Homeಚಳವಳಿಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ಕ್ಷಮೆಯಲ್ಲಿ ಮುಗಿದುಹೋಗಬೇಕಿದ್ದ ಪ್ರಕರಣವನ್ನು ಅವರೇ ದೊಡ್ಡದು ಮಾಡುತ್ತಿದ್ದಾರೆ. ಇದರಿಂದ ನಾನು ಕುಗ್ಗುವುದಿಲ್ಲ. ಪ್ರಾಮಾಣಿಕವಾಗಿ ಹೋರಾಟ ಮುಂದುವರೆಸುತ್ತೇನೆ. ನಮ್ಮ ರೈತಸಂಘದ ಹಿರಿಯರೊಂದಿಗೆ ಸಭೆ ನಡೆಸಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ನಳಿನಿ ತಿಳಿಸಿದ್ದಾರೆ.

- Advertisement -
- Advertisement -

ರೈತ ಹೋರಾಟಗಾರ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ ತೀವ್ರ ಖಂಡನೆಗೆ ಒಳಗಾಗಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರು ತನ್ನ ತಪ್ಪಿಗೆ ಕ್ಷಮೆ ಕೇಳುತ್ತಲೇ ನಳಿನಿ ವಿರುದ್ಧ ಮತ್ತಷ್ಟು ಆರೋಪಗಳನ್ನು ಮಾಡಿ ವಿವಾದವನ್ನು ಮುಂದುವರೆಸಿದ್ದಾರೆ.

ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು “ಆಯಮ್ಮ ನನ್ನನ್ನ ಟೆಂಪ್ಟ್ ಮಾಡಿದ್ದಾರೆ, ಒಬ್ಬ ಮಂತ್ರಿ ಅವರ ಊರಿಗೆ ಹೋಗಿ ಸುಮ್ಮನೆ ಬೈಸಿಕೊಂಡು ಬರುವುದಕ್ಕಾಗುತ್ತದೆಯೇ? ಆಯಮ್ಮನಿಗೆ ಅದೇನಾಗಿತ್ತೊ ಗೊತ್ತಿಲ್ಲ. ಆಯಮ್ಮ ಬಹುಶಃ ಅದೇ ರೀತಿ ಬೆಳೆದುಕೊಂಡಬಂದಿರಬಹುದು. ಈಯಮ್ಮನ ನೇಚರ್‌ ಅಂತದ್ದು ಎಂದು ಸ್ಥಳೀಯವಾಗಿ ಹೇಳಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಮಹಿಳಾ ಮತ್ತು ರೈತ ಹೋರಾಟಗಾರರನ್ನು ಮಾತನಾಡಿಸಿತು. ಅವರ ಪ್ರತಿಕ್ರಿಯೆಗಳು ಈ ಕೆಳಗಿನಂತವೆ.

ಒಬ್ಬ ಮಹಿಳೆಯ ಎದುರು “ನಾನು ಬಹಳ ಕೆಟ್ಟ ಮನುಷ್ಯ” ಎಂದರೆ ಏನರ್ಥ? : ನಂದಿನಿ ಜಯರಾಂ ಪ್ರಶ್ನೆ

“ಮೊದಲನೆಯದಾಗಿ ನಳಿನಿಯಂತಹ ಹೆಣ್ಣು ಮಕ್ಕಳು ಸಾಮಾಜಿಕ ಹೋರಾಟಕ್ಕೆ ಬರುವುದೇ ದೊಡ್ಡದು. ಅದಕ್ಕಾಗಿ ಅವಳನ್ನು ಅಭಿನಂದಿಸಬೇಕು. ಎರಡನೇಯದಾಗಿ ಅವರೂರಿಗೆ ಬಂದಾಗ ಅವರೂರಿನ ಸಮಸ್ಯೆಯನ್ನೇ ಅವಳು ಕೇಳಿದ್ದಾಳೆ. ಈ ಮೊದಲು ಆ ಕೆರೆ ನೀರು ಹಂಚಿಕೆ ಸಂಬಂಧಿಸಿದಂತೆ ಹೋರಾಟ ಮಾಡಿ ಯಶಸ್ಸು ಕಂಡಿದ್ದಾರೆ. ಈಗ ಒತ್ತುವರಿ ಸಮಸ್ಯೆ ಗಮನಕ್ಕೆ ಬಂದಾಗ ಅದನ್ನು ಪ್ರಶ್ನಿಸಿದ್ದಾರೆ. ಆಗ ಮಾಧುಸ್ವಾಮಿಯವರು ಆ ಪ್ರಶ್ನೆಯನ್ನು ಫ್ಯೂಡಲ್‌ ಮನಸ್ಥಿತಿಯಿಂದ ನೋಡಿದ್ದಾರೆ.

