Homeಚಳವಳಿಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

- Advertisement -
- Advertisement -

ನಿನ್ನಿಂದ ನನಗೆ ನೋವಾಗಿದೆ. ನೀನು ತಪ್ಪಾಗಿ ನಡೆದುಕೊಂಡಿರುವೆ. ಅದರಿಂದ ನಾನು ಕೆಲವು ದಿನಗಳ ಮಟ್ಟಿಗೆ ತಲ್ಲಣಿಸಿಹೋಗಿದ್ದೆ!
ಹಾಗಂತ ಒಬ್ಬ ಹೆಣ್ಣುಮಗಳು ಹೇಳಿದ ತಕ್ಷಣವೇ ಇಡೀ ಜಗತ್ತು ಎದ್ದು ಕೂರುತ್ತದೆ. ಹಾಗೆ ಹೇಳುವುದಕ್ಕೆ ನೀನು ಯಾರು? ನಿನ್ನ ಬಳಿ ಸಾಕ್ಷಿ ಏನಿದೆ? ಯಾಕೆ ನೀನಿದನ್ನು ಹೇಳುತ್ತಿರುವೆ? ನಿನಗೆ ಇದನ್ನು ಹೇಳಿಕೊಟ್ಟವರು ಯಾರು? ಯಾವ ರಾಜಕೀಯ ಪ್ರೇರಣೆಯಿಂದ ಹೀಗೆ ಪ್ರಶ್ನಿಸುತ್ತಿದ್ದೀಯಾ?
ಎಂದು ಪುಂಖಾನುಪುಂಖ ಪ್ರಶ್ನೆಗಳನ್ನು ಕೇಳುತ್ತಾ, ಆ ಹೆಣ್ಣುಮಗಳ ಬಾಯಿ ಮುಚ್ಚಿಸುವುದಕ್ಕೆ ನೋಡುತ್ತದೆ. ಆಮೇಲೆ ಅವಳೊಬ್ಬಳೇ ಅಲ್ಲ, ಯಾವ ಹೆಣ್ಣುಮಗಳೂ ಬಾಯಿ ತೆರೆಯಬಾರದು. ಯಾವತ್ತೂ ತನಗೆ ಅನ್ಯಾಯ ಆಗಿದೆ ಎಂದು ಹೇಳಿಕೊಳ್ಳಬಾರದು. ಒಂದು ಕೆಟ್ಟ ಸ್ಪರ್ಶವನ್ನು ಕೂಡ ಅದು ಸಹಜ ಎಂಬಂತೆ ಸ್ವೀಕರಿಸಬೇಕು ಎಂಬಂತೆ ಮಾಡುತ್ತದೆ.
ಇಂಥದ್ದನ್ನು ನಾನು ನೋಡುತ್ತಲೇ ಬಂದಿದ್ದೇನೆ. ಹೀಗಾಗಿ ಇದನ್ನೆಲ್ಲ ಕೇಳಿದಾಗ ನನಗೆ ಅಷ್ಟೇನೂ ಆಶ್ಚರ್ಯ ಆಗುವುದಿಲ್ಲ. ಇಂಥದ್ದನ್ನು ನಾನು ಸಾಕಷ್ಟು ನೋಡಿಕೊಂಡೇ ಬಂದಿದ್ದೇನೆ. ಹೆಣ್ಣು ತನಗೆ ಅನ್ಯಾಯ ಆಗಿದೆ ಎಂದಾಗ ಗಂಡು ಬಿಡಿ, ಹೆಣ್ಣು ಕೂಡ ಅದನ್ನು ಎಷ್ಟೋ ಸಲ ನಂಬುವುದಿಲ್ಲ. ಮತ್ತೊಬ್ಬ ಹೆಣ್ಣುಮಗಳು ಅದನ್ನು ವಿರೋಧಿಸುತ್ತಾಳೆ. ಅರೇ, ನನ್ನ ಜೊತೆ ಎಷ್ಟು ಚೆನ್ನಾಗಿ ಸಂಭಾವಿತರಂತೆ ನಡೆದುಕೊಂಡಿದ್ದಾರೆ. ಅಂಥವರು ಹೀಗೆ ಮಾಡಲು ಸಾಧ್ಯವೇ ಇಲ್ಲ ಎಂದು ತೀರ್ಪು ಕೊಟ್ಟುಬಿಡುತ್ತಾರೆ. ಅಲ್ಲಿಗೆ ಆ ಹೆಣ್ಣು ಖಳನಾಯಕಿಯಂತೆ ಕಾಣಿಸುತ್ತಾಳೆ.
