Homeಮುಖಪುಟಚೀನಾಕ್ಕೆ ಸಮಬಲವಾಗಿ ಸೈನ್ಯ ನಿಯೋಜನೆ: ಚೀನಾ ಆಕ್ರಮಣಶೀಲತೆಯ ಬಗ್ಗೆ ಇಂದು ಕಮಾಂಡರ್ಸ್ ಸಮಾವೇಶದಲ್ಲಿ ಚರ್ಚೆ

ಚೀನಾಕ್ಕೆ ಸಮಬಲವಾಗಿ ಸೈನ್ಯ ನಿಯೋಜನೆ: ಚೀನಾ ಆಕ್ರಮಣಶೀಲತೆಯ ಬಗ್ಗೆ ಇಂದು ಕಮಾಂಡರ್ಸ್ ಸಮಾವೇಶದಲ್ಲಿ ಚರ್ಚೆ

ವಾಸ್ತವಿಕ ನಿಯಂತ್ರಣ ರೇಖೆಯ ಲಡಾಖ್ ವಲಯದ ಪರಿಸ್ಥಿತಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಪರಿಶೀಲಿಸಿದ್ದರು.

- Advertisement -
- Advertisement -

ಇಂದು (ಬುಧವಾರ) ಪ್ರಾರಂಭವಾಗುವ ಕಮಾಂಡರ್ಸ್ ಸಮಾವೇಶದಲ್ಲಿ ಚೀನಾದ ಆಕ್ರಮಣಶೀಲತೆಯ ಕುರಿತು ಚರ್ಚಿಸಲು ಸೇನಾ ಮುಖ್ಯಸ್ಥರು ಮುಂದಾಗಿದ್ದಾರೆ. ಕಮಾಂಡರ್ಸ್ ಸಮಾವೇಶದ ಅಧ್ಯಕ್ಷತೆಯನ್ನು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ ವಹಿಸುತ್ತಿದ್ದಾರೆ.

ಸಭೆಯು ಮೂರು ದಿನ ನಡೆಯಲಿದ್ದು, ಸೇನೆಯ ಉನ್ನತ ಅಧಿಕಾರಿಗಳು ಇತರ ಅಂಶಗಳೊಂದಿಗೆ ಭದ್ರತಾ ವಿಷಯಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಲಡಾಖ್‌ನಲ್ಲಿ ಚೀನಾವೂ ಗಡಿಯೊಳಗೆ ನುಸುಳುತ್ತಿರುವ ಕುರಿತು ಭಾರತದ ನಿಲುವುಗಳನ್ನು ಚರ್ಚಿಸುವ ಸಾಧ್ಯತೆಯಿದೆ.

ಚೀನಾದ ಸೈನ್ಯದ ಬಲಕ್ಕೆ ಸರಿಹೊಂದುವಂತೆ ಭಾರತೀಯ ಸೇನೆ ಕೂಡಾ ತನ್ನ ಸೈನ್ಯದ ಉಪಸ್ಥಿತಿಯನ್ನು ಹೆಚ್ಚಿಸುತ್ತಿರುವ ಸಮಯದಲ್ಲೇ ಸಭೆ ನಡೆಯುತ್ತಿದೆ. ಸೇನೆಯೂ ಲಡಾಖ್ ಸೆಕ್ಟರ್‌ನ ವಿವಿಧ ಸ್ಥಳಗಳಲ್ಲಿ ತನ್ನ 5,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಲೈನ್‌ ಆಫ್‌ ಕಂಟ್ರೋಲ್‌ನಲ್ಲಿ ನಿಯೋಜಿಸಿದೆ.

ಭಾರತೀಯ ಭೂಪ್ರದೇಶದ ಯಾವುದೇ ಬದಲಾವಣೆಗೆ ಅವಕಾಶ ನೀಡಬಾರದು ಹಾಗೂ ಚೀನಾದ ಸವಾಲನ್ನು “ಶಕ್ತಿ ಮತ್ತು ಸಂಯಮ” ದಿಂದ ಎದುರಿಸುವ ಉದ್ದೇಶದಿಂದ ಸೈನ್ಯದ ಚಲನೆಯನ್ನು ಮಾಡಲಾಗಿದೆ” ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿವೆ.

ಲೈನ್‌ ಆಫ್‌ ಕಂಟ್ರೋಲ್ ರೇಖೆಯ ಉದ್ದಕ್ಕೂ ಪರಿಸ್ಥಿತಿಯನ್ನು ನಿರ್ಣಯಿಸಲು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆಯನ್ನು ನಡೆಸಿದರು. ಇಲ್ಲಿ ಲಡಾಖ್‌ನ ಪರಿಸ್ಥಿತಿಯನ್ನು ನಿಭಾಯಿಸಲು ಸೈನ್ಯದ ಒಳಗಿನ ವಿಷಯಗಳು ಹಾಗೂ ಸಲಹೆಗಳ ಕುರಿತು ಜನರಲ್ ಬಿಪಿನ್ ರಾವತ್ ಪ್ರಧಾನಿ ಮೋದಿಗೆ ವಿವರಿಸಿದರು.

ಭಾರತೀಯ ಮತ್ತು ಚೀನಾದ ಸೈನಿಕರು ಲೈನ್‌ ಆಫ್‌ ಕಂಟ್ರೋಲ್ ರೇಖೆಯ ನಾಲ್ಕು ಸ್ಥಳಗಳಲ್ಲಿ ಮುಖಾಮುಖಿಯಾಗಿದ್ದರು. ಮೂರು ವಾರಗಳ ಹಿಂದೆ ಪಾಂಗೊಂಗ್ ಸರೋವರದ ಬಳಿ ಹಿಂಸಾತ್ಮಕ ಘರ್ಷಣೆ ಪ್ರಾರಂಭವಾಗಿತ್ತು.

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಮೂವರು ಸೇವಾ ಮುಖ್ಯಸ್ಥರೊಂದಿಗಿನ ಸಭೆಯಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಲಡಾಖ್ ವಲಯದ ಪರಿಸ್ಥಿತಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಪರಿಶೀಲಿಸಿದ್ದರು.


ಓದಿ: ಲಡಾಕ್ ಬಳಿ ವಾಯುನೆಲೆ ವಿಸ್ತರಿಸಿ ಯುದ್ದ ವಿಮಾನಗಳನ್ನು ಸಜ್ಜುಗೊಳಿಸಿರುವ ಚೀನಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...