Homeಕರ್ನಾಟಕ7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ

7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ

ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಚಾಸಿ ನಂಬರ್ ಇರುವ 7.5 ಲಕ್ಷ ಚಾಲಕರು ಇದ್ದಾರೆ. ಇವರಿಗೆ ಕೇವಲ 40 ಕೋಟಿ ಮಾತ್ರ ಹಣ ಮೀಸಲಿಡಲಾಗಿದೆ. ಈ ಹಣದಲ್ಲಿ ಕೇವಲ 80 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ 5000 ರೂ ಪರಿಹಾರ ನೀಡಬಹುದು.

- Advertisement -
- Advertisement -

ರಾಜ್ಯ ಸರ್ಕಾರ ಆಟೋ-ಟ್ಯಾಕ್ಸಿ ಚಾಲಕರು, ಕ್ಷೌರಿಕರು, ಮಡಿವಾಳರು ಮತ್ತು ಕಟ್ಟಡ ಕಾರ್ಮಿಕರಿಗೆ ‘ಪರಿಹಾರ’ ಘೋಷಿಸಿದ್ದರೂ ಬಹುತೇಕರಿಗೆ ಹಣ ಬಂದಿಲ್ಲ. ಸೇವಾಸಿಂಧುವಿನಲ್ಲಿ ಕಾರ್ಮಿಕರ ನೋಂದಣಿ ನಿಧಾನಗತಿಯಲ್ಲಿ ಸಾಗುತ್ತಿರುವುದು ಹಾಗೂ ಸರ್ವರ್ ಡೌನ್ ಪ್ರಮುಖ ಕಾರಣ ಎನ್ನಲಾಗಿದೆ. ಕಾರ್ಮಿಕರ ಹೆಸರಲ್ಲಿ ಸಣ್ಣಪುಟ್ಟ ವ್ಯತ್ಯಾಸವಿದ್ದರೂ ಸೇವಾಸಿಂದು ಸ್ವೀಕರಿಸುವುದಿಲ್ಲ. ಎಲ್ಲಾ ದಾಖಲೆಗಳನ್ನು ಸಲ್ಲಿಸಿಯೂ ಅದು ಒಪ್ಪಿಕೊಳ್ಳುವುದು ಕಷ್ಟವಾಗಿದೆ. ಹಾಗಾಗಿ ಫಲನುಭವಿಗಳು 5000 ರೂ ಪರಿಹಾರದ ಹಣ ಪಡೆಯುವುದಕ್ಕೆ ಹರಸಾಹಸಪಡಬೇಕಾಗಿದೆ.

