Homeಎಕಾನಮಿ1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತವು ಕೊರೋನಾ ಬಿಕ್ಕಟ್ಟನ್ನು ನಿಭಾಯಿಸಿ ಪ್ರಪಂಚ ಮಟ್ಟದಲ್ಲಿ ತಲೆಯೆತ್ತಿ ನಿಲ್ಲಲು ಮತ್ತು ಜನರ ಹಿತ ಕಾಪಾಡಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಬೇಕು ಎಂಬ ಅಭಿಯಾನ ಆರಂಭವಾಗಿದೆ.

ಮೇಧಾ ಪಾಟ್ಕರ್, ಅರುಣಾ ರಾಯ್‌, ಪ್ರೊ.ಅನಿಲ್‌ ಸದ್ಗೋಪಾಲ್‌, ನ್ಯಾಯಾಧೀಶ ಬಿ ಜಿ ಕೋಲ್ಸೆ ಪಾಟೀಲ್ ಸೇರಿದಂತೆ ಹಲವರು ಆರಂಭಿಸಿರುವ ಈ ಅಭಿಯಾನದಲ್ಲಿ ’2020 ಮೇ 1 ರ ಸಂಪತ್ತಿನ ತೆರಿಗೆ ಪಿಟಿಷನ್‌ಗೆ’ ಸಹಿ ಮಾಡುವ ಮೂಲಕ ಪಾಲ್ಗೊಳ್ಳಿ ಎಂದು ಕರ್ನಾಟಕದ ದೇವನೂರು ಮಹಾದೇವ, ಎ.ಆರ್‌ ವಾಸವಿ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ.

ಭಾರತವು ಕಲ್ಯಾಣರಾಜ್ಯ (Welfare State)ಕಡೆಗೆ ಚಲಿಸಬೇಕೆಂಬ ಆಶಯಗಳು ಇದ್ದಾಗ 1957ರಲ್ಲೇ ಸಂಪತ್ತಿನ ಮೇಲೆ ತೆರಿಗೆ ಪರಿಕಲ್ಪನೆ ಜಾರಿಯಲ್ಲಿತ್ತಾದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಆದರೆ, 1991ರ ನಂತರ ಮಾರುಕಟ್ಟೆ ಶಕ್ತಿಗಳು ಆಳ್ವಿಕೆಯನ್ನು ನಿಯಂತ್ರಿಸತೊಡಗಿದ ಪರಿಣಾಮವಾಗಿ 2015 ರಲ್ಲಿ ಕೇಂದ್ರ ಸರ್ಕಾರವು ಸಂಪತ್ತಿನ ಮೇಲಿನ ತೆರಿಗೆ ಪರಿಕಲ್ಪನೆಯನ್ನೇ ರದ್ದುಮಾಡಿಬಿಟ್ಟಿತು. ಆದರೀಗ, ಒಂದು ಲಕ್ಷ ದಾಟಿ ಓಡುತ್ತಿರುವ ಕೊರೋನಾ ಸೋಂಕಿನ ದಾಳಿಯಿಂದ ತತ್ತರಿಸುತ್ತಿರುವ ಭಾರತವು ಚೇತರಿಸಿಕೊಳ್ಳುವಂತಾಗಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿಯಾದರೂ ಆರ್ಥಿಕತೆಯನ್ನು ತಹಬಂದಿಗೆ ತರುವುದು ಇಂದಿನ ತುರ್ತಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ. ಈ ವಿಚಾರದಲ್ಲಿ ಜನರಿಂದ ಆಯ್ಕೆಯಾದ ಮತ್ತು ಶಕ್ತಿಯುತವಾದ ಯಾವುದೇ ಸರ್ಕಾರವು ಹಿಂದೆ-ಮುಂದೆ ನೋಡದೆ ತುಂಬಾ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಚಿಂತಕರು ಒತ್ತಾಯಿಸಿದ್ದಾರೆ.

