Homeಅಂಕಣಗಳುಬೀದಿಗೆ ಬಿದ್ದ ತೊಗಲುಗೊಂಬೆ ಕಲಾವಿದೆ ಗೌರಮ್ಮ

ಬೀದಿಗೆ ಬಿದ್ದ ತೊಗಲುಗೊಂಬೆ ಕಲಾವಿದೆ ಗೌರಮ್ಮ

- Advertisement -
- Advertisement -
ಎಲೆಮರೆ-32

ಊರಿಂದ ಊರಿಗೆ ಸಂಚರಿಸಿ ಸಾರ್ವಜನಿಕ ಕಾರ್ಯಕ್ರಮ ಕೊಡುತ್ತಾ ಜೀವನ ನಡೆಸುತ್ತಿದ್ದ ರಾಜ್ಯದ ಸಾವಿರಾರು ಜನಪದ ಮತ್ತು ರಂಗಭೂಮಿ ಕಲಾವಿದರು ಕೋರೋನ ಲಾಕ್‍ಡೌನ್ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲಾವಿದರಿಗೆ ಸಂಸ್ಕೃತಿ ಇಲಾಖೆ ಎರಡು ಸಾವಿರ ಧನ ಸಹಾಯ ಘೋಷಿಸಿ ಅರ್ಜಿ ಆಹ್ವಾನಿಸಿದರೂ ಆ ಹಣವಿನ್ನು ಕಲಾವಿದರಿಗೆ ತಲುಪಿಲ್ಲ. ಅಷ್ಟಕ್ಕೂ ಈ ಅರ್ಜಿ ಹಾಕಲೂ ಗೊತ್ತಾಗದ, ಗೊತ್ತಾದರೂ ಅದಕ್ಕೆ ಬೇಕಾದ ದಾಖಲಾತಿಗಳಿಲ್ಲದ ಸಾವಿರಾರು ಕಲಾವಿದರಿಗೆ ನಿತ್ಯದ ಊಟಕ್ಕೂ ಪರದಾಡುವ ಸ್ಥಿತಿ ಬಂದಿದೆ. ಹೀಗೆ ಹುಡುಕುತ್ತಾ ಹೋದರೆ ನೂರಾರು ಕಲಾವಿದರ ಗೋಳಿನ ಕಥೆಗಳನ್ನು ಕೇಳಬಹುದಾಗಿದೆ. ಅಂತಹ ಕಲಾವಿದರಲ್ಲಿ ರಾಮನಗರದ ಚಿತ್ತಂಗ್‍ವಾಡಿಯ ಅಂಚಿನಲ್ಲಿ ಪುಟ್ಟ ಗುಡಿಸಲು ಹಾಕಿಕೊಂಡು ಒಪ್ಪತ್ತಿನ ಊಟಕ್ಕೂ ಪರದಾಡುತ್ತಾ ಸಂಕಷ್ಟಕ್ಕೆ ಸಿಲುಕಿರುವವರು ಕಲಾವಿದೆ ತೊಗಲುಗೊಂಬೆ ಗೌರಮ್ಮ.

