HomeಮುಖಪುಟMSMEಗಳಿಗೆ ಮೂರುಲಕ್ಷ ಕೋಟಿ, MSMEಗಳನ್ನ ಉಳಿಸುತ್ತಾ?

MSMEಗಳಿಗೆ ಮೂರುಲಕ್ಷ ಕೋಟಿ, MSMEಗಳನ್ನ ಉಳಿಸುತ್ತಾ?

- Advertisement -
- Advertisement -

ಪ್ರಧಾನಿಯವರ ಕೊರೊನಾ ಪ್ಯಾಕೇಜ್ ಆದ ಇಪ್ಪತ್ತು ಲಕ್ಷ ಕೋಟಿಗಳಲ್ಲಿ ಸಣ್ಣ, ಅತಿಸಣ್ಣ ಮತ್ತು ಮದ್ಯಮ ಗಾತ್ರದ ಉದ್ದಿಮೆಗಳಿಗೆ (MSME – micro, small and medium enterprise) ಕೊಟ್ಟಿರುವ ಪ್ಯಾಕೇಜ್ ಈಗ ಬಹುಚರ್ಚಿತ ವಿಷಯವಾಗಿದೆ. ಕೆಲವರು ಈ ಪ್ಯಾಕೇಜ್ ಒಂದು ಗೇಮ್ ಚೇಂಜರ್ ಎಂದು ಹೇಳುತ್ತಿದ್ದರೆ, ಇನ್ನು ಹಲವರು ಈ ಪ್ಯಾಕೇಜ್ ವಾಸ್ತವದಲ್ಲಿ ಉಂಟುಮಾಡುವ ಪರಿಣಾಮ ನಗಣ್ಯ ಎಂದು ಹೇಳುತ್ತಿದ್ದಾರೆ.

ಈ MSMEಪ್ಯಾಕೇಜ್ ಬಗ್ಗೆ ಇಷ್ಟೊಂದು ಚರ್ಚೆ ಯಾಕೆ ನಡೀತಿದೆ? ನಿಜಕ್ಕೂ ಈ MSMEಗಳು ದೇಶದ ಎಕಾನಮಿಯೊಳಗೆ ಅಷ್ಟೊಂದು ಮುಖ್ಯಾನ? ಕೆಲ ಅಂಕಿಅಂಶಗಳನ್ನ ನೋಡಿದ್ರೆ ಇವುಗಳ ಪ್ರಾಮುಖ್ಯತೆ ಎಷ್ಟು ಅಂತ ನಮಗೆ ತಿಳಿಯುತ್ತೆ. ಇಂಡಿಯಾದಲ್ಲಿ ಒಟ್ಟು 6.3 ಕೋಟಿ MSMEಗಳು ಇವೆ. ಅವುಗಳು ಸೃಷ್ಟಿಮಾಡಿರುವ ಒಟ್ಟು ನೇರ ಉದ್ಯೋಗಗಳು ಬರೋಬ್ಬರಿ ಹನ್ನೊಂದು ಕೋಟಿಗಳಷ್ಟು. ಈ ದೇಶದ ಒಟ್ಟು ಜಿಡಿಪಿಯಲ್ಲಿ 30% ರಷ್ಟು ಅಂದ್ರೆ 60 ಲಕ್ಷ ಕೋಟಿಗಳಿಗಿಂತ ಹೆಚ್ಚು ಈ MSMEಗಳಿಂದನೇ ಬರುತ್ತೆ. ಈ ದೇಶದ ಒಟ್ಟು ತಯಾರಿಕೆಯಲ್ಲಿ (manufacturing) 45% ರಷ್ಟು MSMEಗಳೇ ಮಾಡುತ್ವೆ. ಹಾಗೂ ದೇಶದಿಂದ ಆಗುವ ಒಟ್ಟು ರಫ್ತಿನಲ್ಲಿ 50% ನಷ್ಟು MSMEಗಳಿಂದಲೇ ಆಗುತ್ತೆ.

