Homeಮುಖಪುಟಭಯಪಡಬೇಡಿ, ನಿಮ್ಮ ಜೊತೆಗಿದ್ದೇವೆ: ಉದ್ಧವ್‌ಗೆ ಕರೆ ಮಾಡಿದ ರಾಹುಲ್‌ ಗಾಂಧಿ!

ಭಯಪಡಬೇಡಿ, ನಿಮ್ಮ ಜೊತೆಗಿದ್ದೇವೆ: ಉದ್ಧವ್‌ಗೆ ಕರೆ ಮಾಡಿದ ರಾಹುಲ್‌ ಗಾಂಧಿ!

- Advertisement -
- Advertisement -

ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಶಮನ ದೃಷ್ಟಿಯಲ್ಲಿ ಇಂದು ಸಿಎಂ ಉದ್ಧವ್‌ಠಾಕ್ರೆಗೆ ಕರೆ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಯಪಡಬೇಡಿ, ನಿಮ್ಮ ಜೊತೆಗಿದ್ದೇವೆ ಎಂಬ ಭರವಸೆ ನೀಡಿದ್ದಾರೆ.

“ರಾಹುಲ್‌ಜಿ ಮತ್ತು ಉದ್ಧವ್‌ಜಿಯವರು ಇಂದು ಬೆಳಿಗ್ಗೆ ದೂರವಾಣಿ ಸಂಭಾಷಣೆ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯಿಂದ ಉಂಟಾಗಿರುವ ಉಹಾಪೋಹಗಳಿಗೆ ತೆರೆ ಎಳೆಯಲಾಯಿತು. ಈ ಸರ್ಕಾರಕ್ಕೆ ಕಾಂಗ್ರೆಸ್‌ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ” ಎಂದು ಶಿವಸೇನೆಯ ಮುಖಂಡರೊಬ್ಬರು ಹೇಳಿದ್ದಾರೆ.

ನಾವು ಮಹಾರಾಷ್ಟ್ರದಲ್ಲಿ ಬೆಂಬಲ ನೀಡಿರುವವರು ಅಷ್ಟೆ ಹೊರತು ನಿರ್ಧಾರ ತೆಗೆದುಕೊಳ್ಳುವವರ ಅಲ್ಲ. ನಾವು ರಾಜಸ್ತಾನ, ಪಂಜಾಬ್‌, ಛತ್ತೀಸ್‌ಘಡ ಮತ್ತು ಜಾರ್ಖಂಡ್‌ನಲ್ಲಿ ಮಾತ್ರ ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದ್ದರು. ಈ ಹೇಳಿಕೆಯ ನಂತರ ಮಹಾರಾಷ್ಟ್ರದಲ್ಲಿ ಬಿಕ್ಕಟ್ಟು ಉಂಟಾಗಿತ್ತು.

ಶಿವಸೇನೆ, ಎನ್‌ಸಿಪಿ ಮತ್ತುಕಾಂಗ್ರೆಸ್‌ ಮೂರು ಪಕ್ಷಗಳು ಸೇರಿ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಹೆಸರಿನಲ್ಲಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿವೆ.

ರಾಜ್ಯವು ಎದುರಿಸುತ್ತಿರುವ ತೊಂದರೆಗಳ ನಡುವೆಯೂ ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ತಮ್ಮ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಅವರು ಮಂಗಳವಾರ ಉದ್ಧವ್ ಠಾಕ್ರೆ ಅವರಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರು ಹೇಳಿಕೆಯ ಹಿಂದಿನ ತಮ್ಮ ನಿಲುವನ್ನು ವಿವರಿಸಿದರು. ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರಕ್ಕೆ ಹೇಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಅವರು ಸ್ಪಷ್ಟವಾಗಿ ಹೇಳಿದ್ದರು. ಆದರೆ ಕೆಲವರು ಅವರ ಹೇಳಿಕೆಯನ್ನು ತಿರುಚಿದ್ದರು ಎಂದು ಶಿವಸೇನೆಯ ಮುಖಂಡರು ತಿಳಿಸಿದ್ದಾರೆ.

ಕಾಂಗ್ರೆಸ್ ಮಹಾರಾಷ್ಟ್ರದೊಂದಿಗಿದೆ ಮತ್ತು ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಎಂವಿಎ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ರಾಹುಲ್‌ ಗಾಂಧಿ ಹೇಳಿದ್ದಾಗಿ ಅವರು ತಿಳಿಸಿದ್ದಾರೆ.

ಎಂವಿಎದಲ್ಲಿ ಕಿರಿಯ ಪಾಲುದಾರರಾದ ಕಾಂಗ್ರೆಸ್‌ಗೆ ನಿರ್ಧಾರ ತೆಗೆದುಕೊಳ್ಳುವಲ್ಲಿ ಸಮಾನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಉದ್ಧವ್‌ ಠಾಕ್ರೆ ಕೂಡ ರಾಹುಲ್ ಗಾಂಧಿಗೆ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲವು ದಿನಗಳಲ್ಲಿ ರಾಜಕೀಯ ಚಟುವಟಿಕೆಗಳಲ್ಲಿ ಭರಾಟೆ ಉಂಟಾದ ಹಿನ್ನೆಲೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಮಧ್ಯಾಹ್ನ ಮೈತ್ರಿ ಪಾಲುದಾರರ ಸದಸ್ಯರನ್ನು ಭೇಟಿಯಾಗಲಿದ್ದಾರೆ. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ವರ್ಷಾದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಪ್ರಮುಖ ಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಎಂವಿಎ ಸಚಿವರು ತಿಳಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...