Homeಎಕಾನಮಿ1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತವು ಕೊರೋನಾ ಬಿಕ್ಕಟ್ಟನ್ನು ನಿಭಾಯಿಸಿ ಪ್ರಪಂಚ ಮಟ್ಟದಲ್ಲಿ ತಲೆಯೆತ್ತಿ ನಿಲ್ಲಲು ಮತ್ತು ಜನರ ಹಿತ ಕಾಪಾಡಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಬೇಕು ಎಂಬ ಅಭಿಯಾನ ಆರಂಭವಾಗಿದೆ.

ಮೇಧಾ ಪಾಟ್ಕರ್, ಅರುಣಾ ರಾಯ್‌, ಪ್ರೊ.ಅನಿಲ್‌ ಸದ್ಗೋಪಾಲ್‌, ನ್ಯಾಯಾಧೀಶ ಬಿ ಜಿ ಕೋಲ್ಸೆ ಪಾಟೀಲ್ ಸೇರಿದಂತೆ ಹಲವರು ಆರಂಭಿಸಿರುವ ಈ ಅಭಿಯಾನದಲ್ಲಿ ’2020 ಮೇ 1 ರ ಸಂಪತ್ತಿನ ತೆರಿಗೆ ಪಿಟಿಷನ್‌ಗೆ’ ಸಹಿ ಮಾಡುವ ಮೂಲಕ ಪಾಲ್ಗೊಳ್ಳಿ ಎಂದು ಕರ್ನಾಟಕದ ದೇವನೂರು ಮಹಾದೇವ, ಎ.ಆರ್‌ ವಾಸವಿ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ.

ಭಾರತವು ಕಲ್ಯಾಣರಾಜ್ಯ (Welfare State)ಕಡೆಗೆ ಚಲಿಸಬೇಕೆಂಬ ಆಶಯಗಳು ಇದ್ದಾಗ 1957ರಲ್ಲೇ ಸಂಪತ್ತಿನ ಮೇಲೆ ತೆರಿಗೆ ಪರಿಕಲ್ಪನೆ ಜಾರಿಯಲ್ಲಿತ್ತಾದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಆದರೆ, 1991ರ ನಂತರ ಮಾರುಕಟ್ಟೆ ಶಕ್ತಿಗಳು ಆಳ್ವಿಕೆಯನ್ನು ನಿಯಂತ್ರಿಸತೊಡಗಿದ ಪರಿಣಾಮವಾಗಿ 2015 ರಲ್ಲಿ ಕೇಂದ್ರ ಸರ್ಕಾರವು ಸಂಪತ್ತಿನ ಮೇಲಿನ ತೆರಿಗೆ ಪರಿಕಲ್ಪನೆಯನ್ನೇ ರದ್ದುಮಾಡಿಬಿಟ್ಟಿತು. ಆದರೀಗ, ಒಂದು ಲಕ್ಷ ದಾಟಿ ಓಡುತ್ತಿರುವ ಕೊರೋನಾ ಸೋಂಕಿನ ದಾಳಿಯಿಂದ ತತ್ತರಿಸುತ್ತಿರುವ ಭಾರತವು ಚೇತರಿಸಿಕೊಳ್ಳುವಂತಾಗಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿಯಾದರೂ ಆರ್ಥಿಕತೆಯನ್ನು ತಹಬಂದಿಗೆ ತರುವುದು ಇಂದಿನ ತುರ್ತಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ. ಈ ವಿಚಾರದಲ್ಲಿ ಜನರಿಂದ ಆಯ್ಕೆಯಾದ ಮತ್ತು ಶಕ್ತಿಯುತವಾದ ಯಾವುದೇ ಸರ್ಕಾರವು ಹಿಂದೆ-ಮುಂದೆ ನೋಡದೆ ತುಂಬಾ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಚಿಂತಕರು ಒತ್ತಾಯಿಸಿದ್ದಾರೆ.

