Homeಎಕಾನಮಿ1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತವು ಕೊರೋನಾ ಬಿಕ್ಕಟ್ಟನ್ನು ನಿಭಾಯಿಸಿ ಪ್ರಪಂಚ ಮಟ್ಟದಲ್ಲಿ ತಲೆಯೆತ್ತಿ ನಿಲ್ಲಲು ಮತ್ತು ಜನರ ಹಿತ ಕಾಪಾಡಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಬೇಕು ಎಂಬ ಅಭಿಯಾನ ಆರಂಭವಾಗಿದೆ.

ಮೇಧಾ ಪಾಟ್ಕರ್, ಅರುಣಾ ರಾಯ್‌, ಪ್ರೊ.ಅನಿಲ್‌ ಸದ್ಗೋಪಾಲ್‌, ನ್ಯಾಯಾಧೀಶ ಬಿ ಜಿ ಕೋಲ್ಸೆ ಪಾಟೀಲ್ ಸೇರಿದಂತೆ ಹಲವರು ಆರಂಭಿಸಿರುವ ಈ ಅಭಿಯಾನದಲ್ಲಿ ’2020 ಮೇ 1 ರ ಸಂಪತ್ತಿನ ತೆರಿಗೆ ಪಿಟಿಷನ್‌ಗೆ’ ಸಹಿ ಮಾಡುವ ಮೂಲಕ ಪಾಲ್ಗೊಳ್ಳಿ ಎಂದು ಕರ್ನಾಟಕದ ದೇವನೂರು ಮಹಾದೇವ, ಎ.ಆರ್‌ ವಾಸವಿ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ.

ಭಾರತವು ಕಲ್ಯಾಣರಾಜ್ಯ (Welfare State)ಕಡೆಗೆ ಚಲಿಸಬೇಕೆಂಬ ಆಶಯಗಳು ಇದ್ದಾಗ 1957ರಲ್ಲೇ ಸಂಪತ್ತಿನ ಮೇಲೆ ತೆರಿಗೆ ಪರಿಕಲ್ಪನೆ ಜಾರಿಯಲ್ಲಿತ್ತಾದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಆದರೆ, 1991ರ ನಂತರ ಮಾರುಕಟ್ಟೆ ಶಕ್ತಿಗಳು ಆಳ್ವಿಕೆಯನ್ನು ನಿಯಂತ್ರಿಸತೊಡಗಿದ ಪರಿಣಾಮವಾಗಿ 2015 ರಲ್ಲಿ ಕೇಂದ್ರ ಸರ್ಕಾರವು ಸಂಪತ್ತಿನ ಮೇಲಿನ ತೆರಿಗೆ ಪರಿಕಲ್ಪನೆಯನ್ನೇ ರದ್ದುಮಾಡಿಬಿಟ್ಟಿತು. ಆದರೀಗ, ಒಂದು ಲಕ್ಷ ದಾಟಿ ಓಡುತ್ತಿರುವ ಕೊರೋನಾ ಸೋಂಕಿನ ದಾಳಿಯಿಂದ ತತ್ತರಿಸುತ್ತಿರುವ ಭಾರತವು ಚೇತರಿಸಿಕೊಳ್ಳುವಂತಾಗಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿಯಾದರೂ ಆರ್ಥಿಕತೆಯನ್ನು ತಹಬಂದಿಗೆ ತರುವುದು ಇಂದಿನ ತುರ್ತಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ. ಈ ವಿಚಾರದಲ್ಲಿ ಜನರಿಂದ ಆಯ್ಕೆಯಾದ ಮತ್ತು ಶಕ್ತಿಯುತವಾದ ಯಾವುದೇ ಸರ್ಕಾರವು ಹಿಂದೆ-ಮುಂದೆ ನೋಡದೆ ತುಂಬಾ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಚಿಂತಕರು ಒತ್ತಾಯಿಸಿದ್ದಾರೆ.

