Homeಮುಖಪುಟಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ?

ಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ?

ಮುಂಬೈ, ಚೆನ್ನೈ, ಕೋಲ್ಕತ್ತಾ, ಅಹಮದಾಬಾದ್, ಬೆಂಗಳೂರು, ಇಂದೂರ್, ದೆಹಲಿ, ಪುಣೆ, ಥಾಣ, ಜೈಪುರ್, ಸೂರತ್ ಈ ಹನ್ನೊಂದು ನಗರಗಳಲ್ಲಿ ಲಾಕ್‌ಡೌನ್‌ ಬಿಗಿಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ.

- Advertisement -
- Advertisement -

ನಾಲ್ಕನೇ ಹಂತದ ಲಾಕ್‌ಡೌನ್‌ ಮುಕ್ತಾಯವಾಗುತ್ತಿದೆ. ಈ ಸಂದರ್ಭದಲ್ಲಿ ಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕಳೆದೊಂದು ವಾರದಿಂದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿರುವುದರಿಂದ ಮತ್ತು ದೇಶದಲ್ಲಿ ಪ್ರಕರಣಗಳ ಸಂಖ್ಯೆ ಒಂದೂವರೆ ಲಕ್ಷಕ್ಕೆ ತಲುಪಿರುವುದರಿಂದ ಲಾಕ್‌ಡೌನ್‌ ಅನ್ನು ಮತ್ತೆರೆಡು ವಾರ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದ್ದಾರೆ ಎನ್ನಲಾಗಿದೆ.

5ನೇ ಹಂತದ ಲಾಕ್‌ಡೌನ್‌ನಲ್ಲಿ ಭಾರತದ ಕೊರೊನಾ ಹಾಟ್‌ಸ್ಪಾಟ್‌ಗಳಾದ 11 ಮಹಾನಗರಗಳ ಮೇಲೆ ಕಣ್ಣಿಡಲು ನಿರ್ಧರಿಸಿದ್ದು, ಈ  11ನಗರಗಳಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಬಿಗಿಗೊಳಿಸುವ ಸಾಧ್ಯತೆಯಿದೆ.

ಮುಂಬೈ, ಚೆನ್ನೈ, ಕೋಲ್ಕತ್ತಾ, ಅಹಮದಾಬಾದ್, ಬೆಂಗಳೂರು, ಇಂದೂರ್, ದೆಹಲಿ, ಪುಣೆ, ಥಾಣ, ಜೈಪುರ್, ಸೂರತ್ ಈ ಹನ್ನೊಂದು ನಗರಗಳಲ್ಲಿ ಲಾಕ್‌ಡೌನ್‌ ಬಿಗಿಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ. ಈ ನಗರಗಳಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿವೆ. ಶೇಕಡಾ 70ರಷ್ಟು ಪ್ರಕರಣಗಳು ಈ 11 ನಗರಗಳಿಂದಲೇ ವರದಿಯಾಗುತ್ತಿವೆ ಎನ್ನಲಾಗಿದೆ.

ಉಳಿದ ನಗರಗಳಲ್ಲಿ ಲಾಕ್‌ಡೌನ್‌ನಿಂದ ವಿನಾಯಿತಿ ನೀಡುವ ಸಾಧ್ಯತೆಯಿದೆ. ಈಗಾಗಲೇ ಕರ್ನಾಟಕದ ಕೆಲವು ನಗರಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಏರಿಯಾಗಳಲ್ಲಿ ಇಡೀ ಏರಿಯಾವನ್ನು ಲಾಕ್‌ಡೌನ್‌ ಮಾಡದೇ ಕೇವಲ ಸೋಂಕು ಕಾಣಿಸಿಕೊಂಡ ರಸ್ತೆಯನ್ನು ಮಾತ್ರ ಸೀಲ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ.

ಲಾಕ್‌ಡೌನ್‌ 5.Oನಲ್ಲಿ ಆಟೋ, ಟ್ಯಾಕ್ಸಿ ಓಡಾಟಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ. ಜೊತೆಗೆ ಷರತ್ತುಗಳೊಂದಿಗೆ ದೇವಸ್ಥಾನ, ಚರ್ಚ್‌ ಮತ್ತು ಮಸೀದಿ ತೆರೆಯಲು ಅವಕಾಶ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಬೃಹತ್ ಧಾರ್ಮಿಕ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಶಾಲಾ ಕಾಲೇಜುಗಳು, ಮಾಲ್‌ಗಳು, ಚಿತ್ರಮಂದಿರಗಳನ್ನು ಸದ್ಯಕ್ಕೆ ತೆರೆಯುವಂತಿಲ್ಲ. ಜಿಮ್‌ಗಳನ್ನು ತೆರೆಯುವುದು ಆಯಾ ರಾಜ್ಯಗಳಿಗೆ ಬಿಟ್ಟ ವಿಚಾರ ಎಂದು ಕೇಂದ್ರ ಸರ್ಕಾರ ಘೋಷಿಸಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ ಅಂತಿಮ ತೀರ್ಮಾನ ಇನ್ನೆರಡು ದಿನಗಳಲ್ಲಿಯೇ ಹೊರಬೀಳಲಿದೆ.


ಇದನ್ನೂ ಓದಿ: ಕೊರೋನಾ ವೈರಸ್‌ ಬಿಕ್ಕಟ್ಟು ನಿಜ; ಆದರೆ ದುರಂತವಾಗಬೇಕಾಗಿಲ್ಲ: ಎಸ್ತರ್ ‌ಡಫ್ಲೋ, ಅಭಿಜಿತ್ ಬ್ಯಾನರ್ಜಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇವಲ ಲಾಕ್ ಡೌನ್ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...