ಇಂದಿನ ಕೊರೋನಾ ಬಿಕ್ಕಟ್ಟಿನ ಭಯಂಕರ ಪರಿಸ್ಥಿತಿಯನ್ನು ಎದುರಿಸಲು ಇತ್ತೀಚೆಗೆ, ನಮ್ಮ ಪ್ರಧಾನ ಮಂತ್ರಿಗಳು ಘೋಷಿಸಿರುವ 20 ಲಕ್ಷಕೋಟಿ ಪ್ಯಾಕೇಜ್‌ನ ಒಳಹೊಕ್ಕು ನೋಡಿದರೆ, ಇದರಲ್ಲಿ ಎಲ್ಲಾ ಕೂಡಿ ಕಳೆದು ವಾಸ್ತವವಾಗಿ ಸರ್ಕಾರ ಕೋವಿಡ್‌ನ ಆರ್ಥಿಕ ಮುಗ್ಗಟ್ಟು ಎದುರಿಸಲು ವಾಸ್ತವವಾಗಿ ಘೋಷಿಸಿರುವುದು ಹೆಚ್ಚೆಂದರೆ 2 ಲಕ್ಷಕೋಟಿ ರೂಪಾಯಿಗಳಾಗಬಹುದಷ್ಟೆ. ಹೀಗೆಂದೇ ಎಲ್ಲಾ ಆರ್ಥಿಕ ತಜ್ಞರೂ, ವಿವಿಧ ಬ್ಯಾಂಕಿನ ಮುಖ್ಯಸ್ಥರೂ ಹೇಳುತ್ತಿದ್ದಾರೆ. ಸರ್ಕಾರವೂ ಇದನ್ನು ನಿರಾಕರಿಸಿಲ್ಲ. ವಾಸ್ತವ ಹೀಗಿರುವಾಗ, ಈ ಕೊರೋನ ದುರಂತ ಸಂದರ್ಭದಲ್ಲಿನ ಸಮಾಜೋ-ಆರ್ಥಿಕ ಬಿಕ್ಕಟ್ಟನ್ನು ನಿಜವಾಗಿ, ಯಶಸ್ವಿಯಾಗಿ ಮತ್ತು ಮಾನವೀಯವಾಗಿ ನಿರ್ವಹಿಸುವ ಸಲುವಾಗಿ ದೇಶದ 1% ಅತಿಶ್ರೀಮಂತರಿಗೆ ಸಂಪತ್ತಿನ ಮೇಲೆ 2%, ಸಂಪತ್ತಿನ ತೆರಿಗೆ ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ನ್ಯಾಯಯುತವಾದುದು ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ದೇಶದ ಪ್ರಜ್ಞಾವಂತರು 2020 ಮೇ 1 ರಂದು ಪಿಟಿಷನ್ ಹಾಕಿದ್ದಾರೆ. ಅದಕ್ಕೆ ಕರ್ನಾಟಕ ಜನತೆ ಸಹಿ ಮಾಡಿ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಪ್ರವರ್ತಕರಾಗಿ ಪತ್ರಿಕಾ ಹೇಳಿಕೆಗೆ ಎ. ಆರ್. ವಾಸವಿ, ವಿ.ಕೆ.ನಟರಾಜ್, ಟಿ.ಆರ್. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ದೇವನೂರ ಮಹಾದೇವ, ಎಸ್. ಆರ್, ಹಿರೇಮಠ್, ದು. ಸರಸ್ವತಿ, ಚುಕ್ಕಿ ನಂಜುಂಡಸ್ವಾಮಿ, ರೂಪ ಹಾಸನ, ಸಪ್ತಗಿರಿ ಐಯ್ಯಂಗಾರ್, ಎ. ನಾರಾಯಣ, ಕೆ.ಸಿ.ರಘು, ಪ್ರಕಾಶ ಕಮ್ಮರಡಿ, ಡಾ. ರಜಾಕ್ ಉಸ್ತಾದ್ ಸಹಿ ಹಾಕಿದ್ದಾರೆ.

ಈ ಆಂದೋಲನಕ್ಕೆ ನೀವೂ ಸಹಿ ಮಾಡಿ ಬೆಂಬಲ ಸೂಚಿಸುವುದಿದ್ದರೆ ಇಲ್ಲಿ ಕ್ಲಿಕ್‌ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...