Homeಮುಖಪುಟಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

- Advertisement -
- Advertisement -

ರೈತ ಹೋರಾಟಗಾರ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರು ಇಂದು ಕ್ಷಮೆ ಕೇಳುತ್ತಲೇ ಆ ಹೋರಾಟಗಾರ್ತಿಯ ಮೇಲೆ ಮತ್ತಷ್ಟು ಆರೋಪಗಳ ಸುರಿಮಳೆಗೈಯ್ಯುವ ಮೂಲಕ ಮತ್ತೆ ವಿವಾದಕ್ಕೊಳಗಾಗಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ನಾನು ರಾಜೀನಾಮೆ ಕೊಡುವ ಪ್ರಶ್ನೆ ಉದ್ಬವಿಸಲ್ಲ, ನನ್ನನ್ನು ಮಂತ್ರಿ ಮಾಡಿರುವುದು ಸಿದ್ದರಾಮಯ್ಯನಲ್ಲ, ನಮ್ಮ ನಾಯಕರು ಹೇಳಿದರೆ ಮಾತ್ರ ರಾಜೀನಾಮೆ ನೀಡತ್ತೇನೆ, ಆದರೆ ರಾಜೀನಾಮೆ ಕೊಡುವ ತಪ್ಪು ನಾನು ಮಾಡಿಲ್ಲ” ಎಂದು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಅಂದಿದ್ದು ನಿಜ. ಆಯಮ್ಮ ನನ್ನನ್ನ ಟೆಂಪ್ಟ್ ಮಾಡಿದ್ದಾರೆ, ಒಬ್ಬ ಮಂತ್ರಿ ಅವರ ಊರಿಗೆ ಹೋಗಿ ಸುಮ್ಮನೆ ಬೈಸಿಕೊಂಡು ಬರುವುದಕ್ಕಾಗುತ್ತದೆಯೇ? ನಾನು ಒಬ್ಬ ಮನುಷ್ಯ, ಸ್ವಾಭಿಮಾನಿ ಇದೆ. ಎಲ್ಲರಿಗೂ ಶರಣಾಗಲು ಸಾಧ್ಯವಿಲ್ಲ.

ನನಗೆ ಮುಖ ಪರಚುವಂತೆ ಮಾತನಾಡಿದರೆ ನಾನು ಸುಮ್ಮನಿರಲು ಸಾಧ್ಯವಿಲ್ಲ. ರಿಕ್ವೆಸ್ಟ್‌ ಮಾಡಿಕೊಳ್ಳಬೇಕು ಹೊರತು ನನಗೆ ಆದೇಶ ಕೊಡಬಾರದು. ನನಗೆ ಮುಖಪರಚಲು ಬಂದಾಗ ಅವರನ್ನು ಹಿಡಿದುಕೊಳ್ಳದೇ ಏನು ಮಾಡಬೇಕು ಮಾಧುಸ್ವಾಮಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಘಟನೆಯಿಂದ ಬಹಳ ಬೇಸರವಾಗಿದೆ. ನಾನು ಮಾತನಾಡಿದ್ದು ತಪ್ಪು.. ಆಯಮ್ಮನಿಗೆ ಅದೇನಾಗಿತ್ತೊ ಗೊತ್ತಿಲ್ಲ. ಆಯಮ್ಮ ಬಹುಶಃ ಅದೇ ರೀತಿ ಬೆಳೆದುಕೊಂಡಬಂದಿರಬಹುದು. ಆದರೆ ನಾನು ಅದನ್ನು ಸಹಿಸಿಕೊಳ್ಳುವುದಿಲ್ಲ.

ಇದರಿಂದಾಗಿ ಯಾರಾದರೂ ಹೆಣ್ಣು ಮಕ್ಕಳ ಭಾವನೆಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆ ಪದ ಕೆಟ್ಟದಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ನಂದು ತಪ್ಪು ಎಂದು ಒಪ್ಪಿಕೊಳ್ಳುತ್ತೇನೆ. ಹಾಗಾಂತ ಇನ್ನು ಮುಂದೆ ಎಲ್ಲಾ ಮಂತ್ರಿಗಳಿಗೆ, ಅಧಿಕಾರಿಗಳಿಗೆ ಏನು ಬೇಕಾದರೂ ಮಾತಾಡಬಹುದು ಎಂದು ಭಾವಿಸಿಕೊಂಡರೆ ಆಡಳಿತ ಮಾಡುವುದು ಕಷ್ಟ ಎಂದಿದ್ದಾರೆ.