ಈ ಮೇಲಿನ ಅಂಕಿಅಂಶಗಳು MSMEಗಳು ಈ ದೇಶದ ಎಕಾನಮಿಯ ಆರೋಗ್ಯಕ್ಕೆ ಎಷ್ಟು ಮುಖ್ಯ ಅಂತ ಯಾರಿಗೇ ಆದ್ರೂ ಸುಲಭವಾಗಿ ಗೊತ್ತಾಗುತ್ತೆ. ಅದರಲ್ಲೂ ಈ ದೇಶದ ವರ್ಕ್ ಫೋರ್ಸಿನ ಶೇಖಡಾ ಇಪ್ಪತ್ತರಷ್ಟು ಮಂದಿ MSMEಗಳಲ್ಲೇ ಕೆಲಸ ಮಾಡ್ತಿದಾರೆ ಅಂದರೆ ಉದ್ಯೋಗ ಸೃಷ್ಟಿಯಲ್ಲಿ ಇವುಗಳ ಮಹತ್ವ ಎಂಥದು ಅಂತ ಅರಿವಾಗುತ್ತೆ. ಆದರೆ, ಬಹುತೇಕ MSMEಗಳ ಅತಿಮುಖ್ಯವಾದ ಪ್ರಾಬ್ಲಮ್ ಏನು ಅಂದ್ರೆ ಶೇಕಡಾ ತೊಂಬತ್ತರಷ್ಟು MSMEಗಳು ಅತ್ಯಂತ ಕಡಿಮೆ ಹೆಚ್ಚುವರಿ ನಗದಿನ ಲಭ್ಯತೆಯಲ್ಲಿಯೇ ಉದ್ಯಮ ನಿರ್ವಹಣೆ ಮಾಡಬೇಕಾದ ಸ್ಥಿತಿಯಲ್ಲಿವೆ. ಹಾಗಾಗಿ, ಇವುಗಳಿಗೆ ನಗದಿನ ಹರಿವು ಸ್ವಲ್ಪ ಕಡಿಮೆಯಾದರೂ workkng capital ಇಲ್ಲದಂತಾಗಿ ಈ MSMEಗಳು ಸಂಕಷ್ಟಕ್ಕೆ ಸಿಲುಕುತ್ತವೆ.

ನಮಗೆ ತಿಳಿದಿರುವಂತೆ ದೇಶದ ಕಡೆಯ ಎರಡು ತ್ರೈಮಾಸಿಕಗಳಲ್ಲಿ ಜಿಡಿಪಿಯ ಬೆಳವಣಿಗೆ ಶೇ.5 ಮತ್ತು ಶೇ.4.5 ಕ್ಕಿಳಿದಿತ್ತು. ಅದಕ್ಕೆ ಮುಖ್ಯ ಕಾರಣ ಮಾರುಕಟ್ಟೆಯಲ್ಲುಂಟಾದ ಬೇಡಿಕೆಯ ಕೊರತೆ. ಅಂದರೆ ಜನಗಳ ಕೈಯಲ್ಲಿ ಹಣವಿಲ್ಲದ ಕಾರಣ ಅವರ ಕೊಳ್ಳುವ ಶಕ್ತಿ ಕಡಿಮೆಯಾಗಿದ್ದು. ಇದರ ಹೊಡೆತ ಅತಿ ಬೇಗನೆ ಬಿದ್ದಿದ್ದೇ ಈ MSMEಗಳಿಗೆ ಮತ್ತು ಅದರಿಂದಾಗಿಯೇ ಅನೇಕವು ಮುಚ್ಚುವ ಸ್ಥಿತಿಗೆ ಬಂದಿದ್ದವು. ಆದರೆ, ಈಗ ಕೊರೋನಾ ಲಾಕ್‍ಡೌನಿಂದಾಗಿ ಕೋಟ್ಯಂತರ ಜನ ಕೆಲಸ ಕಳೆದುಕೊಂಡಿದ್ದು ಅವರ ಕೊಳ್ಳುವ ಶಕ್ತಿ ಶೂನ್ಯವಾಗಿದೆ. ಇದರಿಂದಾಗಿ ಅತಿ ಹೆಚ್ಚು ಮತ್ತು ಅತಿ ಶೀಘ್ರವಾಗಿ ಹೊಡೆತ ತಿನ್ನುತ್ತಿರುವುದು MSMEಗಳೇ. ತಾತ್ಕಾಲಿಕವಾಗಿಯಾದರೂ ಅತಿ ಹೆಚ್ಚು ಉದ್ಯೋಗ ನಷ್ಟವಾಗಿರುವುದೂ ಕೂಡ MSMEಗಳಲ್ಲಿಯೇ.

