HomeUncategorizedಕೊರೊನಾ ನಿಯಂತ್ರಿಸಲು ಮೋದಿ ವಿಫಲ: ಅವರ ಮುಂದಿನ ಕ್ರಮವೇನು? - ರಾಹುಲ್‌ ಪ್ರಶ್ನೆ

ಕೊರೊನಾ ನಿಯಂತ್ರಿಸಲು ಮೋದಿ ವಿಫಲ: ಅವರ ಮುಂದಿನ ಕ್ರಮವೇನು? – ರಾಹುಲ್‌ ಪ್ರಶ್ನೆ

- Advertisement -
- Advertisement -

ಮೇ ಅಂತ್ಯದ ವೇಳೆಗೆ ಕೊರೊನಾ ಪ್ರಕರಣಗಳು ಇಳಿಮುಖವಾಗಿರುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ದಿನೇ ದಿನೇ ಪ್ರಕರಣಗಳ ಸಂಖ್ಯೆ ಏರುತ್ತಲೇ ಇವೆ. ಇದು ಮೋದಿಯವರ ವಿಫಲತೆಯನ್ನು ಸೂಚಿಸುವುದಿಲ್ಲವೇ? ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವಾಗಲೇ ಲಾಕ್‌ಡೌನ್‌ ತೆರವುಗೊಳಿಸುತ್ತಿದ್ದಾರೆ. ಹಾಗಾದರೆ ಕೊರೊನಾ ಎದುರಿಸಲು ಮೋದಿಯವರ ಮುಂದಿನ ಕ್ರಮವೇನು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ನಾಲ್ಕು ಹಂತದ ಲಾಕ್‌ಡೌನ್‌ ಹೇರಿಯೂ ಕೊರೊನಾ ನಿಯಂತ್ರಿಸಲು ವಿಫಲವಾಗಿದ್ದಾರೆ. ಕೊರೊನಾ ವೈರಸ್‌ಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಲಾಕ್‌ಡೌನ್‌ ಸಡಿಲಿಸುತ್ತಿರುವ ಏಕೈಕ ದೇಶ ಭಾರತವಾಗಿದೆ. ಹಾಗಾದರೆ ಕೊರೊನಾ ವಿರುದ್ಧದ ಮುಂದಿನ ಕ್ರಮಗಳನ್ನು ಮೋದಿಯವರು ಘೋಷಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ಮಾರ್ಕ್ಸ್ ನೀಡಲು ನಾನು ಪ್ರೊಫೆಸರ್ ಅಲ್ಲ. ರಾಜ್ಯಗಳಿಗೆ ಕೇಂದ್ರ ಸರ್ಕಾರ ನೆರವು ಸಿಗುತ್ತಿಲ್ಲ. ರಾಜ್ಯಗಳಿಗೆ ಆರ್ಥಿಕ ಪ್ಯಾಕೇಜ್ ಅವಶ್ಯಕತೆ ಇದೆ ಎಂದು ರಾಹುಲ್ ಗಾಂಧಿ ಅವರು ಒತ್ತಾಯಿಸಿದರು.

“ಜಿಡಿಪಿಯ ಶೇಕಡಾ 10 ರಷ್ಟು ಪ್ಯಾಕೇಜ್‌ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದರು. ಆದರೆ ವಾಸ್ತವವೆಂದರೆ ಜಿಡಿಪಿಯ ಶೇಕಡಾ 1 ಕ್ಕಿಂತ ಕಡಿಮೆ ಹಣವನ್ನು ನೀಡಲಾಗುತ್ತಿದೆ ಮತ್ತು ಹೆಚ್ಚಾಗಿ ಸಾಲಗಳನ್ನು ನೀಡಲಾಗುತ್ತದೆ. ಯಾವುದೇ ಹಣವನ್ನು ಜನರಿಗೆ ನೀಡಲಾಗುತ್ತಿಲ್ಲ” ಎಂದು ಅವರು ‌ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲಸ ಮತ್ತು ಕಾಸಿಲ್ಲದೆ ಪರಿತಪಿಸುತ್ತಿರುವ ಬಡವರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡದೆ ಬೇರೆ ಪರಿಹಾರ ಇಲ್ಲ. ದೇಶದ ಶೇಕಡಾ 50ರಷ್ಟು ಬಡ ಜನರಿಗೆ ತಿಂಗಳಿಗೆ 7,500 ಹಣ ವರ್ಗಾವಣೆ ಮಾಡಿ. ಅದೇ ರೀತಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬಲಿಷ್ಠಗೊಳಿಸಬೇಕು. ಇಲ್ಲದೆ ಇದ್ದರೆ ದೇಶ ದೊಡ್ಡ ಆರ್ಥಿಕ ಮುಗ್ಗಟ್ಟನ್ನು  ಎದುರಿಸಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಅವರು ಎಚ್ಚರಿಸಿದ್ದಾರೆ.

ನಾವು ನಮ್ಮ ದೇಶದ ಜನರನ್ನು ರಕ್ಷಿಸಬೇಕು. ಚೀನಾ ಗಡಿಯ ವಿಚಾರದಲ್ಲಿ ಎರಡು ರೀತಿಯ ಅಭಿಪ್ರಾಯಗಳು ಕೇಳಿ ಬರುತ್ತಿದವೆ. ಅಲ್ಲಿ ಏನು ನಡೆಯುತ್ತಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಕೇಂದ್ರ ಸರ್ಕಾರ ನಡೆಸುತ್ತಿರುವವರು ವಾಸ್ತವವನ್ನು ದೇಶದ ಮುಂದಿಡಬೇಕು. ಜನರಿಗೆ ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ತಿಳಿದಿರಬೇಕು ಎಂದು ಅವರು ಆಗ್ರಹಿಸಿದರು.

ಅಲ್ಲದೆ ರಾಹುಲ್‌ ಗಾಂಧಿಯವರು ಈ ಕುರಿತು ಟ್ವೀಟ್‌ ಸಹ ಮಾಡಿದ್ದಾರೆ. “ಎರಡು ತಿಂಗಳ ಹಿಂದೆ, ಲಾಕ್ ಡೌನ್ ಘೋಷಿಸುವಾಗ, ನಾವು 21 ದಿನಗಳಲ್ಲಿ ಕರೋನವೈರಸ್ ವಿರುದ್ಧ ಜಯ ಸಾಧಿಸುತ್ತೇವೆ ಎಂದು ಪ್ರಧಾನಿ ಹೇಳಿದ್ದರು. 60 ದಿನಕ್ಕೂ ಹೆಚ್ಚು ದಿನಗಳಾದರೂ ಸಹ ಪ್ರತಿದಿನ ರೋಗಿಗಳ ಸಂಖ್ಯೆ ತೀವ್ರವಾಗಿ ಏರುತ್ತಿದೆ. ಅಂದರೆ ಲಾಕ್‌ಡೌನ್‌ಗೆ ಈ ವೈರಸ್ ಅ‌ನ್ನು ಸೋಲಿಸಲು ಸಾಧ್ಯವಾಗಿಲ್ಲ. ಹಾಗಾದರೆ ಸರ್ಕಾರಕ್ಕೆ ನನ್ನ ಪ್ರಶ್ನೆ ಮುಂದೆ ಏನು?” ಎಂದು ರಾಹುಲ್‌ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...