Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಡಸ್ಟ್ ಆನ್ ದಿ ರೋಡ್: ಸಮಾಜದ ಹತಭಾಗ್ಯರ ಕಥನ

ಡಸ್ಟ್ ಆನ್ ದಿ ರೋಡ್: ಸಮಾಜದ ಹತಭಾಗ್ಯರ ಕಥನ

- Advertisement -
- Advertisement -

ಮಹಾಶ್ವೇತಾ ದೇವಿ
ಸಂಪಾದನೆ : ಮೈತ್ರೇಯಿ ಘಟಕ್
ಸೀಗಲ್ ಬುಕ್ಸ್ ಪ್ರೈ ಲಿ, ಕೊಲ್ಕತ್ತಾ

ಕನ್ನಡದ ಸಂದರ್ಭದಲ್ಲಿ ಮಹಾಶ್ವೇತಾದೇವಿಯವರು ತಮ್ಮ ಕಥೆ ಕಾದಂಬರಿಗಳ ಮೂಲಕ ಒಬ್ಬ ಸೃಜನಶೀಲ ಲೇಖಕಿಯಾಗಿ ಹೆಚ್ಚು ಪರಿಚಿತರು. ಅವರ ಅನೇಕ ಕಥೆ ಮತ್ತು ಕಾದಂಬರಿಗಳು ಕನ್ನಡಕ್ಕೆ ಅನುವಾದಗೊಂಡಿವೆ.

ಮಹಾಶ್ವೇತಾದೇವಿಯವರ ‘ಡಸ್ಟ್ ಆನ್ ದಿ ರೋಡ್’ ಪುಸ್ತಕ ಅನೇಕ ಕಾರಣಗಳಿಗಾಗಿ ಮಹತ್ವದ ಕೃತಿ. ಮಹಾಶ್ವೇತಾದೇವಿಯವರು ಸೃಜನಶೀಲ ಲೇಖಕಿ ಮಾತ್ರವಲ್ಲ, ಅವರು ದಣಿವರಿಯದ ಆಕ್ಟಿವಿಸ್ಟ್ ಸಹ ಹೌದು. ತಮ್ಮ ನಿರಂತರ ಕ್ರಿಯಾಶೀಲ ಆಕ್ಟಿವಿಸಮ್‍ನ ಭಾಗವಾಗಿ ಬರೆದ ಲೇಖನಗಳ ಸಂಕಲನ ‘ಡಸ್ಟ್ ಆನ್ ದಿ ರೋಡ್’. ಮೈತ್ರೇಯಿ ಘಟಕ್ ಸುದೀರ್ಘ ಪ್ರಸ್ತಾವನೆಯನ್ನು ಬರೆದು ಈ ಪುಸ್ತಕವನ್ನು ಸಂಪಾದಿಸಿದ್ದಾರೆ. 214 ಪುಟಗಳ ಪುಸ್ತಕದಲ್ಲಿ ಒಟ್ಟು 26 ಲೇಖನಗಳಿವೆ. ಜೀತಗಾರರ ಮೇಲಿನ ಕ್ರೌರ್ಯ, ಗುತ್ತಿಗೆ ಕಾರ್ಮಿಕರ ಮೇಲೆ ನಡೆಯುವ ಶೋಷಣೆ, ಅರಣ್ಯದ ನಾಶ, ಭೂರಹಿತ ಕೂಲಿಗಳ ಸ್ಥಿತಿಗತಿ, ದುಡಿವ ಜನರ ಮೇಲೆ ನಡೆಯುತ್ತಿರುವ ರಾಜಕೀಯಾರ್ಥಿಕ ದಬ್ಬಾಳಿಕೆ, ಗ್ರಾಮೀಣ ಭಾಗದ ಸಮುದಾಯಗಳ ದುರ್ಬಲ ಸಂಘಟನೆಗಳ ಸ್ಥಿತಿಗತಿ, ಜಾತೀಯತೆ, ಮೂಢನಂಬಿಕೆ ಮತ್ತು ಕೋಮುವಾದಗಳ ಕುರಿತ ಬರಹಗಳು ಈ ಪುಸ್ತಕದಲ್ಲಿವೆ. ತಾವೇ ಸಂಪಾದಿಸಿ ಪ್ರಕಟಿಸುತ್ತಿದ್ದ ಬಂಗಾಳಿ ತ್ರೈಮಾಸಿಕ ‘ಬೋರ್ತಿಕಾ’, ಫ್ರಂಟ್‍ಲೈನ್, ಭೂದಾನ್, ‘ಪೊಲಿಟಿಕಲ್ ಅಂಡ್ ಎಕನಾಮಿಕ್ ವೀಕ್ಲಿ’ ಮತ್ತು ‘ಫ್ರಾಂಟಿಯರ್ ಆಫ್ ಕೊಲ್ಕತ್ತ’ ಪತ್ರಿಕೆಗಳಿಗೆ ಬರೆದ ಲೇಖನಗಳನ್ನು ಇಲ್ಲಿ ಸಂಪಾದಿಸಲಾಗಿದೆ. ಮಹಾಶ್ವೇತಾದೇವಿ 1980 ರಿಂದ 1991ರ ವರೆಗೆ ತಾವೇ ಸಂಪಾದಿಸಿ ಪ್ರಕಟಿಸುತ್ತಿದ್ದ ಬಂಗಾಳಿ ತ್ರೈಮಾಸಿಕ ‘ಬೋರ್ತಿಕಾ’ಗೆ ಬರೆದ ಕೆಲವು ಸಂಪಾದಕೀಯ ಬರಹಗಳೂ ಈ ಪುಸ್ತಕದಲ್ಲಿವೆ.

