Homeಅಂಕಣಗಳುಬಿ. ಚಂದ್ರೇಗೌಡರ ಕಟ್ಟೆಪುರಾಣ - ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

ಬಿ. ಚಂದ್ರೇಗೌಡರ ಕಟ್ಟೆಪುರಾಣ – ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

- Advertisement -
- Advertisement -

‘ಅಂತು ಎಡೂರಪ್ಪ ಕಡಿಗೂ ವಸಿ ಸಡ್ಳ ಮಾಡಿದ’ ಎಂದ ವಾಟಿಸ್ಸೆ.

‘ಮೋದಿಗಿಂತ ಪರವಾಗಿಲ್ಲ ಕಣೊ ಎಡೂರಪ್ಪ’ ಎಂದ ಉಗ್ರಿ.

‘ಅಂಗರಿವುನೆ ಪ್ರಧಾನಿಯಾಗಬೇಕಿತ್ತು ಕಂಡ್ಳ’ ಎಂದಳು ಜುಮ್ಮಿ.

‘ನೀನೇಳದು ನಿಜಕಣಕ್ಕ ಎಡೂರಪ್ಪ ಪ್ರಧಾನಿಯಾಗಿದ್ರೆ ಚನ್ನಾಗಿತ್ತು’.

‘ಮೋದಿ ತರದೊನು ಪ್ರಪಂಚದಲ್ಲೇ ಇಲ್ಲ ಅಂತ ಆ ಚಡ್ಡಿ ಮಂಜ ಹೇಳಿಕಂಡು ತಿರುಗ್ತನೆ’.

‘ಅವುಂದಿರ್ಲಿ ಇನ್ಯಾವಳೊ ವಾಟ್ಸಾಪ್ ಮಾಡ್ಯವುಳೆ ಕಣೊ ಉಗ್ರೀ, ಮೋದಿ ಸಾಧನೆ ನೋಡಿದ್ರೆ ಅವುನಂಥೊನಿಲ್ಲ ಅಂದವುಳೆ’.

‘ಅವುಳ್ಯಾವಳ್ಳ’ ಎಂದಳು ಜುಮ್ಮಿ.

‘ಅವುಳ್ಯಾವಳು ಅನ್ನಕ್ಕೆ ಬರದಿಲ್ಲ ಕಣಕ್ಕ. ಒಂದೊಂದು ಸತಿ ಬಿಜೆಪಿಗಳೆ ಬೃಹನ್ನಳೆಯಾಗಿ ಮೋದಿ ಸಾಧನೆ ಒಂದು ಮಹಿಳೆ ಹೆಸರಲ್ಲಿ ವ್ಯಾಟ್ಸಾಪ್ ಮಾಡಿಬುಡ್ತವೆ. ಆಗೇನೀಸಗಂಡೀ’.

‘ಅಂಗೂ ಮಾಡ್ತವ’.

‘ಅಂಗೂ ಮಾಡ್ತವಾ ಅಂತಿಯಲ್ಲಕ್ಕ, ಅವು ಮಾಡದೆ ಅಂಗೆ’.

‘ಮೋದಿಯಾ ಅಂಗೆ ಹೊಗಳಿಬುಟ್ಟವುಳಲ್ಲ ಅವುನು ಬಂದಮ್ಯಾಲೆ ಏಟು ಜನ ಸತೃ ಗೊತ್ತೆ’ ಎಂದ ಉಗ್ರಿ.

‘ಏಟು ಜನ ಸತ್ತಿದ್ದರ್ಲ’.

‘ನೋಡೆ ಅವುನು ಗುಜರಾತಿನ ಮುಖ್ಯಮಂತ್ರಿಯಾದಾಗ ಸರಕಾರನೆ ಬಳಸಿ ಸಾವುರಾರು ಜನ ಸಾಬರು ಸಾಯಂಗೆ ಮಾಡಿದ’.

‘ನಿಜವೇನ್ಲ’.

‘ಮರತುಬುಟ್ಟೇನೆ ನೀನು, ಅದ್ಕೆ ಪೇಪರ್ ಓದದ ಕಲ್ತಕೊ ಅನ್ನದು’.

‘ಪೇಪರ್ರ ಮೋದಿನೆ ಓತ್ತನೊ ಇಲುವೊ ಅವುಳಿಗೇಳ್ತಿಯಲ್ಲೊ ಉಗ್ರಿ’.

‘ನಿಜ ಇವತ್ತಿನ ಪೇಪ್ರ ಓದ್ದೆಯಿದ್ರೂ ಆಯ್ತದೆ’ ಎಂದ ವಾಟಿಸ್ಸೆ.

‘ಟಿವಿ ನೊಡದೆಯಿದ್ರು ಆಯ್ತದೆ ಕಣೊ’ ಎಂದ ಉಗ್ರಿ.

‘ಮೋದಿಗೇನು ಹೇಳ್ಳ.

‘ಸಾರಿ ಕಣಕ್ಕ, ಮೋದಿ ರಾತ್ರೊ ರಾತ್ರಿ ನೋಟ್‍ಬ್ಯಾನ್ ಮಾಡಿದ. ಆಗ ನೂರಾರು ಜನ ಸತೃ. ನಮ್ಮ ಯಸ್ಸೆಂ ಕಿಸ್ಣನಳಿಯ ನೀರಿಗೆ ಬಿದ್ದು ತೀರೊದದ್ದು ಅದ್ಕೆಯಾ’.

‘ಪಾಪ ಅವುನ್ನ ನ್ಯನಿಸಿಗಂಡ್ರೆ ಹ್ವಟ್ಯಲ್ಲ ಉರಿತದೆ’.