ಈ ಪುಟ್ಟ ಗುಡಿಸಲಲ್ಲಿ ಕೂತು ಗೌರಮ್ಮನ ಕಲಾ ಬದುಕಿನ ಬಗ್ಗೆ ಕೇಳಿದರೆ, ಎಲ್ಲಾ ಸಂಕಷ್ಟಗಳನ್ನು ಮರೆತು ಚೈತನ್ಯ ಮೂಡಿದಂತೆ ಗಡುಸು ಧ್ವನಿಯಲ್ಲಿ ತನ್ನ ಕಲಾ ಬದುಕಿನ ವಿವಿಧ ಘಟ್ಟಗಳನ್ನು ಹೇಳತೊಡಗುತ್ತಾರೆ. ತನ್ನ ತಂದೆ ತಾಯಿ ಇಬ್ಬರೂ ರಂಗಭೂಮಿ ಮತ್ತು ತೊಗಲುಗೊಂಬೆ ಕಲಾವಿದರು. ತೊಗಲುಗೊಂಬೆ ಚಿತ್ರಪಟಗಳ ಜತೆ ಆಟವಾಡುತ್ತಲೇ ಗೌರಮ್ಮ ಬೆಳೆಯುತ್ತಾರೆ. ಇದು ಸಹಜವಾಗಿ ಕಲಾ ಪರಂಪರೆಯ ಕೊಂಡಿಯಂತೆ ಗೌರಮ್ಮ ಬಾಲ್ಯದಲ್ಲೆ ಪುಟ್ಟಪುಟ್ಟ ಪಾತ್ರಗಳನ್ನು ಮಾಡುತ್ತಾಳೆ. ಜಗತ್ತಿನಾದ್ಯಾಂತ ಪ್ರಚಲಿತದಲ್ಲಿರುವ ತೊಗಲುಗೊಂಬೆ ಕಲೆ ಭಾರತದ ಒಂದು ಪ್ರಾಚೀನ ಕಲೆ. ಕ್ರಿ.ಪೂ ಮೂರು ಸಾವಿರದಷ್ಟು ಹಿಂದಿನದೆಂದು ಊಹಿಸಲಾಗಿದೆ. ಕಿಳ್ಳೆಕ್ಯಾತರ ಸಮುದಾಯ ಮೂಲಪುರುಷ ಮಹಾಭಾರತದ ವನವಾಸದಲ್ಲಿ ಪಾಂಡವರನ್ನು ತೊಗಲುಗೊಂಬೆ ಆಡಿಸಿ ಮನರಂಜಿಸಿದ್ದ ಎನ್ನುವ ದಂತಕತೆಗಳಿವೆ. ಕನ್ನಡದ ಪ್ರಾಚೀನ ಪಠ್ಯಗಳಲ್ಲಿಯೂ ತೊಗಲುಗೊಂಬೆಯಾಟದ ಉಲ್ಲೇಖಗಳಿವೆ. ಕಿಳ್ಳೇಕ್ಯಾತ ಸಮುದಾಯಕ್ಕೆ ಸೇರಿದ ಕಲಕೇತ ಬೊಮ್ಮಯ್ಯ ಎಂಬ ವಚನಕಾರ 12 ನೇ ಶತಮಾನದಲ್ಲಿದ್ದ ಎನ್ನುವ ಚರ್ಚೆಗಳಿವೆ.

ಕರ್ನಾಟಕದ ಬೇರೆ ಬೇರೆ ಕಡೆಗಳಲ್ಲಿ ತೊಗಲುಗೊಂಬೆಯಾಟವನ್ನು ಬೇರೆ ಬೇರೆ ಪ್ರಾದೇಶಿಕ ಹೆಸರುಗಳಿಂದ ಕರೆಯುತ್ತಾರೆ. ಹಗರಿಬೊಮ್ಮನಹಳ್ಳಿಯ ಪಕ್ಕದ ಯಡ್ರಾಮನಹಳ್ಳಿ ದೊಡ್ಡಭರಮಪ್ಪ, ಬೆಳಗಲ್ ವೀರಣ್ಣನಂತವರು ತೊಗಲುಗೊಂಬೆಯಾಟವನ್ನು ವಿದೇಶಗಳಲ್ಲಿಯೂ ಜನಪ್ರಿಯಗೊಳಿಸಿದ್ದಾರೆ. ಇಂತಹ ಕಿಳ್ಳೇಕ್ಯಾತರ ತೊಗಲುಗೊಂಬೆಯಾಟದಲ್ಲಿ ಗಂಡಸರು ಹೆಚ್ಚು ಪ್ರಸಿದ್ಧಿಗೆ ಬಂದಿದ್ದಾರೆ. ಆದರೆ ತೆರೆಮರೆಯಲ್ಲಿ ತೊಗಲುಗೊಂಬೆಯಾಡಿಸುವ ಮಹಿಳೆಯರು ಹೆಚ್ಚು ಪ್ರಚಾರಕ್ಕೆ ಬಂದಿಲ್ಲ. ರಾಮನಗರ ಭಾಗದಲ್ಲಿ ಗೌರಮ್ಮ ತೊಗಲು ಗೊಂಬೆ ಕಲೆಯನ್ನು ಜನಪ್ರಿಯಗೊಳಿಸಿದ್ದಾರೆ. ಮುಖ್ಯವಾಗಿ ಚರ್ಮ ಹದ ಮಾಡಿ, ಬಣ್ಣ ಹೊಂದಿಸಿ, ತೊಗಲುಗೊಂಬೆ ರಚಿಸಿವುದರಿಂದ ಹಿಡಿದು ಮೂವತ್ತಕ್ಕೂ ಹೆಚ್ಚು ಕಥೆಗಳನ್ನು ತೊಗಲುಗೊಂಬೆಯಲ್ಲಿ ಪ್ರದರ್ಶನ ಮಾಡುವಷ್ಟು ಗೌರಮ್ಮ ಕಲಾ ಪ್ರವೀಣೆಯಾಗಿದ್ದಾರೆ. ಮುಖ್ಯವಾಗಿ ಗೌರಮ್ಮ ಹರಿಕಥೆಯನ್ನೂ ಹೇಳುವ ರಂಗ ಕಲಾವಿದೆ ಕೂಡ. ಈ ಕಾರಣ ಗೌರಮ್ಮನ ತೊಗಲುಗೊಂಬೆಯಾಟಕ್ಕೆ ಒಂದು ವಿಶೇಷ ಚಹರೆ ಬಂದಿದೆ.

