Homeಮುಖಪುಟತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

- Advertisement -
- Advertisement -

ದಕ್ಷಿಣ ಭಾರತದಲ್ಲಿ ಫ್ಯಾಂಟಸಿ ಸಿನಿಮಾಗಳ ಟ್ರೆಂಡ್ ಆರಂಭಿಸಿದ ನಿರ್ದೇಶಕರು ಬಿ.ವಿಠಲಾಚಾರ್ಯ. ಕನ್ನಡಿಗರಾದ ಅವರು ಯಶಸ್ಸು ಕಂಡದ್ದು ತೆಲುಗು, ತಮಿಳು ಚಿತ್ರರಂಗದಲ್ಲಿ ಎನ್ನುವುದು ಸೋಜಿಗ. ಅವರು ಕಾಲವಾಗಿ ಇಂದಿಗೆ (21) ಇಪ್ಪತ್ತೊಂದು ವರ್ಷ.

***

ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬಂದ ‘ಬಾಹುಬಲಿ’ ಫ್ಯಾಂಟಸಿ ಸಿನಿಮಾ ಸರಣಿಗಳು ಭಾರತದಾದ್ಯಂತ ಮಾತ್ರವಲ್ಲದೆ ಜಾಗತಿಕ ಮಾರುಕಟ್ಟೆಯಲ್ಲೂ ಸದ್ದುಮಾಡಿದವು. ಅತ್ಯಾಧುನಿಕ ತಂತ್ರಜ್ಞಾನವನ್ನು ಅಚ್ಚುಕಟ್ಟಾಗಿ ಬಳಕೆ ಮಾಡಿಕೊಂಡ ನಿರ್ದೇಶಕ ರಾಜಮೌಳಿ ತೆರೆಯ ಮೇಲೆ ಅದ್ಭುತವನ್ನೇ ಸೃಷ್ಟಿಸಿದ್ದರು. ಆದರೆ 50ರ ದಶಕದಲ್ಲಿ ಆಗಿದ್ದ ಅಲ್ಪ ತಂತ್ರಜ್ಞಾನವನ್ನೇ ಸೂಕ್ತವಾಗಿ ಬಳಸಿಕೊಂಡು ಬೆಳ್ಳೆತೆರೆಯಲ್ಲಿ ಇಂಥ ಅಚ್ಚರಿಗಳನ್ನು ಸೃಷ್ಟಿಸಿ ಯಶಸ್ಸು ಕಂಡವರು ಬಿ.ವಿಠಲಾಚಾರ್ಯ. 1954ರಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ ಜಾನಪದ ಶೈಲಿಯ ಫ್ಯಾಂಟಸಿ ಕನ್ನಡ ಸಿನಿಮಾ “ರಾಜಲಕ್ಷ್ಮಿ’ ಚಿತ್ರೋದ್ಯಮದವರ ಗಮನ ಸೆಳೆದಿತ್ತು. ತಮಿಳು ಮತ್ತು ತೆಲುಗು ಚಿತ್ರೋದ್ಯಮಿಗಳೂ ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮುಂದಿನ ದಿನಗಳಲ್ಲಿ ಇವರು ನಿರ್ಮಿಸಿದ “ಪಾಲಾಳಮೋಹಿನಿ’, “ಮೋಹಿನಿ ಭಸ್ಮಾಸುರ’ ತೆಲುಗು ಫ್ಯಾಂಟಸಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿದ್ದವು. ದಕ್ಷಿಣ ಭಾರತ ಮಾತ್ರವಲ್ಲ ಹಿಂದಿ ಚಿತ್ರರಂಗದವರೂ ಅವರ ಸಿನಿಮಾ ತಂತ್ರಗಳನ್ನು ಹೊಗಳಿದ್ದರು.

ಮೂಲತಃ ಉಡುಪಿಯವರಾದ ವಿಠಲಾಚಾರ್ಯರು ಕೆಲಸದ ನಿಮಿತ್ತ ಚಿಕ್ಕ ವಯಸ್ಸಿನಲ್ಲೇ ಊರು ಬಿಟ್ಟು ಅರಸೀಕೆರೆ ಸೇರಿದರು. ಅವರು ಓದಿದ್ದು ಏಳನೇ ತರಗತಿಯಷ್ಟೆ. ಶಾಲೆ ಬಿಟ್ಟು ಹೋಟೆಲ್ ಸೇರಿದ ಅವರು ಕೆಲವು ವರ್ಷಗಳ ನಂತರ ಮೈಸೂರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದರು. ಹೋಟೆಲ್ ಉದ್ಯಮಿಯಾದರೂ ಅವರ ಆಸಕ್ತಿ ಇದ್ದುದು ಸಿನಿಮಾರಂಗದೆಡೆ. ಮೊದಲ ಪ್ರಯತ್ನವಾಗಿ ಸಿ.ವಿ.ರಾಜು ನಿರ್ದೇಶನದ “ಶ್ರೀಕೃಷ್ಣಲೀಲಾ” ಸಿನಿಮಾದ ಸಹನಿರ್ಮಾಪಕರಾದರು. ಮುಂದೆ ಡಿ.ಶಂಕರ್‌ಸಿಂಗ್ ಅವರ ಮಹಾತ್ಮಾ ಪಿಕ್ಚರ್ಸ್‍ನೊಂದಿಗೆ ವಿಠಲಾಚಾರ್ಯರು ಗುರುತಿಸಿಕೊಂಡರು. 1952ರಲ್ಲಿ ತಯಾರಾದ ಮಹಾತ್ಮಾ ಪಿಕ್ಚರ್ಸ್‍ನ “ಸೌಭಾಗ್ಯ ಲಕ್ಷ್ಮಿ” ಸಿನಿಮಾ ನಿರ್ದೇಶಿಸುವ ಮೂಲಕ ಸ್ವತಂತ್ರ್ಯ ನಿರ್ಮಾಪಕರಾದರು. ಮರುವರ್ಷ 1953ರಲ್ಲಿ ತಮ್ಮದೇ ವಿಠಲ್ ಪ್ರೊಡಕ್ಷನ್ಸ್ ಆರಂಭಿಸಿದರು. ಈ ಸಂಸ್ಥೆಯಡಿ ವಿಠಲಾಚಾರ್ಯರು “ಕನ್ಯಾದಾನ’ (1954) ನಿರ್ಮಿಸಿ, ನಿರ್ದೇಶಿಸಿದರು. ಫ್ಯಾಂಟಸಿ ಸಿನಮಾ ಮಾಡಬೇಕೆನ್ನುವ ಅವರ ಮಹದಾಸೆ ಕೈಗೂಡಿದ್ದು “ರಾಜಲಕ್ಷ್ಮಿ’ ಚಿತ್ರದ ಮೂಲಕ.

