Homeಚಳವಳಿಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

- Advertisement -
- Advertisement -

ನಿನ್ನಿಂದ ನನಗೆ ನೋವಾಗಿದೆ. ನೀನು ತಪ್ಪಾಗಿ ನಡೆದುಕೊಂಡಿರುವೆ. ಅದರಿಂದ ನಾನು ಕೆಲವು ದಿನಗಳ ಮಟ್ಟಿಗೆ ತಲ್ಲಣಿಸಿಹೋಗಿದ್ದೆ!
ಹಾಗಂತ ಒಬ್ಬ ಹೆಣ್ಣುಮಗಳು ಹೇಳಿದ ತಕ್ಷಣವೇ ಇಡೀ ಜಗತ್ತು ಎದ್ದು ಕೂರುತ್ತದೆ. ಹಾಗೆ ಹೇಳುವುದಕ್ಕೆ ನೀನು ಯಾರು? ನಿನ್ನ ಬಳಿ ಸಾಕ್ಷಿ ಏನಿದೆ? ಯಾಕೆ ನೀನಿದನ್ನು ಹೇಳುತ್ತಿರುವೆ? ನಿನಗೆ ಇದನ್ನು ಹೇಳಿಕೊಟ್ಟವರು ಯಾರು? ಯಾವ ರಾಜಕೀಯ ಪ್ರೇರಣೆಯಿಂದ ಹೀಗೆ ಪ್ರಶ್ನಿಸುತ್ತಿದ್ದೀಯಾ?
ಎಂದು ಪುಂಖಾನುಪುಂಖ ಪ್ರಶ್ನೆಗಳನ್ನು ಕೇಳುತ್ತಾ, ಆ ಹೆಣ್ಣುಮಗಳ ಬಾಯಿ ಮುಚ್ಚಿಸುವುದಕ್ಕೆ ನೋಡುತ್ತದೆ. ಆಮೇಲೆ ಅವಳೊಬ್ಬಳೇ ಅಲ್ಲ, ಯಾವ ಹೆಣ್ಣುಮಗಳೂ ಬಾಯಿ ತೆರೆಯಬಾರದು. ಯಾವತ್ತೂ ತನಗೆ ಅನ್ಯಾಯ ಆಗಿದೆ ಎಂದು ಹೇಳಿಕೊಳ್ಳಬಾರದು. ಒಂದು ಕೆಟ್ಟ ಸ್ಪರ್ಶವನ್ನು ಕೂಡ ಅದು ಸಹಜ ಎಂಬಂತೆ ಸ್ವೀಕರಿಸಬೇಕು ಎಂಬಂತೆ ಮಾಡುತ್ತದೆ.
ಇಂಥದ್ದನ್ನು ನಾನು ನೋಡುತ್ತಲೇ ಬಂದಿದ್ದೇನೆ. ಹೀಗಾಗಿ ಇದನ್ನೆಲ್ಲ ಕೇಳಿದಾಗ ನನಗೆ ಅಷ್ಟೇನೂ ಆಶ್ಚರ್ಯ ಆಗುವುದಿಲ್ಲ. ಇಂಥದ್ದನ್ನು ನಾನು ಸಾಕಷ್ಟು ನೋಡಿಕೊಂಡೇ ಬಂದಿದ್ದೇನೆ. ಹೆಣ್ಣು ತನಗೆ ಅನ್ಯಾಯ ಆಗಿದೆ ಎಂದಾಗ ಗಂಡು ಬಿಡಿ, ಹೆಣ್ಣು ಕೂಡ ಅದನ್ನು ಎಷ್ಟೋ ಸಲ ನಂಬುವುದಿಲ್ಲ. ಮತ್ತೊಬ್ಬ ಹೆಣ್ಣುಮಗಳು ಅದನ್ನು ವಿರೋಧಿಸುತ್ತಾಳೆ. ಅರೇ, ನನ್ನ ಜೊತೆ ಎಷ್ಟು ಚೆನ್ನಾಗಿ ಸಂಭಾವಿತರಂತೆ ನಡೆದುಕೊಂಡಿದ್ದಾರೆ. ಅಂಥವರು ಹೀಗೆ ಮಾಡಲು ಸಾಧ್ಯವೇ ಇಲ್ಲ ಎಂದು ತೀರ್ಪು ಕೊಟ್ಟುಬಿಡುತ್ತಾರೆ. ಅಲ್ಲಿಗೆ ಆ ಹೆಣ್ಣು ಖಳನಾಯಕಿಯಂತೆ ಕಾಣಿಸುತ್ತಾಳೆ.