`ನಾನು ರಂಗಭೂಮಿ ಕಲಾವಿದೆ ಕೂಡ. ಹರಿಕಥೆಯಲ್ಲಿ ಮಾತಾಡಿ ಮಾತಾಡಿ ಗಂಟಲು ಸ್ವಲ್ಪ ಒರಟಾಗಿ ಗಂಡಸಿನ ಧ್ವನಿ ಆದಂಗೆ ಆಗಿದೆ. ಹೀಗಾಗಿ ನನ್ನ ಧ್ವನಿ ಹೆಣ್ಣು ಪಾತ್ರಗಳಿಗೆ ಸರಿ ಹೋಗಲ್ಲ. ಹಂಗಾಗಿ ಹೆಣ್ಣು ಪಾತ್ರಗಳನ್ನು ನಾನು ಮಾಡೋಲ್ಲ. ಕೇವಲ ಗಂಡು ಪಾತ್ರಗಳನ್ನು ಮಾತ್ರ ಮಾಡ್ತೀನಿ. ರಾಮಾಯಣದಲ್ಲಿ ದಶರಥ, ಕುರುಕ್ಷೇತ್ರದಲ್ಲಿ ಭೀಮ, ರಾಜಾ ಸತ್ಯವ್ರತದಲ್ಲಿ ದೇವೇಂದ್ರ, ಸಾವಿತ್ರಿಯಲ್ಲಿ ಸತ್ಯವಂತ, ಸದಾರಮೆಯಲ್ಲಿ ರಾಜ ಮಾರ್ತಾಂಡ, ಆಂಜನೇಯ ಮುಂತಾದ ಬರೀ ಗಂಡು ಪಾತ್ರಗಳನ್ನು ಮಾಡುವೆ’ ಎಂದು ತನ್ನ ರಂಗಭೂಮಿ ನಂಟನ್ನು ಹಂಚಿಕೊಳ್ಳುತ್ತಾರೆ.

ಗೌರಮ್ಮನಿಗೆ ಇಬ್ಬರು ಮಕ್ಕಳು, ಒಬ್ಬರು ತಬಲಾ ಸಾತಿ, ಮತ್ತೊಬ್ಬರು ಡ್ರಾಮಾ ಮೇಷ್ಟ್ರು. ಇಬ್ಬರೂ ನಾಟಕ ಕಲಿಸುವ ಕಲಾವಿದರು. ಗೌರಮ್ಮ ಇಬ್ಬರ ಬಳಿಯೂ ಇಲ್ಲ. `ಈಗಿನ ಕಾಲದ್ ಸೊಸೆಯಂದ್ರತ್ರ ಹೆಚ್ಚು ಮಾತಾಡಿದ್ರೆ ಮನೆ ಹೊಡೆದೋಗುತ್ತೆ. ಹೆಂಗೋ ಬದುಕೊಳ್ರೀ ಅಂತ ಬಿಟ್ ಬಿಟ್ಟಿದಿನಿ. ನನ್ನ ಪಾಡಿಗೆ ನಾನಿದಿನಿ, ಎಸ್ಸಿ ಜನ ಹನುಮಂತು ಅನ್ನೋರ ಹೊಲದಲ್ಲಿ ಕೇಳಿಕೊಂಡ್ ಒಂದ್ ಸಣ್ಣ ಸೊಪ್ಪಿನ ಗುಡ್ಲು ಹಾಕೊಂಡು ಕಾಲ ಕಳಿತಿದೀನಿ. ಮೂರು ದೊಡ್ ದೊಡ್ ಆಪರೇಷನ್ ಆಗಿವೆ. ನಡೆದಾಡೋಕೆ ಆಗಲ್ಲ. ಕೂತಲ್ಲೆ ಎಲೆ ಅಡಿಕೆ ಖರ್ಚಿಗೆ ಬಳೆ ಯಾಪಾರ ಮಾಡ್ತಿದ್ದೆ. ಈ ಕೊರೋನ ಅಡ್ಡ ಬಂದು ಅದೂನು ನಿಂತೋಗಿದೆ, ಈಗ ಉಣ್ಣೋಕು ಕಷ್ಟ ಆಗೇತಿ’ ಎನ್ನುತ್ತಾರೆ.