ತಮ್ಮ ಬರವಣಿಗೆ ಮತ್ತು ಆಕ್ಟಿವಿಸಮ್‍ಗಾಗಿ ಜ್ಞಾನಪೀಠ ಮತ್ತು ರೋಮಾನ್ ಮ್ಯಾಗ್ಸಸೇ ಪ್ರಶಸ್ತಿಗಳನ್ನು ಪಡೆದ ಮಹಾಶ್ವೇತಾ ಐದು ದಶಕಗಳ ಕಾಲ ಆದಿವಾಸಿಗಳ ಹಕ್ಕುಗಳಿಗಾಗಿ ದುಡಿದರು. ಆದಿವಾಸಿಗಳ ಜೊತೆ ಬದುಕುತ್ತಾ ಅವರ ನಿತ್ಯದ ಕಷ್ಟಸುಖಗಳಲ್ಲಿ ಪಾಲ್ಗೊಂಡು, ಅವರ ಅನೇಕ ಹೋರಾಟಗಳ ಮುಂಚೂಣಿಯಲ್ಲಿದ್ದು ಸರಕಾರಗಳನ್ನು ಎಚ್ಚರಿಸಿದವರು. ಅಲ್ಲದೆ ಆದಿವಾಸಿಗಳ ಸಮಸ್ಯೆ ಮತ್ತು ಅವುಗಳ ಪರಿಹಾರಗಳ ಕುರಿತು ಸುದೀರ್ಘವಾಗಿ ಚಿಂತಿಸಿದವರು. ಈ ಕಾರಣಕ್ಕಾಗಿಯೇ ಮಹಾಶ್ವೇತಾದೇವಿ ಸ್ವಾತಂತ್ರ್ಯ ನಂತರ ಭಾರತ ಸರಕಾರ ರೂಪಿಸಿಕೊಂಡು ಬಂದ ಅಭಿವೃದ್ಧಿ ಮತ್ತು ಆರ್ಥಿಕ ನೀತಿಗಳನ್ನು ಈ ಬರಹಗಳಲ್ಲಿ ಉಗ್ರವಾಗಿ ವಿರೋದಿsಸುತ್ತಾರೆ. ಬಂಡವಾಳದಿಂದ ಬಂಡವಾಳವನ್ನು ಮರುಉತ್ಪಾದಿಸುವ ಮತ್ತು ಬಂಡವಾಳವನ್ನು ದ್ವಿಗುಣಿಸುವ ಏಕೈಕ ಲೆಕ್ಕಾಚಾರದ ಆರ್ಥಿಕ ನೀತಿಯನ್ನು ಖಂಡಿಸುತ್ತಾರೆ. ಹೀಗಾದಾಗ ನಗರಗಳು ಮಾತ್ರ ಅಬಿsವೃದ್ಧಿಯಾಗಿ, ಹಳ್ಳಿಗಳಿಂದ ನಗರಕ್ಕೆ ವಲಸೆಹೋಗುವ ಬಡಜನರು ನಗರಗಳಲ್ಲಿ ಭೀಕರ ಬದುಕನ್ನು ಸ್ಲಂಗಳಲ್ಲಿ ಕಳೆಯಲಾರಂಬಿsಸುತ್ತಾರೆ. ಹೀಗಾಗಿ ಹಳ್ಳಿಗಳು ಸಾಯುತ್ತಿವೆ. ಸತ್ತು ಹೋಗುತ್ತಿರುವ ಹಳ್ಳಿಗಳ, ಅಂಚಿನ ಸಮುದಾಯಗಳ, ಆದಿವಾಸಿಗಳ ದುಸ್ಥಿತಿಗೆ ಈ ದೇಶ ಅಳವಡಿಸಿಕೊಂಡಿರುವ ಅಬಿವೃದ್ಧಿ ನೀತಿಯೇ ಕಾರಣ ಎನ್ನುತ್ತಾರೆ ಮಹಾಶ್ವೇತಾದೇವಿ.