ಶ್ರುತಿ ಹರಿಹರನ್ ಪ್ರಸಂಗ ಎಬ್ಬಿಸಿರುವ ಅಲೆಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಒಂದು ಹೆಣ್ಣಿನ ಬಾಯಿ ಮುಚ್ಚಿಸುವುದಕ್ಕೆ ಅದೆಷ್ಟು ಮಂದಿ ಶೂರರು, ವೀರರು, ಪರಾಕ್ರಮಿಗಳು ಒಟ್ಟಾಗಿದ್ದಾರೆ. ಎಷ್ಟೊಂದು ಕತೆಗಳನ್ನು ಹೆಣೆಯುತ್ತಿದ್ದಾರೆ. ಎಷ್ಟೊಂದು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಇದನ್ನು ಎಡಪಂಥೀಯರ ಪಿತೂರಿ ಅಂತ ಯಾರೋ ಕರೆದರಂತೆ. ಎಲ್ಲವನ್ನೂ ತಂದು ರಾಜಕೀಯದ ಕೊಂಬಿಗೆ ಕಟ್ಟಿ ಪಾರಾಗುವುದು ಈ ಕಾಲದ ಜಾಯಮಾನ. ಅದು ರಾಜಕೀಯ ಕಣ್ರೀ ಅಂದುಬಿಟ್ಟರೆ ಅಲ್ಲಿಗೆ ಮುಗಿದುಹೋಯಿತು. ಹೆಣ್ಣಿನ ಮೇಲೆ ನಡೆದ ದೌರ್ಜನ್ಯದಿಂದ ಬೇಕಿದ್ದರೂ ಪಾರಾಗಬಹುದು. ರಾಜಕೀಯ ಅಂದುಬಿಟ್ಟರೆ ಲೈಂಗಿಕ ದೌರ್ಜನ್ಯ ಕೂಡ ತಪ್ಪೇನಲ್ಲ ಇವರ ಪಾಲಿಗೆ.
ಅರ್ಜುನ್ ಸರ್ಜಾರನ್ನು ಸಮರ್ಥಿಸಿಕೊಳ್ಳಲು ಇವರೆಲ್ಲ ಎದ್ದು ಕೂತಿದ್ದಾರೆ ಅಂತ ನನಗೆ ಅನ್ನಿಸಿಲ್ಲ. ಅವರ ಉದ್ದೇಶ ಹೆಣ್ಣು ಮಾತಾಡುವುದನ್ನು ಹೇಗಾದರೂ ಮಾಡಿ ತಡೆಯಬೇಕು ಅನ್ನುವುದು. ಯಾಕೆಂದರೆ ಸಿನಿಮಾ ಕ್ಷೇತ್ರದಲ್ಲಿರುವ ಮಹಿಳೆ ಮಾತಾಡಲು ಆರಂಭಿಸಿದರೆ ಯಾರ್ಯಾರ ಬಂಡವಾಳ ಹೊರಬೀಳುತ್ತದೋ ಹೇಳುವವರು ಯಾರು? ತನಗೆ ಸಂಬಂಧವೇ ಇಲ್ಲದೇ ಹೋದರೂ ನಿರ್ಮಾಪಕರ ಸಂಘ ಕಹಳೆ ಊದಿತು. ತನಗೆ ಸಂಬಂಧ ಇದ್ದರೂ ಕಲಾವಿದರ ಸಂಘ ಸುಮ್ಮನೆ ಕೂತುಬಿಟ್ಟಿತು. ವಾಣಿಜ್ಯ ಮಂಡಳಿಯೇ ದೇವಾಲಯ, ವಾಣಿಜ್ಯ ಮಂಡಳಿಯೇ ನ್ಯಾಯಾಲಯ ಅಂತ ಮತ್ತೊಬ್ಬರು ಇಡೀ ಪ್ರಸಂಗವನ್ನು ವಾಣಿಜ್ಯ ಮಂಡಳಿಯಲ್ಲೇ ತೀರ್ಮಾನಿಸಲು ಇಚ್ಚಿಸಿದರು. ಕೌರವರು ಮತ್ತು ಅವರಿಗೆ ತಮ್ಮನ್ನು ಮಾರಿಕೊಂಡ ಪಾಂಡವರ ನಡುವೆ ನ್ಯಾಯ ಕೇಳಲು ನಿಂತ ದ್ರೌಪದಿಯ ಕತೆಯೂ ಇಲ್ಲಿ ನಡೆಯುತ್ತಿರುವುದಕ್ಕೂ ವ್ಯತ್ಯಾಸವೇ ಇಲ್ಲವಲ್ಲ.
ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಆರೋಗ್ಯವಂಥ ಜೀವದ ಮೊದಲ ಲಕ್ಷಣ. ಸಿನಿಮಾದಲ್ಲಿ ಯಾವ ಕಾರಣಕ್ಕೋ ಯಾವ ಹೊತ್ತಿನಲ್ಲೋ ಯಾವುದೋ ಒಂದು ಸ್ಪರ್ಶ ಕೆಟ್ಟದ್ದು ಅಂತ ನಾಯಕಿಗೂ ಅನಿಸಿರಬಹುದು. ನಾಯಕನಿಗೂ ಅನ್ನಿಸಿರಬಹುದು. ಅದನ್ನು ಒಬ್ಬಾಕೆ ಹೇಳಿದಾಗ, ಹೌದೇ, ಹಾಗೇನಾದರೂ ಆಗಿದ್ದರೆ ಅದು ಉದ್ದೇಶಪೂರ್ವಕ ಅಲ್ಲ, ನನಗದು ಗೊತ್ತೂ ಆಗಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?
ಆದರೆ ಇಂಥ ಸಂಗತಿಗಳನ್ನು ಬೇರೆ ಬೇರೆ ವಿಚಾರಗಳನ್ನು ಎಳೆದು ತಂದು ತೆಳುವಾಗಿಸುವುದರಲ್ಲೇ ನಮ್ಮ ಸೋಲು ಅಡಗಿದೆ. ಇವತ್ತು ಶ್ರುತಿಗೆ ಆದದ್ದು ನಾಳೆ ನಮಗೂ ಆಗಬಹುದು. ನಾವು ನ್ಯಾಯದ ಪರ ನಿಲ್ಲುತ್ತೇವೆ ಅನ್ನುವ ನಂಬಿಕೆ ನಮಗಾದರೂ ಇರಬೇಕು. ಧೈರ್ಯವಾಗಿ ಮಾತಾಡುವುದಕ್ಕೆ ಶಕ್ತಿಯಿಲ್ಲದೇ ಹೋದರೆ ಮೌನವಾಗಿದ್ದೇ ಪ್ರತಿಭಟಿಸಬೇಕು. ಅದುಬಿಟ್ಟು ಅನ್ಯಾಯದ ಪರವಾಗಿ ನಿಂತು ಆ ಕ್ಷಣದಲ್ಲಿ ಪಾರಾಗಲು ನೋಡುವುದು ಮಾತ್ರ ಅನೈತಿಕತೆ ಎಂದು ಹೇಳಬಲ್ಲೆ.
ತಾನೇ ಕೆತ್ತುತ್ತಿರುವ ಪುರುಷೋತ್ತಮನ ಮೂರ್ತಿಯಾದ ಶ್ರೀರಾಮನನ್ನೂ ಅಗ್ನಿದಿವ್ಯಕ್ಕೆ ಒಡ್ಡಿದವನು ವಾಲ್ಮೀಕಿ. ವಾಲಿಯನ್ನು ಕೊಲ್ಲುವ ವಿಚಾರದಲ್ಲಿ ರಾಮ ಮರೆಯಲ್ಲಿ ನಿಂತು ಬಾಣ ಬಿಟ್ಟ ಅನ್ನುವುದನ್ನು ವಾಲ್ಮೀಕಿ ಮುಚ್ಚಿಡುವುದಕ್ಕೆ ಹೋಗುವುದಿಲ್ಲ. ಅದನ್ನು ಹೇಳಿದ್ದರಿಂದ ರಾಮನ ಘನತೆ ಕುಗ್ಗಲೂ ಇಲ್ಲ. ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ ಅನ್ನುವುದು ಗೊತ್ತಿದ್ದರೆ, ಇವತ್ತು ಶ್ರುತಿಯ ಪ್ರಸಂಗ ಅಹಂಕಾರದ ಪ್ರಶ್ನೆಯಾಗಿ ನಿಂತು, ವಂಶ ಪ್ರತಿಷ್ಠೆಯಾಗುವ ಬದಲು, ಒಂದು ಮಾನವೀಯ ಪ್ರಶ್ನೆಯಾಗುತ್ತಿತ್ತು.
ಹಾಗಾಗಲಿಲ್ಲ ಅನ್ನುವುದೇ ನನ್ನನ್ನು ಮಾತಾಡುವಂತೆ ಪ್ರೇರೇಪಿಸಿದೆ.

– ಪ್ರಕಾಶ್ ರೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...