ಇಂದಿನ ಕೊರೋನಾ ಬಿಕ್ಕಟ್ಟಿನ ಭಯಂಕರ ಪರಿಸ್ಥಿತಿಯನ್ನು ಎದುರಿಸಲು ಇತ್ತೀಚೆಗೆ, ನಮ್ಮ ಪ್ರಧಾನ ಮಂತ್ರಿಗಳು ಘೋಷಿಸಿರುವ 20 ಲಕ್ಷಕೋಟಿ ಪ್ಯಾಕೇಜ್‌ನ ಒಳಹೊಕ್ಕು ನೋಡಿದರೆ, ಇದರಲ್ಲಿ ಎಲ್ಲಾ ಕೂಡಿ ಕಳೆದು ವಾಸ್ತವವಾಗಿ ಸರ್ಕಾರ ಕೋವಿಡ್‌ನ ಆರ್ಥಿಕ ಮುಗ್ಗಟ್ಟು ಎದುರಿಸಲು ವಾಸ್ತವವಾಗಿ ಘೋಷಿಸಿರುವುದು ಹೆಚ್ಚೆಂದರೆ 2 ಲಕ್ಷಕೋಟಿ ರೂಪಾಯಿಗಳಾಗಬಹುದಷ್ಟೆ. ಹೀಗೆಂದೇ ಎಲ್ಲಾ ಆರ್ಥಿಕ ತಜ್ಞರೂ, ವಿವಿಧ ಬ್ಯಾಂಕಿನ ಮುಖ್ಯಸ್ಥರೂ ಹೇಳುತ್ತಿದ್ದಾರೆ. ಸರ್ಕಾರವೂ ಇದನ್ನು ನಿರಾಕರಿಸಿಲ್ಲ. ವಾಸ್ತವ ಹೀಗಿರುವಾಗ, ಈ ಕೊರೋನ ದುರಂತ ಸಂದರ್ಭದಲ್ಲಿನ ಸಮಾಜೋ-ಆರ್ಥಿಕ ಬಿಕ್ಕಟ್ಟನ್ನು ನಿಜವಾಗಿ, ಯಶಸ್ವಿಯಾಗಿ ಮತ್ತು ಮಾನವೀಯವಾಗಿ ನಿರ್ವಹಿಸುವ ಸಲುವಾಗಿ ದೇಶದ 1% ಅತಿಶ್ರೀಮಂತರಿಗೆ ಸಂಪತ್ತಿನ ಮೇಲೆ 2%, ಸಂಪತ್ತಿನ ತೆರಿಗೆ ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ನ್ಯಾಯಯುತವಾದುದು ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ದೇಶದ ಪ್ರಜ್ಞಾವಂತರು 2020 ಮೇ 1 ರಂದು ಪಿಟಿಷನ್ ಹಾಕಿದ್ದಾರೆ. ಅದಕ್ಕೆ ಕರ್ನಾಟಕ ಜನತೆ ಸಹಿ ಮಾಡಿ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಪ್ರವರ್ತಕರಾಗಿ ಪತ್ರಿಕಾ ಹೇಳಿಕೆಗೆ ಎ. ಆರ್. ವಾಸವಿ, ವಿ.ಕೆ.ನಟರಾಜ್, ಟಿ.ಆರ್. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ದೇವನೂರ ಮಹಾದೇವ, ಎಸ್. ಆರ್, ಹಿರೇಮಠ್, ದು. ಸರಸ್ವತಿ, ಚುಕ್ಕಿ ನಂಜುಂಡಸ್ವಾಮಿ, ರೂಪ ಹಾಸನ, ಸಪ್ತಗಿರಿ ಐಯ್ಯಂಗಾರ್, ಎ. ನಾರಾಯಣ, ಕೆ.ಸಿ.ರಘು, ಪ್ರಕಾಶ ಕಮ್ಮರಡಿ, ಡಾ. ರಜಾಕ್ ಉಸ್ತಾದ್ ಸಹಿ ಹಾಕಿದ್ದಾರೆ.

ಈ ಆಂದೋಲನಕ್ಕೆ ನೀವೂ ಸಹಿ ಮಾಡಿ ಬೆಂಬಲ ಸೂಚಿಸುವುದಿದ್ದರೆ ಇಲ್ಲಿ ಕ್ಲಿಕ್‌ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...