Homeಮುಖಪುಟಓಟಿಟಿ ಗಮ್ಮತ್ತು; ಚಿತ್ರಮಂದಿರಗಳಿಗೆ ಎದುರಾಗಿದೆ ಕುತ್ತು!

ಓಟಿಟಿ ಗಮ್ಮತ್ತು; ಚಿತ್ರಮಂದಿರಗಳಿಗೆ ಎದುರಾಗಿದೆ ಕುತ್ತು!

- Advertisement -
- Advertisement -

ಬದಲಾವಣೆ ಜಗದ ನಿಮಯ’ ಎಂಬುದು ಸಾಮಾನ್ಯವಾಗಿ ಎಲ್ಲಾ ವಿಚಾರಗಳಲ್ಲಿ ಬಳಕೆಯಾಗುತ್ತಿರುವ ಬದಲಾಗದ ಸಾಲು. ಬದಲಾವಣೆಯ ಹಾದಿಯಲ್ಲಿ ತಂತ್ರಜ್ಞಾನಗಳೂ ಬದಲಾಗುತ್ತಿವೆ. ಅಂದರೆ ಹೊಸ ಹೊಸ ಆವಿಷ್ಕಾರಗಳು ತೆರೆದುಕೊಳ್ಳುತ್ತಿವೆ. ಇದು ಮನರಂಜನಾ ಕ್ಷೇತ್ರಗಳನ್ನೂ ವ್ಯಾಪಿಸುತ್ತಿದೆ.

ಸಮಾಜದಲ್ಲಿರುವ ಎಲ್ಲಾ ವರ್ಗದ ಜನರು ರೇಡಿಯೋ ಬಳಸುವ ಹೊತ್ತಿಗೆ ಟಿವಿಗಳು ಲಗ್ಗೆ ಇಟ್ಟಿದ್ದವು. ಪಟ್ಟಣಗಳಲ್ಲಿ ಸಿನಿಮಾ ಟೆಂಟ್‍ಗಳು ತಲೆ ಎತ್ತಿದ್ದವು. ಟಿವಿ ಎಲ್ಲಾ ಮನೆಗಳನ್ನೂ ತಲುಪುವ ವೇಳೆಗೆ 21ನೇ ಶತಮಾನದ ಮೊದಲ ದಶಕ ಕಳೆದೇ ಹೋಗಿತ್ತು. ಟಿವಿಗಳಲ್ಲಿ ವಾರಕ್ಕೊಮ್ಮೆ ಪ್ರಸಾರವಾಗುವ ಸಿನಿಮಾಗಳಿಗಾಗಿ ಕಾದುಕುಳಿತಿರುತ್ತಿದ್ದ ಕಾಲವದು. ಆಗ ಚಿತ್ರಮಂದಿರಗಳಲ್ಲಿ ಹಣಕೊಟ್ಟ ಸಿನಿಮಾ ನೋಡಲಾಗದವರು ಹೊಸ ಸಿನಿಮಾಗಳಿಗಾಗಿ ವರ್ಷಗಳಟ್ಟಲೆ ಕಾಯಬೇಕಾಗಿತ್ತು. ಇದೆಲ್ಲವೂ ಕೇವಲ ನಾಲ್ಕೈದು ವರ್ಷಗಳ ಹಿಂದಿನ ಕತೆಗಳಷ್ಟೇ.

ಈ ನಡುವೆ ಟೆಕ್ನಾಲಜಿ ಬೆಳೆದಂತೆ ಪೈರಸಿಯ ಹವಾ ಶುರುವಾಯಿತು. ಸಿನಿಮಾಗಳನ್ನು ಕದ್ದು ಮಾರುವುದು, ಕ್ಯಾಮೆರಾ ಪ್ರಿಂಟ್‍ನಲ್ಲಿ ಚಿತ್ರಿಸಿ ಹಂಚುವುದು ಬೆಳೆಯಿತು. ಆದರೆ, ಇವು ಕ್ವಾಲಿಟಿಯನ್ನು ಹೊಂದಿರಲಿಲ್ಲ.

