Homeಅಂತರಾಷ್ಟ್ರೀಯಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

ಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ

- Advertisement -
- Advertisement -

ಪೂರ್ವ ಲಡಾಖ್‌ನ ಲೈನ್‌ ಆಫ್‌ ಕಂಟ್ರೋಲ್‌ ಉದ್ದಕ್ಕೂ ಹಲವಾರು ಪ್ರದೇಶಗಳಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದಾರೆ. ಇದು 2017 ರಲ್ಲಿ ಡೋಕ್ಲಾಮ್ ಬಿಕ್ಕಟ್ಟಿನ ನಂತರ ಅತಿದೊಡ್ಡ ಮಿಲಿಟರಿ ಮುಖಾಮುಖಿಯಾಗಿದೆ ಎಂದು ವರದಿಯಾಗಿದೆ.

ಚೀನಾದ ಸೈನ್ಯವು ಸುಮಾರು 2,000 ದಿಂದ 2,500 ಸೈನಿಕರನ್ನು ನಿಯೋಜಿಸುತ್ತಿದೆ ಎಂದು ತಿಳಿದು ಬಂದಿರುವ ಹಿನ್ನಲೆಯಲ್ಲಿ ಎರಡು ವಿವಾದಾಸ್ಪದ ಪ್ರದೇಶಗಳಾದ ಪಾಂಗೊಂಗ್ ತ್ಸೋ ಮತ್ತು ಗಾಲ್ವಾನ್ ಕಣಿವೆಯಲ್ಲಿ ಭಾರತವು ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಉನ್ನತ ಮಿಲಿಟರಿ ಮೂಲಗಳು ತಿಳಿಸಿವೆ.

“ಈ ಪ್ರದೇಶದಲ್ಲಿ ಭಾರತೀಯ ಸೇನೆಯ ಸಾಮರ್ಥ್ಯವು ನಮ್ಮ ಎದುರಾಳಿಗಿಂತ ಉತ್ತಮವಾಗಿದೆ” ಎಂದು ಮಿಲಿಟರಿ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಇದು ಗಂಭೀರವಾಗಿದೆ, ಇದು ಸಾಮಾನ್ಯ ರೀತಿಯ ಉಲ್ಲಂಘನೆಯಲ್ಲ” ಎಂದು ಉತ್ತರ ಸೇನೆಯ ಮಾಜಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಡಿ.ಎಸ್. ಹೂಡಾ ಹೇಳಿದ್ದಾರೆ. ಈ ಪ್ರದೇಶದಲ್ಲಿ ಎರಡು ಕಡೆಯವರ ನಡುವೆ ಯಾವುದೇ ವಿವಾದಗಳಿಲ್ಲದ ಕಾರಣ ಗಾಲ್ವಾನ್‌ನಂತಹ ಪ್ರದೇಶಗಳಿಗೆ ಚೀನಾ ಅತಿಕ್ರಮಣಕ್ಕೆ ಚಿಂತಿಸುತ್ತಿದೆ ಎಂದು ಅವರು ವಿಶೇಷವಾಗಿ ಒತ್ತಿ ಹೇಳಿದ್ದಾರೆ.

ಕಾರ್ಯತಂತ್ರ ವ್ಯವಹಾರಗಳ ತಜ್ಞ ರಾಯಭಾರಿ ಅಶೋಕ್ ಕೆ ಕಾಂತಾ ಅವರು ಲೆಫ್ಟಿನೆಂಟ್ ಜನರಲ್ ಹೂಡಾ ಅವರ ವಾದವನ್ನು ಒಪ್ಪಿ, “ಚೀನಾದ ಸೈನ್ಯದಿಂದ ಅನೇಕ ಆಕ್ರಮಣಗಳು ನಡೆದಿವೆ. ಇದು ಕಳವಳಕ್ಕೆ ಕಾರಣವಾಗಿದೆ. ಇದು ದಿನನಿತ್ಯದ ನಿಲುಗಡೆಯಲ್ಲ. ಇದು ಗೊಂದಲದ ಪರಿಸ್ಥಿತಿ” ಎಂದು ಕಾಂತಾ ಹೇಳಿದರು.

