Homeಚಳವಳಿಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ಕ್ಷಮೆಯಲ್ಲಿ ಮುಗಿದುಹೋಗಬೇಕಿದ್ದ ಪ್ರಕರಣವನ್ನು ಅವರೇ ದೊಡ್ಡದು ಮಾಡುತ್ತಿದ್ದಾರೆ. ಇದರಿಂದ ನಾನು ಕುಗ್ಗುವುದಿಲ್ಲ. ಪ್ರಾಮಾಣಿಕವಾಗಿ ಹೋರಾಟ ಮುಂದುವರೆಸುತ್ತೇನೆ. ನಮ್ಮ ರೈತಸಂಘದ ಹಿರಿಯರೊಂದಿಗೆ ಸಭೆ ನಡೆಸಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ನಳಿನಿ ತಿಳಿಸಿದ್ದಾರೆ.

- Advertisement -
- Advertisement -

ರೈತ ಹೋರಾಟಗಾರ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ ತೀವ್ರ ಖಂಡನೆಗೆ ಒಳಗಾಗಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರು ತನ್ನ ತಪ್ಪಿಗೆ ಕ್ಷಮೆ ಕೇಳುತ್ತಲೇ ನಳಿನಿ ವಿರುದ್ಧ ಮತ್ತಷ್ಟು ಆರೋಪಗಳನ್ನು ಮಾಡಿ ವಿವಾದವನ್ನು ಮುಂದುವರೆಸಿದ್ದಾರೆ.

ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು “ಆಯಮ್ಮ ನನ್ನನ್ನ ಟೆಂಪ್ಟ್ ಮಾಡಿದ್ದಾರೆ, ಒಬ್ಬ ಮಂತ್ರಿ ಅವರ ಊರಿಗೆ ಹೋಗಿ ಸುಮ್ಮನೆ ಬೈಸಿಕೊಂಡು ಬರುವುದಕ್ಕಾಗುತ್ತದೆಯೇ? ಆಯಮ್ಮನಿಗೆ ಅದೇನಾಗಿತ್ತೊ ಗೊತ್ತಿಲ್ಲ. ಆಯಮ್ಮ ಬಹುಶಃ ಅದೇ ರೀತಿ ಬೆಳೆದುಕೊಂಡಬಂದಿರಬಹುದು. ಈಯಮ್ಮನ ನೇಚರ್‌ ಅಂತದ್ದು ಎಂದು ಸ್ಥಳೀಯವಾಗಿ ಹೇಳಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಮಹಿಳಾ ಮತ್ತು ರೈತ ಹೋರಾಟಗಾರರನ್ನು ಮಾತನಾಡಿಸಿತು. ಅವರ ಪ್ರತಿಕ್ರಿಯೆಗಳು ಈ ಕೆಳಗಿನಂತವೆ.

ಒಬ್ಬ ಮಹಿಳೆಯ ಎದುರು “ನಾನು ಬಹಳ ಕೆಟ್ಟ ಮನುಷ್ಯ” ಎಂದರೆ ಏನರ್ಥ? : ನಂದಿನಿ ಜಯರಾಂ ಪ್ರಶ್ನೆ

“ಮೊದಲನೆಯದಾಗಿ ನಳಿನಿಯಂತಹ ಹೆಣ್ಣು ಮಕ್ಕಳು ಸಾಮಾಜಿಕ ಹೋರಾಟಕ್ಕೆ ಬರುವುದೇ ದೊಡ್ಡದು. ಅದಕ್ಕಾಗಿ ಅವಳನ್ನು ಅಭಿನಂದಿಸಬೇಕು. ಎರಡನೇಯದಾಗಿ ಅವರೂರಿಗೆ ಬಂದಾಗ ಅವರೂರಿನ ಸಮಸ್ಯೆಯನ್ನೇ ಅವಳು ಕೇಳಿದ್ದಾಳೆ. ಈ ಮೊದಲು ಆ ಕೆರೆ ನೀರು ಹಂಚಿಕೆ ಸಂಬಂಧಿಸಿದಂತೆ ಹೋರಾಟ ಮಾಡಿ ಯಶಸ್ಸು ಕಂಡಿದ್ದಾರೆ. ಈಗ ಒತ್ತುವರಿ ಸಮಸ್ಯೆ ಗಮನಕ್ಕೆ ಬಂದಾಗ ಅದನ್ನು ಪ್ರಶ್ನಿಸಿದ್ದಾರೆ. ಆಗ ಮಾಧುಸ್ವಾಮಿಯವರು ಆ ಪ್ರಶ್ನೆಯನ್ನು ಫ್ಯೂಡಲ್‌ ಮನಸ್ಥಿತಿಯಿಂದ ನೋಡಿದ್ದಾರೆ.