‘ಅಮ್ಯಾಲೆ ಮೋದಿ ಸಿಎಎ ಅಂತ ತಂದ. ಅದರ ಗಲಾಟಿ ಗೋಲಿಬಾರಲ್ಲಿ ಜನ ಸತೃ. ಅದೂ ಸಾಬರು’.

‘ಅದ್ಕೆ ಸಾಬ್ರು ಕರೋನಾ ತಂದು ಹಬ್ಬುಸ್ತಾ ಅವುರೆ ಅಂತ ಚೆಡ್ಡಿ ಮಂಜ ಹೇಳತಿದ್ದ ಕಂಡ್ಳ’.

‘ಯಕ್ಕ ಚೆಡ್ಡಿ ಮಂಜನ ಮಾತ ಅತ್ತಗೆ ಮಡಗಿ ಯೋಚನೆ ಮಾಡು ಬಂಬಾಯಿಂದ ಸಾತೆನಳ್ಳಿಗೆ ಬಂದು ಸುತ್ಲಳ್ಳಿಗ್ಯಲ್ಲ ಕೊರೋನಾ ಹರಡಿದನಲ್ಲ ಅವುನು ಸಾಬರೋನಾ? ನಮ್ಮೋನೆ ಅಲವೇನಕ್ಕ’.

‘!?’

‘ಏನೂ ಬ್ಯಾಡವ್ವ, ತುಪ್ಪದಮಡಕ್ಕೆ ಇಬ್ರು ಬಂಬಾಯಿಂದ ಬಂದವುರೆ. ಅವು ನಮ್ಮ ಸಮಂದಿಕರೆಯ. ಅವುರು ಸಾಬರೆ’.

‘ಅದಿರ್ಲಿ ಕಣೊ ಕೆ.ಆರ್.ಪೇಟೆ ನಾರಾಯಣಗೌಡ ಬಂಬಾಯಿಂದ ಕರುಸ್ತಾ ಅವುನಲ್ಲ ಅವುರಿಗ್ಯಲ್ಲ ಕರೋನಾ ಹಟಕಾಯಿಸಿಗಂಡದೆ, ಅವುರ್ಯಾರು ಸಾಬರಲ್ಲ. ಯಲ್ಲ ನಮ್ಮೋರೆಯ ಇದಕೇನೇಳ್ತಿ’ ಎಂದ ಉಗ್ರಿ.

‘ಈ ಬಿಜೆಪಿಗಳೆ ಅಷ್ಟು ಕಣೊ. ಏನೇ ಆದ್ರು ಸಾಬರಮ್ಯಾಲಾಕ್ತರೆ. ಇಡೀ ದೇಸಕ್ಕೆ ಕರೋನಾ ಹರಡಿದೋರೆ ಅವುರು ಅಂತ ಹೇಳಿಕಂಡು ತಿರುಗ್ತ ಅವುರೆ ಏನು ಮಾಡನ’.

‘ಏನೂ ಮಾಡ ಬ್ಯಾಡ ಸುಳ್ಳೆಳೊ ಸೂಳೆ ಮಕ್ಕಳ ಬಾಯಿಮ್ಯಾಲೆ ಹ್ವಡಕಂಡೋಗಬೇಕು ಆಷ್ಟೆಯ’.

‘ಮೋದಿ ಏನೊ ಲಕ್ಷಾಂತೃಪಾಯಿ ದುಡ್ಡು ಕೊಡ್ತನಂತಲ್ಲಾ’.

‘ಯಾರಿಗೆ ಕೊಡ್ತನಕ್ಕ’.

‘ರೈತರು, ಕೂಲಿಮಾಡೋರು, ಕ್ವಟ್ಣಕುಟ್ಟೋರು ಯಲ್ಲಾರಿಗೂ ಲಕ್ಸ ಲಕ್ಸ ಕೊಡ್ತನಂತೆ’.

‘ಕೊಡ್ತನಿರು ಈಸ್ಕಳಿವೆ’.

‘ಅಂಗರೆ ಕೊಡಕಿಲ್ಲ ಅನ್ನು’.

‘ಅಕ್ಕಾ ಹಾದ್ನೆ ವರಸೆ, ಮಳೆ ವಡದು ಪ್ರವಾಹ ಬಂದು ಜನ ಮನೆ ಮಠ ಕಳಕಂಡು ಬೀದಿಗೆ ಬಿದ್ರು. ಆಗ ಸಿದ್ದರಾಮಯ್ಯ ಒಂದು ಲಕ್ಸ ಕೋಟಿ ಲಾಸಾಗ್ಯದೆ ಅಂದ. ಎಡೂರಪ್ಪ ಮುವ್ವತೆಂಟು ಸಾವುರ ಕೋಟಿ ಲಾಸು ಅಂತ ತೋರಿಸಿ ದುಡ್ಡು ಕೊಡಿ ಅಂತ ಮೋದಿಗೆ ಅರ್ಜಿ ಬರದ. ಆ ಅರ್ಜಿಗೆ ಇವತ್ತಿಗೂ ಉತ್ತರ ಕೊಟ್ಟಿಲ್ಲ ಇನ್ನ ಕೊರೋನಾಕ್ಕೆ ಕಾಸು ಕೊಡ್ತನೇನಕ್ಕ’.

‘ನಿಜವೇನ್ಲ ನೀನೇಳದು’.

‘ಮೋದಿ ತಾಯಿ ಆಣೆ ನಿಜಕಣಕ್ಕ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...