ಎರಡು ಸೇನೆಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಪರಿಹರಿಸಲು ರಾಜತಾಂತ್ರಿಕ ಪ್ರಯತ್ನಗಳನ್ನು ಹೆಚ್ಚಿಸಬೇಕು ಮತ್ತು ಪಾಂಗೊಂಗ್ ತ್ಸೊ, ಡೆಮ್‌ಚಾಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಎರಡೂ ಕಡೆಯ ಸೈನಿಕರು ಮುಖಾಮುಖಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಚೀನಾದ ಕಡೆಯವರು ವಿಶೇಷವಾಗಿ ಗಾಲ್ವಾನ್ ಕಣಿವೆಯಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿದ್ದಾರೆ. ಕಳೆದ ಎರಡು ವಾರಗಳಲ್ಲಿ ಸುಮಾರು 100 ಡೇರೆಗಳನ್ನು ನಿರ್ಮಿಸಿದ್ದಾರೆ ಮತ್ತು ಬಂಕರ್‌ಗಳ ನಿರ್ಮಾಣಕ್ಕಾಗಿ ಭಾರೀ ಉಪಕರಣಗಳನ್ನು ತಂದಿದ್ದಾರೆ. ಡೆಮ್ಚೋಕ್ ಮತ್ತು ದೌಲತ್ ಬೇಗ್ ಓಲ್ಡಿ ಸೇರಿದಂತೆ ಹಲವಾರು ಸೂಕ್ಷ್ಮ ಪ್ರದೇಶಗಳಲ್ಲಿ ಭಾರತೀಯ ಪಡೆಗಳು ಗಸ್ತು ತಿರುಗಲು ಪ್ರಾರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

ಮೇ 9 ರಂದು ಉತ್ತರ ಸಿಕ್ಕಿಂನಲ್ಲಿ ಇದೇ ರೀತಿಯ ಘಟನೆ ಹಾಗೂ ಪಾಂಗೊಂಗ್ ತ್ಸೊದಲ್ಲಿ ನಡೆದ ಘಟನೆಯ ನಂತರ, ಚೀನಾ ಮಿಲಿಟರಿ ತನ್ನ ಸೈನಿಕರಿಂದಾಗಿ ಸಾಮಾನ್ಯ ಗಸ್ತು ತಿರುಗಲು ಅಡ್ಡಿಯಾಗುತ್ತಿದೆ ಎಂದು ಭಾರತ ಕಳೆದ ವಾರ ಹೇಳಿದೆ. ಗಡಿ ನಿರ್ವಹಣೆಯ ಬಗ್ಗೆ ಭಾರತ ಯಾವಾಗಲೂ ಅತ್ಯಂತ ಜವಾಬ್ದಾರಿಯುತ ಮಾರ್ಗವನ್ನು ತೆಗೆದುಕೊಂಡಿದೆ ಎಂದು ಪ್ರತಿಪಾದಿಸಿದೆ.

ಪತ್ರಿಕಾಗೋಷ್ಠಿಯಲ್ಲಿ, ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು, ಭಾರತೀಯ ಪಡೆಗಳ ಅತಿಕ್ರಮಣದಿಂದಾಗಿ ಉದ್ವಿಗ್ನತೆ ಉಂಟಾಗಿದೆ ಎಂಬ ಚೀನಾದ ವಾದವನ್ನು ಬಲವಾಗಿ ನಿರಾಕರಿಸಿದರು.

ಸಿಕ್ಕಿಂ ಮತ್ತು ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಪ್ರಯತ್ನವನ್ನು ಭಾರತೀಯ ಸೈನ್ಯ ನಡೆಸುತ್ತಿದೆ ಎಂದು ಚೀನಾ ಆರೋಪಿಸಿದ ಎರಡು ದಿನಗಳ ನಂತರ ಭಾರತದ ಪ್ರತಿಕ್ರಿಯೆ ಹೊರಬಿದ್ದಿದೆ.

ಮೇ 5 ರಂದು, ಭಾರತೀಯ ಮತ್ತು ಚೀನಾದ ಸೈನಿಕರು ಪಂಗೊಂಗ್ ತ್ಸೋ ಸರೋವರ ಪ್ರದೇಶದಲ್ಲಿ ಕಬ್ಬಿಣದ ಸ್ಟಿಕ್ಕುಗಲು, ಕೋಲುಗಳಿಂದ ಘರ್ಷಣೆ ನಡೆಸಿ,  ಕಲ್ಲು ತೂರಾಟ ನಡೆಸಿದ್ದರು. ಇದರಿಂದಾಗಿ ಎರಡೂ ಕಡೆಯ ಸೈನಿಕರು ಗಾಯಗೊಂಡಿದ್ದರು.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...