Homeಮುಖಪುಟಮೋದಿಗೆ ದುಬಾರಿ ಸೂಟ್‌ ನೀಡಿದ್ದ ಕಂಪನಿಯ ಫೇಕ್‌ ವೆಂಟಿಲೇಟರ್‌ ಹಗರಣ..

ಮೋದಿಗೆ ದುಬಾರಿ ಸೂಟ್‌ ನೀಡಿದ್ದ ಕಂಪನಿಯ ಫೇಕ್‌ ವೆಂಟಿಲೇಟರ್‌ ಹಗರಣ..

ಈ ವೆಂಟಿಲೇಟರ್‌ ತಯಾರಿಕ ಕಂಪನಿಯ ಪ್ರಸ್ತುತ ಮತ್ತು ಮಾಜಿ ಪ್ರವರ್ತಕರು ಬಿಜೆಪಿಯ ಉನ್ನತ ನಾಯಕರೊಂದಿಗೆ ನಿಕಟ ಒಡನಾಟವನ್ನು ಹೊಂದಿರುವುದು ಬೆಳಕಿಗೆ ಬಂದಿದೆ. ಇದೇ ಕಂಪನಿಯು ಈ ಹಿಂದೆ ಪ್ರಧಾನಿ ಮೋದಿಗೆ ವಿವಾದಾತ್ಮಕ ದುಬಾರಿ ಸೂಟ್‌ನ ಉಡುಗೊರೆ ನೀಡಿತ್ತು ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರವು ರಾಜ್‌ಕೋಟ್ ಮೂಲದ ಸಂಸ್ಥೆಯಿಂದ 5,000 ವೆಂಟಿಲೇಟರ್‌ಗಳನ್ನು ಖರೀದಿಸುತ್ತಿದೆ. ಆದರೆ ಈಗಾಗಲೇ ಅದೇ ಕಂಪನಿಯಿಂದ ತರಿಸಿಕೊಂಡ ವೆಂಟಿಲೇಟರ್‌ ಗಳು ಅಹಮದಾಬಾದ್‌ನ ಅತಿದೊಡ್ಡ ಕೋವಿಡ್‌-19 ಆಸ್ಪತ್ರೆಯಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಅವು ವೆಂಟಿಲೇಟರ್‌ಗಳೆ ಅಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಅಷ್ಟೇ ಅಲ್ಲದೆ, ಈ ವೆಂಟಿಲೇಟರ್‌ ತಯಾರಿಕ ಕಂಪನಿಯ ಪ್ರಸ್ತುತ ಮತ್ತು ಮಾಜಿ ಪ್ರವರ್ತಕರು ಬಿಜೆಪಿಯ ಉನ್ನತ ನಾಯಕರೊಂದಿಗೆ ನಿಕಟ ಒಡನಾಟವನ್ನು ಹೊಂದಿರುವುದು ಬೆಳಕಿಗೆ ಬಂದಿದೆ. ಇದೇ ಕಂಪನಿಯು ಈ ಹಿಂದೆ ಪ್ರಧಾನಿ ಮೋದಿಗೆ ವಿವಾದಾತ್ಮಕ ದುಬಾರಿ ಸೂಟ್‌ನ ಉಡುಗೊರೆ ನೀಡಿತ್ತು ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಗುಜರಾತ್‌ ಸರ್ಕಾರದ ಪ್ರಧಾನ ಆರೋಗ್ಯ ಕಾರ್ಯದರ್ಶಿ ಜಯಂತಿ ರವಿ ಅವರ ಪ್ರಕಾರ ವೆಂಟಿಲೇಟರ್‌ ತರಿಸಿಕೊಳ್ಳುವ ಕೆಲಸವನ್ನು ಸರ್ಕಾರಿ ಸ್ವಾಮ್ಯದ ಎಚ್‌ಎಲ್‌ಎಲ್ ಲೈಫ್‌ಕೇರ್ ಮೂಲಕ ಮಾಡಲಾಗುತ್ತಿದೆ. ಈ ತಿಂಗಳ ಆರಂಭದಲ್ಲಿ 50,000 ಭಾರತದಲ್ಲಿ ತಯಾರಿಸಿದ ವೆಂಟಿಲೇಟರ್‌ಗಳ ಖರೀದಿಗೆ 2,000 ಕೋಟಿ ರೂ ಘೋಷಿಸಿರುವುದರಿಂದ ಇದಕ್ಕೆ ಪಿಎಂ ಕೇರ್ಸ್ ಫಂಡ್ ಹಣಕಾಸಿನ ಸಂಪನ್ಮೂಲಗಳಿಂದ ಖರೀದಿಗೆ ಬೆಂಬಲ ದೊರೆಯುವ ಸಾಧ್ಯತೆಯಿದೆ ಎಂದಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ, ಜ್ಯೋತಿ ಸಿಎನ್‌ಸಿ ಆಟೊಮೇಷನ್ ಲಿಮಿಟೆಡ್ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಉಚಿತವಾಗಿ ಸರಬರಾಜು ಮಾಡಿದ ನೂರಾರು ‘ಮೇಡ್ ಇನ್ ಇಂಡಿಯಾ’ ವೆಂಟಿಲೇಟರ್‌ಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂದು ಅಲ್ಲನ ವೈದ್ಯರು ದೂರಿದ್ದಾರೆ. ಇದರ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪರಕ್ರಮ್‌ ಸಿನ್ಹ ಜಡೇಜಾರವರು ಮುಖ್ಯಮಂತ್ರಿ ವಿಜಯ್ ರೂಪಾನಿಗೆ ತೀರಾ ಹತ್ತಿರದ ಗೆಳೆಯರಾಗಿದ್ದಾರೆ.