ಮಹಾಶ್ವೇತಾ ದೇವಿ

ಛೋಟಾನಾಗಪುರ ಪ್ರಸ್ಥಭೂಮಿಯ ಆದಿವಾಸಿಗಳು ಬದುಕುತ್ತಿರುವ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಕೆಲಸ ನಿರ್ವಹಿಸಿದ ಇವರು, ಅಲ್ಲಿನ ನಿಸರ್ಗ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಕಬಳಿಸಲು ಸ್ಥಳೀಯ ಊಳಿಗಮಾನ್ಯ ದೊರೆಗಳು ಮತ್ತು ಬಂಡವಾಳಶಾಹಿಗಳು ನಡೆಸಿದ ಹುನ್ನಾರಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ಪುಸ್ತಕದಲ್ಲಿ Witch Sabbath at Singbhum ಎಂಬ ಲೇಖನ ನನಗೆ ವಿಶೇಷವೆನ್ನಿಸಿತು. ಜಾತೀಯತೆ ಮತ್ತು ಕೋಮುಸಂಘರ್ಷಗಳಿಗೆ ಅವಕಾಶಗಳಿಲ್ಲದ ಕಡೆ ಹೇಗೆ ಕೋಮು ವಿಷವನ್ನು ಸಂಚಯಿಸಲಾಗುತ್ತದೆ? ಜಾತಿಯ ಆಧಾರದಲ್ಲಿ ದುಡಿವ ಸಮುದಾಯಗಳನ್ನು ಹೇಗೆ ಪರಸ್ಪರ ಹಗೆಗಳನ್ನಾಗಿಸಲಾಗುತ್ತದೆ? ಎಂಬ ವಿಚ್ಛಿದ್ರಕಾರಿ ರಾಜಕಾರಣವನ್ನು ಈ ಲೇಖನದಲ್ಲಿ ಮಹಾಶ್ವೇತಾ ವಿಶ್ಲೇಷಿಸಿದ್ದಾರೆ. ಅರಣ್ಯಕ್ಕೆ ಯಾವ ಕೇಡೂ ಮಾಡದ ಆದಿವಾಸಿಗಳಿಗಿಂತ ಬಂಡವಾಳ ಹೂಡಿ ಅರಣ್ಯವನ್ನು ಸರ್ವನಾಶ ಮಾಡುವ, ತನ್ನ ಪಾಪಗಳನ್ನು ಮುಚ್ಚಿಕೊಳ್ಳಲು ಭಗವದ್ಗೀತೆಯನ್ನು