ರಾಜ್ಯದಲ್ಲಿ 7.5 ಲಕ್ಷ ಮಂದಿ ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರು ಇದ್ದಾರೆ. 2ಲಕ್ಷದಷ್ಟು ಮಂದಿ ಲೈಸನ್ಸ್  ಹೊಂದಿಲ್ಲದ ಚಾಲಕರು ಇದ್ದಾರೆ. ಹಾಗಾಗಿ ಪರವಾನಿಗೆ ಹೊಂದಿಲ್ಲದ ಚಾಲಕರಿಗೆ ಹಣ ಬರುವುದಿಲ್ಲ. ಅಷ್ಟೇ ಅಲ್ಲದೆ ಎಲ್ಲಾ ದಾಖಲೆಗಳು ಇರುವ ಚಾಲಕರಿಗೂ ಹಣ ದೊರೆಯುತ್ತದೆ ಎಂಬ ನಂಬಿಕೆ ಇಲ್ಲ. ಆದರೂ ಚಾಲಕರು ನಿತ್ಯವು ಸೇವಾಸಿಂದುವಿನಲ್ಲಿ ನೋಂದಣಿ ಮಾಡಿಸುವುದರಲ್ಲಿ ನಿರತರಾಗಿದ್ದಾರೆ. ದಾಖಲೆಗಳನ್ನು ಅಪ್ ಲೋಡ್ ಮಾಡಿ ಅಗ್ರಿ ಕೊಟ್ಟರೆ ಅದು ತೆಗೆದುಕೊಳ್ಳುವುದಿಲ್ಲ. ಹಾಗಾಗಿ ನೋಂದಣಿ ಕಾರ್ಯ ವಿಳಂಬವಾಗುತ್ತಿದೆ. ಇದೇ ರೀತಿ ಮುಂದುವರಿದರೆ ವರ್ಷವಾದರೂ ನೋಂದಣಿ ಮಾಡಿಸಲು ಸಾಧ್ಯವಿಲ್ಲ ಎಂದು ಚಾಲಕರು ಆರೋಪಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎನ್.ಉಮೇಶ್, “ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಚಾಸಿ ನಂಬರ್ ಇರುವ ಚಾಲಕರು 7.5 ಲಕ್ಷ ಇದ್ದಾರೆ. ಇವರಿಗೆ ಕೇವಲ 40 ಕೋಟಿ ಮಾತ್ರ ಹಣ ಮೀಸಲಿಡಲಾಗಿದೆ. ಈ ಹಣದಲ್ಲಿ ಕೇವಲ 80 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ 5000 ರೂ ಪರಿಹಾರ ನೀಡಬಹುದು. 7.5 ಲಕ್ಷ ಮಂದಿ ಚಾಲಕರಿಗೆ 5 ಸಾವಿರ ರೂನಂತ ಪರಿಹಾರ ನೀಡಬೇಕೆಂದರೆ 400 ಕೋಟಿ ಹಣ ಮೀಸಲಿಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ 1610 ಕೋಟಿಯಲ್ಲಿ ಕೇವಲ 40 ಕೋಟಿ ಚಾಲಕರಿಗೆ ನೀಡಲು ಉದ್ದೇಶಿಸಿರುವುದರಿಂದ ಈ ಹಣ ಸಾಕಾಗುವುದಿಲ್ಲ ಎಂದು ಹೇಳಿದರು.

ಚಾಲಕರಿಗೆ ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಎಲ್ಲ ಇದ್ದರೂ ಚಾಸಿಸ್ ನಂಬರ್ ಬೇರೆಯವರ ಹೆಸರಲ್ಲಿರುತ್ತದೆ.  ಶೇಕಡ 40ರಷ್ಟು ಆಟೋ ಮತ್ತು ಟ್ಯಾಕ್ಸಿಗಳು ಚಾಲಕ ಕಮ್ ಮಾಲಿಕರವು ಆಗಿರುತ್ತವೆ. ಅವರಿಗೆ ಚಾಸಿಸ್ ನಂಬರ್ ಕೂಡ ಇರುತ್ತದೆ. ಉಳಿದ ಶೇಕಡ 60ರಷ್ಟು ಚಾಲಕರು ಚಾಸಿಸ್ ನಂಬರ್ ಹೊಂದಿಲ್ಲ. ಡ್ರೈವಿಂಗ್ ಲೈಸನ್ಸ್ ನಲ್ಲಿ ಮತ್ತು ಆಧಾರ್ ಕಾರ್ಡ್ ನಲ್ಲಿ ಹೆಸರು ವ್ಯತ್ಯಾಸವಿದ್ದರೆ (ಅದು ಇನ್ಶಿಯಲ್).ಆಗ ಸೇವಾಸಿಂದು ವೈಬ್ ಸೈಟ್ ನಲ್ಲಿ ನೋಂದಣಿಯಾಗದೆ ರಿಜೆಕ್ಟ್ ಆಗುತ್ತದೆ. ಇಂಥ ಪ್ರಕರಣಗಳು ಹಲವು ಇರುವುದು ಕಂಡು ಬಂದಿದೆ. ಆದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರೂ ಪರಿಹಾರ ಪಡೆಯಲು ಬಾರದಂತಹ ಪರಿಸ್ಥಿತಿ ಬಂದಿದೆ.


ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ


2018ರ ಅಂಕಿಸಂಖ್ಯೆಗಳ ಪ್ರಕಾರ ರಾಜ್ಯದಲ್ಲಿ 21 ಲಕ್ಷ ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಸಿದ್ದಾರೆ. ಆದರೆ 2019ರಲ್ಲಿ ನವೀಕರಣ ಆಗಿರುವುದು ತುಂಬ ಕಡಿಮೆ. ಕೇವಲ 1.55 ಲಕ್ಷ ಮಂದಿ ಕಟ್ಟಡ ಕಾರ್ಮಿಕರ ಹೆಸರನ್ನು ನವೀಕರಿಸಲು ಮಾತ್ರ ಸಾಧ್ಯವಾಗಿದೆ. ಇದುವರೆಗೆ ಕಟ್ಟಡ ಕಾರ್ಮಿಕರಿಗೆ ಶೇ.50ರಷ್ಟು ಮಂದಿಗೆ ಪರಿಹಾರದ ಹಣ ಅವರ ಅಕೌಂಟಿಗೆ ನೇರ ವರ್ಗಾವಣೆಗೊಂಡಿದೆ.  ಉಳಿದವರಿಗೆ ಇನ್ನೂ ಬಂದಿಲ್ಲ.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ “ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 1 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಹಾಗಾಗಿ ಕಟ್ಟಡ ಕಾರ್ಮಿಕರಿಗೆ ಹಣ ಬಂದಿದೆ. ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನೋಂದಾಯಿತರಲ್ಲದ ಕಾರ್ಮಿಕರಿಗೂ ಪರಿಹಾರ ನೀಡಬೇಕೆಂಬ ಒತ್ತಾಯ ನಮ್ಮದು. ಈ ಹಿನ್ನೆಲೆಯಲ್ಲಿ 12 ಮಂದಿ ಕಾರ್ಮಿಕರಿಗೆ ಹಣ ವರ್ಗಾವಣೆಯಾಗಿದೆ. ನಮ್ಮ ತಕರಾರಿರುವುದು ಶಾಸಕರಿಗೆ ಆಹಾರ ಧಾನ್ಯದ ಕಿಟ್ ನೀಡಿರುವುದರಲ್ಲಿ. ಇದರಲ್ಲಿ ವಂಚನೆಯಾಗಿದೆ. ಹಾಗಾಗಿ ಕಷ್ಟದಲ್ಲಿರುವ ಎಲ್ಲಾ ಕಾರ್ಮಿಕರಿಗೂ ಪ್ರತಿ ತಿಂಗಳು 8 ಸಾವಿರದಂತೆ ಮೂರು ತಿಂಗಳಿಗೆ 24 ಸಾವಿರ ರೂಪಾಯಿ ನೀಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹಾಕಿದ್ದೇವೆ ಎಂದರು.

ಮಡಿವಾಳರು, ಕ್ಷೌರಿಕರು ಸೇವಾಸಿಂದುವಿನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಪರದಾಡುತ್ತಿದ್ದಾರೆ. ದಾಖಲೆಗಳನ್ನು ಹಿಡಿದು ಇಂಟರ್ ನೆಟ್ ಸೆಂಟರ್ ಗಳಿಗೆ ಅಲೆಯುತ್ತಿರುವುದು ಸಾಮಾನ್ಯವಾಗಿದೆ. ಆಧಾರ್‌, ಬ್ಯಾಂಕ್ ಪಾಸ್ ಪುಸ್ತಕ, ಅಂಗಡಿ ಲೈಸನ್ಸ್ ನೀಡಿದರೂ ನಮಗೆ ಇನ್ನೂ ಹಣ ಬಂದಿಲ್ಲ ಎನ್ನುತ್ತಾರೆ ರಾಜು.

ವೈಜ್ಞಾನಿಕವಾಗಿ ಚಾಲಕರು, ಕ್ಷೌರಿಕರು, ಮಡಿವಾಳರ ಸಮಗ್ರ ಮಾಹಿತಿ ಪಡೆಯದೇ ಇರುವುದು ಇಂತಹ ವಿಳಂಬಕ್ಕೆ ಕಾರಣವಾಗಿದೆ. ಆಧಾರ್, ಪಾಸ್ ಪುಸ್ತಕ, ಡ್ರೈವಿಂಗ್ ಲೈಸನ್ಸ್‌‌ನಲ್ಲಿರುವ ಹೆಸರುಗಳ ಸಣ್ಣಪುಟ್ಟ ವ್ಯತ್ಯಾಸಗಳು ಕೂಡ ಪರಿಹಾರದ ಹಣ ಪಡೆಯಲು ಸಾಧ್ಯವಾಗಿಲ್ಲ.


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...