Homeಚಳವಳಿಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

- Advertisement -
- Advertisement -

ನಿನ್ನಿಂದ ನನಗೆ ನೋವಾಗಿದೆ. ನೀನು ತಪ್ಪಾಗಿ ನಡೆದುಕೊಂಡಿರುವೆ. ಅದರಿಂದ ನಾನು ಕೆಲವು ದಿನಗಳ ಮಟ್ಟಿಗೆ ತಲ್ಲಣಿಸಿಹೋಗಿದ್ದೆ!
ಹಾಗಂತ ಒಬ್ಬ ಹೆಣ್ಣುಮಗಳು ಹೇಳಿದ ತಕ್ಷಣವೇ ಇಡೀ ಜಗತ್ತು ಎದ್ದು ಕೂರುತ್ತದೆ. ಹಾಗೆ ಹೇಳುವುದಕ್ಕೆ ನೀನು ಯಾರು? ನಿನ್ನ ಬಳಿ ಸಾಕ್ಷಿ ಏನಿದೆ? ಯಾಕೆ ನೀನಿದನ್ನು ಹೇಳುತ್ತಿರುವೆ? ನಿನಗೆ ಇದನ್ನು ಹೇಳಿಕೊಟ್ಟವರು ಯಾರು? ಯಾವ ರಾಜಕೀಯ ಪ್ರೇರಣೆಯಿಂದ ಹೀಗೆ ಪ್ರಶ್ನಿಸುತ್ತಿದ್ದೀಯಾ?
ಎಂದು ಪುಂಖಾನುಪುಂಖ ಪ್ರಶ್ನೆಗಳನ್ನು ಕೇಳುತ್ತಾ, ಆ ಹೆಣ್ಣುಮಗಳ ಬಾಯಿ ಮುಚ್ಚಿಸುವುದಕ್ಕೆ ನೋಡುತ್ತದೆ. ಆಮೇಲೆ ಅವಳೊಬ್ಬಳೇ ಅಲ್ಲ, ಯಾವ ಹೆಣ್ಣುಮಗಳೂ ಬಾಯಿ ತೆರೆಯಬಾರದು. ಯಾವತ್ತೂ ತನಗೆ ಅನ್ಯಾಯ ಆಗಿದೆ ಎಂದು ಹೇಳಿಕೊಳ್ಳಬಾರದು. ಒಂದು ಕೆಟ್ಟ ಸ್ಪರ್ಶವನ್ನು ಕೂಡ ಅದು ಸಹಜ ಎಂಬಂತೆ ಸ್ವೀಕರಿಸಬೇಕು ಎಂಬಂತೆ ಮಾಡುತ್ತದೆ.
ಇಂಥದ್ದನ್ನು ನಾನು ನೋಡುತ್ತಲೇ ಬಂದಿದ್ದೇನೆ. ಹೀಗಾಗಿ ಇದನ್ನೆಲ್ಲ ಕೇಳಿದಾಗ ನನಗೆ ಅಷ್ಟೇನೂ ಆಶ್ಚರ್ಯ ಆಗುವುದಿಲ್ಲ. ಇಂಥದ್ದನ್ನು ನಾನು ಸಾಕಷ್ಟು ನೋಡಿಕೊಂಡೇ ಬಂದಿದ್ದೇನೆ. ಹೆಣ್ಣು ತನಗೆ ಅನ್ಯಾಯ ಆಗಿದೆ ಎಂದಾಗ ಗಂಡು ಬಿಡಿ, ಹೆಣ್ಣು ಕೂಡ ಅದನ್ನು ಎಷ್ಟೋ ಸಲ ನಂಬುವುದಿಲ್ಲ. ಮತ್ತೊಬ್ಬ ಹೆಣ್ಣುಮಗಳು ಅದನ್ನು ವಿರೋಧಿಸುತ್ತಾಳೆ. ಅರೇ, ನನ್ನ ಜೊತೆ ಎಷ್ಟು ಚೆನ್ನಾಗಿ ಸಂಭಾವಿತರಂತೆ ನಡೆದುಕೊಂಡಿದ್ದಾರೆ. ಅಂಥವರು ಹೀಗೆ ಮಾಡಲು ಸಾಧ್ಯವೇ ಇಲ್ಲ ಎಂದು ತೀರ್ಪು ಕೊಟ್ಟುಬಿಡುತ್ತಾರೆ. ಅಲ್ಲಿಗೆ ಆ ಹೆಣ್ಣು ಖಳನಾಯಕಿಯಂತೆ ಕಾಣಿಸುತ್ತಾಳೆ.
