Homeಎಕಾನಮಿ1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತವು ಕೊರೋನಾ ಬಿಕ್ಕಟ್ಟನ್ನು ನಿಭಾಯಿಸಿ ಪ್ರಪಂಚ ಮಟ್ಟದಲ್ಲಿ ತಲೆಯೆತ್ತಿ ನಿಲ್ಲಲು ಮತ್ತು ಜನರ ಹಿತ ಕಾಪಾಡಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಬೇಕು ಎಂಬ ಅಭಿಯಾನ ಆರಂಭವಾಗಿದೆ.

ಮೇಧಾ ಪಾಟ್ಕರ್, ಅರುಣಾ ರಾಯ್‌, ಪ್ರೊ.ಅನಿಲ್‌ ಸದ್ಗೋಪಾಲ್‌, ನ್ಯಾಯಾಧೀಶ ಬಿ ಜಿ ಕೋಲ್ಸೆ ಪಾಟೀಲ್ ಸೇರಿದಂತೆ ಹಲವರು ಆರಂಭಿಸಿರುವ ಈ ಅಭಿಯಾನದಲ್ಲಿ ’2020 ಮೇ 1 ರ ಸಂಪತ್ತಿನ ತೆರಿಗೆ ಪಿಟಿಷನ್‌ಗೆ’ ಸಹಿ ಮಾಡುವ ಮೂಲಕ ಪಾಲ್ಗೊಳ್ಳಿ ಎಂದು ಕರ್ನಾಟಕದ ದೇವನೂರು ಮಹಾದೇವ, ಎ.ಆರ್‌ ವಾಸವಿ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ.

ಭಾರತವು ಕಲ್ಯಾಣರಾಜ್ಯ (Welfare State)ಕಡೆಗೆ ಚಲಿಸಬೇಕೆಂಬ ಆಶಯಗಳು ಇದ್ದಾಗ 1957ರಲ್ಲೇ ಸಂಪತ್ತಿನ ಮೇಲೆ ತೆರಿಗೆ ಪರಿಕಲ್ಪನೆ ಜಾರಿಯಲ್ಲಿತ್ತಾದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಆದರೆ, 1991ರ ನಂತರ ಮಾರುಕಟ್ಟೆ ಶಕ್ತಿಗಳು ಆಳ್ವಿಕೆಯನ್ನು ನಿಯಂತ್ರಿಸತೊಡಗಿದ ಪರಿಣಾಮವಾಗಿ 2015 ರಲ್ಲಿ ಕೇಂದ್ರ ಸರ್ಕಾರವು ಸಂಪತ್ತಿನ ಮೇಲಿನ ತೆರಿಗೆ ಪರಿಕಲ್ಪನೆಯನ್ನೇ ರದ್ದುಮಾಡಿಬಿಟ್ಟಿತು. ಆದರೀಗ, ಒಂದು ಲಕ್ಷ ದಾಟಿ ಓಡುತ್ತಿರುವ ಕೊರೋನಾ ಸೋಂಕಿನ ದಾಳಿಯಿಂದ ತತ್ತರಿಸುತ್ತಿರುವ ಭಾರತವು ಚೇತರಿಸಿಕೊಳ್ಳುವಂತಾಗಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿಯಾದರೂ ಆರ್ಥಿಕತೆಯನ್ನು ತಹಬಂದಿಗೆ ತರುವುದು ಇಂದಿನ ತುರ್ತಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ. ಈ ವಿಚಾರದಲ್ಲಿ ಜನರಿಂದ ಆಯ್ಕೆಯಾದ ಮತ್ತು ಶಕ್ತಿಯುತವಾದ ಯಾವುದೇ ಸರ್ಕಾರವು ಹಿಂದೆ-ಮುಂದೆ ನೋಡದೆ ತುಂಬಾ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಚಿಂತಕರು ಒತ್ತಾಯಿಸಿದ್ದಾರೆ.

