HomeUncategorizedಗುರುಗಾಂವ್: 75% ಕಾರ್ಮಿಕರಿಗೆ ಎಪ್ರಿಲ್ ತಿಂಗಳ ಸಂಬಳ ನೀಡದ ಕಾರ್ಖಾನೆ

ಗುರುಗಾಂವ್: 75% ಕಾರ್ಮಿಕರಿಗೆ ಎಪ್ರಿಲ್ ತಿಂಗಳ ಸಂಬಳ ನೀಡದ ಕಾರ್ಖಾನೆ

- Advertisement -
- Advertisement -

ಗುರುಗಾಂವ್ ನಲ್ಲಿ ಕೆಲಸದ ಅನಿಶ್ಚಿತತೆ ಎದುರಿಸುತ್ತಿರುವ ವಲಸೆ ಕಾರ್ಮಿಕರು ಸರ್ಕಾರದ ಸಹಾಯಕ್ಕೆ ಹಾತೊರೆಯುತ್ತಿದ್ದಾರೆಂಬ ಮಾಹಿತಿ ಸಫೆ ಇನ್ ಇಂಡಿಯಾ ಫೌಂಡೇಷನ್, ಅಗ್ರಸರ್ ಸರ್ಕಾರೇತರ ಸಂಸ್ಥೆಗಳು ನಡೆಸಿರುವ ಸರ್ವೇಯಲ್ಲಿ ಬಹಿರಂಗವಾಗಿದೆ.

ಗುರುಗಾಂವ್ ಪ್ರದೇಶವನ್ನು ಘಟಕವನ್ನಾಗಿ ಪರಿಗಣಸಿ ಸರ್ವೇ ನಡೆಸಿರುವ ಖಾಸಗಿ ಸಂಸ್ಥೆಗಳು ಶೇ. 95ರಷ್ಟು ವಲಸೆ ಕಾರ್ಮಿಕರು ಯಾವುದೇ ಸಂಘಟನೆಯ ಸದಸ್ಯತ್ವ ಪಡೆದಿಲ್ಲ ಎಂಬುದನ್ನು ದೃಢಪಡಿಸಿವೆ. ಅಷ್ಟೇ ಅಲ್ಲ ಹಲವು ಕಂಪನಿಗಳು ಕಾರ್ಮಿಕರ ಕೊರತೆ ಎದುರಿಸುತ್ತಿವೆ ಎಂದು ಸರ್ವೇ ಹೇಳಿದೆ.

ಲಾಕ್ ಡೌನ್ ನಿಂದ ಸ್ಥಗಿತಗೊಂಡಿದ್ದ ಕಂಪನಿಗಳಲ್ಲಿ ಕೆಲವು ಕಾರ್ಯಚಟುವಟಿಕೆ ಪುನರಾರಂಭಿಸಿವೆ. ಈ ಕಂಪನಿ ಗಳು ಗುತ್ತಿಗೆ ಮತ್ತು ಉಪಗುತ್ತಿಗೆ ಕಾರ್ಮಿಕರನ್ನು ನೆಚ್ಚಿಕೊಂಡಿವೆ. ಆದರೆ ವಲಸೆ ಕಾರ್ಮಿಕರು ಊರುಗಳಿಗೆ ತೆರಳಿದ ನಂತರ ಕಂಪನಿಗಳು ಮತ್ತು ಕಾರ್ಮಿಕರು ಸಂಕಷ್ಟ ಎದುರಿಸುತ್ತಿವೆ.

ವಲಸೆ ಕಾರ್ಮಿಕರು ಕೆಲಸವಿಲ್ಲದೆ ಬದುಕು ಸಾಗಿಸುವುದು ಕಷ್ಟಕರವಾಗಿದೆ. ಹಾಗಾಗಿ ವಲಸೆ ಕಾರ್ಮಿಕರು ಸರ್ಕಾರ ಸಹಾಯಕ್ಕೆ ತುರ್ತುಕ್ರಮ ಕೈಗೊಳ್ಳಬೇಕೆಂಬುದನ್ನು ಎದುರು ನೋಡುತ್ತಿದ್ದಾರೆ ಎಂದು ಸರ್ವೇ ಹೇಳಿದೆ.

ಕೊರೊನ ಸೋಂಕು ವ್ಯಾಪಕವಾಗಿ ಹರಡಿದ ಪರಿಣಾಮ ಲಾಕ್ ಡೌನ್ ಮಾಡಿದ್ದು ಶೇ.75ರಷ್ಟು ವಲಸೆ ಕಾರ್ಮಿಕರಿಗೆ ಏಪ್ರಿಲ್ ತಿಂಗಳ ಸಂಬಳ ನೀಡಿಲ್ಲ. ಶೇ. 25ರಷ್ಟು ಕಾರ್ಮಿಕರು ಸಂಪೂರ್ಣ ಸಂಬಳ ಪಡೆಯಲು ಆಗಿಲ್ಲ ಎಂದು ಸಮೀಕ್ಷೆಯನ್ನು ಆಧರಿಸಿ ದಿ ವೈರ್ ವರದಿ ಮಾಡಿದೆ.

ಶೇಕಡ 50ರಷ್ಟು ಕಾರ್ಮಿಕರಿಗೆ ಮಾಲಿಕರು ಕೂಲಿಯನ್ನು ಪಾವತಿಸಿಲ್ಲ ಎಂಬ ಅಂಶವು ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ. ಕೇವಲ 18ರಷ್ಟು ಕಾರ್ಮಿಕರು ಮಾಲಿಕರಿಗೆ ಕರೆ ಮಾಡಿ ಕೂಲಿ ಕೇಳಿದ್ದಾರೆಂದು ಹೇಳಲಾಗಿದೆ

ಗುರೆಗಾಂವ್ ನಲ್ಲಿ ಶೇಕಡ 77ರಷ್ಟು ವಲಸೆ ಕಾರ್ಮಿಕರ ಮನೆಗಳಿಗೆ ತೆರಳಿದ್ದು, ಶೇ. 57ರಷ್ಟು ಕಾರ್ಮಿಕರಿಗೆ ಮಾಲಿಕರು ಕರೆ ಮಾಡಿ ಕೆಲಸಕ್ಕೆ ಬರುವಂತೆ ಸೂಚನೆ ನೀಡಿದ್ದಾರ. ಈ ನಡುವೆ ಬಹುದೊಡ್ಡ ಸಂಖ್ಯೆಯ ಕಾರ್ಮಿಕರು ಕೆಲಸದ ಸ್ಥಳದಲ್ಲೇ ಉಳಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಓದಿ: ಧರಿಸುವವರ ಮುಖ ಮಾಸ್ಕ್‌ನಲ್ಲೇ ಪ್ರಿಂಟ್; ಕೇರಳದಲ್ಲಿ ವಿಭಿನ್ನ ಪ್ರಯತ್ನ…!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...