Homeಮುಖಪುಟಅಂಫಾನ್ ಹಾನಿಯ ಸಮೀಕ್ಷೆ: 83 ದಿನಗಳ ನಂತರ ಮೊದಲ ಪ್ರವಾಸ ಮಾಡಿದ ಮೋದಿ

ಅಂಫಾನ್ ಹಾನಿಯ ಸಮೀಕ್ಷೆ: 83 ದಿನಗಳ ನಂತರ ಮೊದಲ ಪ್ರವಾಸ ಮಾಡಿದ ಮೋದಿ

- Advertisement -
- Advertisement -

ಪ್ರಧಾನಿ ಮೋದಿ ಅಂಫಾನ್ ಪೀಡಿತ ಬಂಗಾಳ ಮತ್ತು ಒಡಿಶಾ ರಾಜ್ಯಗಳಿಗೆ ಚಂಡಮಾರುತದಿಂದಾದ ಹಾನಿಯ ವೈಮಾನಿಕ ಸಮೀಕ್ಷೆ ಮಾಡಲು ಇಂದು ತೆರಳಿದ್ದಾರೆ.

ಕೊರೊನಾ ಬಿಕ್ಕಟ್ಟಿನ 83 ದಿನಗಳ ನಂತರ ಪ್ರಧಾನಿ ಮೋದಿಯವರ ಮೊದಲ ಪ್ರವಾಸ ಇದಾಗಿದೆ. ಅವರ ಕೊನೆಯ ಪ್ರವಾಸ ಫೆಬ್ರವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮತ್ತು ಚಿತ್ರಕೂಟ್ ಗೆ ಆಗಿತ್ತು. ಇಂದು ಪ್ರಧಾನಿ ಅಂಫಾನ್ ಪೀಡಿತ ಕೋಲ್ಕತಾ ಮತ್ತು ಪಶ್ಚಿಮ ಬಂಗಾಳದ 24 ಉತ್ತರ ಪರಗಣ ಜಿಲ್ಲೆಗಳಿಗೆ ಹೋಗಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಅವರು ವೈಮಾನಿಕ ಸಮೀಕ್ಷೆಗಳನ್ನು ನಡೆಸುತ್ತಾರೆ ಮತ್ತು ಪರಿಶೀಲನಾ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಪರಿಹಾರ ಮತ್ತು ಪುನರ್ವಸತಿ ವಿಷಯಗಳ ಬಗ್ಗೆ ಚರ್ಚಿಸಲಾಗುವುದು” ಎಂದು ಪ್ರಧಾನ ಮಂತ್ರಿ ಕಚೇರಿ ಗುರುವಾರ ರಾತ್ರಿ ಟ್ವೀಟ್‌ನಲ್ಲಿ ತಿಳಿಸಿದೆ.
ಅತ್ಯಂತ ತೀವ್ರವಾದ ಚಂಡಮಾರುತವು ದುರ್ಬಲಗೊಂಡು ಬಾಂಗ್ಲಾದೇಶಕ್ಕೆ ಸ್ಥಳಾಂತರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

‘ಅಂಫಾನ್’ ಚಂಡಮಾರುತದಿಂದ ರಾಜ್ಯದಲ್ಲಿ ಸುಮಾರು 76 ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತ, “ರಾಜ್ಯದಲ್ಲಿ ‘ಅಂಫಾನ್’ ಚಂಡಮಾರುತದಿಂದ 76 ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಮೃತಪಟ್ಟವರ ಕುಟುಂಬಕ್ಕೆ 2.5 ಲಕ್ಷ ರೂ. ಪರಿಹಾರ ಧನ ಘೋಷಿಸಲಾಗಿದೆ , ಚಂಡಮಾರುತ ಪೀಡಿತ ಪ್ರದೇಶಕ್ಕೆ ಪ್ರಧಾನಿಯವರು ಭೇಟಿ ನೀಡಿ ಹಾನಿಗಳ ಬಗ್ಗೆ ಪರಿಶೀಲನೆ ನಡೆಸಬೇಕು” ಎಂದು ಹೇಳಿದ್ದಾರೆ.

“ಸುಂದರ್‌ಬನ್ಸ್‌ಗೆ ಭೇಟಿ ನೀಡುವಂತೆ ನಾನು ಪ್ರಧಾನ ಮಂತ್ರಿಯನ್ನು ಕೇಳಿದ್ದೇನೆ. ಈ ಬಿಕ್ಕಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡೋಣ… ಅಮಿತ್ ಶಾ ಅವರು ಇಂದು ಮಧ್ಯಾಹ್ನ ಕರೆ ಮಾಡಿ ಕೇಂದ್ರವು ಸಂಪೂರ್ಣ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದರು” ಎಂದು ಮಮತಾ ಹೇಳಿದ್ದರು.

ಘಟನೆಯ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿನ್ನೆ ಟ್ವೀಟ್ ಮಾಡಿ “ಈ ಸವಾಲಿನ ಸಮಯದಲ್ಲಿ ಚಂಡಮಾರುತದಿಂದ ಪೀಡಿತರಾದವರಿಗೆ ಸಹಾಯ ಮಾಡಲು ಇಡೀ ರಾಷ್ಟ್ರ ಬಂಗಾಳದ ಜೊತೆ ನಿಂತಿದೆ. ರಾಜ್ಯದ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದೆ. ಯಥಾಸ್ಥಿತಿಗಾಗಿ ಪ್ರಯತ್ನಗಳು ನಡೆಯುತ್ತಿವೆ” ಎಂದು ಹೇಳಿದ್ದರು.

ಗಂಟೆಗೆ 185 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಇದರಿಂದಾಗಿ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದುದರಿಂದ ವಿದ್ಯುದಾಘಾತದಿಂದಾಗಿ ಹೆಚ್ಚಿನವರು ಸಾವನ್ನಪ್ಪಿದ್ದಾರೆ ಎಂದು ಮಮತ ಬ್ಯಾನರ್ಜಿ ಹೇಳಿದ್ದಾರೆ. ಮೃತಪಟ್ಟ 72 ಜನರಲ್ಲಿ 15 ಮಂದಿ ಕೋಲ್ಕತ್ತಾದವರು ಎನ್ನಲಾಗಿದೆ.

ಚಂಡಮಾರುತದಿಂದಾಗಿ 1 ಲಕ್ಷ ಕೋಟಿ ರೂ.ಗಳ ನಷ್ಟವಾಗಬಹುದು ಎಂದು ಬುಧವಾರ ಸಂಜೆ ಮುಖ್ಯಮಂತ್ರಿ ಮಮತ ಹೇಳಿಕೊಂಡಿದ್ದರು.

ಇಂದು ಪ್ರಧಾನಿ ಮೋದಿ ಮೊದಲಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದು, ಮಧ್ಯಾಹ್ನ ನಂತರ ಒಡಿಶಾಗೆ ತೆರಳುತ್ತಾರೆ ಎಂದು ಪಿಟಿಐ ವರದಿ ಮಾಡಿದೆ.


ಓದಿ: ಅಂಫಾನ್ ಚಂಡಮಾರುತವನ್ನು ತಾಂಡವ ನೃತ್ಯ ಎಂದ ಮಮತ ಬ್ಯಾನರ್ಜಿ.


ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...