ಇಂದಿನ ಕೊರೋನಾ ಬಿಕ್ಕಟ್ಟಿನ ಭಯಂಕರ ಪರಿಸ್ಥಿತಿಯನ್ನು ಎದುರಿಸಲು ಇತ್ತೀಚೆಗೆ, ನಮ್ಮ ಪ್ರಧಾನ ಮಂತ್ರಿಗಳು ಘೋಷಿಸಿರುವ 20 ಲಕ್ಷಕೋಟಿ ಪ್ಯಾಕೇಜ್‌ನ ಒಳಹೊಕ್ಕು ನೋಡಿದರೆ, ಇದರಲ್ಲಿ ಎಲ್ಲಾ ಕೂಡಿ ಕಳೆದು ವಾಸ್ತವವಾಗಿ ಸರ್ಕಾರ ಕೋವಿಡ್‌ನ ಆರ್ಥಿಕ ಮುಗ್ಗಟ್ಟು ಎದುರಿಸಲು ವಾಸ್ತವವಾಗಿ ಘೋಷಿಸಿರುವುದು ಹೆಚ್ಚೆಂದರೆ 2 ಲಕ್ಷಕೋಟಿ ರೂಪಾಯಿಗಳಾಗಬಹುದಷ್ಟೆ. ಹೀಗೆಂದೇ ಎಲ್ಲಾ ಆರ್ಥಿಕ ತಜ್ಞರೂ, ವಿವಿಧ ಬ್ಯಾಂಕಿನ ಮುಖ್ಯಸ್ಥರೂ ಹೇಳುತ್ತಿದ್ದಾರೆ. ಸರ್ಕಾರವೂ ಇದನ್ನು ನಿರಾಕರಿಸಿಲ್ಲ. ವಾಸ್ತವ ಹೀಗಿರುವಾಗ, ಈ ಕೊರೋನ ದುರಂತ ಸಂದರ್ಭದಲ್ಲಿನ ಸಮಾಜೋ-ಆರ್ಥಿಕ ಬಿಕ್ಕಟ್ಟನ್ನು ನಿಜವಾಗಿ, ಯಶಸ್ವಿಯಾಗಿ ಮತ್ತು ಮಾನವೀಯವಾಗಿ ನಿರ್ವಹಿಸುವ ಸಲುವಾಗಿ ದೇಶದ 1% ಅತಿಶ್ರೀಮಂತರಿಗೆ ಸಂಪತ್ತಿನ ಮೇಲೆ 2%, ಸಂಪತ್ತಿನ ತೆರಿಗೆ ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ನ್ಯಾಯಯುತವಾದುದು ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ದೇಶದ ಪ್ರಜ್ಞಾವಂತರು 2020 ಮೇ 1 ರಂದು ಪಿಟಿಷನ್ ಹಾಕಿದ್ದಾರೆ. ಅದಕ್ಕೆ ಕರ್ನಾಟಕ ಜನತೆ ಸಹಿ ಮಾಡಿ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಪ್ರವರ್ತಕರಾಗಿ ಪತ್ರಿಕಾ ಹೇಳಿಕೆಗೆ ಎ. ಆರ್. ವಾಸವಿ, ವಿ.ಕೆ.ನಟರಾಜ್, ಟಿ.ಆರ್. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ದೇವನೂರ ಮಹಾದೇವ, ಎಸ್. ಆರ್, ಹಿರೇಮಠ್, ದು. ಸರಸ್ವತಿ, ಚುಕ್ಕಿ ನಂಜುಂಡಸ್ವಾಮಿ, ರೂಪ ಹಾಸನ, ಸಪ್ತಗಿರಿ ಐಯ್ಯಂಗಾರ್, ಎ. ನಾರಾಯಣ, ಕೆ.ಸಿ.ರಘು, ಪ್ರಕಾಶ ಕಮ್ಮರಡಿ, ಡಾ. ರಜಾಕ್ ಉಸ್ತಾದ್ ಸಹಿ ಹಾಕಿದ್ದಾರೆ.

ಈ ಆಂದೋಲನಕ್ಕೆ ನೀವೂ ಸಹಿ ಮಾಡಿ ಬೆಂಬಲ ಸೂಚಿಸುವುದಿದ್ದರೆ ಇಲ್ಲಿ ಕ್ಲಿಕ್‌ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...