ಶ್ರುತಿ ಹರಿಹರನ್ ಪ್ರಸಂಗ ಎಬ್ಬಿಸಿರುವ ಅಲೆಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಒಂದು ಹೆಣ್ಣಿನ ಬಾಯಿ ಮುಚ್ಚಿಸುವುದಕ್ಕೆ ಅದೆಷ್ಟು ಮಂದಿ ಶೂರರು, ವೀರರು, ಪರಾಕ್ರಮಿಗಳು ಒಟ್ಟಾಗಿದ್ದಾರೆ. ಎಷ್ಟೊಂದು ಕತೆಗಳನ್ನು ಹೆಣೆಯುತ್ತಿದ್ದಾರೆ. ಎಷ್ಟೊಂದು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಇದನ್ನು ಎಡಪಂಥೀಯರ ಪಿತೂರಿ ಅಂತ ಯಾರೋ ಕರೆದರಂತೆ. ಎಲ್ಲವನ್ನೂ ತಂದು ರಾಜಕೀಯದ ಕೊಂಬಿಗೆ ಕಟ್ಟಿ ಪಾರಾಗುವುದು ಈ ಕಾಲದ ಜಾಯಮಾನ. ಅದು ರಾಜಕೀಯ ಕಣ್ರೀ ಅಂದುಬಿಟ್ಟರೆ ಅಲ್ಲಿಗೆ ಮುಗಿದುಹೋಯಿತು. ಹೆಣ್ಣಿನ ಮೇಲೆ ನಡೆದ ದೌರ್ಜನ್ಯದಿಂದ ಬೇಕಿದ್ದರೂ ಪಾರಾಗಬಹುದು. ರಾಜಕೀಯ ಅಂದುಬಿಟ್ಟರೆ ಲೈಂಗಿಕ ದೌರ್ಜನ್ಯ ಕೂಡ ತಪ್ಪೇನಲ್ಲ ಇವರ ಪಾಲಿಗೆ.
ಅರ್ಜುನ್ ಸರ್ಜಾರನ್ನು ಸಮರ್ಥಿಸಿಕೊಳ್ಳಲು ಇವರೆಲ್ಲ ಎದ್ದು ಕೂತಿದ್ದಾರೆ ಅಂತ ನನಗೆ ಅನ್ನಿಸಿಲ್ಲ. ಅವರ ಉದ್ದೇಶ ಹೆಣ್ಣು ಮಾತಾಡುವುದನ್ನು ಹೇಗಾದರೂ ಮಾಡಿ ತಡೆಯಬೇಕು ಅನ್ನುವುದು. ಯಾಕೆಂದರೆ ಸಿನಿಮಾ ಕ್ಷೇತ್ರದಲ್ಲಿರುವ ಮಹಿಳೆ ಮಾತಾಡಲು ಆರಂಭಿಸಿದರೆ ಯಾರ್ಯಾರ ಬಂಡವಾಳ ಹೊರಬೀಳುತ್ತದೋ ಹೇಳುವವರು ಯಾರು? ತನಗೆ ಸಂಬಂಧವೇ ಇಲ್ಲದೇ ಹೋದರೂ ನಿರ್ಮಾಪಕರ ಸಂಘ ಕಹಳೆ ಊದಿತು. ತನಗೆ ಸಂಬಂಧ ಇದ್ದರೂ ಕಲಾವಿದರ ಸಂಘ ಸುಮ್ಮನೆ ಕೂತುಬಿಟ್ಟಿತು. ವಾಣಿಜ್ಯ ಮಂಡಳಿಯೇ ದೇವಾಲಯ, ವಾಣಿಜ್ಯ ಮಂಡಳಿಯೇ ನ್ಯಾಯಾಲಯ ಅಂತ ಮತ್ತೊಬ್ಬರು ಇಡೀ ಪ್ರಸಂಗವನ್ನು ವಾಣಿಜ್ಯ ಮಂಡಳಿಯಲ್ಲೇ ತೀರ್ಮಾನಿಸಲು ಇಚ್ಚಿಸಿದರು. ಕೌರವರು ಮತ್ತು ಅವರಿಗೆ ತಮ್ಮನ್ನು ಮಾರಿಕೊಂಡ ಪಾಂಡವರ ನಡುವೆ ನ್ಯಾಯ ಕೇಳಲು ನಿಂತ ದ್ರೌಪದಿಯ ಕತೆಯೂ ಇಲ್ಲಿ ನಡೆಯುತ್ತಿರುವುದಕ್ಕೂ ವ್ಯತ್ಯಾಸವೇ ಇಲ್ಲವಲ್ಲ.
ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಆರೋಗ್ಯವಂಥ ಜೀವದ ಮೊದಲ ಲಕ್ಷಣ. ಸಿನಿಮಾದಲ್ಲಿ ಯಾವ ಕಾರಣಕ್ಕೋ ಯಾವ ಹೊತ್ತಿನಲ್ಲೋ ಯಾವುದೋ ಒಂದು ಸ್ಪರ್ಶ ಕೆಟ್ಟದ್ದು ಅಂತ ನಾಯಕಿಗೂ ಅನಿಸಿರಬಹುದು. ನಾಯಕನಿಗೂ ಅನ್ನಿಸಿರಬಹುದು. ಅದನ್ನು ಒಬ್ಬಾಕೆ ಹೇಳಿದಾಗ, ಹೌದೇ, ಹಾಗೇನಾದರೂ ಆಗಿದ್ದರೆ ಅದು ಉದ್ದೇಶಪೂರ್ವಕ ಅಲ್ಲ, ನನಗದು ಗೊತ್ತೂ ಆಗಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?
ಆದರೆ ಇಂಥ ಸಂಗತಿಗಳನ್ನು ಬೇರೆ ಬೇರೆ ವಿಚಾರಗಳನ್ನು ಎಳೆದು ತಂದು ತೆಳುವಾಗಿಸುವುದರಲ್ಲೇ ನಮ್ಮ ಸೋಲು ಅಡಗಿದೆ. ಇವತ್ತು ಶ್ರುತಿಗೆ ಆದದ್ದು ನಾಳೆ ನಮಗೂ ಆಗಬಹುದು. ನಾವು ನ್ಯಾಯದ ಪರ ನಿಲ್ಲುತ್ತೇವೆ ಅನ್ನುವ ನಂಬಿಕೆ ನಮಗಾದರೂ ಇರಬೇಕು. ಧೈರ್ಯವಾಗಿ ಮಾತಾಡುವುದಕ್ಕೆ ಶಕ್ತಿಯಿಲ್ಲದೇ ಹೋದರೆ ಮೌನವಾಗಿದ್ದೇ ಪ್ರತಿಭಟಿಸಬೇಕು. ಅದುಬಿಟ್ಟು ಅನ್ಯಾಯದ ಪರವಾಗಿ ನಿಂತು ಆ ಕ್ಷಣದಲ್ಲಿ ಪಾರಾಗಲು ನೋಡುವುದು ಮಾತ್ರ ಅನೈತಿಕತೆ ಎಂದು ಹೇಳಬಲ್ಲೆ.
ತಾನೇ ಕೆತ್ತುತ್ತಿರುವ ಪುರುಷೋತ್ತಮನ ಮೂರ್ತಿಯಾದ ಶ್ರೀರಾಮನನ್ನೂ ಅಗ್ನಿದಿವ್ಯಕ್ಕೆ ಒಡ್ಡಿದವನು ವಾಲ್ಮೀಕಿ. ವಾಲಿಯನ್ನು ಕೊಲ್ಲುವ ವಿಚಾರದಲ್ಲಿ ರಾಮ ಮರೆಯಲ್ಲಿ ನಿಂತು ಬಾಣ ಬಿಟ್ಟ ಅನ್ನುವುದನ್ನು ವಾಲ್ಮೀಕಿ ಮುಚ್ಚಿಡುವುದಕ್ಕೆ ಹೋಗುವುದಿಲ್ಲ. ಅದನ್ನು ಹೇಳಿದ್ದರಿಂದ ರಾಮನ ಘನತೆ ಕುಗ್ಗಲೂ ಇಲ್ಲ. ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ ಅನ್ನುವುದು ಗೊತ್ತಿದ್ದರೆ, ಇವತ್ತು ಶ್ರುತಿಯ ಪ್ರಸಂಗ ಅಹಂಕಾರದ ಪ್ರಶ್ನೆಯಾಗಿ ನಿಂತು, ವಂಶ ಪ್ರತಿಷ್ಠೆಯಾಗುವ ಬದಲು, ಒಂದು ಮಾನವೀಯ ಪ್ರಶ್ನೆಯಾಗುತ್ತಿತ್ತು.
ಹಾಗಾಗಲಿಲ್ಲ ಅನ್ನುವುದೇ ನನ್ನನ್ನು ಮಾತಾಡುವಂತೆ ಪ್ರೇರೇಪಿಸಿದೆ.

– ಪ್ರಕಾಶ್ ರೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...