Homeಮುಖಪುಟಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

- Advertisement -
- Advertisement -

ರೈತ ಹೋರಾಟಗಾರ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರು ಇಂದು ಕ್ಷಮೆ ಕೇಳುತ್ತಲೇ ಆ ಹೋರಾಟಗಾರ್ತಿಯ ಮೇಲೆ ಮತ್ತಷ್ಟು ಆರೋಪಗಳ ಸುರಿಮಳೆಗೈಯ್ಯುವ ಮೂಲಕ ಮತ್ತೆ ವಿವಾದಕ್ಕೊಳಗಾಗಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ನಾನು ರಾಜೀನಾಮೆ ಕೊಡುವ ಪ್ರಶ್ನೆ ಉದ್ಬವಿಸಲ್ಲ, ನನ್ನನ್ನು ಮಂತ್ರಿ ಮಾಡಿರುವುದು ಸಿದ್ದರಾಮಯ್ಯನಲ್ಲ, ನಮ್ಮ ನಾಯಕರು ಹೇಳಿದರೆ ಮಾತ್ರ ರಾಜೀನಾಮೆ ನೀಡತ್ತೇನೆ, ಆದರೆ ರಾಜೀನಾಮೆ ಕೊಡುವ ತಪ್ಪು ನಾನು ಮಾಡಿಲ್ಲ” ಎಂದು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಅಂದಿದ್ದು ನಿಜ. ಆಯಮ್ಮ ನನ್ನನ್ನ ಟೆಂಪ್ಟ್ ಮಾಡಿದ್ದಾರೆ, ಒಬ್ಬ ಮಂತ್ರಿ ಅವರ ಊರಿಗೆ ಹೋಗಿ ಸುಮ್ಮನೆ ಬೈಸಿಕೊಂಡು ಬರುವುದಕ್ಕಾಗುತ್ತದೆಯೇ? ನಾನು ಒಬ್ಬ ಮನುಷ್ಯ, ಸ್ವಾಭಿಮಾನಿ ಇದೆ. ಎಲ್ಲರಿಗೂ ಶರಣಾಗಲು ಸಾಧ್ಯವಿಲ್ಲ.

ನನಗೆ ಮುಖ ಪರಚುವಂತೆ ಮಾತನಾಡಿದರೆ ನಾನು ಸುಮ್ಮನಿರಲು ಸಾಧ್ಯವಿಲ್ಲ. ರಿಕ್ವೆಸ್ಟ್‌ ಮಾಡಿಕೊಳ್ಳಬೇಕು ಹೊರತು ನನಗೆ ಆದೇಶ ಕೊಡಬಾರದು. ನನಗೆ ಮುಖಪರಚಲು ಬಂದಾಗ ಅವರನ್ನು ಹಿಡಿದುಕೊಳ್ಳದೇ ಏನು ಮಾಡಬೇಕು ಮಾಧುಸ್ವಾಮಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಘಟನೆಯಿಂದ ಬಹಳ ಬೇಸರವಾಗಿದೆ. ನಾನು ಮಾತನಾಡಿದ್ದು ತಪ್ಪು.. ಆಯಮ್ಮನಿಗೆ ಅದೇನಾಗಿತ್ತೊ ಗೊತ್ತಿಲ್ಲ. ಆಯಮ್ಮ ಬಹುಶಃ ಅದೇ ರೀತಿ ಬೆಳೆದುಕೊಂಡಬಂದಿರಬಹುದು. ಆದರೆ ನಾನು ಅದನ್ನು ಸಹಿಸಿಕೊಳ್ಳುವುದಿಲ್ಲ.

ಇದರಿಂದಾಗಿ ಯಾರಾದರೂ ಹೆಣ್ಣು ಮಕ್ಕಳ ಭಾವನೆಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆ ಪದ ಕೆಟ್ಟದಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ನಂದು ತಪ್ಪು ಎಂದು ಒಪ್ಪಿಕೊಳ್ಳುತ್ತೇನೆ. ಹಾಗಾಂತ ಇನ್ನು ಮುಂದೆ ಎಲ್ಲಾ ಮಂತ್ರಿಗಳಿಗೆ, ಅಧಿಕಾರಿಗಳಿಗೆ ಏನು ಬೇಕಾದರೂ ಮಾತಾಡಬಹುದು ಎಂದು ಭಾವಿಸಿಕೊಂಡರೆ ಆಡಳಿತ ಮಾಡುವುದು ಕಷ್ಟ ಎಂದಿದ್ದಾರೆ.