ಲಕ್ಷಾಂತರ ಪ್ರಿಂಟು ಮಾಡಿ ಹಂಚುವ ಬಿರ್ಲಾನಂತಹ ಬಂಡವಾಳಶಾಹಿಯೇ ಸರಕಾರಕ್ಕೆ ಹೆಚ್ಚು ಪ್ರಿಯನಾಗುತ್ತಾನೆ ಎನ್ನುತ್ತಾರೆ ಮಹಾಶ್ವೇತಾದೇವಿ. ಸಿಂಘಭೂಮ್, ಪಲಮು, ಜಾರ್ಖಂಡ್, ಬಿಹಾರ್, ಪಶ್ಚಿಮ ಬಂಗಾಳದ ಹಲವು ಕಡೆ ತಮ್ಮ ಜಮೀನುಗಳನ್ನು ಕಳೆದುಕೊಂಡ ಆದಿವಾಸಿಗಳು ಕೃಷಿಕೂಲಿಗಳಾಗಿ, ಗೇಣಿದಾರರಾಗಿ, ದುರಂತವೆಂದರೆ ಜೀತದಾಳುಗಳಾಗಿ ಭೂಮಾಲಿಕರ ಹೊಲಗಳಲ್ಲಿ ದುಡಿಯುತ್ತಿದ್ದಾರೆ. ಇಂತಹ ಮುಗ್ಧ ಆದಿವಾಸಿಗಳಿಗೆ ತುಂಡು ಭೂಮಿ ಕೊಡದ ಸರಕಾರ, ಬಿರ್ಲಾನಂತಹ ಬಂಡವಾಳಶಾಹಿಗೆ, ಇಡೀ ಕಾಡನ್ನು ನಾಶ ಮಾಡಿಬಿಡುವ ಸಿಮೆಂಟ್ ಕಾರ್ಖಾನೆ ಹಾಕಲು ಸಾವಿರಾರು ಎಕರೆ ಅರಣ್ಯವನ್ನು ಧಾರೆ ಎರೆದು ಕೊಡುತ್ತದೆ. ಸಿಂಘಭೂಮ್ ಎಂಬ ಜಿಲ್ಲೆ, ಗ್ರಾಸಿಂ ಕಾರ್ಖಾನೆಗೆ, ಕಬ್ಬಿಣದ ಅದಿರಿನ ಗಣಿಗಾರಿಕೆಗೆ ಮತ್ತು ಬಿರ್ಲಾನ ಸಿಮೆಂಟ್ ಕಾರ್ಖಾನೆಗೆ ತನ್ನ ಬೆಲೆಬಾಳುವ, ಸಂಪದ್ಭರಿತ ಅರಣ್ಯವನ್ನು ಮತ್ತು ಕೃಷಿಭೂಮಿಯನ್ನು ಬಲಿಕೊಟ್ಟಿದೆ. ಸಾಲದ್ದಕ್ಕೆ ಬಂಡವಾಳಶಾಹಿಗಳು ಹುಟ್ಟುಹಾಕಿರುವ ಕೋಮು ಗಲಭೆಗಳಿಗೆ ಬಲಿಯಾಗುತ್ತಿರುವುದು ಅಲ್ಲಿನ ಆದಿವಾಸಿಗಳೇ ಆಗಿದ್ದಾರೆ.

