Homeಮುಖಪುಟಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ ಎಂದು ಶಿವಸೇನೆ ಹೇಳಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ‌  ರಾಜ್ಯದ ಮತ್ತು ಆಡಳಿತ ಮಿತ್ರ ಪಕ್ಷವಾದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭೇಟಿಯ ನಂತರ ಅವರು ಹೇಳಿಕೆ ನೀಡಿದ್ದು ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು ಎಂದಿದ್ದಾರೆ.

ಲಾಕ್‌ಡೌನ್ ತೆರವುಗೊಳಿಸಲು ಮತ್ತು ಅವರ ಸಲಹೆಗಳ ಬಗ್ಗ ಠಾಕ್ರೆ ಹಿಂಜರಿಯುತ್ತಿರುವುದಕ್ಕೆ ಶರದ್ ಪವಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಮಹಾರಾಷ್ಟ್ರವು ಕ್ರಮೇಣ ಲಾಕ್‌ಡೌನ್‌ ತೆರವುಗೊಳಿಸಬೇಕು ಮತ್ತು ಆರ್ಥಿಕ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸಲು ಅನಿರ್ದಿಷ್ಟ ಸ್ಥಗಿತದಿಂದ ಹೊರಬರಬೇಕು ಎಂಬ ಶರದ್ ಪವಾರ್ ಹೇಳಿಕೆಯ ಬಗ್ಗೆ ಮಿತ್ರಪಕ್ಷದ ಸಂಬಂಧಗಳಲ್ಲಿ ತೀವ್ರ ಊಹಾಪೋಹಗಳು ಎದ್ದಿದ್ದವು.

ಇದರಿಂದಾಗಿ ಮಹಾರಾಷ್ಟ್ರ ಸರ್ಕಾರದ ಮಿತ್ರ ಪಕ್ಷಗಳಲ್ಲಿ ಬಿರುಕು, ಸರ್ಕಾರ ಪತನದತ್ತ ಎಂಬ ವದಂತಿಗಳನ್ನು ಹರಡಲಾಗಿತ್ತು.

ಆದರೆ ಇದನ್ನು ಅಲ್ಲಗೆಳೆದಿರುವ ಶಿವಸೇನೆ, ಎರಡೂ ಪಕ್ಷಗಳು ವೈರಸ್ ಬಿಕ್ಕಟ್ಟು ಮತ್ತು ರಾಜ್ಯದ ಮೇಲೆ ಅದರ ಪ್ರಭಾವದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದೆ. ಶಿವಸೇನೆ ಮುಖಂಡ ಸಂಜಯ್ ರೌತ್ ಸಭೆ ನಡೆದಿದ್ದನ್ನು ದೃಢಪಡಿಸಿ, “ಸರ್ಕಾರದ ಸ್ಥಿರತೆಯ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

“ಶರದ್ ಪವಾರ್ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿನ್ನೆ ಸಂಜೆ ಮಾತೋಶ್ರಿಯಲ್ಲಿ ಭೇಟಿಯಾದರು. ಉಭಯ ನಾಯಕರು ಒಂದೂವರೆ ಗಂಟೆ ಚರ್ಚೆ ನಡೆಸಿದರು. ಸರ್ಕಾರದ ಸ್ಥಿರತೆಯ ಬಗ್ಗೆ ಯಾರಾದರೂ ಸುದ್ದಿ ಹರಡುತ್ತಿದ್ದರೆ ಅದು ಅವರ ಹೊಟ್ಟೆ ನೋವು. ಸರ್ಕಾರ ಗಟ್ಟಿಯಾಗಿದೆ, ಚಿಂತಿಸಬೇಡಿ. ಜೈ ಮಹಾರಾಷ್ಟ್ರ !! ” ಎಂದು ಶಿವಸೇನೆ ಸಂಸದ ಸಂಜಯ್ ರೌತ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಮಾತುಕತೆಗೆ ಕೆಲವು ಗಂಟೆಗಳ ಮೊದಲು, ಶರದ್ ಪವಾರ್ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿ ಮಾಡಿದ್ದರು. ರಾಜ್ಯಪಾಲರೊಂದಿಗಿನ ಸಭೆಗೆ ಪವಾರ್ ಅವರೊಂದಿಗೆ ಇದ್ದ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್, ಇದು ಕೇವಲ ಸೌಜನ್ಯದ ಸಭೆ ಎಂದು ಪ್ರತಿಪಾದಿಸಿದ್ದಾರೆ.

ಇದು ಪವಾರ್ ಸಾಹೇಬ್ ಮತ್ತು ಗೌರವಾನ್ವಿತ ರಾಜ್ಯಪಾಲರ ನಡುವಿನ ಸೌಜನ್ಯದ ಸಭೆ ಮಾತ್ರ, ನಾವು ಒಂದು ಕಪ್ ಚಹಾವನ್ನು ಸೇವಿಸಲು ಅಲ್ಲಿಗೆ ಹೋದೆವು. ರಾಜ್ಯಪಾಲ ಸಾಹೇಬ್ ಅವರು ಪವಾರ್ ಸಾಹೇಬರನ್ನು ಚಹಾಕ್ಕಾಗಿ ಆಹ್ವಾನಿಸಿದ್ದರು. ಸೌಜನ್ಯಕ್ಕಾಗಿ ನಾವು ಅಲ್ಲಿದ್ದೆವು, ಈ ಸಭೆಯಲ್ಲಿ ಯಾವುದೇ ರಾಜಕೀಯ ಇರಲಿಲ್ಲ “ಎಂದು ಮಾಜಿ ಕೇಂದ್ರ ಸಚಿವ ಪಟೇಲ್ ಹೇಳಿದ್ದಾರೆ.

ಮಹಾರಾಷ್ಟ್ರ ಆಡಳಿತದಲ್ಲಿ ರಾಜ್ಯಪಾಲ ಕೊಶ್ಯರಿಯವರ “ಹಸ್ತಕ್ಷೇಪ” ದ ವಿರುದ್ಧ ಪವಾರ್ ಈ ಹಿಂದೆ ಹರಿಹಾಯ್ದಿದ್ದರಿಂದ ಈ ಭೇಟಿಯೂ ಭಾರಿ ಕುತೂಹಲವನ್ನು ಮೂಡಿಸಿತ್ತು.

ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡಿ ರಾಜ್ಯ ಸಚಿವ ಉದಯ್ ಸಮಂತ್ ಅವರು ಯುಜಿಸಿ ಗೆ ಬರೆದ ಪತ್ರಕ್ಕೆ ಇತ್ತೀಚೆಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, “ವಿಶ್ವವಿದ್ಯಾನಿಲಯಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದಿರುವುದು ಯುಜಿಸಿ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ” ಎಂದು ಕೊಶಾರಿ ಹೇಳಿದ್ದರು. ಸಮಂತ್ ಅವರ “ಅನಗತ್ಯ ಹಸ್ತಕ್ಷೇಪ”ಕ್ಕಾಗಿ ಸೂಕ್ತ ಸೂಚನೆಗಳನ್ನು ನೀಡುವಂತೆ ಅವರು ಠಾಕ್ರೆ ಅವರನ್ನು ಕೋರಿದ್ದರು.

ಈ ಪ್ರಕ್ಷುಬ್ಧತೆಯ ಮಧ್ಯದಲ್ಲಿ, ಬಿಜೆಪಿ ನಾಯಕ ನಾರಾಯಣ್ ರಾಣೆ ಅವರು ರಾಜ್ಯಪಾಲರನ್ನು ಭೇಟಿಯಾಗಿ, ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಕೋರಿ, ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದರು.


ಓದಿ:  ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...