಳು ಹೊರಡಿಸಿದ ಸುಗ್ರೀವಾಜ್ಞೆಗಳು ಮತ್ತು ಅಧಿಸೂಚನೆಗಳು “ದೇಶದ ಕಾರ್ಮಿಕ ಕಾನೂನು ಚೌಕಟ್ಟಿನಲ್ಲಿ ಮೂಲಭೂತ ಬದಲಾವಣೆಗಳನ್ನು ಮಾಡಿವೆ” ಎಂದು ವಕೀಲರಾದ ಕಲೀಶ್ವರಂ ರಾಜ್  ಮತ್ತು ವಕೀಲ ನಿಶೆ ರಾಜೇನ್ ಶೋಂಕರ್ ಮೂಲಕ ಅರ್ಜಿ ಸಲ್ಲಿಸಿರುವ ನಂದಿನಿ ಪ್ರವೀಣ್ ಅವರು ದೂರಿದ್ದಾರೆ.

ಅರ್ಜಿಯು ಕೇಂದ್ರದ ಹೊರತಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳನ್ನು ಪ್ರತಿವಾದಿ ಪಕ್ಷಗಳನ್ನಾಗಿ ಮಾಡಿದೆ.

ಹರಿಯಾಣ, ಅಸ್ಸಾಂ, ಪಂಜಾಬ್ ಮತ್ತು ಗೋವಾ ರಾಜ್ಯಗಳು ಕೆಲಸದ ಅವಧಿಯನ್ನು ವಿಸ್ತರಿಸುವ ಅಧಿಸೂಚನೆಗಳನ್ನು ನೀಡಿವೆ ಎಂದು ಅದು ಹೇಳಿದೆ.

ಉತ್ತರ ಪ್ರದೇಶದ ಸುಗ್ರೀವಾಜ್ಞೆಯು “ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ಕಾರ್ಖಾನೆಗಳು ಮತ್ತು ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಮಿಕ ಕಾನೂನುಗಳ ಕಾರ್ಯಾಚರಣೆಯನ್ನು ಕೆಲವು ಷರತ್ತುಗಳಿಗೆ ಒಳಪಟ್ಟಿ ಮೂರು ವರ್ಷಗಳ ಅವಧಿಗೆ ವಿನಾಯಿತಿ ನೀಡಲಾಗುವುದು” ಎಂದು ಹೇಳಿದೆ.

“ವೇತನ ಸಂಹಿತೆಯನ್ನು ಅಮಾನತುಗೊಳಿಸಲಾಗಿದೆ ಮತ್ತು ವೇತನ ಪಾವತಿ ಕಾಯ್ದೆಯನ್ನು ರದ್ದುಗೊಳಿಸಲಾಗಿರುವುದರಿಂದ, ಕಾರ್ಖಾನೆಗಳು ಮತ್ತು ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಸಮಯೋಚಿತ ವೇತನವನ್ನು ನೀಡಲು ಯಾವುದೇ ಶಾಸನಬದ್ಧ ಬಾಧ್ಯತೆಯಿರುವುಲ್ಲ. ಆದ್ದರಿಂದ, ಸುಗ್ರೀವಾಜ್ಞೆಯು ಮೂಲಭೂತವಾಗಿ ಈ ಸಂಸ್ಥೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ರದ್ದುಗೊಳಿಸಲು ಕಾರಣವಾಗಿದೆ” ಎಂದು ಉತ್ತರ ಪ್ರದೇಶಕ್ಕೆ ಸಂಬಂಧಿಸಿದಂತೆ ಅರ್ಜಿಯಲ್ಲಿ ತಿಳಿಸಲಾಗಿದೆ.