ಅಷ್ಟು ಚಿಕ್ಕ ಹುಡುಗಿ ಪ್ರಶ್ನೆ ಮಾಡಿರುವುದು ಮತ್ತು ಹುಡುಗಿಯೊಬ್ಬಳು ಸಾರ್ವಜನಿಕವಾಗಿ ಪ್ರಶ್ನೆ ಮಾಡಿರುವುದನ್ನು ತಡೆದುಕೊಳ್ಳಲು ಮಾಧುಸ್ವಾಮಿಯವರಿಗೆ ಆಗಿಲ್ಲ. ಅದಕ್ಕಾಗಿ ಅವರು ಪದೇ ಪದೇ ಅವಳ ಮಾತಿನ ಧಾಟಿ ಸರಿಯಿಲ್ಲ ಅನ್ನುತ್ತಾರಲ್ಲ, ಅವರು ಸಾರ್ವಜನಿಕವಾಗಿ ಮುಚ್ಚು ಬಾಯಿ ರ್‍ಯಾಸ್ಕಲ್ ಎನ್ನುವ ಧಾಟಿ ಸರಿಯೇ? ಒಬ್ಬ ಹೆಣ್ಣು ಮಗಳಿಗೆ ನಾನು ಕೆಟ್ಟ ಮನುಷ್ಯ ಗೊತ್ತಿಲ್ಲ ನಿನಗೆ ಎಂದರೆ ಅರ್ಥವೇನು? ಇದು ಬಹಿರಂಗ ಬೆದರಿಕೆಯಲ್ಲವೇ?

ನಂದಿನಿ ಜಯರಾಂ

ರೈತಸಂಘ ಮಾಧುಸ್ವಾಮಿಯವರ ನಡೆಯನ್ನು ತೀವ್ರವಾಗಿ ಖಂಡಿಸುತ್ತದೆ. ಕ್ಷಮೆ ಕೇಳಿದರೆಂದು ನಾವು ಸುಮ್ಮನಾಗಿದ್ದೆವು. ಆದರೆ ಅವರು ತಮ್ಮ ಹೇಳಿಕೆಗಳನ್ನು ಬದಲಿಸುತ್ತಿರುವುದನ್ನು ನೋಡಿದರೆ ಕ್ಷಮೆ ಅವರ ಮನಸ್ಸಿನಿಂದ ಬಂದಿಲ್ಲ, ಬದಲಿಗೆ ತಮ್ಮ ಮೇಲಿನ ದಾಳಿಯಿಂದ ತಪ್ಪಿಸಿಕೊಳ್ಳಲಿಕ್ಕಾಗಿ ಕ್ಷಮೆ ಕೇಳಿದ್ದಾರೆಂಬುದು ಅರಿವಿಗೆ ಬರುತ್ತದೆ. ಒಂದು ಕಡೆ ಸಂಸ್ಕೃತಿಯ ಬಗ್ಗೆ ಮಾತನಾಡುವ ಅವರು ಇಲ್ಲಿ ನಾಲಿಗೆ ಹರಿಯಬಿಡುತ್ತಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.

ನಂದಿನಿ ಜಯರಾಂ, ರೈತ ಮುಖಂಡರು,

ಕರ್ನಾಟಕ ರಾಜ್ಯ ರೈತ ಸಂಘ, ಕೆ.ಆರ್‌ ಪೇಟೆ.