ಇಂದಿನ ಕೊರೋನಾ ಬಿಕ್ಕಟ್ಟಿನ ಭಯಂಕರ ಪರಿಸ್ಥಿತಿಯನ್ನು ಎದುರಿಸಲು ಇತ್ತೀಚೆಗೆ, ನಮ್ಮ ಪ್ರಧಾನ ಮಂತ್ರಿಗಳು ಘೋಷಿಸಿರುವ 20 ಲಕ್ಷಕೋಟಿ ಪ್ಯಾಕೇಜ್‌ನ ಒಳಹೊಕ್ಕು ನೋಡಿದರೆ, ಇದರಲ್ಲಿ ಎಲ್ಲಾ ಕೂಡಿ ಕಳೆದು ವಾಸ್ತವವಾಗಿ ಸರ್ಕಾರ ಕೋವಿಡ್‌ನ ಆರ್ಥಿಕ ಮುಗ್ಗಟ್ಟು ಎದುರಿಸಲು ವಾಸ್ತವವಾಗಿ ಘೋಷಿಸಿರುವುದು ಹೆಚ್ಚೆಂದರೆ 2 ಲಕ್ಷಕೋಟಿ ರೂಪಾಯಿಗಳಾಗಬಹುದಷ್ಟೆ. ಹೀಗೆಂದೇ ಎಲ್ಲಾ ಆರ್ಥಿಕ ತಜ್ಞರೂ, ವಿವಿಧ ಬ್ಯಾಂಕಿನ ಮುಖ್ಯಸ್ಥರೂ ಹೇಳುತ್ತಿದ್ದಾರೆ. ಸರ್ಕಾರವೂ ಇದನ್ನು ನಿರಾಕರಿಸಿಲ್ಲ. ವಾಸ್ತವ ಹೀಗಿರುವಾಗ, ಈ ಕೊರೋನ ದುರಂತ ಸಂದರ್ಭದಲ್ಲಿನ ಸಮಾಜೋ-ಆರ್ಥಿಕ ಬಿಕ್ಕಟ್ಟನ್ನು ನಿಜವಾಗಿ, ಯಶಸ್ವಿಯಾಗಿ ಮತ್ತು ಮಾನವೀಯವಾಗಿ ನಿರ್ವಹಿಸುವ ಸಲುವಾಗಿ ದೇಶದ 1% ಅತಿಶ್ರೀಮಂತರಿಗೆ ಸಂಪತ್ತಿನ ಮೇಲೆ 2%, ಸಂಪತ್ತಿನ ತೆರಿಗೆ ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ನ್ಯಾಯಯುತವಾದುದು ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ದೇಶದ ಪ್ರಜ್ಞಾವಂತರು 2020 ಮೇ 1 ರಂದು ಪಿಟಿಷನ್ ಹಾಕಿದ್ದಾರೆ. ಅದಕ್ಕೆ ಕರ್ನಾಟಕ ಜನತೆ ಸಹಿ ಮಾಡಿ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಪ್ರವರ್ತಕರಾಗಿ ಪತ್ರಿಕಾ ಹೇಳಿಕೆಗೆ ಎ. ಆರ್. ವಾಸವಿ, ವಿ.ಕೆ.ನಟರಾಜ್, ಟಿ.ಆರ್. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ದೇವನೂರ ಮಹಾದೇವ, ಎಸ್. ಆರ್, ಹಿರೇಮಠ್, ದು. ಸರಸ್ವತಿ, ಚುಕ್ಕಿ ನಂಜುಂಡಸ್ವಾಮಿ, ರೂಪ ಹಾಸನ, ಸಪ್ತಗಿರಿ ಐಯ್ಯಂಗಾರ್, ಎ. ನಾರಾಯಣ, ಕೆ.ಸಿ.ರಘು, ಪ್ರಕಾಶ ಕಮ್ಮರಡಿ, ಡಾ. ರಜಾಕ್ ಉಸ್ತಾದ್ ಸಹಿ ಹಾಕಿದ್ದಾರೆ.

ಈ ಆಂದೋಲನಕ್ಕೆ ನೀವೂ ಸಹಿ ಮಾಡಿ ಬೆಂಬಲ ಸೂಚಿಸುವುದಿದ್ದರೆ ಇಲ್ಲಿ ಕ್ಲಿಕ್‌ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...