Homeಮುಖಪುಟಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ ಎಂದು ಶಿವಸೇನೆ ಹೇಳಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ‌  ರಾಜ್ಯದ ಮತ್ತು ಆಡಳಿತ ಮಿತ್ರ ಪಕ್ಷವಾದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭೇಟಿಯ ನಂತರ ಅವರು ಹೇಳಿಕೆ ನೀಡಿದ್ದು ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು ಎಂದಿದ್ದಾರೆ.

ಲಾಕ್‌ಡೌನ್ ತೆರವುಗೊಳಿಸಲು ಮತ್ತು ಅವರ ಸಲಹೆಗಳ ಬಗ್ಗ ಠಾಕ್ರೆ ಹಿಂಜರಿಯುತ್ತಿರುವುದಕ್ಕೆ ಶರದ್ ಪವಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಮಹಾರಾಷ್ಟ್ರವು ಕ್ರಮೇಣ ಲಾಕ್‌ಡೌನ್‌ ತೆರವುಗೊಳಿಸಬೇಕು ಮತ್ತು ಆರ್ಥಿಕ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸಲು ಅನಿರ್ದಿಷ್ಟ ಸ್ಥಗಿತದಿಂದ ಹೊರಬರಬೇಕು ಎಂಬ ಶರದ್ ಪವಾರ್ ಹೇಳಿಕೆಯ ಬಗ್ಗೆ ಮಿತ್ರಪಕ್ಷದ ಸಂಬಂಧಗಳಲ್ಲಿ ತೀವ್ರ ಊಹಾಪೋಹಗಳು ಎದ್ದಿದ್ದವು.

ಇದರಿಂದಾಗಿ ಮಹಾರಾಷ್ಟ್ರ ಸರ್ಕಾರದ ಮಿತ್ರ ಪಕ್ಷಗಳಲ್ಲಿ ಬಿರುಕು, ಸರ್ಕಾರ ಪತನದತ್ತ ಎಂಬ ವದಂತಿಗಳನ್ನು ಹರಡಲಾಗಿತ್ತು.

ಆದರೆ ಇದನ್ನು ಅಲ್ಲಗೆಳೆದಿರುವ ಶಿವಸೇನೆ, ಎರಡೂ ಪಕ್ಷಗಳು ವೈರಸ್ ಬಿಕ್ಕಟ್ಟು ಮತ್ತು ರಾಜ್ಯದ ಮೇಲೆ ಅದರ ಪ್ರಭಾವದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದೆ. ಶಿವಸೇನೆ ಮುಖಂಡ ಸಂಜಯ್ ರೌತ್ ಸಭೆ ನಡೆದಿದ್ದನ್ನು ದೃಢಪಡಿಸಿ, “ಸರ್ಕಾರದ ಸ್ಥಿರತೆಯ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

“ಶರದ್ ಪವಾರ್ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿನ್ನೆ ಸಂಜೆ ಮಾತೋಶ್ರಿಯಲ್ಲಿ ಭೇಟಿಯಾದರು. ಉಭಯ ನಾಯಕರು ಒಂದೂವರೆ ಗಂಟೆ ಚರ್ಚೆ ನಡೆಸಿದರು. ಸರ್ಕಾರದ ಸ್ಥಿರತೆಯ ಬಗ್ಗೆ ಯಾರಾದರೂ ಸುದ್ದಿ ಹರಡುತ್ತಿದ್ದರೆ ಅದು ಅವರ ಹೊಟ್ಟೆ ನೋವು. ಸರ್ಕಾರ ಗಟ್ಟಿಯಾಗಿದೆ, ಚಿಂತಿಸಬೇಡಿ. ಜೈ ಮಹಾರಾಷ್ಟ್ರ !! ” ಎಂದು ಶಿವಸೇನೆ ಸಂಸದ ಸಂಜಯ್ ರೌತ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಮಾತುಕತೆಗೆ ಕೆಲವು ಗಂಟೆಗಳ ಮೊದಲು, ಶರದ್ ಪವಾರ್ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿ ಮಾಡಿದ್ದರು. ರಾಜ್ಯಪಾಲರೊಂದಿಗಿನ ಸಭೆಗೆ ಪವಾರ್ ಅವರೊಂದಿಗೆ ಇದ್ದ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್, ಇದು ಕೇವಲ ಸೌಜನ್ಯದ ಸಭೆ ಎಂದು ಪ್ರತಿಪಾದಿಸಿದ್ದಾರೆ.

ಇದು ಪವಾರ್ ಸಾಹೇಬ್ ಮತ್ತು ಗೌರವಾನ್ವಿತ ರಾಜ್ಯಪಾಲರ ನಡುವಿನ ಸೌಜನ್ಯದ ಸಭೆ ಮಾತ್ರ, ನಾವು ಒಂದು ಕಪ್ ಚಹಾವನ್ನು ಸೇವಿಸಲು ಅಲ್ಲಿಗೆ ಹೋದೆವು. ರಾಜ್ಯಪಾಲ ಸಾಹೇಬ್ ಅವರು ಪವಾರ್ ಸಾಹೇಬರನ್ನು ಚಹಾಕ್ಕಾಗಿ ಆಹ್ವಾನಿಸಿದ್ದರು. ಸೌಜನ್ಯಕ್ಕಾಗಿ ನಾವು ಅಲ್ಲಿದ್ದೆವು, ಈ ಸಭೆಯಲ್ಲಿ ಯಾವುದೇ ರಾಜಕೀಯ ಇರಲಿಲ್ಲ “ಎಂದು ಮಾಜಿ ಕೇಂದ್ರ ಸಚಿವ ಪಟೇಲ್ ಹೇಳಿದ್ದಾರೆ.

ಮಹಾರಾಷ್ಟ್ರ ಆಡಳಿತದಲ್ಲಿ ರಾಜ್ಯಪಾಲ ಕೊಶ್ಯರಿಯವರ “ಹಸ್ತಕ್ಷೇಪ” ದ ವಿರುದ್ಧ ಪವಾರ್ ಈ ಹಿಂದೆ ಹರಿಹಾಯ್ದಿದ್ದರಿಂದ ಈ ಭೇಟಿಯೂ ಭಾರಿ ಕುತೂಹಲವನ್ನು ಮೂಡಿಸಿತ್ತು.

ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡಿ ರಾಜ್ಯ ಸಚಿವ ಉದಯ್ ಸಮಂತ್ ಅವರು ಯುಜಿಸಿ ಗೆ ಬರೆದ ಪತ್ರಕ್ಕೆ ಇತ್ತೀಚೆಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, “ವಿಶ್ವವಿದ್ಯಾನಿಲಯಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದಿರುವುದು ಯುಜಿಸಿ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ” ಎಂದು ಕೊಶಾರಿ ಹೇಳಿದ್ದರು. ಸಮಂತ್ ಅವರ “ಅನಗತ್ಯ ಹಸ್ತಕ್ಷೇಪ”ಕ್ಕಾಗಿ ಸೂಕ್ತ ಸೂಚನೆಗಳನ್ನು ನೀಡುವಂತೆ ಅವರು ಠಾಕ್ರೆ ಅವರನ್ನು ಕೋರಿದ್ದರು.

ಈ ಪ್ರಕ್ಷುಬ್ಧತೆಯ ಮಧ್ಯದಲ್ಲಿ, ಬಿಜೆಪಿ ನಾಯಕ ನಾರಾಯಣ್ ರಾಣೆ ಅವರು ರಾಜ್ಯಪಾಲರನ್ನು ಭೇಟಿಯಾಗಿ, ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಕೋರಿ, ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದರು.


ಓದಿ:  ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...