ತಾನೊಬ್ಬ ಕೆಟ್ಟ ಮನುಷ್ಯ ಎಂಬುದನ್ನು ತೋರಿಸಿದ್ದಾರೆ. – ಗೀತಾ.ವಿ

ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ನಮ್ಮ ಕೋಲಾರದಲ್ಲಿ ಮಹಿಳಾ ರೈತ ಮುಖಂಡರುಗಳಿಗೆ ಬಾಯಿ ಮಚ್ಚು ರ್‍ಯಾಸ್ಕಲ್‌ ಎಂದು‌ ಕೆಟ್ಟ ಭಾಷೆಯಲ್ಲಿ ಬೈದು ತಾನೊಬ್ಬ ಕೆಟ್ಟ ಮನುಷ್ಯ ಎಂದು ಬೆರಳು ತೋರಿಸಿ ಹೇಳುತ್ತಿರುವುದು ಇದೊಂದು ಖಂಡನೀಯ ವರ್ತನೆ. ಯಾವ ವ್ಯಕ್ತಿಯೂ ಈ ರೀತಿ ನಡೆದುಕೊಳ್ಳಬಾರದು. ಅದರಲ್ಲಿಯೂ ಜನಪ್ರತಿನಿಧಿಗಳು ಶಾಸಕರು, ಸಚಿವರು‌ ಅದರಲ್ಲಿಯೂ ಕಾನೂನು ಸಚಿವರಾಗಿ ಕನಿಷ್ಟ ಸಾಮಾನ್ಯ ಪ್ರಜ್ಞೆಯಿಲ್ಲದೇ ನಾಲಿಗೆ ಹರಿಬಿಟ್ಟಿದ್ದು ಅಕ್ಷಮ್ಯ. ಸಾಲದ್ದಕ್ಕೆ ಸ್ಥಳದಲ್ಲಿ ಇದ್ದ ಪುರುಷ ಪೋಲೀಸ್ ಆಕೆಯನ್ನು ತಳ್ಳಿಕೊಂಡು ಹೋಗುತ್ತಿರುವುದೂ ಕಾಣುತ್ತಿದೆ. ಇದೂ ಆಕ್ಷೇಪಾರ್ಹ ಸಂಗತಿಯೇ.

ಗೀತಾ.ವಿ

ಕನಿಷ್ಟ ಸಾಮಾನ್ಯ ಜ್ಞಾನವಿಲ್ಲದವರು ಸಚಿವರಾಗಿರುವುದು ತರವಲ್ಲ. ಅದರಲ್ಲಿಯೂ ಕಾನೂನು ಸಚಿವರಾಗಿರುವುದಂತೂ ಸುತರಾಂ ಸರಿಯಲ್ಲ. ಇವರ‌ ಮನೋಧರ್ಮ ಮನುಧರ್ಮದ ಭಾಗವೇ ಆಗಿದೆ. ಮಹಿಳೆಯರ ಬಗ್ಗೆ ಕೂಡ ಕನಿಷ್ಟ ಗೌರವವಿಲ್ಲದ ಇವರು ಕಾನೂನು ಸಚಿವರಾಗಿ‌ ಮುಂದುವರೆಯಲು ಅರ್ಹರಲ್ಲವೆಂದೇ ಬಾವಿಸಬೇಕು. ನಾವು ಇದನ್ನು ಖಂಡಿಸುತ್ತೇವೆ.

ಗೀತಾ.ವಿ, ಉಪಾಧ್ಯಕ್ಷರು
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಸಮಿತಿ.

ಪ್ರಶ್ನೆ ಮತ್ತು ನ್ಯಾಯ ಈ ಎರಡು ಪದಗಳಿಂದ ಬಿಜೆಪಿಯವರು ಬಹಳ ದೂರ. – ಗೌರಿ

ಮಂತ್ರಿಗಳಿಗೆ ಮೊದಲು ಸಂವಿಧಾನದ ಬಗ್ಗೆ, ಕಾನೂನಿನ ತರಬೇತಿ ಕೊಡುವುದನ್ನು ಕಡ್ಡಾಯ ಮಾಡಬೇಕು. ಸಾಮಾನ್ಯ ಜ್ಞಾನ ಇಲ್ಲದ ಇಂತಹವರು ಮಂತ್ರಿಗಳಾದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮಹಿಳಾ ಹೋರಾಟಗಾರ್ತಿ ನಳಿನಿ ಏನೂ ತಪ್ಪಾಗಿ ಮಾತನಾಡಿಲ್ಲ. ಸಮಾಧಾನವಾಗಿಯೇ ಸಮಸ್ಯೆಯನ್ನು ಹೇಳುತ್ತಿದ್ದಾಳೆ. ಅದನ್ನು ಮಂತ್ರಿಗೆ ಕೇಳಿಸಿಕೊಳ್ಳಲು ಸಾಧ್ಯವಿಲ್ಲವೆಂದಾದರೆ ಅದು ಯಾರ ತಪ್ಪು?

