Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಅಂಫಾನ್‌ ಚಂಡಮಾರುತದ ಕಾರಣಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯವು ಅತಿ ಹೆಚ್ಚಿನ ಹಾನಿಗೊಳಗಾಗಿದೆ. ಈ ಸಂದರ್ಭದಲ್ಲಿ ಹಾನಿ ವೀಕ್ಷಿಸಲು ಪ್ರಧಾನಿ ಮೋದಿಯವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲರು ಅವರನ್ನು ಸ್ವಾಗತಿಸಿದ್ದರು. ಆದರೆ ಮೋದಿಯವರು ವಾಪಸ್‌ ತೆರಳುವ ವೇಳೆ ಹೆಲಿಕಾಪ್ಟರ್‌ ಹತ್ತುವಾಗ ಚೌಕಿದಾರ್‌ ಚೋರ್‌ ಹೈ ಎಂಬ ಘೋಷಣೆಗಳು ಮೊಳಗಿವೆ ಎಂಬ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಎಕ್ಸ್‌ಪೋಸ್ಟ್‌ ಎಂಬ ಫೇಸ್‌ಬುಕ್‌ ಪೇಜ್‌ನಲ್ಲಿ ಈ ವಿಡಿಯೋವನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದು, ಮೂರು ಸಾವಿರಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದಾರೆ.

#ChowkidharChorHai : ke naare , Bengal daure ke dauraan.Join Group => Xpost

Posted by Xpost on Friday, May 22, 2020

 

ಹಲವಾರು ಟ್ವಿಟ್ಟರ್‌ಗಳಲ್ಲಿಯೂ ಈ ವಿಡಿಯೋವನ್ನು ವೈರಲ್‌ ಮಾಡಲಾಗಿದೆ.

ಅಲ್ಲದೇ ಹಾಸನ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಫೇಸ್‌ಬುಕ್‌ ಅಕೌಂಟ್‌ನಿಂದ ಈ ವಿಡಿಯೋವನ್ನು ಪೋಸ್ಟ್‌ ಮಾಡಲಾಗಿದೆ. ಅಲ್ಲಿ “ಏನು ಗುರು ಇದು ಈ ತರ? ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಟ್ಟ ಮೋದಿ. ಸ್ವಲ್ಪ ನಿದಾನವಾಗಿ ಕೇಳಿ… ಚೌಕಿದಾರ್ ಚೋರ್ ಹೈ ಅಂತ ಕೂಗ್ತಾ ಇದಾರೆ ಅಲ್ಲವಾ…. ನಿಜ ಹೇಳಿದ ಜನಗಳು” ಎಂಬ ಶೀರ್ಷಿಕೆ ನಿಡಲಾಗಿದೆ.

ಏನು ಗುರು ಇದು ಈ ತರ

ಪಶ್ಚಿಮ ಬಂಗಾಳ ಕ್ಕೆ ಭೇಟಿ ಕೊಟ್ಟ ಮೋದಿ . ಸ್ವಲ್ಪ ನಿದಾನವಾಗಿ ಕೇಳಿ…ಚೌಕಿದರ್ ಚೋರ್ ಹೈ ಅಂತ ಕೊಗ್ತಾ ಇದಾರೆ ಅಲ್ಲವಾ…. ನಿಜ ಹೇಳಿದ ಜನಗಳು

Posted by ಹಾಸನ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ on Saturday, May 23, 2020

ಫ್ಯಾಕ್ಟ್‌ ಚೆಕ್‌

ಮೇಲ್ನೋಟದಲ್ಲಿಯೇ ಇದು ವಾಯ್ಸ್‌ ಎಡಿಟೆಡ್‌ ವಿಡಿಯೋ ಎಂದು ಕಂಡುಬರುತ್ತದೆ. ಇದಕ್ಕೆ ಪುರಾವೆಯಂತೆ ಮೂಲ ವೀಡಿಯೊವನ್ನು ಆಕಾಶವಾಣಿ ಸಾಂಗ್‌ಬಾದ್ ಕೋಲ್ಕತ್ತಾದ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಮೇ 22 ರಂದು ಪೋಸ್ಟ್ ಮಾಡಿದೆ. ಇದು ಕೋಲ್ಕತ್ತಾದ ಆಲ್ ಇಂಡಿಯಾ ರೇಡಿಯೊದ ಪ್ರಾದೇಶಿಕ ಸುದ್ದಿ ಘಟಕವಾಗಿದೆ. ಆ ವಿಡಿಯೋದಲ್ಲಿ ಜನರು ‘ದೀದಿ’ ಮತ್ತು ‘ಜೈಶ್ರೀರಾಂ’ ಎನ್ನುವ ಘೋಷಣೆಗಳನ್ನು ಕೆಲವರು ಕೂಗಿದ್ದಾರೆ.

ಆದರೆ ಅದೇ ವಿಡಿಯೋವನ್ನು ಬಳಸಿಕೊಂಡು ಅಲ್ಲಿ ಆಡಿಯೋವನ್ನು ತೆಗೆದು ಹಾಕಲಾಗಿದೆ. ಜೊಗೆತೆ 2019ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮೋದಿಯವರು ಬಂಗಾಳಕ್ಕೆ ಭೇಟಿ ನೀಡಿದಾಗ ಕಾಂಗ್ರೆಸ್‌ ಕಾರ್ಯಕರ್ತರು ಚೌಕಿದಾರ್‌ ಚೋರ್‌ ಹೈ ಎಂಬ ಘೋಷಣೆಯ ಆಡಿಯೋವನ್ನು ಪ್ರಸ್ತುತ ಮೋದಿ ಭೇಟಿಯ ವಿಡಿಯೋಗೆ ಸೇರಿಸಿ ಎಡಿಟ್‌ ಮಾಡಲಾಗಿದೆ.

(2019ರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮೋದಿ ಭೇಟಿ ನೀಡಿದಾಗ ಚೌಕಿದಾರ್‌ ಚೋರ್‌ ಹೈ ಎಂದು ಕೂಗಿದ ವಿಡಿಯೋ)

ಅಲ್ಲಿಗೆ ಈ ಬಾರಿ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದಾಗ ಚೌಕಿದಾರ್‌ ಚೋರ್‌ ಹೈ ಎಂದು ಘೋಷಣೆ ಕೂಗಲಾಗಿದೆ ಎಂಬುದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ವೈರಲ್‌ ವಿಡಿಯೋವು ಎಡಿಟ್‌ ಮಾಡಿದ ವಿಡಿಯೋ ಆಗಿದೆ.


ಇದನ್ನೂ ಓದಿ: CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...