Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

ಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

- Advertisement -
- Advertisement -

ಮೇ 16 ರಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೆಹಲಿಯ ಸುಖದೇವ್ ವಿಹಾರದಲ್ಲಿ ಹಲವಾರು ವಲಸೆ ಕಾರ್ಮಿಕರನ್ನು ಭೇಟಿಯಾದರು. ಇದನ್ನು ಮುಖ್ಯವಾಹಿನಿಯ ಮಾಧ್ಯಮಗಳು ಗಾಂಧಿಯವರು ಪಾದಚಾರಿ ಮಾರ್ಗದಲ್ಲಿ ಕುಳಿತು ವಲಸಿಗರೊಂದಿಗೆ ಮಾತನಾಡುವ ಚಿತ್ರದೊಂದಿಗೆ ವರದಿ ಮಾಡಿದ್ದವು.

ಸ್ವಲ್ಪ ಸಮಯದ ನಂತರ, ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ರಾಹುಲ್‌ ಪಕ್ಕ ಕುಳಿತಿದ್ದ ಮಹಿಳೆಯ ಎರಡು ಫೋಟೊಗಳನ್ನು ಹಾಕಿ ಇದು ರಾಹುಲ್‌ ಗಾಂಧಿಯ ನಾಟಕ. ನೋಡಿ ಆಕೆ ಕಾರಿನಲ್ಲಿ ಹೋಗುತ್ತಿದ್ದಾಳೆ, ಆಕೆ ವಲಸೆ ಕಾರ್ಮಿಕಳಲ್ಲ. ಪ್ರಚಾರಕ್ಕಾಗಿ ರಾಹುಲ್‌ ಗಾಂಧಿ ಹೀಗೆಲ್ಲಾ ಮಾಡಿದ್ದಾರೆ ಎಂದು ಸುದ್ದಿ ಹರಡಲಾಯಿತು.

ಹಲವಾರು ಫೇಸ್‌ಬುಕ್ ಬಳಕೆದಾರರು ಹಿಂದಿಯಲ್ಲಿ ವ್ಯಂಗ್ಯ ಶೀರ್ಷಿಕೆಯೊಂದಿಗೆ ಆ ಫೋಟೊವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಇಲ್ಲಿ ಕೂಡ ಹಗರಣ? ರಾಹುಲ್ ಬಾಬಾ ಸುಖದೇವ್ ವಿಹಾರ್‌ನಲ್ಲಿ ಬಡವರನ್ನು ಭೇಟಿ ಮಾಡಲು ಹೋದರು. ಅಂತಹ ಒಬ್ಬ ಬಡವರು ಕಾರಿನಲ್ಲಿ ಹಿಂತಿರುಗುತ್ತಿರುವುದು ಕಂಡುಬಂತು. ದೇವರು ಎಲ್ಲರನ್ನೂ ಅವಳಂತೆ ಬಡವನನ್ನಾಗಿ ಮಾಡಬೇಕು”. ಎಂಬ ಶೀರ್ಷಿಕೆ ನೀಡಲಾಗಿತ್ತು.

ಇದನ್ನು ಕಾರ್ಮಿಕ ಹಗರಣವೆಂದು ಕರೆಯಬಹುದು. ದೇಶವೇ ಕೊರೊನಾ ಭೀತಿಯಲ್ಲಿರುವಾಗ ಕಾರ್ಮಿಕರು ಸ್ಯಾನಿಟೈಸ್‌ ಆಗಿ ಕಾರಿನಲ್ಲಿ ಬರುತ್ತಾರೆ. ಸುಳ್ಳುಗಾರನ ಹೆಸರು ರಾಹುಲ್‌ ಗಾಂಧಿ ಎಂದೆಲ್ಲಾ ಹರಡಲಾಯಿತು.

ಫ್ಯಾಕ್ಟ್‌ಚೆಕ್‌

ರಾಹುಲ್‌ ಗಾಂಧಿಯ ಸಂವಾದದ ಚಿತ್ರಗಳನ್ನು ಪ್ರಿಯಾಂಕ ಗಾಂಧಿ ಸೇರಿದಂತೆ ಹಲವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ರಾಹುಲ್‌ ಪಕ್ಕದಲ್ಲಿ ಮಹಿಳೆಯೊಬ್ಬರು ಕುಳತಿದ್ದಾರೆ.

ನಂತರ ಸುದ್ದಿ ಸಂಸ್ಥೆ ಎಎನ್‌ಐ ಕೂಡ ಸಂವಾದದ ಕೆಲವು ಚಿತ್ರಗಳನ್ನು ಟ್ವೀಟ್ ಮಾಡಿದೆ. ಅದರಲ್ಲಿ “ಸುಖದೇವ್ ವಿಹಾರ್ ಫ್ಲೈಓವರ್ ಬಳಿ ನಡೆದುಕೊಂಡು ಸ್ವಂತ ರಾಜ್ಯಗಳಿಗೆ ಹೋಗುತ್ತಿದ್ದ ವಲಸೆ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು. ನಂತರ ಪಕ್ಷದ ಸ್ವಯಂಸೇವಕರು ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ತಲುಪಲು ವಾಹನಗಳ ವ್ಯವಸ್ಥೆ ಮಾಡಿದರು” ಎಂದು ಬರೆದಿದೆ. ಅದರಲ್ಲಿ ಕಾರ್ಮಿಕನೊಬ್ಬ ಹರಿಯಾಣದಿಂದ ಬರುತ್ತಿದ್ದೇನೆ. ಝಾನ್ಸಿಗೆ ಹೋಗಬೇಕಾಗಿದೆ ಎಂದು ಹೇಳುತ್ತಾನೆ.