ಈ ಎಲ್ಲ ಹಿನ್ನೆಲೆಯಲ್ಲಿ ಕೇಂದ್ರಸರ್ಕಾರ ಈ MSMEಗಳ ಪುನಶ್ಚೇತನಕ್ಕೆಂದೇ ಪ್ಯಾಕೇಜ್ ಘೋಷಣೆ ಮಾಡಿದೆ. ಈ ಪ್ಯಾಕೇಜು ಒಟ್ಟಾರೆಯಾಗಿ MSMEಗಳಿಗೆ ಸುಲಭವಾಗಿ ಸಾಲಕೊಡುವ ಯೋಜನೆಯಾಗಿದ್ದು ಇದರಲ್ಲಿ ನಾಲ್ಕೈದು ಅಂಶಗಳಿದ್ದರೂ ಅವುಗಳಲ್ಲಿ ಅತಿದೊಡ್ಡ ಪ್ಯಾಕೇಜಿನ ಪರಿಣಾಮದ ಬಗ್ಗೆ ಇಲ್ಲಿ ಚರ್ಚಿಸೋಣ. ಅದು ನೂರು ಕೋಟಿಯ ತನಕ ಟರ್ನೋವರ್ ಇರುವ MSMEಗಳಿಗೆ ಮೂರುಲಕ್ಷ ಕೋಟಿಗಳಷ್ಟು ಸಾಲವನ್ನು ಪ್ರಕಟಿಸಿರುವ ಪ್ಯಾಕೇಜ್. ಈ ಸಾಲ ತೆಗೆದುಕೊಂಡರೆ ಒಂದು ವರ್ಷದವರೆಗೆ moratorium ಅಂದರೆ ಅಸಲು ಮತ್ತು ಬಡ್ಡಿಯನ್ನು ಕಟ್ಟುವಂತಿಲ್ಲ. ನಾಲ್ಕು ವರ್ಷಗಳ ಅವಧಿ ಇರುತ್ತದೆ.

ಇಲ್ಲಿ ಮುಖ್ಯ ಅಂಶವೆಂದರೆ ಈ ಸಾಲಕ್ಕೆ ಮತ್ತು ಇದರ ಮೇಲಿನ ಬಡ್ಡಿ ಗೆ ಸರ್ಕಾರವೇ ಸಂಪೂರ್ಣ ಗ್ಯಾರಂಟಿ ಕೊಡುತ್ತದೆ. ಇದರಿಂದಾಗಿ ಬ್ಯಾಂಕುಗಳು ಸುಲಭವಾಗಿ ಸಾಲ ಕೊಡುತ್ತವೆ ಮತ್ತು ಈ ಕ್ರಮದಿಂದಾಗಿ ಸುಮಾರು 45 ಲಕ್ಷ MSMEಗಳಿಗೆ ಈ ರೀತಿಯ ಅಡಮಾನ ಕೇಳದ ಸಾಲ ಸಿಗಲಿದೆ. ಅದೇ ರೀತಿ ಈಗಾಗಲೇ ಸಾಲದ ಸುಳಿಯಲ್ಲಿರುವ MSMEಗಳಿಗೆ 20000 ಕೋಟಿ ರೂಗಳ ಸಾಲ ನೀಡುವ ವ್ಯವಸ್ಥೆ ಮಾಡಲಾಗಿದ್ದು ಅದಕ್ಕೆ ಸರ್ಕಾರ 4000 ಕೋಟಿ ರೂಗಳಷ್ಟು ಗ್ಯಾರಂಟಿ ನೀಡಲಿದೆ. ಇದರಿಂದ ಒಟ್ಟು ಎರಡು ಲಕ್ಷ MSMEಗಳಿಗೆ ಸಹಾಯವಾಗಲಿದೆ.

ಇದರ ಉದ್ದೇಶ: ಇದು ಅಡಮಾನರಹಿತ ಸಾಲವಾಗಿರುವುದರಿಂದ MSMEಗಳು ಈ ಸಾಲವನ್ನು ತೆಗೆದುಕೊಳ್ಳುತ್ತವೆ. ಈ ಹಣವನ್ನು ಬೇಕಾದ ಕಚ್ಚಾವಸ್ತು ಖರೀದಿಗೆ, ಉತ್ಪಾದನಾ ಸಾಮಥ್ರ್ಯ ಹೆಚ್ಚಿಸುವಿಕೆಗೆ ಮತ್ತು ಸಿಬ್ಬಂದಿಗಳಿಗೆ ಮೂರ್ನಾಲ್ಕು ತಿಂಗಳ ವೇತನ ಕೊಡಲು ಬಳಸುತ್ತವೆ. ಇದರಿಂದ ಈ MSMEಗಳು ತಡೆರಹಿತ ಉತ್ಪಾದನೆ ಮಾಡುವಂತಾಗಿ ಇಡೀ ಈ ವಲಯವು ಮತ್ತಷ್ಟು ಉದ್ಯೋಗವನ್ನೂ ಸೃಷ್ಟಿಸಿ ದೇಶದ ಎಕಾನಮಿ ಮತ್ತೆ ಪುಟಿದೇಳಲು ಸಹಾಯವಾಗುತ್ತದೆ ಎಂಬುದು.