ಹೊಸ ಸಿನಿಮಾಗಳಿಗಾಗಿ ಕಾಯುವ ತಾಳ್ಮೆಯೂ ಇಲ್ಲದ, ಹೆಚ್ಚು ಹಣಕೊಟ್ಟು ಥಿಯೇಟರ್‍ಗಳಿಗೆ ಹೋಗಲಾಗದವರ ಅಥವಾ ಥಿಯೇಟರ್‍ಗಳಿಗೆ ಹೋಗುವಷ್ಟು ಸಮಯವೇ ಇಲ್ಲದವರ ಸಮಸ್ಯೆಗಳನ್ನು ನೀಗಿಸಿದ್ದೇ ಓಟಿಟಿಗಳು. ‘ಓವರ್ ದಿ ಟಾಪ್’ ಎಂಬುದೇ ಓಟಿಟಿ. ಅಂದರೆ ನಾವು ಬಳಸುತ್ತಿರುವ ನೆಟ್‍ಫ್ಲಿಕ್ಸ್, ಅಮೆಜಾನ್ ಪ್ರೈಮ್, ವೂಟ್ ಮೊದಲಾದ ಡಿಜಿಟಲ್ ಮೀಡಿಯಾಗಳನ್ನು ಓಟಿಟಿ ಎಂದು ಕರೆಯಲಾಗುತ್ತದೆ.

ಓಟಿಟಿ ಪ್ಲಾಟ್ ಫಾರ್ಮ್‍ಗಳು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾದ ಸಿನಿಮಾಗಳನ್ನು ಒಂದು ತಿಂಗಳ ಕಾಲಮಿತಿಯೊಳಗೇ ಜನರಿಗೆ ತಲುಪಿಸುತ್ತಿವೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಿನಿಮಾಗಳಷ್ಟೇ ಅಲ್ಲದೆ, ವೆಬ್ ಸೀರೀಸ್‍ಗಳು, ಡಾಕ್ಯುಮೆಂಟರಿಗಳು, ಕಿರುಚಿತ್ರ, ಧಾರಾವಾಹಿಗಳು ಸೇರಿದಂತೆ ವಿಭಿನ್ನ ಮನರಂಜನೆ ಮತ್ತು ಜ್ಞಾನವನ್ನು ಪೂರೈಸುತ್ತಿವೆ.

ಒಟಿಟಿ ಅಂದರೆ ನೇರವಾಗಿ ಕಂಟೆಂಟ್ (ಮೀಡಿಯಾ)ಗಳನ್ನು ಇಂಟರ್‍ನೆಟ್ ಮೂಲಕ ಕೇಬಲ್, ಟೆಲಿಕಮ್ಯುನಿಕೇಷನ್ ಇತರ ತಡೆಗಳಿಲ್ಲದೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತವೆ. ಇಂತಹ ಟಿಟಿಗಳಲ್ಲಿ ಅಮೇಜಾನ್ ಪ್ರೈಮ್ ಮತ್ತು ನೆಟ್‍ಫ್ಲಿಕ್ಸ್‍ಗಳು ಭಾರತದಲ್ಲಿ ಹೆಚ್ಚು ಪ್ರಸಿದ್ದವಾಗಿವೆ. ವಾರ್ಷಿಕ ಚಂದಾ ನೀಡಿ ಸಬ್‍ಸ್ಕ್ರಿಪ್ಶನ್ ಪಡೆದುಕೊಂಡರಷ್ಟೇ ಸಾಕು. ಒಂದು ವರ್ಷದ ಅವಧಿಗೆ ಎಲ್ಲಾ ರೀತಿಯ ಮನರಂಜನೆಯನ್ನು ಇವು ಒದಗಿಸುತ್ತವೆ. ಅಲ್ಲದೆ, ಒಂದು ಚಂದಾದಾರರಾದರೆ 5 ಟಿವಿ ಅಥವಾ ಮೊಬೈಲ್‍ಗಳಲ್ಲಿ ಸೇವೆಯನ್ನು ಪಡೆಯಬಹುದಾಗಿದೆ. ನಮ್ಮ ಚಿತ್ರಮಂದಿರಗಳಿಗೆ ಬಾರದೇ ಹೋಗುವ ಜಾಗತಿಕ ಸಿನೆಮಾಗಳನ್ನೂ ಈ ಒಟಿಟಿಗಳ ಫ್ಲಾಟ್‍ಫಾಂಗಳ ಮೂಲಕ ಮನೆಯಿಂದಲೇ ವೀಕ್ಷಿಸಬಹುದಾಗಿದೆ.