ಇದೀಗ 66 ವರ್ಷದ ಗೌರಮ್ಮ ಈತನಕ ಎರಡು ಮೂರು ಬಾರಿ ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದರೂ ಕಲಾವಿದರ ಮಾಶಾಸನ ಈ ತನಕವೂ ಬಂದಿಲ್ಲ. ತನ್ನ ಆರೋಗ್ಯವೂ ಸರಿ ಇಲ್ಲದ ಕಾರಣ `ಏನಾದ್ರೂ ಮಾಡಾಣ ಅಂದ್ರೆ ಬದುಕಿನ ದೋಣಿನೇ ಮುರುಕಲು ಆಗೋಗಿದೆ’ ಎಂದು ಒಗಟಾಗಿ ನೋವಿನಿಂದ ನುಡಿಯುತ್ತಾರೆ. ಈಗಲೂ ಆಡ್ಸೋರು ಈಳ್ಯೆ ಕೊಟ್ರೆ ತನ್ನ ಶಿಷ್ಯರ ತಂಡಗಳನ್ನು ಕರೆಸಿ ತೊಗಲುಗೊಂಬೆಯಾಟ ಆಡಿಸುವ ಗೌರಮ್ಮ ಯಾರಾದರೂ ಕಲಿಯುವ ಆಸಕ್ತಿ ಇದ್ದವರು ಬಂದರೆ ಕಲಿಸಿಕೊಡುವೆ, ಯಾರಿಗಾದರೂ ಗೊಂಬೆಗಳು ಬೇಕಾದರೆ ಮಾಡಿಕೊಡುವೆ, ಒಟ್ನಲ್ಲಿ ಕಲೆ ಉಳಿದ್ರೆ ಸಾಕು, ಸ್ಕೂಲ್ ಮಕ್ಕಳಿಗೆ ಕಲಿ-ನಲಿ ಕಾರ್ಯಕ್ರಮದಲ್ಲಿ ಸ್ಕೂಲಲ್ಲಿ ಇರೋ ಪಾಠಗಳನ್ನೆ ಗೊಂಬೆ ಮಾಡಿ ಗೊಂಬೆಯಾಟ ಆಡ್ಸಿದಿವಿ’ ಎನ್ನುತ್ತಾರೆ.

ನಾವು ಪ್ರಾಣ ಹೋದ್ರೂನು ಗೊಂಬೆಗಳನ್ನು ಕಳೆಯೋದಿಲ್ಲ ಎನ್ನುವ ಗೌರಮ್ಮ ತಾನಿರುವ ಗುಡಿಸಲಲ್ಲಿ ಗೊಂಬೆ ಮಡಗೋಕೆ ಜಾಗ ಇಲ್ಲದ್ದಕ್ಕೆ, ಒಂದಕ್ಕೊಂಡು ಕಚ್‍ಕೊಂಡು ಬಣ್ಣನೆಲ್ಲ ಬಿಟ್ಟು ಕೆಟ್ಟೋಗತ್ತೆ ಅಂತ ಗೊಂಬೆಗಳನ್ನು ತನ್ನ ತವರು ಮನೆ ಬೆಳ್ಳೂರು ಪಕ್ಕ ಬೆಟ್ಟುಕೊಂಡನಹಳ್ಳಿಯಲ್ಲಿ ಇಟ್ಟಿದ್ದಾರೆ. `ನನ್ನ ಶಿಷ್ಯರೆಲ್ಲಾ ಬೆಳ್ಳೂರು ನಾಗಮಂಗಲ, ಕಲ್ಲೂರು ಭಾಗದಲ್ಲೆ ಇದಾರೆ. ಒಟ್ಟು ಅವರ 13 ತಂಡಗಳಿವೆ’ ಎನ್ನುವ ಗೌರಮ್ಮ, `ಈ ಸರಕಾರಕ್ಕೆ ಕಣ್ಣಿಲ್ಲ ಸರ್ ಗೋರ್ಮೆಂಟಿನೋರು ಒಂದು ಮನೆ ಕೊಟ್ರೆ, ಕಲಾವಿದರ ಮಾಶಾಸನ ಮುಂಜೂರು ಮಾಡಿದ್ರೆ ಸಾಕು ಸಾಯೋ ಕಾಲದಲ್ಲಿ ನಾಕು ದಿನನಾದ್ರೂ ನೆಮ್ಮದೀಲಿ ಬದುಕಿ ಸಾಯ್ತೀನಿ ಇದೊಂದೆ ಸರ್ ನನ್ನ ಆಸೆ’ ಎನ್ನುತ್ತಾರೆ.