ಎಎನ್‌ಐ ಟ್ವೀಟ್‌ನಲ್ಲಿ, ವೈರಲ್ ಪೋಸ್ಟ್‌ನಲ್ಲಿ ಕಾಣುವ ಅದೇ ಮಹಿಳೆ ಕಾರಿನೊಳಗೆ ಅದೇ ಪುರುಷನ ಪಕ್ಕದಲ್ಲಿ ಕಪ್ಪು ಮಾಸ್ಕ್‌ ಧರಿಸಿ ಕುಳಿತಿರುವುದನ್ನು ಕಾಣಬಹುದು.

ಅಂದರೆ ಸುಖದೇವ್ ವಿಹಾರ್ ಫ್ಲೈಓವರ್ ಬಳಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿರುವುದನ್ನು ಕಂಡುಕೊಂಡ ರಾಹುಲ್‌ ಗಾಂಧಿಯವರು ಸಂವಾದದ ನಂತರ ಈ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ ಎಂದು ಎಎನ್‌ಐ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

ರಾಹುಲ್‌ ಗಾಂಧಿ ಮತ್ತು ಅವರ ಪಕ್ಷದ ಕಾರ್ಯಕರ್ತರು ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ರಾಜ್ಯಗಳಿಗೆ ಹಿಂತಿರುಗಲು ವಾಹನಗಳನ್ನು ವ್ಯವಸ್ಥೆಗೊಳಿಸಿದ್ದಾರೆ ಎಂದು “ಇಂಡಿಯಾ ಟಿವಿ” ಮತ್ತು “ಆರ್ 9 ಟಿವಿ” ಸೇರಿದಂತೆ ಹಲವಾರು ಮಾಧ್ಯಮಗಳು ವರದಿ ಮಾಡಿವೆ.

ಮೇ 16 ರಂದು ಸಂವಾದ ನಡೆದ ಸ್ಥಳದಲ್ಲಿ ಹಾಜರಿದ್ದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿಯವರು “ಸಂವಾದದ ನಂತರ ಅವರಿಗೆ ಸಹಾಯ ಮಾಡುವುದಾಗಿ ರಾಹುಲ್‌ ಭರವಸೆ ನೀಡಿದ್ದರು. ಆದರೆ ಸ್ವಲ್ಪ ಸಮಯದಲ್ಲಿ ಪೊಲೀಸರು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದರು. ಆಗ ನಾವು ಪ್ರಶ್ನಿಸಿದ್ದಕ್ಕೆ, ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ನೀವು ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಬಹುದಾದರೆ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಪೊಲೀಸರು ತಿಳಿಸಿದರು. ಆಗ ರಾಹುಲ್‌ ಗಾಂಧಿಯವರು ವಾಹನ ವ್ಯವಸ್ಥೆ ಮಾಡಲು ಸೂಚಿಸಿದರು. ಆಗ ನಾವು ನಮ್ಮಗಳ ಕಾರಿನಲ್ಲಿಯೇ ಅವರನ್ನು ಅವರ ಊರುಗಳಿಗೆ ತಲುಪಿಸಿದೆವು” ಎಂದಿದ್ದಾರೆ.

ನಂತರ ಆಗ್ನೇಯ ದೆಹಲಿಯ ಡಿಸಿಪಿ ಆರ್.ಪಿ. ಮೀನಾ ಸಹ “ಈ ವಲಸಿಗರ ಗುಂಪು ಸುಖದೇವ್ ವಿಹಾರ್ ಬಳಿ ನಡೆಯುತ್ತಿರುವಾಗ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಬೆಂಗಾವಲು ಪಡೆ ತಲುಪಿತು. ರಾಹುಲ್ ಗಾಂಧಿ ಈ ಗುಂಪಿನೊಂದಿಗೆ ಮಾತನಾಡಿದರು, ಮತ್ತು ನಂತರ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದರು” ಎಂದಿದ್ದಾರೆ.

ಮೇಲಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿದಾಗ ರಾಹುಲ್‌ ಗಾಂಧಿ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದು ಪೂರ್ವನಿರ್ಧಾರಿತವಲ್ಲ, ನಾಟಕವಂತೂ ಅಲ್ಲವೇ ಅಲ್ಲ ಎಂದು ತಿಳಿದುರುತ್ತದೆ. ಅಲ್ಲದೇ ಅವರೆಲ್ಲರೂ ವಲಸೆ ಕಾರ್ಮಿಕರೆ ಆಗಿದ್ದು ಸಂವಾದದ ನಂತರ ಕಾಂಗ್ರೆಸ್‌ ಕಾರ್ಯಕರ್ತರು ವ್ಯವಸ್ಥೆ ಮಾಡಿದ ಕಾರಿನಲ್ಲಿ ಅವರು ತಮ್ಮ ಸ್ವಂತ ಊರುಗಳಿಗೆ ತಲುಪಿದ್ದಾರೆ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...