ಅಹಮದಾಬಾದ್ ಮಿರರ್ ಮೊದಲ ಬಾರಿಗೆ ಮೇ 19 ರಂದು ವರದಿ ಮಾಡಿದಂತೆ, ಈ “ವೆಂಟಿಲೇಟರ್‌ಗಳು” COVID-19 ರೋಗಿಗಳ ಮೇಲೆ ಬಳಸಿದಾಗ ಅಸಮರ್ಪಕವೆಂದು ಸಾಬೀತಾಗಿದೆ. ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಇವುಗಳನ್ನು ಬಳಸದಂತೆ ತುತು ಎಚ್ಚರಿಕೆ ನೀಡಲಾಗಿದೆ ವೈದ್ಯರು ತಿಳಿಸಿದ್ದಾರೆ. ಅಹಮದಾಬಾದ್‌ ನಗರವು ಅತಿ ಹೆಚ್ಚು ಕೊರೊನಾ ವೈರಸ್‌ ಸಾವು ಕಂಡ ನಗರಗಳಲ್ಲಿ ಒಂದಾಗಿದೆ.

‘ಧಮನ್ -1’ ಎಂಬ ಹೆಸರಿನ ವೆಂಟಿಲೇಟರ್‌ ಯಂತ್ರಗಳನ್ನು ಗುಜರಾತ್ ಸರ್ಕಾರವು ಅತ್ಯುತ್ಸಾಹದಿಂದ ಉತ್ತೇಜಿಸಿತು ಮತ್ತು ಅದನ್ನು “ಅದ್ಭುತ ಸಾಧನೆ” ಎಂದು ಕರೆದಿತ್ತು. ಈ ಅಗ್ಗದ ವೆಂಟಿಲೇಟರ್ ಅನ್ನು 10 ದಿನಗಳಲ್ಲಿ ಉತ್ಪಾದಿಸಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಬಲವಾಗಿ ಅನುಮೋದಿಸಿದ್ದಾರೆ. ಆದರೆ ರೂಪಾನಿಯ ಉತ್ಸಾಹಕ್ಕೆ ವ್ಯತಿರಿಕ್ತವಾಗಿ ಗುಜರಾತ್‌ನ ಸರ್ಕಾರಿ ವೈದ್ಯರು ಯಂತ್ರಗಳನ್ನು ದೂರಿದ್ದಾರೆ.