ಶ್ರುತಿ ಹರಿಹರನ್ ಪ್ರಸಂಗ ಎಬ್ಬಿಸಿರುವ ಅಲೆಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಒಂದು ಹೆಣ್ಣಿನ ಬಾಯಿ ಮುಚ್ಚಿಸುವುದಕ್ಕೆ ಅದೆಷ್ಟು ಮಂದಿ ಶೂರರು, ವೀರರು, ಪರಾಕ್ರಮಿಗಳು ಒಟ್ಟಾಗಿದ್ದಾರೆ. ಎಷ್ಟೊಂದು ಕತೆಗಳನ್ನು ಹೆಣೆಯುತ್ತಿದ್ದಾರೆ. ಎಷ್ಟೊಂದು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಇದನ್ನು ಎಡಪಂಥೀಯರ ಪಿತೂರಿ ಅಂತ ಯಾರೋ ಕರೆದರಂತೆ. ಎಲ್ಲವನ್ನೂ ತಂದು ರಾಜಕೀಯದ ಕೊಂಬಿಗೆ ಕಟ್ಟಿ ಪಾರಾಗುವುದು ಈ ಕಾಲದ ಜಾಯಮಾನ. ಅದು ರಾಜಕೀಯ ಕಣ್ರೀ ಅಂದುಬಿಟ್ಟರೆ ಅಲ್ಲಿಗೆ ಮುಗಿದುಹೋಯಿತು. ಹೆಣ್ಣಿನ ಮೇಲೆ ನಡೆದ ದೌರ್ಜನ್ಯದಿಂದ ಬೇಕಿದ್ದರೂ ಪಾರಾಗಬಹುದು. ರಾಜಕೀಯ ಅಂದುಬಿಟ್ಟರೆ ಲೈಂಗಿಕ ದೌರ್ಜನ್ಯ ಕೂಡ ತಪ್ಪೇನಲ್ಲ ಇವರ ಪಾಲಿಗೆ.
ಅರ್ಜುನ್ ಸರ್ಜಾರನ್ನು ಸಮರ್ಥಿಸಿಕೊಳ್ಳಲು ಇವರೆಲ್ಲ ಎದ್ದು ಕೂತಿದ್ದಾರೆ ಅಂತ ನನಗೆ ಅನ್ನಿಸಿಲ್ಲ. ಅವರ ಉದ್ದೇಶ ಹೆಣ್ಣು ಮಾತಾಡುವುದನ್ನು ಹೇಗಾದರೂ ಮಾಡಿ ತಡೆಯಬೇಕು ಅನ್ನುವುದು. ಯಾಕೆಂದರೆ ಸಿನಿಮಾ ಕ್ಷೇತ್ರದಲ್ಲಿರುವ ಮಹಿಳೆ ಮಾತಾಡಲು ಆರಂಭಿಸಿದರೆ ಯಾರ್ಯಾರ ಬಂಡವಾಳ ಹೊರಬೀಳುತ್ತದೋ ಹೇಳುವವರು ಯಾರು? ತನಗೆ ಸಂಬಂಧವೇ ಇಲ್ಲದೇ ಹೋದರೂ ನಿರ್ಮಾಪಕರ ಸಂಘ ಕಹಳೆ ಊದಿತು. ತನಗೆ ಸಂಬಂಧ ಇದ್ದರೂ ಕಲಾವಿದರ ಸಂಘ ಸುಮ್ಮನೆ ಕೂತುಬಿಟ್ಟಿತು. ವಾಣಿಜ್ಯ ಮಂಡಳಿಯೇ ದೇವಾಲಯ, ವಾಣಿಜ್ಯ ಮಂಡಳಿಯೇ ನ್ಯಾಯಾಲಯ ಅಂತ ಮತ್ತೊಬ್ಬರು ಇಡೀ ಪ್ರಸಂಗವನ್ನು ವಾಣಿಜ್ಯ ಮಂಡಳಿಯಲ್ಲೇ ತೀರ್ಮಾನಿಸಲು ಇಚ್ಚಿಸಿದರು. ಕೌರವರು ಮತ್ತು ಅವರಿಗೆ ತಮ್ಮನ್ನು ಮಾರಿಕೊಂಡ ಪಾಂಡವರ ನಡುವೆ ನ್ಯಾಯ ಕೇಳಲು ನಿಂತ ದ್ರೌಪದಿಯ ಕತೆಯೂ ಇಲ್ಲಿ ನಡೆಯುತ್ತಿರುವುದಕ್ಕೂ ವ್ಯತ್ಯಾಸವೇ ಇಲ್ಲವಲ್ಲ.
ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಆರೋಗ್ಯವಂಥ ಜೀವದ ಮೊದಲ ಲಕ್ಷಣ. ಸಿನಿಮಾದಲ್ಲಿ ಯಾವ ಕಾರಣಕ್ಕೋ ಯಾವ ಹೊತ್ತಿನಲ್ಲೋ ಯಾವುದೋ ಒಂದು ಸ್ಪರ್ಶ ಕೆಟ್ಟದ್ದು ಅಂತ ನಾಯಕಿಗೂ ಅನಿಸಿರಬಹುದು. ನಾಯಕನಿಗೂ ಅನ್ನಿಸಿರಬಹುದು. ಅದನ್ನು ಒಬ್ಬಾಕೆ ಹೇಳಿದಾಗ, ಹೌದೇ, ಹಾಗೇನಾದರೂ ಆಗಿದ್ದರೆ ಅದು ಉದ್ದೇಶಪೂರ್ವಕ ಅಲ್ಲ, ನನಗದು ಗೊತ್ತೂ ಆಗಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?
ಆದರೆ ಇಂಥ ಸಂಗತಿಗಳನ್ನು ಬೇರೆ ಬೇರೆ ವಿಚಾರಗಳನ್ನು ಎಳೆದು ತಂದು ತೆಳುವಾಗಿಸುವುದರಲ್ಲೇ ನಮ್ಮ ಸೋಲು ಅಡಗಿದೆ. ಇವತ್ತು ಶ್ರುತಿಗೆ ಆದದ್ದು ನಾಳೆ ನಮಗೂ ಆಗಬಹುದು. ನಾವು ನ್ಯಾಯದ ಪರ ನಿಲ್ಲುತ್ತೇವೆ ಅನ್ನುವ ನಂಬಿಕೆ ನಮಗಾದರೂ ಇರಬೇಕು. ಧೈರ್ಯವಾಗಿ ಮಾತಾಡುವುದಕ್ಕೆ ಶಕ್ತಿಯಿಲ್ಲದೇ ಹೋದರೆ ಮೌನವಾಗಿದ್ದೇ ಪ್ರತಿಭಟಿಸಬೇಕು. ಅದುಬಿಟ್ಟು ಅನ್ಯಾಯದ ಪರವಾಗಿ ನಿಂತು ಆ ಕ್ಷಣದಲ್ಲಿ ಪಾರಾಗಲು ನೋಡುವುದು ಮಾತ್ರ ಅನೈತಿಕತೆ ಎಂದು ಹೇಳಬಲ್ಲೆ.
ತಾನೇ ಕೆತ್ತುತ್ತಿರುವ ಪುರುಷೋತ್ತಮನ ಮೂರ್ತಿಯಾದ ಶ್ರೀರಾಮನನ್ನೂ ಅಗ್ನಿದಿವ್ಯಕ್ಕೆ ಒಡ್ಡಿದವನು ವಾಲ್ಮೀಕಿ. ವಾಲಿಯನ್ನು ಕೊಲ್ಲುವ ವಿಚಾರದಲ್ಲಿ ರಾಮ ಮರೆಯಲ್ಲಿ ನಿಂತು ಬಾಣ ಬಿಟ್ಟ ಅನ್ನುವುದನ್ನು ವಾಲ್ಮೀಕಿ ಮುಚ್ಚಿಡುವುದಕ್ಕೆ ಹೋಗುವುದಿಲ್ಲ. ಅದನ್ನು ಹೇಳಿದ್ದರಿಂದ ರಾಮನ ಘನತೆ ಕುಗ್ಗಲೂ ಇಲ್ಲ. ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ ಅನ್ನುವುದು ಗೊತ್ತಿದ್ದರೆ, ಇವತ್ತು ಶ್ರುತಿಯ ಪ್ರಸಂಗ ಅಹಂಕಾರದ ಪ್ರಶ್ನೆಯಾಗಿ ನಿಂತು, ವಂಶ ಪ್ರತಿಷ್ಠೆಯಾಗುವ ಬದಲು, ಒಂದು ಮಾನವೀಯ ಪ್ರಶ್ನೆಯಾಗುತ್ತಿತ್ತು.
ಹಾಗಾಗಲಿಲ್ಲ ಅನ್ನುವುದೇ ನನ್ನನ್ನು ಮಾತಾಡುವಂತೆ ಪ್ರೇರೇಪಿಸಿದೆ.

– ಪ್ರಕಾಶ್ ರೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...