ಅಷ್ಟು ಚಿಕ್ಕ ಹುಡುಗಿ ಪ್ರಶ್ನೆ ಮಾಡಿರುವುದು ಮತ್ತು ಹುಡುಗಿಯೊಬ್ಬಳು ಸಾರ್ವಜನಿಕವಾಗಿ ಪ್ರಶ್ನೆ ಮಾಡಿರುವುದನ್ನು ತಡೆದುಕೊಳ್ಳಲು ಮಾಧುಸ್ವಾಮಿಯವರಿಗೆ ಆಗಿಲ್ಲ. ಅದಕ್ಕಾಗಿ ಅವರು ಪದೇ ಪದೇ ಅವಳ ಮಾತಿನ ಧಾಟಿ ಸರಿಯಿಲ್ಲ ಅನ್ನುತ್ತಾರಲ್ಲ, ಅವರು ಸಾರ್ವಜನಿಕವಾಗಿ ಮುಚ್ಚು ಬಾಯಿ ರ್‍ಯಾಸ್ಕಲ್ ಎನ್ನುವ ಧಾಟಿ ಸರಿಯೇ? ಒಬ್ಬ ಹೆಣ್ಣು ಮಗಳಿಗೆ ನಾನು ಕೆಟ್ಟ ಮನುಷ್ಯ ಗೊತ್ತಿಲ್ಲ ನಿನಗೆ ಎಂದರೆ ಅರ್ಥವೇನು? ಇದು ಬಹಿರಂಗ ಬೆದರಿಕೆಯಲ್ಲವೇ?

ನಂದಿನಿ ಜಯರಾಂ

ರೈತಸಂಘ ಮಾಧುಸ್ವಾಮಿಯವರ ನಡೆಯನ್ನು ತೀವ್ರವಾಗಿ ಖಂಡಿಸುತ್ತದೆ. ಕ್ಷಮೆ ಕೇಳಿದರೆಂದು ನಾವು ಸುಮ್ಮನಾಗಿದ್ದೆವು. ಆದರೆ ಅವರು ತಮ್ಮ ಹೇಳಿಕೆಗಳನ್ನು ಬದಲಿಸುತ್ತಿರುವುದನ್ನು ನೋಡಿದರೆ ಕ್ಷಮೆ ಅವರ ಮನಸ್ಸಿನಿಂದ ಬಂದಿಲ್ಲ, ಬದಲಿಗೆ ತಮ್ಮ ಮೇಲಿನ ದಾಳಿಯಿಂದ ತಪ್ಪಿಸಿಕೊಳ್ಳಲಿಕ್ಕಾಗಿ ಕ್ಷಮೆ ಕೇಳಿದ್ದಾರೆಂಬುದು ಅರಿವಿಗೆ ಬರುತ್ತದೆ. ಒಂದು ಕಡೆ ಸಂಸ್ಕೃತಿಯ ಬಗ್ಗೆ ಮಾತನಾಡುವ ಅವರು ಇಲ್ಲಿ ನಾಲಿಗೆ ಹರಿಯಬಿಡುತ್ತಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.

ನಂದಿನಿ ಜಯರಾಂ, ರೈತ ಮುಖಂಡರು,

ಕರ್ನಾಟಕ ರಾಜ್ಯ ರೈತ ಸಂಘ, ಕೆ.ಆರ್‌ ಪೇಟೆ.

