Homeಮುಖಪುಟಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ - ಪ್ರಿಯಾಂಕ...

ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ – ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ 24 ಗಂಟೆಗಳಿಂದ ಬಸ್‌ಗಳು ಉತ್ತರ ಪ್ರದೇಶದ ಗಡಿಯಲ್ಲಿ ಕಾಯುತ್ತಿವೆ. ಆ ಬಸ್‌ಗಳಲ್ಲಿ ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್ ಅಂಟಿಸಿ. ನೀವೆ ಬಸ್‌ ವ್ಯವಸ್ಥೆ ಮಾಡಿರುವುದು ಎಂದು ಪ್ರಚಾರ ಮಾಡಿ. ದಯವಿಟ್ಟು ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿ ಎಂದು ಕಾಂಗ್ರೆಸ್‌ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜಸ್ಥಾನದ 1000 ಬಸ್‌ಗಳು ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ಹೊತ್ತುತಂದಿದ್ದು ಉ.ಪ್ರ ಗಡಿಯಲ್ಲಿ ಸಾಲಾಗಿ ನಿಂತಿವೆ. ಈ ವಿಚಾರಕ್ಕೆ ಪ್ರಿಯಾಂಕ ಗಾಂಧಿ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ನಡುವೆ ತಿಕ್ಕಾಟ ಆರಂಭವಾಗಿದೆ.

ಮೊದಲಿಗೆ ಪ್ರಿಯಾಂಕ ಗಾಂಧಿಯವರು ಗೌರವಾನ್ವಿತ ಮುಖ್ಯಮಂತ್ರಿಗಳೆ, ನಾನು ನಿಮ್ಮಲ್ಲಿ ವಿನಂತಿಸುತ್ತಿದ್ದೇನೆ, ಇದು ರಾಜಕೀಯದ ಸಮಯವಲ್ಲ. ನಮ್ಮ ಬಸ್ಸುಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ಕಾರ್ಮಿಕರು ಮತ್ತು ವಲಸಿಗರು ಆಹಾರ ಅಥವಾ ನೀರಿಲ್ಲದೆ ತಮ್ಮ ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ನಾವು ಅವರಿಗೆ ಸಹಾಯ ಮಾಡೋಣ ನಮ್ಮ ಬಸ್ಸುಗಳಿಗೆ ಅನುಮತಿ ನೀಡಿ” ಎಂದು ಅವರು ಹೇಳಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ, “ನಮ್ಮ ಬಸ್‌ಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ರಾಷ್ಟ್ರ ನಿರ್ಮಾಣಕಾರ ಕಾರ್ಮಿಕರು ಮತ್ತು ವಲಸಿಗರು ಬಿಸಿಲಿನಲ್ಲಿ ನಡೆಯುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಜಿ ಅವರಿಗೆ ಅನುಮತಿ ನೀಡಿ. ನಮ್ಮ ಸಹೋದರ ಸಹೋದರಿಯರಿಗೆ ಸಹಾಯ ಮಾಡೋಣ” ಎಂದು ಅವರು ಹೇಳಿದ್ದಾರೆ.

ಆನಂತರ ಉತ್ತರ ಪ್ರದೇಶ ಸರ್ಕಾರವು ಸಾವಿರ ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ನಿನ್ನೆ ಸಂಜೆಯಿಂದ ಉತ್ತರ ಪ್ರದೇಶದ ಗಡಿ ಪ್ರವೇಶಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದ್ದು ಬಸ್‌ಗಳಿಗೆ ಅವಕಾಶ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್‌ ಪಕ್ಷ ನೀಡಿದ್ದ ಬಸ್‌ಗಳ ಸಂಪೂರ್ಣ ವಿವರದಲ್ಲಿ 879 ಬಸ್‌ಗಳು ಮಾತ್ರ ಇದ್ದು ಉಳಿದವರು ಬೈಕ್‌, ಆಟೋಗಳಾಗಿವೆ. ಸುಳ್ಳು ಮಾಹಿತಿ ನೀಡಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ ಎಂದು ಯೋಗಿ ಸರ್ಕಾರ ಆರೋಪಿಸಿದೆ.

ಇದರಿಂದ ಕುಪಿತಗೊಂಡಿರುವ ಪ್ರಿಯಾಂಕ ಗಾಂಧಿಯವರು “ಯುಪಿ ಸರ್ಕಾರ ಎಲ್ಲ ಮಿತಿಗಳನ್ನು ಮೀರಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸಲು ಮತ್ತು ಅಸಹಾಯಕ ವಲಸೆ ಕಾರ್ಮಿಕರಿಗೆ ಸೇವೆ ಸಲ್ಲಿಸಲು ಅವಕಾಶವಿದ್ದಾಗ ಅದು ಎಲ್ಲ ಅಡೆತಡೆಗಳನ್ನು ಉಂಟುಮಾಡಿದೆ. ಯೋಗಿ ಆದಿತ್ಯನಾಥ್ ಜಿ ನೀವು ಈ ಬಸ್‌ಗಳಲ್ಲಿ ಬಿಜೆಪಿ ಧ್ವಜಗಳು ಮತ್ತು ನಿಮ್ಮ ಪೋಸ್ಟರ್ ‌ಗಳನ್ನು ಬಳಸಬಹುದು, ಆದರೆ ನಮ್ಮ ಸೇವೆಯ ಭಾವನೆಗಳನ್ನು ತಿರಸ್ಕರಿಸಬೇಡಿ ”ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾವು ನಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ವಲಸೆ ಕಾರ್ಮಿಕರು ತಮ್ಮ ಸ್ಥಳೀಯ ರಾಜ್ಯಗಳಿಗೆ ಮರಳಲು ಕಾಯುತ್ತಿದ್ದಾರೆ. ಅವರು ಕೇವಲ ಭಾರತೀಯರಲ್ಲ, ನಮ್ಮ ಭಾರತದ ಬೆನ್ನೆಲುಬು. ದೇಶವು ಅವರ ರಕ್ತ ಮತ್ತು ಬೆವರಿನ ಮೇಲೆ ನಡೆಯುತ್ತದೆ. ಇದು ಎಲ್ಲರ ಜವಾಬ್ದಾರಿ. ಇದು ರಾಜಕೀಯದ ಸಮಯವಲ್ಲ ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

अजय बिष्ट सरकार की घटिया राजनीति पर खरी बात

अजय बिष्ट सरकार की घटिया राजनीति पर खरी बात

Posted by Indian National Congress on Wednesday, May 20, 2020

ಅಲ್ಲದೇ ಕಾಂಗ್ರೆಸ್‌ ಪಕ್ಷವು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಬಸ್‌ಗಳಲ್ಲಿರುವ ವಲಸೆ ಕಾರ್ಮಿಕರು “ಇಲ್ಲಿರುವವೆಲ್ಲ ಬಸ್‌ಗಳೆ ಹೊರತು, ಬೈಕ್‌ ಆಟೋಗಳಲ್ಲ. ಒಂದು ದಿನದಿಂದ ಬಸ್‌ನಲ್ಲಿ ಕೂಗು ಕಾಯುತ್ತಿದ್ದೇವೆ. ದಯವಿಟ್ಟು ಅನುಮತಿ ಕೊಟ್ಟು ನಾವು ನಮ್ಮ ಊರುಗಳನ್ನು ಸೇರಿಕೊಳ್ಳಲು ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರಿಗಾಗಿ 500 ಬಸ್‌ ವ್ಯವಸ್ಥೆ ಮಾಡಿದ ಪ್ರಿಯಾಂಕಾ ಗಾಂಧಿ : 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...