ಹೆಚ್ಚುತ್ತಿರುವ ಓಟಿಟಿ ಬೇಡಿಕೆ:

4ಜಿ/5ಜಿ ಅಂತರ್ಜಾಲದ ಡಿಜಿಟಲ್ ಸೇವೆಗಳ ಯುಗದಲ್ಲಿ ಓಟಿಟಿ ವೇದಿಕೆಯು ಜಗತ್ತಿನಾದ್ಯಂತ ಡಿಮಾಂಡ್ ಪಡೆದುಕೊಳ್ಳುತ್ತಿದೆ. ಇದಕ್ಕೆ ಭಾರತವೂ ಹೊರತಾಗಿಲ್ಲ. ಅಂತರಾಷ್ಟ್ರೀಯ ವೃತ್ತಿ ಕೌಶಲ್ಯ ಸೇವೆಗಳ ಕಂಪನಿ ಪ್ರೈಸ್ ವಾಟರ್‍ಹೌಸ್ ಕೂಪರ್ಸ್(ಪಿಡಬ್ಲೂಸಿ) ವರದಿಯ ಪ್ರಕಾರ 2018 ಮುಗಿಯುವ ವೇಳೆಗೆ ಭಾರತದಲ್ಲಿ ಓಟಿಟಿ ವಿಡಿಯೋ ಸೇವೆಗಳ ಮಾರುಕಟ್ಟೆ 63.8ಕೋಟಿ ಡಾಲರ್ (ಸುಮಾರು ರೂ 4,466 ಕೋಟಿ)ಗಳಿಗೆ ತಲುಪಿತ್ತು. 2023ರ ಹೊತ್ತಿಗೆ ವಾರ್ಷಿಕವಾಗಿ 21.8% ರಷ್ಟು ವೃದ್ದಿಯಾಗಲಿದ್ದು, 170 ಕೋಟಿ ಡಾಲರ್ (ರೂ.11,900ಕೋಟಿಗಳಿಗೆ) ತಲುಪಲಿದೆ ಎಂದು ಅಂದಾಜು ಮಾಡಲಾಗಿದೆ.

ಓಟಿಟಿಗಳ ಸಬ್‍ಸ್ಕ್ರಿಪ್ಷನ್ ಡಿಮಾಂಡ್ ವಾರ್ಷಿಕವಾಗಿ 23.3%ರಷ್ಟು ವೃದ್ದಿಯಾಗಿ 150 ಕೋಟಿ ಡಾಲರ್‍ಗಳಿಗೆ ತಲುಪಲಿದೆಯೆಂದು ಸಿಡಬ್ಲೂಸಿ ವರದಿಯಲ್ಲಿ ಹೇಳಿದೆ. ಅಂದರೆ 2023ರ ಹೊತ್ತಿಗೆ ಒಟಿಟಿ ಕಂಪನಿಗಳ ಒಟ್ಟು ಆದಾಯದಲ್ಲಿ ವಿಡಿಯೋಗಳ ಸಬ್‍ಸ್ಕ್ರಿಪ್ಷನ್‍ನಿಂದ ಬರುವ ಪಾಲು 84%ರಷ್ಟಕ್ಕೆ ತಲುಪಲಿದೆ. ಈಗ ಜಾಹೀರಾತಿನಿಂದಲೇ ಹೆಚ್ಚು ಆದಾಯ ಬರುತ್ತಿದೆ. ಅಷ್ಟೇ ಅಲ್ಲದೇ ನಾಲ್ಕು ವರ್ಷಗಳಲ್ಲಿ ಭಾರತದ ಒಟಿಟಿ ಮಾರುಕಟ್ಟೆ ಕೊರಿಯಾ ದೇಶವನ್ನು ಮೀರಿಸಲಿದೆ. ಪ್ರಪಂಚದಲ್ಲೇ 8ನೇ ಅತಿದೊಡ್ಡ ಒಟಿಟಿ ಮಾರುಕಟ್ಟೆಯಾಗಿ ಭಾರತ ಬೆಳೆಯಲಿದೆ. 2023 ಕೊನೆಗೆ ಜಗತ್ತಿನ ಓಟಿಟಿ ಮಾರುಕಟ್ಟೆಯ ಪ್ರಮಾಣ 7,280 ಕೋಟಿ ಡಾಲರ್‍ಗಳ ಮಟ್ಟಕ್ಕೆ ಬೆಳೆಯಲಿದೆ ಎಂದು ಅಂದಾಜಿಸಲಾಗಿದೆ.

ನೇರವಾಗಿ ಓಟಿಟಿಯಲ್ಲೇ ಬಿಡುಗಡೆಯಾಗುತ್ತಿವೆ ಸಿನಿಮಾಗಳು:

ಓಟಿಟಿ ಆರಂಭವಾದ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ತಿಂಗಳು ಕಳೆದ ನಂತರ ಸಿನಿಮಾಗಳು ಓಟಿಟಿ ಫ್ಲಾಟ್‍ಫಾಂಗೆ ಬರುತ್ತಿದ್ದವು. ಆದರೆ, ಈಗ ಹಾಗಿಲ್ಲ, ಹಲವು ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೆ ನೇರವಾಗಿ ಓಟಿಟಿಯಲ್ಲೇ ಬಿಡುಗಡೆಯಾಗುತ್ತಿವೆ. ಸ್ಯಾಂಡಲ್‍ವುಡ್‍ನ ಪುನೀತ್ ರಾಜ್‍ಕುಮಾರ್ ನಿರ್ಮಾಣದ ‘ಲಾ’ ಮತ್ತು ‘ಫ್ರೆಂಚ್ ಬಿರಿಯಾನಿ’ ಸಿನಿಮಾಗಳನ್ನು ನೇರವಾಗಿ ಓಟಿಟಿಯಲ್ಲೇ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಬಾಲಿವುಡ್‍ನ ‘ಲಕ್ಷ್ಮೀ ಬಾಂಬ್’ ಸಿನಿಮಾ ಕೂಡ ಓಟಿಟಿಯಲ್ಲೇ ನೇರವಾಗಿ ಬಿಡುಗಡೆಯಾಗಲಿದೆ.

ಚಿತ್ರಮಂದಿರಗಳಿಗೆ ಒದಗಿದಯೇ ಆಪತ್ತು:

ಕಳೆದ ಎರಡು ದಶಕಗಳಿಂದ ಸಿನಿಮಾ ನಿರ್ಮಾಣದ ಸಂಖ್ಯೆ ಎಗ್ಗಿಲ್ಲದೆ ಸಾಗುತ್ತಿದೆ. ಒಂದು ವಾರಕ್ಕೆ ಸುಮಾರು 15 ಸಿನಿಮಾಗಳು ಕನ್ನಡ ಇಂಡಸ್ಟ್ರಿಯಲ್ಲೇ ಬಂದು ನಿಲ್ಲುತ್ತಿವೆ. ಇವುಗಳಿಗೆ ಅನ್ಯ ಭಾಷೆ ಸಿನಿಮಾಗಳ ಪೈಪೋಟಿಯೂ ಒಂದುಕಡೆ. ಹೀಗಾಗಿ ಥಿಯೇಟರ್‍ಗಳು ಹಿಟ್ ಆಗುವ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವುದು, ಸಿನಿಮಾದಿಂದ ಹೆಚ್ಚು ಲಾಭವಾಗುತ್ತಿಲ್ಲವೆಂದರೆ ಬದಲಾಯಿಸುವುದು ಸರಾಗವಾಗಿದೆ. ಆದರೆ, ಇಂತಹ ಸಿಂಗಲ್ ಸ್ಕ್ರೀನ್ ಥಿಯೇಟರ್‍ಗಳಿಗೆ ಭಯ ಹುಟ್ಟಿಸಿದ್ದು, ಮಲ್ಟಿಫ್ಲೆಕ್ಸ್‍ಗಳು. ಮಾಲ್‍ಗಳಲ್ಲಿ ಹಾಗೂ ಸಿನಿಮಾಗಳಿಗಾಗಿ ಹೆಚ್ಚು ಸ್ಕ್ರೀನ್‍ಗಳುಳ್ಳ ಮಲ್ಟಿಫ್ಲೆಕ್ಸ್‍ಗಳು ಆರಂಭವಾದ ಸಂದರ್ಭದಲ್ಲಿ ಥಿಯೇಟರ್ ಮಾಲೀಕರು ಮಲ್ಟಿಫ್ಲೆಕ್ಸ್‍ಗಳಿಗೆ ಅನುಮತಿ ಕೊಡಬಾರದು ಎಂದು ಪ್ರತಿಭಟಿಸಿದ್ದರು. ಆದರೆ, ಇಂದು ಮಲ್ಪಿಫ್ಲೆಕ್ಸ್‍ಗಳ ಜೊತೆಗೆ ಓಟಿಟಿಗಳು ಥಿಯೇಟರ್‍ಗಳಿಗೆ ಎದುರಾಗಿ ಬೆಳೆದಿವೆ. ಇದರಿಂದಾಗಿ ಥಿಯೇಟರ್‍ಗಳಿಗೆ ಹೊಡೆತ ಬೀಳುವ ಸಾಧ್ಯತೆಗಳಿವೆ. ಅಲ್ಲದೆ, ಲಾಕ್‍ಡೌನ್ ಆದ ನಂತರದಲ್ಲಿ ಓಟಿಟಿಗಳ ಪ್ರಭಾವ ಜನರ ಮೇಲೆ ಹೆಚ್ಚಾಗಿದ್ದು, ಲಾಕ್‍ಡೌನ್ ತೆರವುಗೊಳ್ಳುವ ವೇಳೆಗೆ ಕರ್ನಾಟಕದಲ್ಲಿಯೇ 150ಕ್ಕೂ ಹೆಚ್ಚು ಚಿತ್ರಮಂದಿರಗಳು ಮುಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...