“ಅದೃಷ್ಟವಶಾತ್, ಇಲ್ಲಿಯವರೆಗೆ, ನಾವು ಈ ವೆಂಟಿಲೇಟರ್‌ಗಳನ್ನು (ಜ್ಯೋತಿ ಸಿಎನ್‌ಸಿ ತಯಾರಿಸಿದ) ಕೆಲವೇ ಸಂದರ್ಭಗಳಲ್ಲಿ ಬಳಸಿದ್ದೇವೆ, ಏಕೆಂದರೆ ಉನ್ನತ ಮಟ್ಟದ ವೆಂಟಿಲೇಟರ್‌ಗಳು ನಮ್ಮೊಂದಿಗೆ ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಿವೆ. ಧಮನ್ -1 ಉನ್ನತ ಮಟ್ಟದ ವೆಂಟಿಲೇಟರ್‌ಗಳಿಗೆ ಸಮನಾಗಿಲ್ಲ. ಆದರೆ ನಿಮ್ಮ ಕೈಯಲ್ಲಿ ಬೇರೆ ಏನೂ ಇಲ್ಲದಿದ್ದಾಗ ಇದನ್ನು ತೀವ್ರ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಬಳಸಬಹುದು ”ಎಂದು ಸಿವಿಲ್ ಆಸ್ಪತ್ರೆಯ ಅರಿವಳಿಕೆ ವಿಭಾಗದ ಮುಖ್ಯಸ್ಥ ಶೈಲೇಶ್ ಷಾ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಈವರೆಗೆ 900 ವೆಂಟಿಲೇಟರ್‌ಗಳನ್ನು ರಾಜ್ಯದಲ್ಲಿ ಅಳವಡಿಸಲಾಗಿದ್ದು, ಈ ಪೈಕಿ ಕೇವಲ 230 ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿವೆ. ಈ ವೆಂಟಿಲೇಟರ್‌ಗಳಾಗಿ ರವಾನಿಸುವ ಮೂಲಕ ರಾಜ್ಯ ಸರ್ಕಾರವು ಉದ್ದೇಶಪೂರ್ವಕವಾಗಿ ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಕಾಂಗ್ರೆಸ್ ಈ ಬಗ್ಗೆ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದೆ. ಆಸ್ಪತ್ರೆಯಲ್ಲಿ ಸಂಭವಿಸಿದ 300 ಕ್ಕೂ ಹೆಚ್ಚು ಸಾವುಗಳಲ್ಲಿ ಈ ವೆಂಟಿಲೇಟರ್‌ಗಳನ್ನು ಹಾಕಿದ ರೋಗಿಗಳ ಸಂಖ್ಯೆ ಎಷ್ಟು ಎಂದು ಅದು ಪ್ರಶ್ನಿಸಿದೆ.

ಕಳೆದ ಶುಕ್ರವಾರ ಬಿಬಿಸಿ ಪತ್ರಕರ್ತರೊಬ್ಬರು ತಮ್ಮ ಸೋದರ ಮಾವ ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಧಮನ್ -1 ವೆಂಟಿಲೇಟರ್‌ ಬಳಸಲಾಗಿತ್ತೆ ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್ 5 ರಂದು ರೂಪಾನಿ ಅದನ್ನು ಪ್ರಾರಂಭಿಸುವ ಮೊದಲು ಈ ವೆಂಟಿಲೇಟರ್‌ಗಳಿಗೆ ಭಾರತದ ಡ್ರಗ್ ಕಂಟ್ರೋಲರ್ ಜನರಲ್‌ನಿಂದ ಪರವಾನಗಿ ಇಲ್ಲ ಮತ್ತು ಅದನ್ನು ಒಬ್ಬ ವ್ಯಕ್ತಿಯನ್ನು ಮಾತ್ರ ಪರೀಕ್ಷಿಸಿದ ನಂತರ ಸ್ಥಾಪಿಸಲಾಗಿದೆ ಎಂದು ಅಹಮದಾಬಾದ್ ಮಿರರ್ ವರದಿ ಮಾಡಿದೆ.