ತಾವು ಹೋರಾಟ ಮಾಡಿದೆಡೆಯಲ್ಲೆಲ್ಲ ವಸಾಹತು ಆಡಳಿತದ ಗುಂಡಿಗೆಯನ್ನು ನಡುಗಿಸಿದ ಆದಿವಾಸಿಗಳು, ಸ್ವಾತಂತ್ರ್ಯ ನಂತರ ಗುಲಾಮಗಿರಿಯ ಹಂತಕ್ಕೆ ಇಳಿದುಹೋದರು ಎನ್ನುತ್ತಾರೆ ಮಹಾಶ್ವೇತಾ. ಆದಿವಾಸಿಗಳನ್ನು ಅಧ್ಯಯನ ಮಾಡುವ ಸಂಶೋಧಕರ ಕುರಿತು ಮಹಾಶ್ವೇತಾಗೆ ತಕರಾರುಗಳಿವೆ. ‘ಬಹಳಷ್ಟು ವಿದೇಶಿಯರು ಮತ್ತು ಸ್ಥಳೀಯರು ವಿದೇಶಿ ಏಜನ್ಸಿಗಳ ಹಣಕಾಸಿನ ನೆರವಿನಿಂದ ಆದಿವಾಸಿಗಳನ್ನು ಅಧ್ಯಯನ ಮಾಡಲು ಬರುತ್ತಾರೆ. ಮತ್ತೆ ಅಂತಹುದ್ದೇ ಹಣಕಾಸಿನ ನೆರವಿನಿಂದ ಅನೇಕ ಸ್ವಯಂಸೇವಾ ಸಂಸ್ಥೆಗಳು ಆದಿವಾಸಿಗಳನ್ನು ಉದ್ಧಾರ ಮಾಡುವ ನೆಪದಲ್ಲಿ ಕಾರ್ಯನಿರತವಾಗಿವೆ.

ವಿದೇಶಿ ಫಂಡು ಪಡೆದುಕೊಂಡು ಇಲ್ಲಿಗೆ ಬರುವ ಪಂಡಿತರು ಇಲ್ಲಿನ ಆದಿವಾಸಿಗಳ ಕಲೆ, ಸಾಹಿತ್ಯ, ನೃತ್ಯಾದಿ ಕಲೆಗಳನ್ನು ವಿಪರೀತ ರೋಮಾಂಚನದಿಂದ ವರ್ಣಿಸುತ್ತಾರೆ. ಇನ್ನೊಂದು ದೊಡ್ಡ ಅಪಾಯವೆಂದರೆ, ಆದಿವಾಸಿಗಳ ಬಡತನವನ್ನೂ ಸಹ ಈ ಮಾನವಶಾಸ್ತ್ರಜ್ಞರು ವಿಜೃಂಭಿಸಿ ಬರೆಯುತ್ತಾರೆ. ಇದರಿಂದ ಆದಿವಾಸಿಗಳಿಗೆ ಯಾವ ಲಾಭವಿಲ್ಲ. ಮನುಷ್ಯನ ಹಸಿವನ್ನು ರೋಮಾಂಚನದಿಂದ ವರ್ಣಿಸುವವರನ್ನು ಏನೆಂದು ಕರೆಯಬೇಕು? ಈ ಮಾನವಶಾಸ್ತ್ರಜ್ಞರು ಹೀಗೆ ಆದಿವಾಸಿಗಳ ಸಂಸ್ಕೃತಿಯನ್ನು ಹೊಗಳುವ ಬದಲು ಸುಮ್ಮನಿದ್ದರೆ ಒಳಿತು. ಹಾಗೆಯೇ ಸ್ವಯಂಸೇವಾ ಸಂಸ್ಥೆಗಳೂ ಸಹ ಆದಿವಾಸಿಗಳನ್ನು ದಿಕ್ಕುತಪ್ಪಿಸದೆ ಅವರ ಬದುಕಿನ ಆಮೂಲಾಗ್ರ ಬದಲಾವಣೆಗೆ ಪ್ರಯತ್ನಿಸಬೇಕು’ ಎನ್ನುತ್ತಾರೆ.

