Homeಕರ್ನಾಟಕಇಂದಿನಿಂದ ರೈಲ್ವೇ ಟಿಕೆಟ್ ಬುಕಿಂಗ್ ಶುರು; ಜೂನ್ ಒಂದರಿಂದ ರೈಲು ಸಂಚಾರ ಪ್ರಾರಂಭ

ಇಂದಿನಿಂದ ರೈಲ್ವೇ ಟಿಕೆಟ್ ಬುಕಿಂಗ್ ಶುರು; ಜೂನ್ ಒಂದರಿಂದ ರೈಲು ಸಂಚಾರ ಪ್ರಾರಂಭ

ಆನ್‌ಲೈನ್‌ ಮೂಲಕ ಮಾತ್ರ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

- Advertisement -
- Advertisement -

ರೈಲ್ವೆ ಇಲಾಖೆಯು ಜೂನ್‌ 1 ರಿಂದ ಸಂಚರಿಸುವ ರೈಲುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದಿನಿಂದ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ರೈಲು ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

ಆದರೆ ಯಾವುದೇ ರೈಲು ನಿಲ್ದಾಣದ ಕೌಂಟರ್‌ಗಳಲ್ಲಿ ಟಿಕೆಟ್‌ಗಳು ಲಭ್ಯವಿರುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.‌ ಗರಿಷ್ಠ 30 ದಿನಗಳ ವರೆಗೆ ಟಿಕೆಟ್‌ ಕಾಯ್ದಿರಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ಟಿಕೆಟ್‌ ರದ್ದುಪಡಿಸುವುದಕ್ಕೆ ಸಂಬಂಧಿಸಿದಂತೆ ನಿಯಮ ರೂಪಿಸಲಾಗುವುದು. ಅಲ್ಲದೆ ವೆಯ್ಟಿಂಗ್‌ ಲಿಸ್ಟ್‌ ಟಿಕೆಟ್‌ ಇರುವವರು ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎಂದು ಇಲಾಖೆ ಹೇಳಿದೆ.

ಎಲ್ಲವೂ ಕಾಯ್ದಿರಿಸಿದ ಟಿಕೆಟ್‌ಗಳೇ ಆಗಿದ್ದು, ಸ್ಥಳದಲ್ಲಿ ಟಿಕೆಟ್‌ ನೀಡುವುದು ಅಥವಾ ತತ್ಕಾಲ್‌ ಬುಕಿಂಗ್‌ಗಳಿಗೆ ಅವಕಾಶ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಜೂನ್‌ 1ರಿಂದ ಸಂಚರಿಸಲಿರುವ 100 ರೈಲುಗಳ ಪಟ್ಟಿಯನ್ನು ರೈಲ್ವೆ ಇಲಾಖೆ ಬುಧವಾರ ಪ್ರಕಟಿಸಿದೆ. ಈ ರೈಲುಗಳಲ್ಲಿ ಎ.ಸಿ ಹಾಗೂ ಎ.ಸಿ ರಹಿತ ಕೋಚ್‌ಗಳು ಇರಲಿವೆ ಎಂದು ಇಲಾಖೆ ತಿಳಸಿದೆ.
ಯಾವ ರೈಲುಗಳು ಸಂಚರಿಸಲಿವೆ:

ಮುಂಬೈ-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸಪ್ರೆಸ್‌, ಮುಂಬೈ-ಗದಗ ಎಕ್ಸ್‌ಪ್ರೆಸ್‌, ದಾನಪುರ-ಕೆಎಸ್ಆರ್ ಬೆಂಗಳೂರು ಸಂಘಮಿತ್ರ ಎಕ್ಸ್‌ಪ್ರೆಸ್‌, ವಾರಕ್ಕೆ ಎರಡು ಬಾರಿ ಸಂಚರಿಸುವ ನವದೆಹಲಿ-ಯಶವಂತಪುರ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಹುಬ್ಬಳ್ಳಿ-ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್, ಯಶವಂತಪುರ-ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್‌, ವಾಸ್ಕೋಡಗಾಮ-ಹಜರತ್ ನಿಜಾಮುದ್ದೀನ್ ಗೋವಾ ಎಕ್ಸ್‌ಪ್ರೆಸ್‌ ಮತ್ತು ಹೌರಾ- ಯಶವಂತಪುರ ಹೌರಾ ದುರಂತೊ ಎಕ್ಸ್‌ಪ್ರೆಸ್‌ ರೈಲುಗಳು ಜೂನ್ 1ರಿಂದ ಸಂಚರಿಸಲಿವೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ.

ರೈಲ್ವೆ ಸಚಿವ ಪಿಯೂಶ್‌ ಗೋಯಲ್, ಜೂನ್‌ 1 ರಿಂದ ದೇಶದಾದ್ಯಂತ ಸುಮಾರು 200 ಎಸಿ ಅಲ್ಲದ ದ್ವಿತೀಯ ದರ್ಜೆಯ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ಈ ಹಿಂದೆಯೇ ತಿಳಿಸಿದ್ದರು. ಹೀಗಾಗಿ ರಾಜ್ಯದಲ್ಲೂ ಜೂನ್‌ 01 ರಿಂದ ರೈಲ್ವೆ ಸೇವೆ ಆರಂಭವಾಗಲಿದೆ.

ಕೊರೊನಾದಿಂದಾಗಿ ರಾಷ್ಟ್ರದಾದ್ಯಂತ ಕಳೆದ ಎರಡು ತಿಂಗಳಿನಿಂದ ಲಾಕ್‌ಡೌನ್‌ ಘೋಷಿಸಲಾಗಿದ್ದು, ರೈಲು ಸಂಚಾರವನ್ನೂ ಸ್ಥಗಿತ ಮಾಡಲಾಗಿತ್ತು. ಇದರಿಂದಾಗಿ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ದೂರದ ರಾಜ್ಯಗಳಿಗೆ ಹೋಗಲಾಗದೇ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು. ಈ ಮಹಾನಡಿಗೆಯಲ್ಲಿ ಹಲವಾರು ವಲಸೆ ಕಾರ್ಮಿಕರು ರಸ್ತೆ ಅಫಘಾತ, ಬಳಲಿಕೆಯಿಂದ ಪ್ರಾಣ ಕಳೆದು ಕೊಂಡಿದ್ದರು. ಇದರ ನಂತರ ಎಚ್ಚೆತ್ತ ಕೇಂದ್ರ ಸರ್ಕಾರ, ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತಲುಪಲು ಶ್ರಮಿಕ್‌ ರೈಲುಗಳನ್ನು ಆರಂಭಿಸಿತ್ತು.

ಶ್ರಮಿಕ ರೈಲುಗಳಲ್ಲದೆ 15 ಜೋಡಿ ವಿಶೇಷ ರೈಲು ಸೇವೆಗೂ ಲಾಕ್ ಡೌನ್ ಸಮಯದಲ್ಲಿ ಗ್ರೀನ್‌ ಸಿಗ್ನಲ್ ನೀಡಿತ್ತು. ಆದರೆ ಈಗ ರೈಲ್ವೆ ಇಲಾಖೆ ಹಂತ ಹಂತವಾಗಿ ಪೂರ್ಣ ಪ್ರಮಾಣ ಸೇವೆ ಆರಂಭಿಸುವ ಪ್ರಯತ್ನದಲ್ಲಿದೆ.


ಓದಿ: ಫ್ಯಾಕ್ಟ್‌ಚೆಕ್‌: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?


ಓದಿ: ದೇಶೀಯ ನಾಗರಿಕ ವಿಮಾನಯಾನಗಳು ಸೋಮವಾರದಿಂದ ಪ್ರಾರಂಭ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...