ತಾನೊಬ್ಬ ಕೆಟ್ಟ ಮನುಷ್ಯ ಎಂಬುದನ್ನು ತೋರಿಸಿದ್ದಾರೆ. – ಗೀತಾ.ವಿ

ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ನಮ್ಮ ಕೋಲಾರದಲ್ಲಿ ಮಹಿಳಾ ರೈತ ಮುಖಂಡರುಗಳಿಗೆ ಬಾಯಿ ಮಚ್ಚು ರ್‍ಯಾಸ್ಕಲ್‌ ಎಂದು‌ ಕೆಟ್ಟ ಭಾಷೆಯಲ್ಲಿ ಬೈದು ತಾನೊಬ್ಬ ಕೆಟ್ಟ ಮನುಷ್ಯ ಎಂದು ಬೆರಳು ತೋರಿಸಿ ಹೇಳುತ್ತಿರುವುದು ಇದೊಂದು ಖಂಡನೀಯ ವರ್ತನೆ. ಯಾವ ವ್ಯಕ್ತಿಯೂ ಈ ರೀತಿ ನಡೆದುಕೊಳ್ಳಬಾರದು. ಅದರಲ್ಲಿಯೂ ಜನಪ್ರತಿನಿಧಿಗಳು ಶಾಸಕರು, ಸಚಿವರು‌ ಅದರಲ್ಲಿಯೂ ಕಾನೂನು ಸಚಿವರಾಗಿ ಕನಿಷ್ಟ ಸಾಮಾನ್ಯ ಪ್ರಜ್ಞೆಯಿಲ್ಲದೇ ನಾಲಿಗೆ ಹರಿಬಿಟ್ಟಿದ್ದು ಅಕ್ಷಮ್ಯ. ಸಾಲದ್ದಕ್ಕೆ ಸ್ಥಳದಲ್ಲಿ ಇದ್ದ ಪುರುಷ ಪೋಲೀಸ್ ಆಕೆಯನ್ನು ತಳ್ಳಿಕೊಂಡು ಹೋಗುತ್ತಿರುವುದೂ ಕಾಣುತ್ತಿದೆ. ಇದೂ ಆಕ್ಷೇಪಾರ್ಹ ಸಂಗತಿಯೇ.

ಗೀತಾ.ವಿ

ಕನಿಷ್ಟ ಸಾಮಾನ್ಯ ಜ್ಞಾನವಿಲ್ಲದವರು ಸಚಿವರಾಗಿರುವುದು ತರವಲ್ಲ. ಅದರಲ್ಲಿಯೂ ಕಾನೂನು ಸಚಿವರಾಗಿರುವುದಂತೂ ಸುತರಾಂ ಸರಿಯಲ್ಲ. ಇವರ‌ ಮನೋಧರ್ಮ ಮನುಧರ್ಮದ ಭಾಗವೇ ಆಗಿದೆ. ಮಹಿಳೆಯರ ಬಗ್ಗೆ ಕೂಡ ಕನಿಷ್ಟ ಗೌರವವಿಲ್ಲದ ಇವರು ಕಾನೂನು ಸಚಿವರಾಗಿ‌ ಮುಂದುವರೆಯಲು ಅರ್ಹರಲ್ಲವೆಂದೇ ಬಾವಿಸಬೇಕು. ನಾವು ಇದನ್ನು ಖಂಡಿಸುತ್ತೇವೆ.

ಗೀತಾ.ವಿ, ಉಪಾಧ್ಯಕ್ಷರು
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಸಮಿತಿ.

ಪ್ರಶ್ನೆ ಮತ್ತು ನ್ಯಾಯ ಈ ಎರಡು ಪದಗಳಿಂದ ಬಿಜೆಪಿಯವರು ಬಹಳ ದೂರ. – ಗೌರಿ

ಮಂತ್ರಿಗಳಿಗೆ ಮೊದಲು ಸಂವಿಧಾನದ ಬಗ್ಗೆ, ಕಾನೂನಿನ ತರಬೇತಿ ಕೊಡುವುದನ್ನು ಕಡ್ಡಾಯ ಮಾಡಬೇಕು. ಸಾಮಾನ್ಯ ಜ್ಞಾನ ಇಲ್ಲದ ಇಂತಹವರು ಮಂತ್ರಿಗಳಾದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮಹಿಳಾ ಹೋರಾಟಗಾರ್ತಿ ನಳಿನಿ ಏನೂ ತಪ್ಪಾಗಿ ಮಾತನಾಡಿಲ್ಲ. ಸಮಾಧಾನವಾಗಿಯೇ ಸಮಸ್ಯೆಯನ್ನು ಹೇಳುತ್ತಿದ್ದಾಳೆ. ಅದನ್ನು ಮಂತ್ರಿಗೆ ಕೇಳಿಸಿಕೊಳ್ಳಲು ಸಾಧ್ಯವಿಲ್ಲವೆಂದಾದರೆ ಅದು ಯಾರ ತಪ್ಪು?