ವಿವಾದ ಭುಗಿಲೆದ್ದ ನಂತರ ಮೇ 20 ರಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸಾಮಿ ತಮ್ಮ ಕೇಂದ್ರಾಡಳಿತ ಪ್ರದೇಶವು ಧಮನ್ -1 ಯಂತ್ರಗಳ ಖರೀದಿ ಆದೇಶಗಳನ್ನು ರದ್ದುಗೊಳಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ರಾಜಕೀಯ ಸಂಬಂಧಗಳ ಬಗ್ಗೆ ಪ್ರಶ್ನೆಗಳು

ತನ್ನದೇ ವೈದ್ಯರು ಋಣಾತ್ಮಕ ಪ್ರತಿಕ್ರಿಯೆ ನೀಡಿದರೂ ಸಹ, ಗುಜರಾತ್ ಸರ್ಕಾರವು ಜ್ಯೋತಿ ಸಿಎನ್‌ಸಿಯ ವಿವಾದಾತ್ಮಕ ಯಂತ್ರಗಳನ್ನು ಬಲವಾಗಿ ಬೆಂಬಲಿಸಿದ್ದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಇದಕ್ಕೆ ಉತ್ತರವು ಸಂಸ್ಥೆಯ ಮೂಲ ಮತ್ತು ಪ್ರಸ್ತುತ ಪ್ರವರ್ತಕರು ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯಂತಹ ಉನ್ನತ ರಾಜಕಾರಣಿಗಳ ನಡುವಿನ ರಾಜಕೀಯ ಸಂಪರ್ಕಗಳಲ್ಲಿ ಅಡಗಿರಬಹುದು ಎಂದು ಕೆಲವರು ಟೀಕಿಸಿದ್ದಾರೆ.

“ರಾಜ್‌ಕೋಟ್‌ನ ಕೈಗಾರಿಕೋದ್ಯಮಿ ಕೇವಲ 10 ದಿನಗಳಲ್ಲಿ ವೆಂಟಿಲೇಟರ್‌ಗಳನ್ನು ತಯಾರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಇದನ್ನು ಶನಿವಾರದಿಂದ ರೋಗಿಗಳ ಮೇಲೆ ಬಳಸಲಾಗುತ್ತಿದೆ ” ಎಂದು ರೂಪಾನಿಯವರು ಹೇಳಿದ್ದನ್ನು ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜ್ಯೋತಿ ಸಿಎನ್‌ಸಿಯೊಂದಿಗೆ ಸಂಬಂಧಿಸಿರುವ ವ್ಯಾಪಾರ ಕುಟುಂಬಗಳಲ್ಲಿ ಒಂದಾದ ವಿರಾನಿಸ್ ಒಂದು ನಿರ್ದಿಷ್ಟ ಮಟ್ಟದ ಖ್ಯಾತಿಯನ್ನು ಅಥವಾ ಕುಖ್ಯಾತಿಯನ್ನು ಸಾಧಿಸಿದೆ – ಅದರ ಪ್ರಮುಖ ಸದಸ್ಯನು ವಿವಾದಾತ್ಮಕವಾಗ ನರೇಂದ್ರ ಮೋದಿ ಎಂದು ಬರೆದಿದ್ದ ದುಬಾರಿ ಸೂಟ್ ಅನ್ನು ನಮ್ಮ ಪ್ರಧಾನಿಗಳಿಗೆ ಉಡುಗೊರೆಯಾಗಿ ನೀಡಿದ್ದರು. ಅದನ್ನು ಮೋದಿಯವರು 2015ರಲ್ಲಿ ಬರಾಕ್ ಜೊತೆಗಿನ ಕಾರ್ಯಕ್ರಮದಲ್ಲಿ ಧರಿಸಿದ್ದರು. ಈ ಮೊಕದ್ದಮೆಯನ್ನು ಅದನ್ನು ಉದ್ಯಮಿ-ಅಭಿಮಾನಿಗಳ ಉಡುಗೊರೆ ಎಂದು ವಿವರಿಸಲಾಯಿತು. ಈ ವಿಚಾರ ತೀವ್ರ ಚರ್ಚೆಗೆ ಬಂದ ನಂತರ ಮೋದಿಯವರು ಕಾರ್ಪೊರೇಟ್ ಸ್ನೇಹಿತರ ಸಹಾಯದಿಂದ ದುಬಾರಿ ಜೀವನಶೈಲಿ ಬೆಳೆಸಿಕೊಂಡಿದ್ದಾರೆ ಎಂಬ ಆರೋಪವನ್ನು ತಿರಸ್ಕರಿಸಲು ಆ ಸೂಟ್‌ ಅನ್ನು ಹರಾಜು ಹಾಕಲಾಯಿತು. ಪ್ರತಿಪಕ್ಷಗಳು ಆ ಸೂಟ್‌ನ ಬೆಲೆ 10 ಲಕ್ಷ ರೂಗಳು ಎಂದು ಆರೋಪಿಸಿದ್ದವು.