ರಾಮನಗರ ಭಾಗದಲ್ಲಿ ಇಂತಹ ಜನಪದ ಕಲಾವಿದರನ್ನು ಹುಡುಕಿ, ಅವರುಗಳ ಸಂದರ್ಶನ ಮಾಡಿ ಪತ್ರಿಕೆಗಳಿಗೆ ಬರೆದು, ಸಂಬಂಧಿಸಿದ ಅಧಿಕಾರಿಗಳ ಗಮನ ಸೆಳೆದು ಕಲಾವಿದರಿಗೆ ನೆರವಾಗುವ ಕೆಲಸವನ್ನು ಯುವ ಪತ್ರಕರ್ತ ರುದ್ರೇಶ್ ಮಾಡುತ್ತಿದ್ದಾರೆ. ಹಿಂದೊಮ್ಮೆ ಗುಬ್ಬಿವೀರಣ್ಣನ ಸೊಸೆ ಶಾಂತಮ್ಮನ ಬಗ್ಗೆ ಬರೆದಾಗಲೂ ರುದ್ರೇಶ್ ಪರಿಚಯಿಸಿದ್ದರು. ಈ ಗೌರಮ್ಮನ ಬಗ್ಗೆ ಗಮನಸೆಳೆದವರೂ ಕೂಡ ರುದ್ರೇಶ್ ಅವರೆ. ಗೌರಮ್ಮನ ಕುರಿತು ಹಿಂದೆ ಪ್ರಜಾವಾಣಿಯ ಪ್ರಾದೇಶಿಕ ಪುಟದಲ್ಲಿ ಬರೆದಿದ್ದರು. ರುದ್ರೇಶ್ ಹೇಳುವಂತೆ `ಗೌರಮ್ಮನಂಥಹ ದೊಡ್ಡ ಕಲಾವಿದರಿಗೆ ಸರಕಾರ ಮಾಶಾಸನವನ್ನೂ ಕೊಡದಿರುವುದು ದುರಂತ. ಈ ಭಾಗದ ಜನಪ್ರತಿನಿಧಿಗಳು ಇಂತಹ ಕಲಾವಿದರನ್ನು ಪ್ರೋತ್ಸಾಹಿಸಬೇಕು. ನಾನೊಬ್ಬ ಪತ್ರಕರ್ತನಾಗಿ ಕಲಾವಿದರನ್ನು ಪರಿಚಯಿಸಬಹುದು, ಸಣ್ಣಪುಟ್ಟ ನೆರವು ನೀಡಬಹುದು. ಆದರೆ ಸರಕಾರ ನೆರವಿನ ಅಗತ್ಯವಿದೆ’ ಎನ್ನುತ್ತಾರೆ. ಕೊರೋನ ಲಾಕ್‍ಡೌನ ಪರಿಣಾಮ ಗೌರಮ್ಮನಂತಹ ಸಾವಿರಾರು ರಂಗಭೂಮಿ ಮತ್ತು ಜನಪದ ಕಲಾವಿದರು ಇಂದು ಬೀದಿಗೆ ಬಿದ್ದಿದ್ದಾರೆ. ಅವರ ಚೇತರಿಕೆಗೆ ಸರಕಾರದ ಯೋಜನೆಗಳು ಕಣ್ಣುಬಿಟ್ಟು ನೋಡಬೇಕಾಗಿದೆ. ಅಂತೆಯೇ ವಯಕ್ತಿಕ ನೆಲೆಯಲ್ಲಿ ಇಂತಹವರನ್ನು ಗುರುತಿಸಿ ಕೈಲಾದಷ್ಟು ನೆರವು ನೀಡಬೇಕಾಗಿದೆ.

ಈ ಬರಹ ಓದಿದವರು, ಗೌರಮ್ಮನಿಗೆ ನೆರವಾಗುವ ಮನಸ್ಸಿದ್ದರೆ ಈ ನಂಬರಿಗೆ ಸಂಪರ್ಕಿಸಿ. 9731049042.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಚಿಕೆಯಾಗಬೇಕು, ಕರೋನ ಕರಾಳತೆಯಲ್ಲೂ ಹಣ ಲೂಟಿ ಮಾಡುವ ಈ ಕಡು ಭ್ರಷ್ಟರಿಗೆ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...