Homeಮುಖಪುಟಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್ ಝಾ

ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್ ಝಾ

- Advertisement -
- Advertisement -

ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ ಎಂದು ಸಾರ್ವಜನಿಕ ಆರೋಗ್ಯ ತಜ್ಞ ಫ್ರೊಫೆಸರ್ ಆಶಿಶ್ ಝಾ ಹೇಳಿದ್ದಾರೆ. ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಸಂವಾದ ನಡೆಸುತ್ತಿದ್ದಾಗ ಈ ವಿಚಾರ ತಿಳಿಸಿದ್ದಾರೆ.

ಲಸಿಕೆ ಯಾವಾಗ ಸಿದ್ದವಾಗಬಹುದು ಎಂಬ ರಾಹುಲ್‌ ಪ್ರಶ್ನೆಗೆ ಉತ್ತರಿಸಿದ ಅವರು ಮುಂದಿನ ವರ್ಷ ಲಸಿಕೆ ಸಿದ್ದವಾಗುತ್ತದೆ ಎಂಬುದನ್ನು ಆತ್ಮವಿಶ್ವಾಸದಿಂದ ಹೇಳಬಲ್ಲೇ ಎಂದು ಆಶಿಶ್ ಝಾ ಹೇಳಿದ್ದಾರೆ.

ಕೊರೊನಾ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜಾಗತಿಕ ಸಾರ್ವಜನಿಕ ಆರೋಗ್ಯ ತಜ್ಞ ಡಾ.ಅಶಿಶ್ ಝಾ ಮತ್ತು ಸ್ವೀಡನ್‌ನ ಕರೋಲಿನ್ಸ್ಕಾ ಸಂಸ್ಥೆಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಪ್ರೊಫೆಸರ್ ಜೋಹಾನ್ ಗೀಸೆಕೆ ಅವರೊಂದಿಗೆ ಸಂವಾದ ನಡೆಸಿದರು.

ರಾಹುಲ್ ಗಾಂಧಿಯವರೊಂದಿಗೆ ಮಾತನಾಡುತ್ತಾ ಆಶಿಶ್ ಝಾ “ಯಾಕೆ ಕಡಿಮೆ ಸಂಖ್ಯೆಯ ಜನರನ್ನು ಪರೀಕ್ಷೆ ನಡೆಸುತ್ತೀರಿ ಎಂದು ಕೆಲವು ಅಧಿಕಾರಿಗಳನ್ನು ಕೇಳಿದ್ದೇನೆ. ಅವರ ನಿಲುವು ಏನೆಂದರೆ, ಪರೀಕ್ಷಾ ಸಂಖ್ಯೆಯನ್ನು ಹೆಚ್ಚು ಮಾಡಿದರೆ ಕೊರೊನಾ ಪ್ರಕರಣಗಳು ಸಹ ಹೆಚ್ಚಾಗಿ ಜನ ಭಯಬೀಳುತ್ತಾರೆ ಎಂದು ಅಧಿಕಾರಿಗಳು ಹೇಳುತ್ತಾರೆ” ಎಂದು ಆಶ್ಚರ್‍ಯ ವ್ಯಕ್ತಪಡಿಸಿದ್ದಾರೆ.

“ಲಾಕ್ ಡೌನ್ ಮೂಲಕ ವೈರಸ್ ಅನ್ನು ನಿಧಾನಗೊಳಿಸಬಹುದು, ಇದರಿಂದ ಭಾರಿ ಆರ್ಥಿಕ ಪರಿಣಾಮಗಳು ಆಗುತ್ತದೆ. ಆದರೂ ಈ ಸಮಯವನ್ನು ಅಧಿಕಾರಿಗಳು ತಮ್ಮ ಪರೀಕ್ಷಾ ಮತ್ತು ಆಸ್ಪತ್ರೆಯ ಮೂಲಸೌಕರ್ಯವನ್ನು ತಯಾರಿಸಲು ಬಳಸಿಕೊಳ್ಳಬೇಕಿತ್ತು. ಮುಂದಾದರೂ ಎಲ್ಲವನ್ನೂ ಯೋಜಿಸುವ ರೀತಿಯಲ್ಲಿರಬೇಕು” ಅವರು ಝಾ ಹೇಳಿದ್ದಾರೆ.

ಲಾಕ್‌ಡೌನ್ ಸಮಯದಲ್ಲಿ ದೇಶಾದ್ಯಂತ ತೆರಳುತ್ತಿರುವ ವಲಸೆ ಕಾರ್ಮಿಕರನ್ನು ಇತ್ತೀಚೆಗೆ ಭೇಟಿ ಮಾಡಿದ ತಮ್ಮ ಅಭಿಪ್ರಾಯಗಳನ್ನು ರಾಹುಲ್ ಗಾಂಧಿ ಫ್ರೋ.ಝಾ ಅವರೊಂದಿಗೆ ಹಂಚಿಕೊಂಡರು. ಈ ಕಾರ್ಮಿಕರು ದೊಡ್ಡ ಅನಿಶ್ಚಿತತೆಯನ್ನು ಹೊಂದಿದ್ದಾರೆ ಎಂದು ಹೇಳಿದರು. ಇದನ್ನು ಒಪ್ಪಿಕೊಂಡ ಫ್ರೊಫೆಸರ್ ಲಾಕ್ ಡೌನ್ ಅನ್ನು ತೆರವುಗೊಳಿಸಲು ಸರ್ಕಾರವು ಕಾರ್ಯತಂತ್ರವನ್ನು ಹೊಂದಿರಬೇಕು ಎಂದು ಹೇಳಿದರು.

ಕೊರೊನಾ ಬಿಕ್ಕಟ್ಟು ಮತ್ತು ಭಾರತದ ಆರ್ಥಿಕತೆಯ ಮೇಲೆ ಅದರ ಪರಿಣಾಮಗಳ ಬಗ್ಗೆ ಚರ್ಚಿಸಲು ರಾಹುಲ್ ಗಾಂಧಿ ಜಾಗತಿಕ ಹಾಗೂ ಭಾರತೀಯ ಚಿಂತಕರೊಂದಿಗೆ ಸರಣಿ ಸಂವಾದಗಳನ್ನು ನಡೆಸುತ್ತಿದ್ದಾರೆ.

ಈ ತಿಂಗಳ ಆರಂಭದಲ್ಲಿ ಅವರು ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ ಅವರೊಂದಿಗೆ ಸಂವಾದ ನಡೆಸಿದ್ದರು. ಅಲ್ಲದೆ ಏಪ್ರಿಲ್ 30 ರಂದು ಆರ್‌ಬಿಐ ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರೊಂದಿಗೆ ಮಾತುಕತೆ ನಡೆಸಿದ್ದರು.


ಓದಿ: ಉತ್ತರ ಪ್ರದೇಶದ ಕಾರ್ಮಿಕರು ಆದಿತ್ಯನಾಥರ ವೈಯಕ್ತಿಕ ಆಸ್ತಿಯಲ್ಲ: ರಾಹುಲ್ ಗಾಂಧಿ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...