ಈಯಮ್ಮನ ನೇಚರ್‌ ಅಂತದ್ದು ಎಂದು ಸ್ಥಳೀಯವಾಗಿ ಹೇಳಿದ್ದಾರೆ. ಯಾರು ಹೋದರು ಈಯಮ್ಮ ಹೀಗೆ ಮಾಡುತ್ತೆ ಅಂತ ಹೇಳಿದ್ದಾರೆ. ಆಕೆಯ ನಡೆವಳಿಕೆ ತೀರಾ ಕೆಟ್ಟದಾಗಿತ್ತು. ಸಿಟ್ಟು ಬಂದಾಗ ಒಬ್ಬ ಮನುಷ್ಯ ಏನು ಮಾತಾಡುತ್ತಾನೆ ಅದನ್ನೆ ನಾನು ಮಾತನಾಡಿದ್ದೇನೆ. ಮುಚ್ಚು ಬಾಯಿ ರಾಸ್ಕಲ್ ಎನ್ನುವುದರಲ್ಲಿ ತಪ್ಪೇನಿದೆ ಎಂದು ಸಚಿವರು ಪ್ರಶ್ನಿಸಿದ್ದಾರೆ.

ನಾನು ಹೇಳಿರುವುದು ತಪ್ಪು ಎಂದರೆ ನೀನು ಹೇಳಿದ್ದು ಸರಿನಾ ನೋಡಿಕೊಳ್ಳಮ್ಮ. ನಿನ್ನ ತಂದೆಗಾದ ವಯಸ್ಸು ನನಗಾಗಿದೆ. ಹೆಣ್ಣು ಮಕ್ಕಳು ನೋಡಿಕೊಂಡು ಮಾತಾಡಬೇಕು. ನಾನು ಒಂದು ಹೆಣ್ಣು ಮಗಳಿಗೆ ಹೇಳಿದ್ದನ್ನು ಇಡಿ ಮಹಿಳೆಯರಿಗೆ ಅನ್ವಯಿಸುವುದು, ಯಾರಿಗಾದರೂ ಬೈದರೆ ಇಡೀ ಜಾತಿಗೆ ಅನ್ವಯಿಸುವುದು, ಯಾರೋ ಅಧಿಕಾರಿಗೆ ಬೈದರೆ ಇಡೀ ಸಮುದಾಯಕ್ಕೆ ಅನ್ವಯಿಸಿದರೆ ಆಡಳಿತ ನಡೆಸುವುದು ಕಷ್ಟ ಎಂದು ಸಚಿವರು ಹೇಳಿದ್ದಾರೆ.

ಒಟ್ಟಿನಲ್ಲಿ ಶಾಸಕರ ಮಾತಿನಲ್ಲಿ ಆ ಹುಡುಗಿಯ ಮೇಲೆ ಆರೋಪಗಳ ಸುರಿಮಳೆ ಇತ್ತೆ ಹೊರತು ಕ್ಷಮೆ ಕೇಳುವ ಉದ್ದೇಶವಿದ್ದಂತೆ ಕಾಣುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆ ಮಹಿಳೆಯು ನಿನ್ನೆ ಸಾವಧಾನವಾಗಿಯೇ ನಡೆದುಕೊಂಡಿರುವುದು, ಅವರದೇ ಊರಿನ ಸಮಸ್ಯೆಯ ಬಗ್ಗೆ ಮಾತನಾಡಿರುವುದು ವಿಡಿಯೋದಲ್ಲಿ ಕಂಡುಬಂದಿದ್ದರೂ ಸಚಿವರು ಮಾತ್ರ ನನ್ನ ಮುಖ ಪರಚಲು ಬಂದರು, ಎತ್ತರಿಸಿದ ದನಿಯಲ್ಲಿ ಮಾತನಾಡಿದರು ಎಂದು ಆರೋಪಿಸಿದ್ದಾರೆ.

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

ಅಲ್ಲಿಗೆ ಒಂದು ಕ್ಷಮೆಯಿಂದ ಮುಗಿದುಹೋಗಬಹುದಾಗಿದ್ದ ಪ್ರಕರಣವನ್ನು ಮಾಧುಸ್ವಾಮಿಯವರು ಮತ್ತೆ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...