“ಕಾರ್ಮಿಕರ ಕಲ್ಯಾಣ ಮತ್ತು ಆರೋಗ್ಯ ಕ್ರಮಗಳನ್ನು ಸ್ಥಗಿತಗೊಳಿಸುವ ಮೂಲಕ ಮತ್ತು ಕೆಲಸದ ಸಮಯವನ್ನು ಹೆಚ್ಚಿಸುವುದು 1982 ರ ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (ಪಿಯುಡಿಆರ್) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯು ಕಾರ್ಮಿಕರು ಶಾಂತಿಯುತವಾಗಿ ಪ್ರತಿಭಟಿಸುವ, ಒಕ್ಕೂಟಗಳನ್ನು ಅಥವಾ ಸಂಘಗಳನ್ನು ರಚಿಸುವ ಹಕ್ಕನ್ನು ನಿರಾಕರಿಸುತ್ತದೆ. ಕಾರ್ಮಿಕ ಸಂಘಗಳ ಮಾನ್ಯತೆ ಸ್ಥಗಿತಗೊಳ್ಳಲಿದೆ. ಈ ಹೊಸ ಕಾನೂನುಗಳು ಕಾರ್ಮಿಕರ ಆರೋಗ್ಯದ ಹಕ್ಕು, ವಿರಾಮ, ಸುರಕ್ಷಿತ ಕೆಲಸದ ಪರಿಸ್ಥಿತಿಗಳ ಮೇಲೆ ಪರಿಣಾಮ ಬೀರುತ್ತವೆ. ಅದು ಸಂವಿಧಾನದ 21 ನೇ ಪರಿಚ್ಛೇಧದ ಅಡಿಯಲ್ಲಿ ಜೀವಿಸುವ ಹಕ್ಕಿನ ವ್ಯಾಪ್ತಿಯಲ್ಲಿ ಬರುತ್ತದೆ. ಕಾರ್ಮಿಕ ಕಾನೂನುಗಳ ಕುರಿತಾದ ಅಂತರರಾಷ್ಟ್ರೀಯ ಚೌಕಟ್ಟನ್ನು ಈ ತಿದ್ದುಪಡಿಗಳು ಉಲ್ಲಂಘಿಸಿವೆ ಎಂದು ಆರೋಪಿಸಲಾಗಿದೆ.

ಕೈಗಾರಿಕಾ ವಿವಾದ ಕಾಯ್ದೆ

ಅನ್ಯಾಯದ ಕಾರ್ಮಿಕ ಪದ್ಧತಿಗಳನ್ನು ನಿಷೇಧಿಸುವ ನಿರ್ಣಾಯಕ ಕಾನೂನಾದ ಕೈಗಾರಿಕಾ ವಿವಾದ ಕಾಯ್ದೆಯ ವ್ಯಾಪ್ತಿಯಿಂದ ಕೆಲವು ರಾಜ್ಯಗಳು ಕಾರ್ಖಾನೆಗಳಿಗೆ ವಿನಾಯಿತಿ ನೀಡಿವೆ ಎಂದು ಅರ್ಜಿಯಲ್ಲಿ ಸೂಚಿಸಲಾಗಿದೆ.

“ವಿವಾದಗಳ ತನಿಖೆ ಮತ್ತು ಇತ್ಯರ್ಥಕ್ಕೆ ಸಾಕಷ್ಟು ಯಾಂತ್ರಿಕ ವ್ಯವಸ್ಥೆ ಇಲ್ಲದಿದ್ದರೆ ಯಾವುದೇ ರಾಜ್ಯ ಸರ್ಕಾರವು ಕಾಯ್ದೆಯಲ್ಲಿ ವಿನಾಯಿತಿ ನೀಡಲು ಅನುಮತಿಸುವುದಿಲ್ಲ. ಇದು ಪೂರ್ವಾಪೇಕ್ಷಿತವಾಗಿದೆ. ಎರಡನೆಯದಾಗಿ, COVID-19 ಸಾಂಕ್ರಾಮಿಕದಂತಹ ಬಿಕ್ಕಟ್ಟಿನಲ್ಲಿ, ಯಾವುದೇ ಪರ್ಯಾಯವಿಲ್ಲದೆ ಇಡೀ ಕಾಯಿದೆಗೆ ವಿನಾಯಿತಿ ನೀಡಲು ರಾಜ್ಯಗಳಿಗೆ ಅಧಿಕಾರವಿಲ್ಲ ಎಂದು ಅದು ವಾದಿಸಿದೆ.

