Homeಕರ್ನಾಟಕಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!

ಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ಧ ಇಡೀ ದೇಶವೇ ಹೋರಾಡುತ್ತಿದೆ. ಆದರೆ ಈ ಎರಡು ಕಾಲೇಜುಗಳು ಮಾತ್ರ ಹಣ ದೋಚುವ ತಮ್ಮ ನಿತ್ಯಕಾಯಕದಲ್ಲಿ ನಿರತವಾಗಿವೆ. ಆ ಮೂಲಕ ಯಾರೇ ಹೋರಾಡಲಿ, ಯಾರೇ ಕೂಗಾಡಲಿ, ನಮ್ಮ ಹಣ ದೋಚುವುದರಲ್ಲಿ ಸಾಟಿ ಇಲ್ಲ ಎನ್ನುತ್ತಿದ್ದಾರೆ ಬಳ್ಳಾರಿಯ ಈ ಎರಡು ಖಾಸಗಿ ಕಾಲೇಜುಗಳು.

ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇನ್ನೂ ಆರಂಭವೇ ಆಗಿಲ್ಲ. ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಶಿಕ್ಷಣ ತಜ್ಞರು ಎಚ್ವರಿಕೆ ನೀಡುತ್ತಿದ್ದಾರೆ. ಆದರೆ ಬಳ್ಳಾರಿಯಲ್ಲಿರುವ ಶ್ರೀ ಚೈತನ್ಯ ಎಜುಕೇಷನ್ ಇನ್ಸ್ಟಿಟ್ಯೂಟ್ ಮತ್ತು ನಾರಾಯಣ ಶಿಕ್ಷಣ ಸಂಸ್ಥೆಗಳು ಈಗಾಗಲೇ ಭರ್ಜರಿಯಾಗಿ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ಮಾಡಿಕೊಳ್ಳುತ್ತಿವೆ.

ಅಷ್ಟು ಮಾತ್ರವಲ್ಲದೇ ವಿದ್ಯಾರ್ಥಿಗಳಿಂದ ತಲಾ 70,000 ಹಣ ಪಡೆದು ರಶೀದಿ ನೀಡಲಾಗಿದೆ. ಈ ಕುರಿತ ಎಲ್ಲಾ ದಾಖಲೆಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಈ ಬಗ್ಗೆ ಮೊದಲಿಗೆ ಎನ್‌ಎಸ್‌ಯುಐ ಬಳ್ಳಾರಿ ಜಿಲ್ಲಾಧ್ಯಕ್ಷ ಸಿದ್ದು ಹಳ್ಳೇಗೌಡರವರು ಬಳ್ಳಾರಿ ಜಿಲ್ಲಾಧಿಕಾರಿಗಳು ಮತ್ತು ಡಿಡಿಪಿಐರವರಿಗೆ ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

 

ರಾಜ್ಯ ಕಾಂಗ್ರೆಸ್‌ ಪಕ್ಷವು ಟ್ವೀಟ್‌ ಮಾಡಿದ್ದು, ರಾಜ್ಯ ಸರ್ಕಾರ ಮತ್ತು ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. “ಸುರೇಶ್‌ ಕುಮಾರ್‌ ಅವರೇ, ಎಲ್ಲಾ ವಿಷಯಗಳಲ್ಲೂ ಬಹಳ ನಾಟಕೀಯವಾಗಿ ವರ್ತಿಸುವ ತಾವು ಅನುಮತಿ ಇಲ್ಲದೇ ಪದವಿ ಪೂರ್ವ ಕಾಲೇಜು ನಡೆಯುತ್ತಿರುವ ಬಗ್ಗೆ, ಎಸ್ಎಸ್ಎಲ್‌ಸಿ ಪರೀಕ್ಷೆಗಳೇ ನಡೆಯದೆ ಪ್ರಥಮ ಪಿಯುಸಿಗೆ ದಾಖಲಾತಿ ನಡೆಸುತ್ತಿರುವ ಬಗ್ಗೆ ಯಾವ ಕ್ರಮ ಜರುಗಿಸುವಿರಿ?
ಅಕ್ರಮ ನಡೆಸುತ್ತಿರುವ ಕಾಲೇಜುಗಳ ಪರವಾನಗಿ ರದ್ದುಪಡಿಸಿ ನಿಮ್ಮ ಬದ್ಧತೆ ತೋರಿಸಿ” ಎಂದು ಸವಾಲೆಸೆದಿದೆ.

1983ರ ಕರ್ನಾಟಕ ಶಿಕ್ಷಣ ಕಾಯ್ದೆಯ ಪ್ರಕಾರ ಅವಧಿಗೆ ಮುನ್ನವೇ ದಾಖಲಾತಿ ಮಾಡಿಕೊಳ್ಳುವುದು ನಿಯಮಗಳ ಉಲ್ಲಂಘನೆಯಾಗುತ್ತದೆ. ಅದರಲ್ಲಿಯೂ ಕೊರೊನಾದಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಈ ಕಾಲೇಜುಗಳು ಹಣ ವಸೂಲಿಗಿಳಿದಿವೆ.

ಒಟ್ಟಾರೆಯಾಗಿ ಶಿಕ್ಷಣ ಎನ್ನುವುದು ಮನುಷ್ಯನ ಸಮಗ್ರ ವಿಕಾಸಕ್ಕೆ ದಾರಿಯಾಗಬೇಕು. ಆದರೆ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಲು ಆರಂಭಿಸಿದರೋ ಅಂದಿನಿಂದ ಎಲ್ಲಾ ಮೌಲ್ಯಗಳಿಗೂ ಬೆಲೆ ಇಲ್ಲದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...