ಉದ್ಯಮಿ, ರಮೇಶ್‌ಕುಮಾರ್ ಭಿಖಾಭಾಯ್ ವಿರಾಣಿ, ಸೂರತ್ ಮೂಲದ ವಿರಾಣಿ ಕುಟುಂಬದ ಭಾಗವಾಗಿದ್ದು, ಜ್ಯೋತಿ ಸಿಎನ್‌ಸಿಯಲ್ಲಿ ಹಲವು ವರ್ಷಗಳಿಂದ ಗಮನಾರ್ಹ ಹಣಕಾಸಿನ ಪಾಲನ್ನು ಹೊಂದಿದ್ದರು. ಉದಾಹರಣೆಗೆ, 2003-2004ರ ಅವಧಿಯಲ್ಲಿ ಕಂಪನಿಯ ಫೈಲಿಂಗ್‌ಗಳು, ಭಿಖಾಭಾಯ್ ವಿರಾನಿಯವರ ಪುತ್ರರಾದ ಅನಿಲ್ ವಿರಾನಿ ಮತ್ತು ಕಿಶೋರ್ ವಿರಾನಿಯನ್ನು ಅದರ ಎರಡು ದೊಡ್ಡ ಷೇರುದಾರರಾಗಿ ತೋರಿಸುತ್ತವೆ.

ಒಟ್ಟಿನಲ್ಲಿ ದೇಶ ಕೊರೊನಾದಂತಹ ಸಂಕಷ್ಟದ ಕಾಲದಲ್ಲಿ ಹೋರಾಡುತ್ತಿರಬೇಕಾದರೆ ರೋಗಿಗಳ ಸಾವು-ಬದುಕು ನಿರ್ಧರಿಸುವ ವೆಂಟಿಲೇಟರ್‌ಗಳ ವಿಷಯದಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಆ ಕಂಪನಿಯು ಗುಜರಾತಿನ ಸಿಎಂ ಮತ್ತು ಭಾರತದ ಪಿಎಂ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರುವುದು ಸ್ಪಷ್ಟವಾಗಿದೆ. ಈ ಕುರಿತು ಸಮಗ್ರ ತನಿಖೆಯಾಗಬೇಕಿದೆ. ಆರೋಗ್ಯದ ವಿಚಾರದಲ್ಲಿನ ನಿರ್ಲಕ್ಷ್ಯೆ ಯಾವುದೇ ಕಾರಣಕ್ಕೂ ಸಲ್ಲದು.

ಕೃಪೆ: ದಿ ವೈರ್


ಇದನ್ನೂ ಓದಿ: ‘ಡಬ್ಬಲ್ ಸ್ಟಾಂಡರ್ಡ್’ ಪ್ರಧಾನಿ: ಪಶ್ಚಿಮ ಬಂಗಾಳದ ಭೇಟಿಯ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟೀಕೆ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...