ಗೌರಿ

ಪ್ರಶ್ನೆ ಮತ್ತು ನ್ಯಾಯ ಈ ಎರಡು ಪದಗಳಿಂದ ಬಿಜೆಪಿಯವರು ಬಹಳ ದೂರ. ಹಾಗಾಗಿ ಯಾರಾದರೂ ಪ್ರಶ್ನಿಸಿದರೆ ಕೆಂಡಾಮಂಡಲವಾಗುತ್ತಾರೆ. ಇದರಿಂದ ಆ ಮಂತ್ರಿಯ ಮನೆಯ ಹೆಣ್ಣು ಮಕ್ಕಳ ಸ್ಥಾನ ಏನು ಎಂಬುದು ತಿಳಿಯುತ್ತದೆ. ಜನರ ಸಮಸ್ಯೆಗಳನ್ನು ಇವರ ಗಮನಕ್ಕೆ ತರದೆ ಇನ್ಯಾರ ಹತ್ತಿರ ಹೇಳಬೇಕು. ಆ ಮಹಿಳೆ ಹಾಗೆ ಅಂತ ಅವಳ ನಡತೆಯನ್ನು ತೇಜೋವಧೆ ಮಾಡುವ ಮಾಧುಸ್ವಾಮಿಯವರು ಮಂತ್ರಿಯ ಸ್ಥಾನದಲ್ಲಿ ಉಳಿಯಲೂ ಅನರ್ಹರು. ಒಂದು ಕಡೆ ಮಹಿಳೆಯರನ್ನು ದೇವಿಗೆ ಹೋಲಿಸುವುದು ಮತ್ತೊಂದು ಕಡೆ ಅವಕಾಶ ಸಿಕ್ಕಾಗೆಲ್ಲಾ ಅವರನ್ನ ಕೀಳು ಮಟ್ಟದಲ್ಲಿ ನಡಸಿಕೂಳ್ಳುವುದೇ ಇವರ ಸಂಸ್ಕೃತಿ.  ಮೊದಲು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಹಿಳೆಯರ ವಿಷಯದಲ್ಲಿ ಹೇಗೆ ನಡೆದುಕೊಳ್ಳಬೇಕೆಂದು ಉಳಿದ ಜನಪ್ರತಿನಿಧಿಗಳಿಗೂ ಇದು ಪಾಠವಾಗಲಿ.

ಗೌರಿ, ರಾಜ್ಯಸಮಿತಿ ಸದಸ್ಯರು

ಕರ್ನಾಟಕ ಜನಶಕ್ತಿ.

ಹೋರಾಟ ಮುಂದುವರೆಸುತ್ತೇನೆ – ನಳಿನಿ

ರೈತಸಂಘದವರು ಅಂತ ಗೊತ್ತಿರಲಿಲ್ಲ ಎಂದು ಹೇಳಿ ಇಂದು ಬೆಳಿಗ್ಗೆ ಮಾಧುಸ್ವಾಮಿಯವರು ಕ್ಷಮೆ ಕೇಳಿದ್ದರು. ಆದರೆ ಮತ್ತೆ ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ನನ್ನ ವಿರುದ್ಧವೇ ಆರೋಪ ಮಾಡಿದ್ದಾರೆ. ನಾನು ಜೋರುದನಿಯಲ್ಲಿ ಮಾತನಾಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ. ನಾನು ನನ್ನ ಹಕ್ಕನ್ನು ಕೇಳಿದ್ದೇನೆಯೇ ಹೊರತು ಮತ್ತೇನಲ್ಲ ಎಂಬುದನ್ನು ಅವರು ಮರೆಯಬಾರದು. ಅವರು ಪೊಲೀಸರ ಮಾತುಗಳನ್ನು ಕೇಳುವುದನ್ನು ಬಿಟ್ಟು ಜಿಲ್ಲಾಡಳಿತದಲ್ಲಿ ನನ್ನ ಬಗ್ಗೆ ಕೇಳಲಿ.

ನಳಿನಿ
ನಳಿನಿ

ಒಮ್ಮೆ ತಪ್ಪು ಮಾಡಿದ ಅವರು ಇಂದು ನನ್ನ ಮೇಲೆ ಕೆಟ್ಟದಾಗಿ ಮಾತನಾಡಿ ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದಾರೆ.  ಕ್ಷಮೆಯಲ್ಲಿ ಮುಗಿದುಹೋಗಬೇಕಿದ್ದ ಪ್ರಕರಣವನ್ನು ಅವರೇ ದೊಡ್ಡದು ಮಾಡುತ್ತಿದ್ದಾರೆ. ಇದರಿಂದ ನಾನು ಕುಗ್ಗುವುದಿಲ್ಲ. ಪ್ರಾಮಾಣಿಕವಾಗಿ ಹೋರಾಟ ಮುಂದುವರೆಸುತ್ತೇನೆ. ನಮ್ಮ ರೈತಸಂಘದ ಹಿರಿಯರೊಂದಿಗೆ ಸಭೆ ನಡೆಸಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ.

ನಳಿನಿ, ಜಿಲ್ಲಾಧ್ಯಕ್ಷೆ

ಕರ್ನಾಟಕ ರಾಜ್ಯ ರೈತ ಸಂಘ, ಕೋಲಾರ.


ಇದನ್ನೂ ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...