ಈ ಕುರಿತು ಅರ್ಜಿದಾರರ ಪರ ವಕೀಲರಲ್ಲಿ ಒಬ್ಬರಾದ ಮೈತ್ರೇಯಿ ಎಸ್‌ ಹೆಗಡೆಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ದೇಶ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಮತ್ತುಷ್ಟು ಮಗದಷ್ಟು ದುಡಿಯಿರಿ ಎಂದು ಅದರ ಭಾರವನ್ನು ಕಾರ್ಮಿಕರ ಮೇಲೆ ಹಾಕುವುದು ಕಾನೂನಿಗೆ ವಿರುದ್ಧ ಎನ್ನುವುದಕ್ಕಿಂತ ಅಮಾನವೀಯ ಎನ್ನುವುದೇ ಸೂಕ್ತ. ಕೋವಿಡ್‌ನಿಂದಾಗಿ ಅತ್ಯಂತ ಕಷ್ಟಪಡುವ, ನಷ್ಟ ಅನುಭವಿಸುವ ವರ್ಗವೆಂದರೆ ಅದು ಕಾರ್ಮಿಕರಾಗಿದ್ದಾರೆ. ಅವರ ಮೇಲಿನ ಈ ದೌರ್ಜನ್ಯವನ್ನು ತಡೆಯಲು ನಾವು ಪಿಐಎಲ್‌ ಸಲ್ಲಿಸಿದ್ದೇವೆ ಎಂದರು.

ಉತ್ತರ ಪ್ರದೇಶ ಸರ್ಕಾರವು ಜನರ ಒತ್ತಡಕ್ಕೆ ಮಣಿದು ಕೆಲಸದ ಅವಧಿಯ ಹೆಚ್ಚಳವನ್ನು ಮಾತ್ರ ವಾಪಸ್‌ ಪಡೆದಿದ್ದಾರೆ. ಉಳಿದಂತೆ ವೇತನ ಕಾಯ್ದೆ, ಫ್ಯಾಕ್ಟರಿ ಕಾಯ್ದೆ ಮತ್ತು ಕೈಗಾರಿಕಾ ವಿವಾದ ಕಾಯ್ದೆಯ ಮೂಲಕ ಕಾರ್ಮಿಕರಿಗಿದ್ದ ಹಲವಾರು ಸೌಲಭ್ಯಗಳನ್ನು ಅಮಾನತ್ತು ಮಾಡಲಾಗಿದೆ. ಮಾಲೀಕರು ಕಾರ್ಮಿಕರಿಗೆ ಬೆದರಿಕೆ ಹಾಕುವ, ಕೆಲಸದಿಂದ ಕಿತ್ತೊಸೆಯಲು ಅವಕಾಶ ನೀಡಲಾಗಿದೆ. ಟ್ರಿಬ್ಯುನಲ್‌ಗಳನ್ನು ಕಿತ್ತುಹಾಕಲಾಗುತ್ತಿದೆ ಎಂದರು.

ಕರ್ನಾಟಕದಲ್ಲಿಯೂ ಕಾಯ್ದೆಗಳನ್ನು ಬಲಹೀನಗೊಳಿಸಲು ತಯಾರಿ ನಡೆಯುತ್ತಿದೆ. ಅದರ ಭಾಗವಾಗಿಯೇ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಬದಲಾವಣೆಯಾಗಿದೆ. ಕರ್ನಾಟಕ ಸರ್ಕಾರವು ಉಳಿದ ರಾಜ್ಯಗಳಲ್ಲಿನ ತಿದ್ದುಪಡಿಗೆ ಬರುತ್ತಿರುವ ವಿರೋಧ, ಪ್ರತಿಕ್ರಿಯೆಯ ಫಲಿತಾಂಶದ ಆಧಾರದಲ್ಲಿ ಕಾಯ್ದೆ ತಿದ್ದುಪಡಿ ಮಾಡಲು ಯೋಚಿಸುತ್ತಿದ್ದಾರೆ. ಖಂಡಿತವಾಗಿಯೂ ಅವರು ಅದನ್ನು ಇಲ್ಲಿಯೂ ತರುತ್ತಾರೆ ಎಂದು ವಿಷಾಧ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕಾರ್ಮಿಕ ಕಾಯಿದೆಗಳ ರದ್ದು ಎಷ್ಟು ಸರಿ? – ಡಾ.ಚಂದ್ರಪೂಜಾರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...