Homeಮುಖಪುಟಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ - ಪ್ರಿಯಾಂಕ...

ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ – ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ 24 ಗಂಟೆಗಳಿಂದ ಬಸ್‌ಗಳು ಉತ್ತರ ಪ್ರದೇಶದ ಗಡಿಯಲ್ಲಿ ಕಾಯುತ್ತಿವೆ. ಆ ಬಸ್‌ಗಳಲ್ಲಿ ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್ ಅಂಟಿಸಿ. ನೀವೆ ಬಸ್‌ ವ್ಯವಸ್ಥೆ ಮಾಡಿರುವುದು ಎಂದು ಪ್ರಚಾರ ಮಾಡಿ. ದಯವಿಟ್ಟು ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿ ಎಂದು ಕಾಂಗ್ರೆಸ್‌ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜಸ್ಥಾನದ 1000 ಬಸ್‌ಗಳು ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ಹೊತ್ತುತಂದಿದ್ದು ಉ.ಪ್ರ ಗಡಿಯಲ್ಲಿ ಸಾಲಾಗಿ ನಿಂತಿವೆ. ಈ ವಿಚಾರಕ್ಕೆ ಪ್ರಿಯಾಂಕ ಗಾಂಧಿ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ನಡುವೆ ತಿಕ್ಕಾಟ ಆರಂಭವಾಗಿದೆ.

ಮೊದಲಿಗೆ ಪ್ರಿಯಾಂಕ ಗಾಂಧಿಯವರು ಗೌರವಾನ್ವಿತ ಮುಖ್ಯಮಂತ್ರಿಗಳೆ, ನಾನು ನಿಮ್ಮಲ್ಲಿ ವಿನಂತಿಸುತ್ತಿದ್ದೇನೆ, ಇದು ರಾಜಕೀಯದ ಸಮಯವಲ್ಲ. ನಮ್ಮ ಬಸ್ಸುಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ಕಾರ್ಮಿಕರು ಮತ್ತು ವಲಸಿಗರು ಆಹಾರ ಅಥವಾ ನೀರಿಲ್ಲದೆ ತಮ್ಮ ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ನಾವು ಅವರಿಗೆ ಸಹಾಯ ಮಾಡೋಣ ನಮ್ಮ ಬಸ್ಸುಗಳಿಗೆ ಅನುಮತಿ ನೀಡಿ” ಎಂದು ಅವರು ಹೇಳಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ, “ನಮ್ಮ ಬಸ್‌ಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ರಾಷ್ಟ್ರ ನಿರ್ಮಾಣಕಾರ ಕಾರ್ಮಿಕರು ಮತ್ತು ವಲಸಿಗರು ಬಿಸಿಲಿನಲ್ಲಿ ನಡೆಯುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಜಿ ಅವರಿಗೆ ಅನುಮತಿ ನೀಡಿ. ನಮ್ಮ ಸಹೋದರ ಸಹೋದರಿಯರಿಗೆ ಸಹಾಯ ಮಾಡೋಣ” ಎಂದು ಅವರು ಹೇಳಿದ್ದಾರೆ.

ಆನಂತರ ಉತ್ತರ ಪ್ರದೇಶ ಸರ್ಕಾರವು ಸಾವಿರ ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ನಿನ್ನೆ ಸಂಜೆಯಿಂದ ಉತ್ತರ ಪ್ರದೇಶದ ಗಡಿ ಪ್ರವೇಶಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದ್ದು ಬಸ್‌ಗಳಿಗೆ ಅವಕಾಶ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್‌ ಪಕ್ಷ ನೀಡಿದ್ದ ಬಸ್‌ಗಳ ಸಂಪೂರ್ಣ ವಿವರದಲ್ಲಿ 879 ಬಸ್‌ಗಳು ಮಾತ್ರ ಇದ್ದು ಉಳಿದವರು ಬೈಕ್‌, ಆಟೋಗಳಾಗಿವೆ. ಸುಳ್ಳು ಮಾಹಿತಿ ನೀಡಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ ಎಂದು ಯೋಗಿ ಸರ್ಕಾರ ಆರೋಪಿಸಿದೆ.

ಇದರಿಂದ ಕುಪಿತಗೊಂಡಿರುವ ಪ್ರಿಯಾಂಕ ಗಾಂಧಿಯವರು “ಯುಪಿ ಸರ್ಕಾರ ಎಲ್ಲ ಮಿತಿಗಳನ್ನು ಮೀರಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸಲು ಮತ್ತು ಅಸಹಾಯಕ ವಲಸೆ ಕಾರ್ಮಿಕರಿಗೆ ಸೇವೆ ಸಲ್ಲಿಸಲು ಅವಕಾಶವಿದ್ದಾಗ ಅದು ಎಲ್ಲ ಅಡೆತಡೆಗಳನ್ನು ಉಂಟುಮಾಡಿದೆ. ಯೋಗಿ ಆದಿತ್ಯನಾಥ್ ಜಿ ನೀವು ಈ ಬಸ್‌ಗಳಲ್ಲಿ ಬಿಜೆಪಿ ಧ್ವಜಗಳು ಮತ್ತು ನಿಮ್ಮ ಪೋಸ್ಟರ್ ‌ಗಳನ್ನು ಬಳಸಬಹುದು, ಆದರೆ ನಮ್ಮ ಸೇವೆಯ ಭಾವನೆಗಳನ್ನು ತಿರಸ್ಕರಿಸಬೇಡಿ ”ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾವು ನಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ವಲಸೆ ಕಾರ್ಮಿಕರು ತಮ್ಮ ಸ್ಥಳೀಯ ರಾಜ್ಯಗಳಿಗೆ ಮರಳಲು ಕಾಯುತ್ತಿದ್ದಾರೆ. ಅವರು ಕೇವಲ ಭಾರತೀಯರಲ್ಲ, ನಮ್ಮ ಭಾರತದ ಬೆನ್ನೆಲುಬು. ದೇಶವು ಅವರ ರಕ್ತ ಮತ್ತು ಬೆವರಿನ ಮೇಲೆ ನಡೆಯುತ್ತದೆ. ಇದು ಎಲ್ಲರ ಜವಾಬ್ದಾರಿ. ಇದು ರಾಜಕೀಯದ ಸಮಯವಲ್ಲ ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

अजय बिष्ट सरकार की घटिया राजनीति पर खरी बात

अजय बिष्ट सरकार की घटिया राजनीति पर खरी बात

Posted by Indian National Congress on Wednesday, May 20, 2020

ಅಲ್ಲದೇ ಕಾಂಗ್ರೆಸ್‌ ಪಕ್ಷವು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಬಸ್‌ಗಳಲ್ಲಿರುವ ವಲಸೆ ಕಾರ್ಮಿಕರು “ಇಲ್ಲಿರುವವೆಲ್ಲ ಬಸ್‌ಗಳೆ ಹೊರತು, ಬೈಕ್‌ ಆಟೋಗಳಲ್ಲ. ಒಂದು ದಿನದಿಂದ ಬಸ್‌ನಲ್ಲಿ ಕೂಗು ಕಾಯುತ್ತಿದ್ದೇವೆ. ದಯವಿಟ್ಟು ಅನುಮತಿ ಕೊಟ್ಟು ನಾವು ನಮ್ಮ ಊರುಗಳನ್ನು ಸೇರಿಕೊಳ್ಳಲು ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರಿಗಾಗಿ 500 ಬಸ್‌ ವ್ಯವಸ್ಥೆ ಮಾಡಿದ ಪ್ರಿಯಾಂಕಾ ಗಾಂಧಿ : 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...