ಈಯಮ್ಮನ ನೇಚರ್‌ ಅಂತದ್ದು ಎಂದು ಸ್ಥಳೀಯವಾಗಿ ಹೇಳಿದ್ದಾರೆ. ಯಾರು ಹೋದರು ಈಯಮ್ಮ ಹೀಗೆ ಮಾಡುತ್ತೆ ಅಂತ ಹೇಳಿದ್ದಾರೆ. ಆಕೆಯ ನಡೆವಳಿಕೆ ತೀರಾ ಕೆಟ್ಟದಾಗಿತ್ತು. ಸಿಟ್ಟು ಬಂದಾಗ ಒಬ್ಬ ಮನುಷ್ಯ ಏನು ಮಾತಾಡುತ್ತಾನೆ ಅದನ್ನೆ ನಾನು ಮಾತನಾಡಿದ್ದೇನೆ. ಮುಚ್ಚು ಬಾಯಿ ರಾಸ್ಕಲ್ ಎನ್ನುವುದರಲ್ಲಿ ತಪ್ಪೇನಿದೆ ಎಂದು ಸಚಿವರು ಪ್ರಶ್ನಿಸಿದ್ದಾರೆ.

ನಾನು ಹೇಳಿರುವುದು ತಪ್ಪು ಎಂದರೆ ನೀನು ಹೇಳಿದ್ದು ಸರಿನಾ ನೋಡಿಕೊಳ್ಳಮ್ಮ. ನಿನ್ನ ತಂದೆಗಾದ ವಯಸ್ಸು ನನಗಾಗಿದೆ. ಹೆಣ್ಣು ಮಕ್ಕಳು ನೋಡಿಕೊಂಡು ಮಾತಾಡಬೇಕು. ನಾನು ಒಂದು ಹೆಣ್ಣು ಮಗಳಿಗೆ ಹೇಳಿದ್ದನ್ನು ಇಡಿ ಮಹಿಳೆಯರಿಗೆ ಅನ್ವಯಿಸುವುದು, ಯಾರಿಗಾದರೂ ಬೈದರೆ ಇಡೀ ಜಾತಿಗೆ ಅನ್ವಯಿಸುವುದು, ಯಾರೋ ಅಧಿಕಾರಿಗೆ ಬೈದರೆ ಇಡೀ ಸಮುದಾಯಕ್ಕೆ ಅನ್ವಯಿಸಿದರೆ ಆಡಳಿತ ನಡೆಸುವುದು ಕಷ್ಟ ಎಂದು ಸಚಿವರು ಹೇಳಿದ್ದಾರೆ.

ಒಟ್ಟಿನಲ್ಲಿ ಶಾಸಕರ ಮಾತಿನಲ್ಲಿ ಆ ಹುಡುಗಿಯ ಮೇಲೆ ಆರೋಪಗಳ ಸುರಿಮಳೆ ಇತ್ತೆ ಹೊರತು ಕ್ಷಮೆ ಕೇಳುವ ಉದ್ದೇಶವಿದ್ದಂತೆ ಕಾಣುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆ ಮಹಿಳೆಯು ನಿನ್ನೆ ಸಾವಧಾನವಾಗಿಯೇ ನಡೆದುಕೊಂಡಿರುವುದು, ಅವರದೇ ಊರಿನ ಸಮಸ್ಯೆಯ ಬಗ್ಗೆ ಮಾತನಾಡಿರುವುದು ವಿಡಿಯೋದಲ್ಲಿ ಕಂಡುಬಂದಿದ್ದರೂ ಸಚಿವರು ಮಾತ್ರ ನನ್ನ ಮುಖ ಪರಚಲು ಬಂದರು, ಎತ್ತರಿಸಿದ ದನಿಯಲ್ಲಿ ಮಾತನಾಡಿದರು ಎಂದು ಆರೋಪಿಸಿದ್ದಾರೆ.

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

ಅಲ್ಲಿಗೆ ಒಂದು ಕ್ಷಮೆಯಿಂದ ಮುಗಿದುಹೋಗಬಹುದಾಗಿದ್ದ ಪ್ರಕರಣವನ್ನು ಮಾಧುಸ್ವಾಮಿಯವರು ಮತ್ತೆ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...