‘ಸರಕಾರದ ಯೋಜನೆಗಳ ಭೀಕರ ಗುಣವೆಂದರೆ, ಇವು ಅತ್ಯಂತ ಕುರುಡಾಗಿ ರೂಪಿಸಲ್ಪಡುತ್ತವೆ. ಹಾಗೆಯೆ ಗುರಿ ಇಲ್ಲದಂತೆ ಕಾರ್ಯಗತವಾಗುತ್ತವೆ. ಯಾರನ್ನು ತಲುಪಬೇಕೋ ಅವರ ಅಗತ್ಯಗಳ ಕುರಿತು ಈ ಯೋಜನೆಗಳು ಚಿಂತಿಸುವುದೇ ಇಲ್ಲ ಮತ್ತು ಕೆಲವು ಯೋಜನೆಗಳು ಆದಿವಾಸಿಗಳನ್ನು ತಲುಪುವುದೇ ಇಲ್ಲ. ಅಕಸ್ಮಾತ್ ಯಾರಾದರು ಯೋಜನೆಗಳ ಫಲಗಳನ್ನು ದಕ್ಕಿಸಿಕೊಳ್ಳಬೇಕೆಂದರೆ ಭಿಕ್ಷೆಯ ರೂಪದಲ್ಲಿ ಪಡೆದುಕೊಳ್ಳಬೇಕು. ಸರಕಾರಿ ಅದಿsಕಾರಿಗಳ ಮುಂದೆ ತಮ್ಮಿಡೀ ಆತ್ಮಪ್ರತ್ಯಯವನ್ನು ಕೊಂದುಕೊಂಡು ಬಿsಕ್ಷುಕರಂತೆ ಆದಿವಾಸಿಗಳು ಬೇಡಬೇಕು’ ಎನ್ನುವ ಮಹಾಶ್ವೇತಾ ಸರಕಾರದ ಯೋಜನೆಗಳಿಗಿರುವ ‘ನಾಗರಿಕ ಅಹಂಕಾರ’ವನ್ನು ಬಿಚ್ಚಿಡುತ್ತಾರೆ.

ಅವರು ಒಬ್ಬ ಸೃಜನಶೀಲ ಲೇಖಕಿಯಾಗಿ ಶುದ್ಧ ಸಾಹಿತ್ಯಕ ಕಾಳಜಿಯಿಂದ ಇಲ್ಲವೆ ವರದಿಗಾರಿಕೆಯ ಶುಷ್ಕ ಕುತೂಹಲದಿಂದ ತನ್ನ ಸುತ್ತಲ ವಿದ್ಯಮಾನಗಳನ್ನು ನೋಡುವುದಿಲ್ಲ. ಆದಿವಾಸಿಗಳು, ಅಲೆಮಾರಿಗಳು, ಅಂಚಿನ ಸಮುದಾಯಗಳ, ಅಸ್ಪೃಶ್ಯರ, ಜೀತದಾಳುಗಳ ನಿತ್ಯದ ಬದುಕಿನ ದುರಂತ ಮತ್ತು ಕಷ್ಟಗಳ ಭಾಗವಾಗಿ ಮಹಾಶ್ವೇತಾ ಬೆರೆತುಹೋಗಿದ್ದಾರೆ. ಹೀಗಾಗಿ ಅವರ ಬರವಣಿಗೆಗೆ ತಣ್ಣನೆಯ ಆಕ್ರೋಶ ಮತ್ತು ಕಟು ವ್ಯಂಗ್ಯಗಳು ಸಹಜವಾಗಿ ಪ್ರಾಪ್ತವಾಗಿವೆ. ಸರಳ, ನೇರ ಕಥನಗಾರಿಕೆ ಇವರ ಬರವಣಿಗೆಯ ಇನ್ನೊಂದು ಲಕ್ಷಣ. ಪ್ರಸ್ತುತ ಕೃತಿಯಲ್ಲಿರುವ ಲೇಖನಗಳನ್ನು ಮಹಾಶ್ವೇತಾ ಪ್ರಾಸಂಗಿಕವಾಗಿ ಬರೆದಿದ್ದರೂ ಸಹ, ಇಂಡಿಯಾದ ವರ್ತಮಾನದ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಲು ಈ ಬರಹಗಳು ಕೈದೀವಿಗೆಯಾಗುತ್ತವೆ.


ಎ.ಎಸ್. ಪ್ರಭಾಕರ
ಪ್ರಾಧ್ಯಾಪಕರು
ಕನ್ನಡ ವಿಶ್ವವಿದ್ಯಾಲಯ, ಹಂಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...