Homeಮುಖಪುಟಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್ ಝಾ

ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್ ಝಾ

- Advertisement -
- Advertisement -

ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ ಎಂದು ಸಾರ್ವಜನಿಕ ಆರೋಗ್ಯ ತಜ್ಞ ಫ್ರೊಫೆಸರ್ ಆಶಿಶ್ ಝಾ ಹೇಳಿದ್ದಾರೆ. ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಸಂವಾದ ನಡೆಸುತ್ತಿದ್ದಾಗ ಈ ವಿಚಾರ ತಿಳಿಸಿದ್ದಾರೆ.

ಲಸಿಕೆ ಯಾವಾಗ ಸಿದ್ದವಾಗಬಹುದು ಎಂಬ ರಾಹುಲ್‌ ಪ್ರಶ್ನೆಗೆ ಉತ್ತರಿಸಿದ ಅವರು ಮುಂದಿನ ವರ್ಷ ಲಸಿಕೆ ಸಿದ್ದವಾಗುತ್ತದೆ ಎಂಬುದನ್ನು ಆತ್ಮವಿಶ್ವಾಸದಿಂದ ಹೇಳಬಲ್ಲೇ ಎಂದು ಆಶಿಶ್ ಝಾ ಹೇಳಿದ್ದಾರೆ.

ಕೊರೊನಾ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜಾಗತಿಕ ಸಾರ್ವಜನಿಕ ಆರೋಗ್ಯ ತಜ್ಞ ಡಾ.ಅಶಿಶ್ ಝಾ ಮತ್ತು ಸ್ವೀಡನ್‌ನ ಕರೋಲಿನ್ಸ್ಕಾ ಸಂಸ್ಥೆಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಪ್ರೊಫೆಸರ್ ಜೋಹಾನ್ ಗೀಸೆಕೆ ಅವರೊಂದಿಗೆ ಸಂವಾದ ನಡೆಸಿದರು.

ರಾಹುಲ್ ಗಾಂಧಿಯವರೊಂದಿಗೆ ಮಾತನಾಡುತ್ತಾ ಆಶಿಶ್ ಝಾ “ಯಾಕೆ ಕಡಿಮೆ ಸಂಖ್ಯೆಯ ಜನರನ್ನು ಪರೀಕ್ಷೆ ನಡೆಸುತ್ತೀರಿ ಎಂದು ಕೆಲವು ಅಧಿಕಾರಿಗಳನ್ನು ಕೇಳಿದ್ದೇನೆ. ಅವರ ನಿಲುವು ಏನೆಂದರೆ, ಪರೀಕ್ಷಾ ಸಂಖ್ಯೆಯನ್ನು ಹೆಚ್ಚು ಮಾಡಿದರೆ ಕೊರೊನಾ ಪ್ರಕರಣಗಳು ಸಹ ಹೆಚ್ಚಾಗಿ ಜನ ಭಯಬೀಳುತ್ತಾರೆ ಎಂದು ಅಧಿಕಾರಿಗಳು ಹೇಳುತ್ತಾರೆ” ಎಂದು ಆಶ್ಚರ್‍ಯ ವ್ಯಕ್ತಪಡಿಸಿದ್ದಾರೆ.

“ಲಾಕ್ ಡೌನ್ ಮೂಲಕ ವೈರಸ್ ಅನ್ನು ನಿಧಾನಗೊಳಿಸಬಹುದು, ಇದರಿಂದ ಭಾರಿ ಆರ್ಥಿಕ ಪರಿಣಾಮಗಳು ಆಗುತ್ತದೆ. ಆದರೂ ಈ ಸಮಯವನ್ನು ಅಧಿಕಾರಿಗಳು ತಮ್ಮ ಪರೀಕ್ಷಾ ಮತ್ತು ಆಸ್ಪತ್ರೆಯ ಮೂಲಸೌಕರ್ಯವನ್ನು ತಯಾರಿಸಲು ಬಳಸಿಕೊಳ್ಳಬೇಕಿತ್ತು. ಮುಂದಾದರೂ ಎಲ್ಲವನ್ನೂ ಯೋಜಿಸುವ ರೀತಿಯಲ್ಲಿರಬೇಕು” ಅವರು ಝಾ ಹೇಳಿದ್ದಾರೆ.

ಲಾಕ್‌ಡೌನ್ ಸಮಯದಲ್ಲಿ ದೇಶಾದ್ಯಂತ ತೆರಳುತ್ತಿರುವ ವಲಸೆ ಕಾರ್ಮಿಕರನ್ನು ಇತ್ತೀಚೆಗೆ ಭೇಟಿ ಮಾಡಿದ ತಮ್ಮ ಅಭಿಪ್ರಾಯಗಳನ್ನು ರಾಹುಲ್ ಗಾಂಧಿ ಫ್ರೋ.ಝಾ ಅವರೊಂದಿಗೆ ಹಂಚಿಕೊಂಡರು. ಈ ಕಾರ್ಮಿಕರು ದೊಡ್ಡ ಅನಿಶ್ಚಿತತೆಯನ್ನು ಹೊಂದಿದ್ದಾರೆ ಎಂದು ಹೇಳಿದರು. ಇದನ್ನು ಒಪ್ಪಿಕೊಂಡ ಫ್ರೊಫೆಸರ್ ಲಾಕ್ ಡೌನ್ ಅನ್ನು ತೆರವುಗೊಳಿಸಲು ಸರ್ಕಾರವು ಕಾರ್ಯತಂತ್ರವನ್ನು ಹೊಂದಿರಬೇಕು ಎಂದು ಹೇಳಿದರು.

ಕೊರೊನಾ ಬಿಕ್ಕಟ್ಟು ಮತ್ತು ಭಾರತದ ಆರ್ಥಿಕತೆಯ ಮೇಲೆ ಅದರ ಪರಿಣಾಮಗಳ ಬಗ್ಗೆ ಚರ್ಚಿಸಲು ರಾಹುಲ್ ಗಾಂಧಿ ಜಾಗತಿಕ ಹಾಗೂ ಭಾರತೀಯ ಚಿಂತಕರೊಂದಿಗೆ ಸರಣಿ ಸಂವಾದಗಳನ್ನು ನಡೆಸುತ್ತಿದ್ದಾರೆ.

ಈ ತಿಂಗಳ ಆರಂಭದಲ್ಲಿ ಅವರು ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ ಅವರೊಂದಿಗೆ ಸಂವಾದ ನಡೆಸಿದ್ದರು. ಅಲ್ಲದೆ ಏಪ್ರಿಲ್ 30 ರಂದು ಆರ್‌ಬಿಐ ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರೊಂದಿಗೆ ಮಾತುಕತೆ ನಡೆಸಿದ್ದರು.


ಓದಿ: ಉತ್ತರ ಪ್ರದೇಶದ ಕಾರ್ಮಿಕರು ಆದಿತ್ಯನಾಥರ ವೈಯಕ್ತಿಕ ಆಸ್ತಿಯಲ್ಲ: ರಾಹುಲ್ ಗಾಂಧಿ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...