Homeಅಂತರಾಷ್ಟ್ರೀಯಕರಾಚಿ: 99 ಪ್ರಯಾಣಿಕರು ಹಾಗೂ 8 ಸಿಬ್ಬಂದಿಗಳಿದ್ದ ವಿಮಾನ ಪತನ

ಕರಾಚಿ: 99 ಪ್ರಯಾಣಿಕರು ಹಾಗೂ 8 ಸಿಬ್ಬಂದಿಗಳಿದ್ದ ವಿಮಾನ ಪತನ

- Advertisement -
- Advertisement -

ಲಾಹೋರ್ ನಿಂದ ಕರಾಚಿಗೆ ಹೊರಟಿದ್ದ 99  ಪ್ರಯಾಣಿಕರು ಹಾಗೂ 8 ಸಿಬ್ಬಂದಿಗಳಿದ್ದ ಪಾಕಿಸ್ತಾನ್ ಇಂಟರ್ ನ್ಯಾಶನಲ್ ಏರ್ ಲೈನ್ಸ್ ವಿಮಾನವೊಂದು ಭೂಸ್ಪರ್ಶಕ್ಕೆ ನಿಮಿಷಗಳಿರುವಾಗ ಪತನಗೊಂಡಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ್ ಇಂಟರ್ ನ್ಯಾಶನಲ್ ಏರ್ ಲೈನ್ಸ್ ಇದರ ‘ಏರ್‌ ಬಸ್ ಎ320’ ಲಾಹೋರ್ ನಿಂದ ಕರಾಚಿಗೆ ತೆರಳುತ್ತಿತ್ತು ಎನ್ನಲಾಗಿದೆ. ಕರಾಚಿಯ ವಿಮಾನ ನಿಲ್ದಾಣದ ಸನಿಹದಲ್ಲೇ ಇರುವ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎನ್ನಲಾಗಿದೆ. ಈ ಪ್ರದೇಶ ತುಂಬಾ ದಟ್ಟ ಹೊಗೆ ತುಂಬಿರುವುದನ್ನು ಸ್ಥಳೀಯ ಸುದ್ದಿವಾಹಿನಿಗಳು ಪ್ರಸಾರ ಮಾಡಿವೆ.

ಅಫಘಾತದಲ್ಲಿ ಬದುಕುಳಿದವರ ಬಗ್ಗೆ ಇನ್ನೂ ಯಾವುದೇ ವರದಿಗಳಿಲ್ಲ. ವಿಮಾನವು ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರದ ಜನನಿಬಿಡ ವಸತಿ ಪ್ರದೇಶಕ್ಕೆ ಬಿದ್ದಿದೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಭಗ್ನಾವಶೇಷ ಮತ್ತು ಹಲವಾರು ಮನೆಗಳಿಗೆ ಬೆಂಕಿ ತಗುಳಿರುವುದನ್ನು ಪಾಕಿಸ್ತಾನ ಮಾಧ್ಯಮಗಳ ದೃಶ್ಯಗಳು ತೋರಿಸಿವೆ.

“ಕರಾಚಿಯಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. 99 ಪ್ರಯಾಣಿಕರು ಮತ್ತು ಎಂಟು ಸಿಬ್ಬಂದಿ ಇದ್ದರು ನಾವು ಪ್ರಯಾಣಿಕರ ಸಂಖ್ಯೆಯನ್ನು ಖಚಿತಪಡಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ದೇಶದ ವಾಯುಯಾನ ಪ್ರಾಧಿಕಾರದ ವಕ್ತಾರ ಅಬ್ದುಲ್ ಸತ್ತಾರ್ ಖೋಖರ್ ಹೇಳಿದ್ದಾರೆ.

ಕರಾಚಿಯ ಎಲ್ಲಾ ಪ್ರಮುಖ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಪಾಕಿಸ್ತಾನದ ನಾಗರಿಕ ವಿಮಾನಯಾನ ಪ್ರಾಧಿಕಾರದ ಮೂಲಗಳನ್ನು ಉಲ್ಲೇಖಿಸಿದ ಸುದ್ದಿ ಸಂಸ್ಥೆ ಪಿಟಿಐ ವಿಮಾನ ಇಳಿಯಲು ಒಂದು ನಿಮಿಷ ಮೊದಲು ಸಂಪರ್ಕ ಕಡಿತಗೊಂಡಿತ್ತು ಎಂದು ಹೇಳಿದೆ.

ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಸಹಾಯ ಮಾಡಲು ಪಾಕ್ ಆರ್ಮಿ ಕ್ವಿಕ್ ರಿಯಾಕ್ಷನ್ ಫೋರ್ಸ್ ಮತ್ತು ಪಾಕಿಸ್ತಾನ ರೇಂಜರ್ಸ್ ಅಪಘಾತದ ಸ್ಥಳದಲ್ಲಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದೆ.

ಕೊರೋನ ವೈರಸ್ ಸಾಂಕ್ರಾಮಿಕ ರೋಗದ ಬಿಕ್ಕಟ್ಟಿನ ನಂತರ ಲಾಕ್ ಡೌನ್ ನಂತರ ವಾಣಿಜ್ಯ ವಿಮಾನಗಳನ್ನು ಪುನರಾರಂಭಿಸಲು ಪಾಕಿಸ್ತಾನ ಅನುಮತಿಸಿದ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.

2016 ರಲ್ಲಿ ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್ ವಿಮಾನವೊಂದು ಇಸ್ಲಾಮಾಬಾದ್ ಗೆ ಹಾರಾಟ ನಡೆಸುತ್ತಿದ್ದಾಗ ಪತನಗೊಂಡದ್ದರಿಂದ 40 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.


ಓದಿ: ‘ಡಬ್ಬಲ್ ಸ್ಟಾಂಡರ್ಡ್’ ಪ್ರಧಾನಿ: ಪಶ್ಚಿಮ ಬಂಗಾಳದ ಭೇಟಿಯ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟೀಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...