Homeಮುಖಪುಟಸಚಿವ ಸದಾನಂದ ಗೌಡರು ದೆಹಲಿಯಿಂದ ಬಂದಿಳಿದರೂ ಕ್ವಾರಂಟೈನ್‌ಗೆ ಒಳಗಾಗಿಲ್ಲ ಏಕೆ?

ಸಚಿವ ಸದಾನಂದ ಗೌಡರು ದೆಹಲಿಯಿಂದ ಬಂದಿಳಿದರೂ ಕ್ವಾರಂಟೈನ್‌ಗೆ ಒಳಗಾಗಿಲ್ಲ ಏಕೆ?

ಎಲ್ಲಾ ನಾಗರಿಕರಿಗೆ ಮಾರ್ಗಸೂಚಿಗಳು ಅನ್ವಯವಾಗುತ್ತವೆ, ಆದರೆ ಕೆಲವು ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುವವರಿಗೆ ಕೆಲವು ವಿನಾಯಿತಿಗಳಿರುತ್ತವೆ ಎನ್ನುವ ಮೂಲಕ ಅವರು ಕ್ವಾರಂಟೈನ್‌ಗೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸಚಿವ ಸದಾನಂದ ಗೌಡರು ದೆಹಲಿಯಿಂದ ಬಂದಿಳಿದರೂ ಕ್ವಾರಂಟೈನ್‌ಗೆ ಒಳಪಟ್ಟಿಲ್ಲ. ಜನರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯವೇ ಎಂದು ವಿಪಕ್ಷಗಳ ಆರೋಪ ಮಾಡಿವೆ.

ಇಂದಿನಿಂದ ದೇಶಿಯ ವಿಮಾನಯಾನ ಸೇವೆ ಆರಂಭವಾಗಿದೆ. ನಿಯಮಗಳ ಪ್ರಕಾರ ಅಂತರ್‌ರಾಜ್ಯ ಪ್ರವಾಸ ಮಾಡಿದವರು 14 ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕಿದೆ. ಆದರೆ ಇಂದು ದೆಹಲಿಯಿಂದ ಆಗಮಿಸಿದ ಸದಾನಂದಗೌಡರು ಕ್ವಾರಂಟೈನ್‌ಗೆ ಒಳಪಡದೇ ಇರುವುದರಿಂದ ವಿವಾದ ಭುಗಿಲೆದ್ದಿದೆ.

ಕೇಂದ್ರ ಸಚಿವ ಸದಾನಂದ ಗೌಡರು ಇಂದು ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದರು. ಆದರೆ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಿಲ್ಲ. ಔಷಧ ಸಚಿವರಾಗಿ ನನಗೆ ವಿನಾಯಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಕರ್ನಾಟಕ ಸರ್ಕಾರದ ಅಧಿಸೂಚನೆಯಲ್ಲಿ ಕ್ಯಾರೆಂಟೈನ್ ವಿನಾಯಿತಿ ಪಟ್ಟಿಯಡಿಯಲ್ಲಿ ಫಾರ್ಮಾ ವಲಯವನ್ನು ಉಲ್ಲೇಖಿಸಿಲ್ಲ ಎಂದು ಪತ್ರಕರ್ತ ನಾಗಾರ್ಜುನ್‌ ದ್ವಾರಕನಾಥ್‌ ಟ್ವಿಟ್ಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನು ಇದಕ್ಕೆ ಸದಾನಂದ ಗೌಡರು ಸ್ಪಷ್ಟನೆ ನೀಡಿದ್ದಾರೆ. ನಾನು ಮಂತ್ರಿಯಾಗಿದ್ದೇನೆ ಮತ್ತು ನಾನು ಔಷಧ ಸಚಿವಾಲಯದ ಮುಖ್ಯಸ್ಥನಾಗಿದ್ದೇನೆ. ಔಷಧಿಗಳ ಪೂರೈಕೆ ಮತ್ತು ಇತರ ವಸ್ತುಗಳು ಸರಿಯಾಗಿಲ್ಲದಿದ್ದರೆ ವೈದ್ಯರು ರೋಗಿಗಳಿಗೆ ಏನು ಮಾಡಬಹುದು, ಅದು ಸರ್ಕಾರದ ವೈಫಲ್ಯವಲ್ಲವೇ? ದೇಶದ ಪ್ರತಿಯೊಂದು ಮೂಲೆಯಲ್ಲೂ ಔಷಧಿಗಳ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ನನ್ನ ಜವಾಬ್ದಾರಿ ಎಂದು ಅವರು ತಿಳಿಸಿದ್ದಾರೆ.

ಎಲ್ಲಾ ನಾಗರಿಕರಿಗೆ ಮಾರ್ಗಸೂಚಿಗಳು ಅನ್ವಯವಾಗುತ್ತವೆ, ಆದರೆ ಕೆಲವು ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುವವರಿಗೆ ಕೆಲವು ವಿನಾಯಿತಿಗಳಿರುತ್ತವೆ ಎನ್ನುವ ಮೂಲಕ ಅವರು ಕ್ವಾರಂಟೈನ್‌ಗೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ದೆಹಲಿಯಲ್ಲಿದ್ದಾಗಳು ಪ್ರತಿ ಮೂರು ದಿನಗಳಿಗೊಮ್ಮೆ ಕೊರೊನ ಟೆಸ್ಟ್‌ ಮಾಡಿಸಿದ್ದೇನೆ. ಕೊರೊನಾ ನೆಗೆಟಿವ್‌ ಬಂದಿದೆ. ನಮ್ಮ ಸಿಬ್ಬಂದಿಗಳಿಗೂ ಟೆಸ್ಟ್‌ ಮಾಡಿಸಲಾಗಿದೆ. ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿದಾಗ ನನ್ನನ್ನು ಟೆಸ್ಟ್‌ ಮಾಡಿದ್ದಾರೆ. ನನ್ನ ಮೊಬೈಲ್‌ ಆರೋಗ್ಯ ಸೇತು ಆಪ್‌ ಇದೆ. ಇದನ್ನೆಲ್ಲ ನೋಡಿಯೇ ನನ್ನನ್ನು ಬಿಟ್ಟಿದ್ದು ಎಂದು ಅವರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...