Homeಕರ್ನಾಟಕಕರ್ನಾಟಕದ ಕರಾವಳಿ ಸೇರಿದಂತೆ ಕೇರಳದಲ್ಲಿ ಸರಳ 'ಈದ್-ಉಲ್-ಫಿತ್ರ್' ಆಚರಣೆ

ಕರ್ನಾಟಕದ ಕರಾವಳಿ ಸೇರಿದಂತೆ ಕೇರಳದಲ್ಲಿ ಸರಳ ‘ಈದ್-ಉಲ್-ಫಿತ್ರ್’ ಆಚರಣೆ

ದೇಶದ ಇತರೆಡೆ ನಾಳೆ ಈದ್-ಉಲ್-ಫಿತ್ರ್ ಆಚರಿಸಲಾಗುತ್ತದೆ.

- Advertisement -
- Advertisement -

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಕೇರಳ ಹಾಗೂ ಜಮ್ಮುಕಾಶ್ಮೀರದಲ್ಲಿ ಇಂದು ವಿಶ್ವಾಸಿಗಳು ಈದ್-ಉಲ್-ಫಿತ್ರ್ (ರಂಝಾನ್) ಹಬ್ಬವನ್ನು ಸರಳವಾಗಿ ಆಚರಿಸಿದರು. ಕೊರೊನಾ ಲಾಕ್ ಡೌನ್ ಇರುವುದರಿಂದ ಹಬ್ಬದ ಪ್ರಾರ್ಥನೆಗಳನ್ನು ಮನೆಯಲ್ಲೇ ಮಾಡಲಾಯಿತು.

ಮಸೀದಿಗಳು ಕೊರೊನಾ ಲಾಕ್ ಡೌನ್ ಪ್ರಯುಕ್ತ ಇಂದು ಕೂಡಾ ಮುಚ್ಚಲ್ಪಟ್ಟಿದ್ದವು. ಸರ್ಕಾರದ ನಿರ್ದೇಶನದಂತೆ ಧರ್ಮಗುರುಗಳು ಹಬ್ಬವನ್ನು ಸರಳವಾಗಿ, ಮನೆಯಲ್ಲಿದ್ದೇ ಆಚರಿಸುವಂತೆ ಕರೆ ನೀಡಿದ್ದರು. ಕರ್ನಾಟಕದ ಮಂಗಳೂರು, ಉಡುಪಿ, ಕೇರಳ ಹಾಗೂ ಜಮ್ಮು ಕಾಶ್ಮೀರದಲ್ಲಿ ಇಂದು ಹಬ್ಬ ಆಚರಿಸಲಾಗುತ್ತಿದ್ದು. ದೇಶದ ಇತರೆಡೆ ನಾಳೆ ಹಬ್ಬವನ್ನು ಆಚರಿಸಲಾಗುತ್ತದೆ.

ಈದ್-ಉಲ್-ಫಿತ್ರ್
ಹಬ್ಬದ ದಿನ ಖಾಲಿಯಾಗಿರುವ ಮಂಗಳೂರಿನ ಈದ್ಗಾ ಮಸೀದಿ.
ಕೇರಳ ಕೊಚ್ಚಿಯಲ್ಲಿ ಮಸೀದಿಯನ್ನು ಹಬ್ಬದ ದಿನವೂ ಮುಚ್ಚಲಾಗಿದೆ.

ಇಸ್ಲಾಮಿಕ್ ತಿಂಗಳ ರಂಝಾನ್ ಮುಸ್ಲಿಮರಿಗೆ ಬಹುಮುಖ್ಯ ತಿಂಗಳಾಗಿದ್ದು, ಈ ತಿಂಗಳಲ್ಲಿ ಮೂವತ್ತು ದಿನ ಉಪವಾಸವಿದ್ದು ಆಧ್ಯಾತ್ಮಿಕತೆಯಲ್ಲಿ ತೊಡಗಿರುತ್ತಾರೆ. ಮೂವತ್ತು ದಿನದ ನಂತರ ಶವ್ವಾಲ್ ತಿಂಗಳ ಒಂದನೇ ಚಂದ್ರ ಕಂಡ ದಿನ ಈದ್-ಉಲ್-ಫಿತ್ರ್ ಆಚರಿಸುತ್ತಾರೆ.

ಈದ್-ಉಲ್-ಫಿತ್ರ್
ಹಬ್ಬದ ನಮಾಜ್ ಅನ್ನು ಮನೆಯಲ್ಲೇ ಮಾಡಲಾಯಿತು.

ಈ ದಿನದಂದು ತನ್ನ ಖರ್ಚು ವೆಚ್ಚಗಳನ್ನು ಕಳೆದು ನಂತರವೂ ಸಂಪತ್ತು ಉಳಿದಿದ್ದರೆ ಖಡ್ಡಾಯವಾಗಿ ಬಡವರಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಆಹಾರವನ್ನು ನೀಡಬೇಕಾಗುತ್ತದೆ. ಈ ಮೂಲಕ ಈ ಹಬ್ಬದ ಆಚರಣೆ ಪ್ರಾರಂಭಿಸಿ, ಮಸೀದಿ ಅಥವಾ ಈದ್ಗಾಗಳಿಗೆ ತೆರಳಿ ‘ಈದ್ ನಮಾಝ್’ ಮಾಡಲಾಗುತ್ತದೆ. ನಂತರ ಪರಸ್ಪರ ಆಲಿಂಗಿಸಿ, ಕ್ಷೇಮ ವಿಚಾರ ವಿನಿಮಯ ಮಾಡುತ್ತಾರೆ.

ಈದ್-ಉಲ್-ಫಿತ್ರ್
ಕಾಶ್ಮೀರ ಮಸೀದಿ ಹಬ್ಬದ ದಿನವೂ ಮುಚ್ಚಲಾಗಿದೆ.

ಮನಸ್ತಾಪ ಇದ್ದವರೊಂದಿಗೆ ಕ್ಷಮೆ ಕೇಳಿ ಅವರೊಂದಿಗಿನ ಮನಸ್ತಾಪವನ್ನು ಕೊನೆಗಾಣಿಸುತ್ತಾರೆ. ತಮ್ಮ ಅಗಲಿದ ಹಿರಿಯರ ಖಬರಸ್ಥಾನ ಸಂದರ್ಶಿಸುವುದು, ಸೂಫೀ ಸಂತರ ಸಮಾಧಿಗಳಿಗೆ ಭೇಟಿ ನೀಡಿ ಅಲ್ಲಿ ಪ್ರಾರ್ಥಿಸುವುದು ಸೇರಿದಂತೆ ನೆರೆಮನೆ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಾ ಹಬ್ಬವನ್ನು ಆಚರಿಸಲಾಗುತ್ತದೆ.


ಓದಿ:  ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...