ಆದರೆ ಇಲ್ಲಿ ಸರ್ಕಾರ ಅರ್ಥ ಮಾಡಿಕೊಳ್ಳದಂತೆ ನಟಿಸುತ್ತಿರುವ ಬಹುಮುಖ್ಯ ಅಂಶವೊಂದಿದೆ. ಕೊರೋನಾಕ್ಕೂ ಮೊದಲು ಈ ದೇಶದ ಆರ್ಥಿಕತೆ ತಗ್ಗಿದ್ದು ಜನರ ಕೊಳ್ಳುವ ಶಕ್ತಿ ಕಡಿಮೆಯಾಗಿದ್ದರಿಂದ. ಅದು MSMEಗಳ ಮೇಲೂ ಭಾರೀ ನಕಾರಾತ್ಮಕ ಪರಿಣಾಮ ಬೀರಿತ್ತು. ಈಗ ಕೊರೊನಾ ಅಟ್ಯಾಕ್ ನಂತರವಂತೂ ಜನರ ಕೊಳ್ಳುವ ಶಕ್ತಿ ಪಾತಾಳಕ್ಕಿಳಿದಿದೆ. ಇಂಥಾ ಸನ್ನಿವೇಶದಲ್ಲಿ MSMEಗಳು ಸಾಲ ತೆಗೆದುಕೊಂಡು ಉತ್ಪಾದನೆ ಮಾಡಿದರೂ ಕೂಡ ಆ ಉತ್ಪನ್ನಗಳನ್ನು ಕೊಳ್ಳುವವರಿಲ್ಲದೆ ಆ ಸಾಲವೆಲ್ಲ ಮತ್ತಷ್ಟು NPA ಆಗುವುದಲ್ಲದೆ ಈ MSMEಗಳು ಮತ್ತೆ ಏಳಲಾರದಂತೆ ಮುಗಿದುಹೋಗುವ ಸಾಧ್ಯತೆಗಳಿವೆ.

ಇದರಿಂದಾಗಿಯೇ ಈ MSMEಗಳ ಹಲವು ಪ್ರಮುಖ ಉದ್ದಿಮೆದಾರರು ನಮಗೆ ಈ ಸಾಲಕ್ಕಿಂತ ಸಿಬ್ಬಂದಿಗಳ ಕನಿಷ್ಟ ಮೂರು ತಿಂಗಳ ವೇತನಕ್ಕೆ ಮತ್ತು ಕಚ್ಚಾ ವಸ್ತು ಖರೀದಿಗೆ ಸರ್ಕಾರ ಫ್ರೀಯಾಗಿ ಹಣಕೊಟ್ಟಿದ್ದರೆ ಅದು ನಿಜಕ್ಕೂ ಅತ್ಯುತ್ತಮ ಕ್ರಮವಾಗುತ್ತಿತ್ತು ಎಂದಿದ್ದಾರೆ. ಆಗ ಅದು ಒಂದೇ ಸಲ ಉತ್ಪಾದನೆ ಮತ್ತು ಬೇಡಿಕೆ ಎರಡನ್ನೂ ಹೆಚ್ಚಿಸುತ್ತಿತ್ತು ಎಂಬ ಕಾರಣಕ್ಕೆ. ಒಟ್ಟಿನಲ್ಲಿ ಸರ್ಕಾರ MSMEಗಳಿಗೆ ಅಡಮಾನ ರಹಿತ ಸಾಲ ಕೊಡಲು ವ್ಯವಸ್ಥೆ ಮಾಡುವುದು MSMEಗಳಿಗೆ ಒಳ್ಳೆಯ ಉತ್ತೇಜನಾ ಕ್ರಮವೇ ಆದರೂ ಕೂಡ ಆ ಕ್ರಮ ಫಲಪ್ರದವಾಗಬೇಕಾದರೆ ಸರ್ಕಾರ ಜನರ ಕೈಗೆ ನೇರ ಮತ್ತು ಪರೋಕ್ಷ ಕ್ರಮಗಳ ಮೂಲಕ ನಗದು ಸಿಗುವಂತೆ ಮಾಡಬೇಕಿದೆ.
ಈಗಾಗಲೇ ತುಂಬಾ ವಿಳಂಬವಾಗಿದ್ದರೂ, ಈಗಲಾದರೂ ಜನರಿಗೆ ನಗದು ಸಿಗುವಂತ ಕ್ರಮಗಳನ್ನ ತೆಗೆದುಕೊಂಡರೆ ಮಾತ್ರ MSMEಗಳಿಗೆ ಅಡಮಾನ ರಹಿತ ಸಾಲ ಕೊಡುವ ಈ ಕ್ರಮ ನಿರಿಕ್ಷಿತ ಫಲ ಕೊಡುವ ಸಾಧ್ಯತೆಯಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...