ಗೌರಿ

ಪ್ರಶ್ನೆ ಮತ್ತು ನ್ಯಾಯ ಈ ಎರಡು ಪದಗಳಿಂದ ಬಿಜೆಪಿಯವರು ಬಹಳ ದೂರ. ಹಾಗಾಗಿ ಯಾರಾದರೂ ಪ್ರಶ್ನಿಸಿದರೆ ಕೆಂಡಾಮಂಡಲವಾಗುತ್ತಾರೆ. ಇದರಿಂದ ಆ ಮಂತ್ರಿಯ ಮನೆಯ ಹೆಣ್ಣು ಮಕ್ಕಳ ಸ್ಥಾನ ಏನು ಎಂಬುದು ತಿಳಿಯುತ್ತದೆ. ಜನರ ಸಮಸ್ಯೆಗಳನ್ನು ಇವರ ಗಮನಕ್ಕೆ ತರದೆ ಇನ್ಯಾರ ಹತ್ತಿರ ಹೇಳಬೇಕು. ಆ ಮಹಿಳೆ ಹಾಗೆ ಅಂತ ಅವಳ ನಡತೆಯನ್ನು ತೇಜೋವಧೆ ಮಾಡುವ ಮಾಧುಸ್ವಾಮಿಯವರು ಮಂತ್ರಿಯ ಸ್ಥಾನದಲ್ಲಿ ಉಳಿಯಲೂ ಅನರ್ಹರು. ಒಂದು ಕಡೆ ಮಹಿಳೆಯರನ್ನು ದೇವಿಗೆ ಹೋಲಿಸುವುದು ಮತ್ತೊಂದು ಕಡೆ ಅವಕಾಶ ಸಿಕ್ಕಾಗೆಲ್ಲಾ ಅವರನ್ನ ಕೀಳು ಮಟ್ಟದಲ್ಲಿ ನಡಸಿಕೂಳ್ಳುವುದೇ ಇವರ ಸಂಸ್ಕೃತಿ.  ಮೊದಲು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಹಿಳೆಯರ ವಿಷಯದಲ್ಲಿ ಹೇಗೆ ನಡೆದುಕೊಳ್ಳಬೇಕೆಂದು ಉಳಿದ ಜನಪ್ರತಿನಿಧಿಗಳಿಗೂ ಇದು ಪಾಠವಾಗಲಿ.

ಗೌರಿ, ರಾಜ್ಯಸಮಿತಿ ಸದಸ್ಯರು

ಕರ್ನಾಟಕ ಜನಶಕ್ತಿ.

ಹೋರಾಟ ಮುಂದುವರೆಸುತ್ತೇನೆ – ನಳಿನಿ

ರೈತಸಂಘದವರು ಅಂತ ಗೊತ್ತಿರಲಿಲ್ಲ ಎಂದು ಹೇಳಿ ಇಂದು ಬೆಳಿಗ್ಗೆ ಮಾಧುಸ್ವಾಮಿಯವರು ಕ್ಷಮೆ ಕೇಳಿದ್ದರು. ಆದರೆ ಮತ್ತೆ ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ನನ್ನ ವಿರುದ್ಧವೇ ಆರೋಪ ಮಾಡಿದ್ದಾರೆ. ನಾನು ಜೋರುದನಿಯಲ್ಲಿ ಮಾತನಾಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ. ನಾನು ನನ್ನ ಹಕ್ಕನ್ನು ಕೇಳಿದ್ದೇನೆಯೇ ಹೊರತು ಮತ್ತೇನಲ್ಲ ಎಂಬುದನ್ನು ಅವರು ಮರೆಯಬಾರದು. ಅವರು ಪೊಲೀಸರ ಮಾತುಗಳನ್ನು ಕೇಳುವುದನ್ನು ಬಿಟ್ಟು ಜಿಲ್ಲಾಡಳಿತದಲ್ಲಿ ನನ್ನ ಬಗ್ಗೆ ಕೇಳಲಿ.

ನಳಿನಿ
ನಳಿನಿ

ಒಮ್ಮೆ ತಪ್ಪು ಮಾಡಿದ ಅವರು ಇಂದು ನನ್ನ ಮೇಲೆ ಕೆಟ್ಟದಾಗಿ ಮಾತನಾಡಿ ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದಾರೆ.  ಕ್ಷಮೆಯಲ್ಲಿ ಮುಗಿದುಹೋಗಬೇಕಿದ್ದ ಪ್ರಕರಣವನ್ನು ಅವರೇ ದೊಡ್ಡದು ಮಾಡುತ್ತಿದ್ದಾರೆ. ಇದರಿಂದ ನಾನು ಕುಗ್ಗುವುದಿಲ್ಲ. ಪ್ರಾಮಾಣಿಕವಾಗಿ ಹೋರಾಟ ಮುಂದುವರೆಸುತ್ತೇನೆ. ನಮ್ಮ ರೈತಸಂಘದ ಹಿರಿಯರೊಂದಿಗೆ ಸಭೆ ನಡೆಸಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ.

ನಳಿನಿ, ಜಿಲ್ಲಾಧ್ಯಕ್ಷೆ

ಕರ್ನಾಟಕ ರಾಜ್ಯ ರೈತ ಸಂಘ, ಕೋಲಾರ.


ಇದನ್ನೂ ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...