ಇದಾದ ನಂತರ “ಮುತ್ತೈದೆ ಭಾಗ್ಯ” (1956), “ಮನೆ ತುಂಬಿದ ಹೆಣ್ಣು” (1958) ಚಿತ್ರಗಳನ್ನು ಮಾಡಿದರು. “ಮುತ್ತೈದು ಭಾಗ್ಯ” ಚಿತ್ರದಲ್ಲಿ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ನಾಯಕರಾಗಿದ್ದರು ಎನ್ನುವುದು ವಿಶೇಷ. ಅದೇಕೋ ಈ ಸಿನಿಮಾಗಳು ಗೆಲ್ಲಲಿಲ್ಲ. ಇದರಿಂದ ತೆಲುಗು ಸಿನಿಮಾರಂಗದತ್ತ ಮುಖಮಾಡಿದ ವಿಠಲಾಚಾರ್ಯರು ಅಲ್ಲಿ ಫ್ಯಾಂಟಸಿ ಸಿನಿಮಾಗಳ ಮೂಲಕವೇ ದೊಡ್ಡ ಹೆಸರು ಮಾಡಿದರು. ತಮಿಳಿನಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ “ಪೆಣ್‍ಕುಲತ್ತಿನ್”, “ತೇನ್‍ವಿಳಕ್ಕು” ಸಿನಿಮಾಗಳು ದೊಡ್ಡ ಯಶಸ್ಸು ಕಂಡವು. ಕನ್ನಡ, ತೆಲುಗು ಮತ್ತು ತಮಿಳಿನ 80ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿದ ವಿಠಲಾಚಾರ್ಯರು 1996, ಮೇ 28ರಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು.

ಚಿತ್ರನಿರ್ಮಾಣ, ನಿರ್ದೇಶನದ ಜೊತೆ ಹಲವಾರು ತಂತ್ರಜ್ಞರು ಮತ್ತು ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಹೆಗ್ಗಳಿಕೆಯೂ ವಿಠಲಾಚಾರ್ಯರಿಗೆ ಸಲ್ಲಬೇಕು. ಆಗ ಸಿನಿಮಾ ಸೇರುವ ಆಸೆಯಿಂದ ಕನ್ನಡ ನಾಡಿನಿಂದ ಮದರಾಸಿಗೆ ಆಗಮಿಸುವವರಿಗೆ ಅವರು ನೆರವಾಗುತ್ತಿದ್ದರು. ಕನ್ನಡ ಚಿತ್ರರಂಗ ಕಂಡ ಮೇರು ನಿರ್ದೇಶಕ ಸಿದ್ದಲಿಂಗಯ್ಯನವರು ಮೊದಲು ತರಬೇತಿ ಪಡೆದದ್ದೇ ವಿಠಲಾಚಾರ್ಯರಲ್ಲಿ. ಹೀಗೆ, ಪರೋಕ್ಷವಾಗಿಯೂ ಅವರು ಕನ್ನಡ ಚಿತ್ರರಂಗದ ಬೆಳವಣಿಗೆಗಳಲ್ಲಿ ಪ್ರೇರಕ ಶಕ್ತಿಯಾಗಿದ್ದರು. ಐವತ್ತು, ಅರವತ್ತರ ದಶಕದಲ್ಲಿ ಅವರು ತಯಾರಿಸಿದ ಫ್ಯಾಂಟಸಿ ಸಿನಿಮಾಗಳು ಮುಂದಿನ ದಿನಗಳಲ್ಲಿ ಅಂತಹ ಸಿನಿಮಾಗಳನ್ನು ನಿರ್ಮಿಸುವವರಿಗೆ ಸ್ಫೂರ್ತಿಯಾದವು. ಇಂದಿಗೂ ದಕ್ಷಿಣ ಭಾರತದ ಫ್ಯಾಂಟಸಿ ಸಿನಿಮಾಗಳ ಬಗ್ಗೆ ಮಾತನಾಡುವಾಗ ವಿಠಲಾಚಾರ್ಯರ (20/01/1920 – 28/05/1999) ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.


ಇದನ್ನೂ ಓದಿ: ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...